ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ತಯಾರಿಕಾ ವಲಯದಲ್ಲಿ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸರಕಾರವು 6 ಪ್ರಮುಖ ವಲಯಗಳ ಪ್ರಗತಿಗೆ ಪ್ರತ್ಯೇಕ ಟಾಸ್ಕ್-ಫೋರ್ಸ್ ಗಳನ್ನು ರಚಿಸಲಿದೆ. ಇದಕ್ಕೆ ಬೇಕಾದ ಸಮಗ್ರ ಟೌನ್-ಶಿಪ್ ಗಳ ಅಭಿವೃದ್ಧಿಯಿಂದ ಹಿಡಿದು ಕೈಗಾರಿಕಾ ಪ್ರದೇಶಗಳಿಂದ ಮಂಗಳೂರು ಮತ್ತು ಚೆನ್ನೈ ಬಂದರುಗಳಿಗೆ ಬೇಕಾದ ಸಮರ್ಪಕ ಸಂಪರ್ಕದವರೆಗೆ ಪ್ರತಿಯೊಂದು ಸೌಲಭ್ಯಗಳನ್ನೂ ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ ಆಗಬೇಕಾದ …
Read More »ಮಳೆ ಆರ್ಭಟದಿಂದ ಚಿಂಚಲಿ – ಕುಡಚಿ ಸೇತುವೆ ಜಲಾವೃತ
ಚಿಕ್ಕೋಡಿ (ಬೆಳಗಾವಿ): ಕಳೆದ ಕೆಲವು ದಿನಗಳ ಕಾಲ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಅಬ್ಬರಿಸುತ್ತಿದೆ. ರಾಜ್ಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸೋಮವಾರ ರಾತ್ರಿ ಸುರಿದ ಮಳೆಗೆ ಕುಡಚಿ ಸುತ್ತಮುತ್ತಲಿನ ಜನ-ಜಾನುವಾರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕುಡಚಿ ಪಟ್ಟಣದಲ್ಲಿ ಹಾಗೂ ಕೆಲವು ಗ್ರಾಮದಲ್ಲಿ ರಾತ್ರಿ ರಭಸದ ಮಳೆ ಸುರಿದಿದ್ದು, ಸುಕ್ಷೇತ್ರ ಮಾಯಕ್ಕ ದೇವಸ್ಥಾನನಕ್ಕೆ ತೆರಳುವ ಚಿಂಚಲಿ ಗ್ರಾಮ ಹಾಗೂ ಕುಡಚಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಕೆಳ ಹಂತದ ಸೇತುವೆ ಮುಳುಗಡೆಯಾಗಿದೆ. …
Read More »ವೃದ್ಧ ದಂಪತಿಗೆ ಮೂರು ತಿಂಗಳು ಡಿಜಿಟಲ್ ಅರೆಸ್ಟ್
ಬೆಂಗಳೂರು : ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮೂಲಕ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಬಂಧಿತ ಆರೋಪಿಗಳು. ಮಂಜುನಾಥ್ ಎಂಬುವರು ನೀಡಿದ ದೂರಿನನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಇಂಜಿನಿಯರ್ ಆಗಿದ್ದ ಮಂಜುನಾಥ್ 31 ವರ್ಷಗಳ ಕಾಲ ನೈಜೀರಿಯಾದಲ್ಲಿ ಕೆಲಸ ನಿರ್ವಹಿಸಿ, ನಿವೃತ್ತಿಯ ಬಳಿಕ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಬ್ಯಾಂಕ್ನ ಪ್ರತಿನಿಧಿಗಳ …
Read More »15 ಜನರ ಮೇಲೆ ಬೀದಿ ನಾಯಿಗಳ ದಾಳಿ
