ಚಿಕ್ಕೋಡಿ(ಬೆಳಗಾವಿ): “ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಎರಡು ದಿನದಲ್ಲಿ ನಾನು ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ. ಶಾಸಕ ಬಿ.ಆರ್. ಪಾಟೀಲ್ ಹೇಳಿರುವುದು ಸುಳ್ಳಲ್ಲ” ಎಂದು ಹಿರಿಯ ಶಾಸಕ ರಾಜು ಕಾಗೆ ಸ್ವಪಕ್ಷ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅವರು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, “ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಬಿ.ಆರ್. ಪಾಟೀಲ್ ಆಡಿರುವ ಮಾತುಗಳು ಸುಳ್ಳಲ್ಲ. ಅವರ ಆಡಿಯೋ ವೈರಲ್ ವಿಚಾರಕ್ಕೆ …
Read More »ಮಳೆಯಿಂದ ಕ್ಷೀರಧಾರೆಯಂತೆ ಧುಮ್ಮಿಕ್ಕುತ್ತಿರುವ ಅಂಬೋಲಿ ಜಲಪಾತ
ಬೆಳಗಾವಿ: ಪಶ್ಚಿಮಘಟ್ಟದಲ್ಲಿ ಉತ್ತಮ ಮಳೆ ಆಗುತ್ತಿದ್ದು, ಬೆಳಗಾವಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಅದರಲ್ಲೂ ಕಡಿದಾದ ಹಚ್ಚ ಹಸಿರಿನ ಗುಡ್ಡದಿಂದ ಧುಮ್ಮಿಕ್ಕಿ ಹರಿಯುವ ಅಂಬೋಲಿ ಫಾಲ್ಸ್ ಜಲವೈಭವವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಜಲಪಾತಗಳತ್ತ ಹರಿದು ಬರುತ್ತಿದೆ. ಹೌದು, ಮಾನ್ಸೂನ್ ಋತುವಿನಲ್ಲಿ ಪ್ರವಾಸಿಗರ ನೆಚ್ಚಿನ ತಾಣಗಳು ಎಂದರೆ ಜಲಪಾತಗಳು. ಅದರಲ್ಲೂ ಅಂಬೋಲಿ ಫಾಲ್ಸ್ ಪ್ರವಾಸಿಗರ ಪಾಲಿನ ಸ್ವರ್ಗ. ಹಸಿರು ಹೊದಿಕೆಯ ಗುಡ್ಡದಿಂದ ಧುಮ್ಮಿಕ್ಕಿ ಬರುವ ಜಲಧಾರೆ. ಹಾಲ್ನೊರೆಯಂತೆ ಹರಿಯುವ ನೀರಿನ …
Read More »ಸಚಿವ ಹೆಚ್. ಕೆ. ಪಾಟೀಲ್ ಸಿಎಂಗೆ ತನಿಖೆ ಮಾಡಿ ಅಂತ ಪತ್ರ ಬರೆಯುವುದರಲ್ಲಿ ತಪ್ಪೇನಿದೆ? ಶಿವಾನಂದ ಪಾಟೀಲ್
ಹಾವೇರಿ : ಸಚಿವ ಹೆಚ್. ಕೆ. ಪಾಟೀಲ್ ಸಿಎಂಗೆ ತನಿಖೆ ಮಾಡಿ ಅಂತ ಪತ್ರ ಬರೆಯುವುದರಲ್ಲಿ ತಪ್ಪೇನಿದೆ? ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಪ್ರಶ್ನಿಸಿದ್ದಾರೆ. ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೂಲಿಹಳ್ಳಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಶತ 7 ರಷ್ಟಾದರೂ ಆಗಿದೆಯಲ್ಲ. ಹೆಚ್. ಕೆ. ಪಾಟೀಲ್ ಇನ್ನಷ್ಟು ವೇಗ ಪಡೆಯಲಿ ಎಂದಿದ್ದಾರೆ. ತೃಪ್ತಿ ತಂದಿಲ್ಲ. ಆದರೆ ಅವರು ನೆನಪು ಮಾಡಿದ ನಂತರ ಮತ್ತಷ್ಟು ವೇಗ ಪಡೆಯುತ್ತೆ …
Read More »ಇರಾನ್ನಲ್ಲಿ ಸಿಲುಕಿದ್ದ ಕನ್ನಡಿಗರು ತಾಯ್ನಾಡಿಗೆ: ಒಂದೇ ಗ್ರಾಮದ 16 ಜನ ವಾಪಸ್
ಬೆಂಗಳೂರು, ಜೂನ್ 21: ಇರಾನ್ ಮತ್ತು ಇಸ್ರೇಲ್ (Iran and Israel) ನಡುವಿನ ಯುದ್ಧ ಮುಂದುವರೆಯುತ್ತಿದ್ದು ದಿನದಿಂದ ದಿನಕ್ಕೆ ಪರಿಸ್ಥಿತಿ ಉದ್ವಿಗ್ನವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 18 ಜನ ಕನ್ನಡಿಗರು (Kannadigas) ಶನಿವಾರ (ಜೂ.21) ಕರ್ನಾಟಕಕ್ಕೆ (Karnataka) ವಾಪಸ್ ಆಗಿದ್ದಾರೆ. ಇರಾನ್ನಿಂದ ಬೆಂಗಳೂರಿಗೆ ಆಗಮಿಸಿದ ಕನ್ನಡಿಗರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಳಿಯ ಶಾಸಕ ಹಾಗೂ ಕುಟುಂಬಸ್ಥರು ಅದ್ದೂರಿಯಾಗಿ ಸ್ವಾಗತಕೋರಿದರು. ತಾಯ್ನಾಡಿಗೆ ಮರಳಿದ ಕನ್ನಡಿಗರು ಮತ್ತು ಇವರ ಪೋಷಕರಿಗೆ ಶಾಸಕ …
Read More »ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡುವವರಿಗೆ ಜೈಲು, ದಂಡ:ರಾಜ್ಯ ಸರ್ಕಾರ
ಬೆಂಗಳೂರು, (ಜೂನ್ 22): ಕರ್ನಾಟಕದಲ್ಲಿ ಸುಳ್ಳು ಸುದ್ದಿ ((Fake News) , ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಕರಡು ಬಗ್ಗೆ ಚರ್ಚಿಸಲಾಗಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಪ್ರಸ್ತಾಪಿಸಲಾಗಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು …
Read More »ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ತಲಾಶ್ ನಡೆಸಿದ ಪೊಲೀಸರು (
ಬೆಳಗಾವಿ: ಚಾಕು, ಮಚ್ಚು, ಲಾಂಗು ಎಂದರೆ ಆಟಿಕೆ ಸಾಮಾನು ಆದಂತಾಗಿವೆ. ಪುಸ್ತಕ, ಪೆನ್, ಊಟದ ಡಬ್ಬಿ ಇಟ್ಟುಕೊಳ್ಳುವ ಬ್ಯಾಗ್ನಲ್ಲಿ ಮಾರಕಾಸ್ತ್ರಗಳನ್ನು ಇಟ್ಟು ಶಾಲಾ ಕಾಲೇಜು ಮಕ್ಕಳು ಓಡಾಡುತ್ತಿದ್ದಾರೆ. ಇದಕ್ಕೆಲ್ಲಾ ಬ್ರೇಕ್ ಹಾಕಲು ಬೆಳಗಾವಿ ಪೊಲೀಸ್ ಕಮಿಷನರ್ ನೂತನ ಚಕ್ರವ್ಯೂಹವೊಂದನ್ನು ರಚಿಸಿದ್ದಾರೆ. ಅದುವೇ “ಚುಚ್ಚು ನಿಯಂತ್ರಣ ತಂಡ”. ಚಾಕು ಇರಿತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನರ್ ಭೂಷಣ ಗುಲಾಬರಾವ್ ಬೊರಸೆ ಅವರು ಚುಚ್ಚು ನಿಯಂತ್ರಣ ತಂಡವನ್ನು ಮೊನ್ನೆಯಷ್ಟೇ ಘೋಷಣೆ ಮಾಡಿದ್ದರು. ಈ …
Read More »30 ವರ್ಷದ ಹಿಂದೆ ಲಂಚ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಈಗ ಶಿಕ್ಷೆ