ರಾಯಚೂರು: ನಗರದಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು, ಸುಮಾರು 15 ಜನರ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಗಂಗಾನಿವಾಸ ಹಾಗೂ ಟ್ಯಾಂಕ್ ಬಂಡ್ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಘಟನೆ ಜರುಗಿದೆ. ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ಹುಚ್ಚುನಾಯಿ ಕಡಿತ ಶಂಕೆ ಎದುರಾಗಿದ್ದು, ಗಾಯಾಳುಗಳು ಆತಂಕಗೊಂಡಿದ್ದಾರೆ. ಓರ್ವ ಬಾಲಕ ಸೇರಿದಂತೆ ಗಾಯಗೊಂಡ ಎಂಟು ಜನರನ್ನು ನಗರದ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ಸಿಕ್ಕಸಿಕ್ಕವರ ಕೈ, ಕಾಲಿಗೆ …
Read More »ಆರ್ಟಿಒ ಕಚೇರಿಯ 16 ಲಕ್ಷ ಹಣದೊಂದಿಗೆ ಎಸ್ಡಿಎ ಸಿಬ್ಬಂದಿ ನಾಪತ್ತೆ
ಬಳ್ಳಾರಿ: ಬಳ್ಳಾರಿಯ ಆರ್ಟಿಒ ಕಚೇರಿಯಲ್ಲಿ ಟ್ರೇಜರಿ ಸೆಕ್ಷನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆಯ ಸಹಾಯಕ (ಎಸ್ಡಿಎ) ರವಿ ತಾವರಖೇಡ 16 ಲಕ್ಷ ರೂ.ಗಳ ಹಣದೊಂದಿಗೆ ನಾಪತ್ತೆಯಾಗಿರುವ ಆರೋಪ ಕೇಳಿಬಂದಿದೆ. ಆರ್ಟಿಒ ಕಚೇರಿಯ ಅಧೀಕ್ಷಕ ವೀರೇಶ್ ಅವರು ನೀಡಿದ ದೂರಿನ ಮೇರೆಗೆ ಕೌಲ್ಬಜಾರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 316(2), 318 (4) ಪ್ರಕಾರ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಆರ್ಟಿಒ ಕಚೇರಿಯಲ್ಲಿ ಸಾರ್ವಜನಿಕರ ವಿವಿಧ ಸೇವೆಗಳಿಂದ ಸಂಗ್ರಹಿಸಲಾದ ಹಣವನ್ನು ಆಯಾ ದಿನವೇ …
Read More »ಡೆತ್ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ಚಿಕ್ಕೋಡಿ: ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗುರುರಾಜ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಡೆತ್ನೋಟ್ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದರು. ಈ ಕುರಿತು ಬೆಳಗಾವಿ ಎಸ್ಪಿ ಭೀಮಶಂಕರ್ ಗುಳೇದ ಮಾಹಿತಿ ನೀಡಿ, “ಡೆತ್ನೋಟ್ ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ …
Read More »ಉಗಾರ್ – ಮಂಗಸೂಳಿ ಬಸ್ ಸಂಚಾರಕ್ಕೆ ಶಾಸಕ ರಾಜು ಕಾಗೆ ಚಾಲನೆ
ಉಗಾರ್ – ಮಂಗಸೂಳಿ ಬಸ್ ಸಂಚಾರಕ್ಕೆ ಶಾಸಕ ರಾಜು ಕಾಗೆ ಚಾಲನೆ ಕಾಗವಾಡ : ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ವತಿಯಿಂದ ಪ್ರತಿಯೊಬ್ಬರಿಗೆ ಬಸ್ಸ ಸೇವೆ ನೀಡಲು ವಿಶೇಷವಾಗಿ ಶ್ರಮಿಸುತ್ತಿದೆ ಅದರಲ್ಲಿ ಹೊಸದಾಗಿ ಉಗಾರ-ಮಂಗಸುಳಿ, ಈ ಮಾರ್ಗದಲ್ಲಿ ಅನೇಕ ಪ್ರಯಾಣಿಕರ ಬೇಡಿಕೆ ಗಮನದಲ್ಲಿ ತೆಗೆದುಕೊಂಡು ಪ್ರಾರಂಭಿಸಲಾಗಿದೆ ಎಂದು ಶಾಸಕ ರಾಜು ಕಾಗೆ ಹೇಳಿದರು. ಸೋಮವಾರ ರಂದು ಉಗಾರ-ಮಂಗಸೂಳಿ ಮಾರ್ಗದಲ್ಲಿ ಪ್ರಾರಂಭಿಸಿದ್ದು ಇದರ ಪೂಜೆ ವಿಜಯಪುರ ಜ್ಞಾನಯೋಗ ಆಶ್ರಮದ ಬಸವಲಿಂಗ ಸ್ವಾಮೀಜಿ …