ಬೆಳಗಾವಿ : 30 ವರ್ಷದ ಹಿಂದೆ ಉತಾರ ಕೊಡಲು 500 ರೂ. ಲಂಚ ಪಡೆದಿದ್ದ ಆಗಿನ ಗ್ರಾಮ ಲೆಕ್ಕಾಧಿಕಾರಿಗೆ ಈಗ ಜೈಲು ಶಿಕ್ಷೆ ವಿಧಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಆದರೆ, ದೂರು ನೀಡಿದ್ದ ರೈತ 5 ವರ್ಷಗಳ ಹಿಂದೆ ಮೃತಪಟ್ಟಿದ್ದು, ಲಂಚ ಸ್ವೀಕರಿಸಿದ್ದ ಅಧಿಕಾರಿ ಹಿಂಡಲಗಾ ಜೈಲು ಕಂಬಿ ಎಣಿಸುತ್ತಿದ್ದಾರೆ. 1995ರಲ್ಲಿ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ರೈತ ಲಕ್ಷ್ಮಣ ರುಕ್ಕಣ್ಣ ಕಟಾಂಬಳೆ ಅವರು ತಮ್ಮ ಸಹೋದರನೊಂದಿಗೆ ಜಮೀನು ಹಂಚಿಕೆ …
Read More »ಸುಬ್ರಹ್ಮಣ್ಯ: ರೈಲ್ವೆ ಹಳಿ ಮೇಲೆ ಬಂಡೆ ಬಿದ್ದು ಸಂಚಾರದಲ್ಲಿ ವ್ಯತ್ಯಯ
ಸುಬ್ರಹ್ಮಣ್ಯ(ದ.ಕನ್ನಡ): ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮಾರಿ-ಶಿರಿಬಾಗಿಲು ನಡುವೆ ಗುಡ್ಡ ಕುಸಿದು ಮೆಟೀರಿಯಲ್ ರೈಲ್ವೆ ಹಳಿ ಮೇಲೆ ಬಂಡೆಗಳು ಬಿದ್ದ ಪರಿಣಾಮ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಯವಾಗಿದೆ. ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್ಪ್ರೆಸ್ ಕಡಗರವಳ್ಳಿಗೆ ಬೆಳಗ್ಗೆ 3:40ಕ್ಕೆ ಆಗಮಿಸಿದ್ದು, ತಡವಾಗಿ ಹೊರಡಲಿದೆ. ಹಾಗೇ ರೈಲು ಸಂಖ್ಯೆ 16585 SMVT ಬೆಂಗಳೂರು-ಮುರುಡೇಶ್ವರ ಎಕ್ಸ್ಪ್ರೆಸ್ ಸಕಲೇಶಪುರಕ್ಕೆ ಬೆಳಗ್ಗೆ 3:10ಕ್ಕೆ, ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ …
Read More »ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ನಡೆಸಿದ್ದ ಪ್ರತಿಭಟನೆ ಸಂಬಂಧ ಬಿಜೆಪಿ ನಾಯಕರ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೇ, ಸೂಸೈಡ್ ಮತ್ತು ಸುಪಾರಿ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಬರೆದಿರುವ ಪೋಸ್ಟರ್ಗಳನ್ನು ಸಾರ್ವಜನಿಕ ಶೌಚಾಲಯದ ಗೋಡೆಗೆ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಮತ್ತಿತರರ ವಿರುದ್ಧದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ ಹೈಗ್ರೌಂಡ್ಸ್ ಠಾಣಾ ಪೊಲೀಸರು …
Read More »ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ
ಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ. ಇದು …
Read More »
Laxmi News 24×7