Read More »ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕ್ಷೀರಭಾಗ್ಯ ಹಾಲಿನಪುಡಿ & ರಾಗಿ ಮಾಲ್ಟ್ ಮಾರಾಟ ಗೋಲಮಾಲ್ ಪ್ರಕರಣ…
ಬಾಗಲಕೋಟೆ : ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕ್ಷೀರಭಾಗ್ಯ ಹಾಲಿನಪುಡಿ & ರಾಗಿ ಮಾಲ್ಟ್ ಮಾರಾಟ ಗೋಲಮಾಲ್ ಪ್ರಕರಣ… ವಿಚಾರಣಾ ವರದಿಗೆ 2 ತಿಂಗಳ ಗಡುವು ನೀಡಿದ ಶಿಕ್ಷಣ ಇಲಾಖೆ… ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕ್ಷೀರ ಭಾಗ್ಯ ಹಾಲಿನಪುಡಿ ಮತ್ತು ರಾಗಿ ಮಾಲ್ಟ್ ಮಾರಾಟ ಗೋಲಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲೆ ಶಿಕ್ಷಣ ಇಲಾಖೆ ವಿಚಾರಣಾ ವರದಿಗೆ ಎರಡು ತಿಂಗಳ ಗಡುವು ನೀಡಿದೆ ಬಾಗಲಕೋಟೆ ಜಿಲ್ಲೆಯಲ್ಲಿ ನೋಟಿಸ್ ಪಡೆದ ಶಿಕ್ಷಕ ಸಮುದಾಯದಲ್ಲಿ ಶುರುವಾಯ್ತು ಆತಂಕ …
Read More »ಶಾಂತಾಯಿ ವೃದ್ಧಾಶ್ರಮಕ್ಕೆ ಬ್ರಿಗೇಡಿಯರ್ ಜಾಯ್’ದೀಪ್ ಮುಖರ್ಜಿ ಭೇಟಿ
ಶಾಂತಾಯಿ ವೃದ್ಧಾಶ್ರಮಕ್ಕೆ ಬ್ರಿಗೇಡಿಯರ್ ಜಾಯ್’ದೀಪ್ ಮುಖರ್ಜಿ ಭೇಟಿ ಮರಾಠಾ ಲೈಟ್ ಇನಫೆಂಟ್ರಿ ರೆಜಿಮೆಂಟಲ್ ಸೆಂಟರ್ನ ಕಮಾಂಡೆಂಟ್ ಬ್ರಿಗೇಡಿಯರ್ ಜಾಯ್’ದೀಪ್ ಮುಖರ್ಜಿ ಅವರು ತಮ್ಮ ಕುಟುಂಬ ಮತ್ತು ಸೈನಿಕರೊಂದಿಗೆ ಇಂದು ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದರು. ವೃದ್ಧಾಶ್ರಮದ ಅಜ್ಜಿಯರು ಬ್ರಿಗೇಡಿಯರ್ ಮುಖರ್ಜಿಯವರನ್ನು ಸಾಂಪ್ರದಾಯಿಕ ಆರತಿಯೊಂದಿಗೆ ಸ್ವಾಗತಿಸಿದರು. ವೃದ್ಧಾಶ್ರಮದ ಹಸಿರು, ಸ್ವಚ್ಛ ಪರಿಸರ ಮತ್ತು ಸಂತೋಷದ ವಾತಾವರಣವನ್ನು ನೋಡಿ ಅವರು ತುಂಬಾ ಸಂತೋಷಪಟ್ಟರು. ಜೀವನ ಮತ್ತು ಸಂತೋಷದಿಂದ ತುಂಬಿರುವ ಇಂತಹ ವೃದ್ಧಾಶ್ರಮವನ್ನು ಹಿಂದೆಂದೂ …
Read More »ಕುಂಭಮೇಳದಲ್ಲಿ ಕಾಲ್ತುಳಿತದಿಂದ ಜನ ಸಾವನ್ನಪ್ಪಿದಾಗ ಹೆಚ್ಡಿಕೆಯವರು ಮೋದಿ ರಾಜೀನಾಮೆ ಕೇಳಿದ್ರಾ: ಸಿಎಂ
ಮೈಸೂರು: ಕುಂಭಮೇಳದಲ್ಲಿ ಕಾಲ್ತುಳಿತದಿಂದ ಹಲವು ಜನರು ಸಾವನ್ನಪ್ಪಿದಾಗ ಪ್ರಧಾನಿ ಮೋದಿ ಅವರು ರಾಜೀನಾಮೆ ನೀಡಿದರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿಯವರು ವಿಧಾನಸೌಧದ ಆವರಣದಲ್ಲಿ ಧರಣಿ ನಡೆಸಿದ ವಿಚಾರವಾಗಿ ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕುಂಭಮೇಳದ ದುರ್ಘಟನೆ ನಡೆದಾಗ ಯಾರಾದರೂ ಪ್ರಧಾನಿಯನ್ನು ರಾಜೀನಾಮೆ ಕೇಳಿದರಾ? ಆಗ ಕುಮಾರಸ್ವಾಮಿ ರಾಜೀನಾಮೆ ಕೇಳಬಹುದಿತ್ತಲ್ಲವೇ? ಸುಮ್ಮನೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಅಷ್ಟೇ ಎಂದರು. ಜೂನ್ …
Read More »
Laxmi News 24×7