Breaking News

ಜಿಲ್ಲೆ

ಆರ್​ಸಿಬಿ ಫೈನಲ್​ಗೇರಿದ ಖುಷಿಯಲ್ಲಿ ಪೆಟ್ರೋಲ್ ಚೀಲ ಸಿಡಿಸಿ ಸಂಭ್ರಮಾಚರಣೆ: ರಾಯಚೂರಿನಲ್ಲಿ 8 ಯುವಕರ ಬಂಧನ

ರಾಯಚೂರು, : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು (RCB) ಮೇ 29 ರಂದು ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಭರ್ಜರಿ ಗೆಲ್ಲುವು ದಾಖಲಿಸಿ ಐಪಿಎಲ್ ಫೈನಲ್ (IPL) ಪ್ರವೇಶಿಸಿತ್ತು. ಆರ್​ಸಿಬಿ ಅಭಿಮಾನಿಗಳು ರಾಜ್ಯದಾದ್ಯಂತ ಸಂಭ್ರಮಾಚರಣೆ ಮಾಡಿದ್ದರು. ಅನೇಕ ಕಡೆಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗಿತ್ತು. ಗಡಿ ಜಿಲ್ಲೆ ರಾಯಚೂರಿನಲ್ಲಿ ಯುವಕರ ಗುಂಪೊಂದು ಪೆಟ್ರೋಲ್ ಬಾಂಬ್ ರೀತಿಯಲ್ಲಿ ಪೆಟ್ರೋಲ್ ಚೀಲಗಳನ್ನು ಸಿಡಿಸಿ ಸಂಭ್ರಮ ಆಚರಣೆ ಮಾಡಿದ್ದು, ಇದೀಗ ಜೈಲು ಪಾಲಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ಯುವಕರ ಗುಂಪು ಆರ್ಸಿಬಿ …

Read More »

ವಿಧಾನಸೌಧ ಪ್ರವಾಸ ಇಂದಿನಿಂದ ಆರಂಭ

ಬೆಂಗಳೂರು, ಜೂನ್​ 01: ರಾಜಕಾರಣಿಗಳು ಮತ್ತು ಅಧಿಕಾರಿಗಳಿಂದಲೇ ತುಂಬಿರುತ್ತಿದ್ದ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ (Vidhan Soudha) ಒಳಕ್ಕೆ ಇನ್ನು ಜನಸಾಮಾನ್ಯರು ಕೂಡ ಹೋಗಬಹುದಾಗಿದೆ. ದೂರದ ಊರಿನಿಂದ ಬೆಂಗಳೂರಿಗೆ (Bengaluru) ಬರುವ ಹಲವರಿಗೆ ವಿಧಾನಸೌಧ ನೋಡಬೇಕು ಎಂಬ ಆಸೆ ಇರುತ್ತದೆ. ಆದರೆ, ಇಷ್ಟು ದಿನಗಳ ಕಾಲ ಹೊರಗಿನಿಂದಲೇ ವಿಧಾನಸೌಧವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈಗ ವಿಧಾನಸೌಧದ ಒಳಗೆ ಹೋಗಬಹುದು. ಅದರೊಳಗೆಲ್ಲ ಸುತ್ತಾಡಬಹುದು. ಆ ಭವ್ಯ ಕಟ್ಟಡವನ್ನು ಮುಟ್ಟಬಹುದು. ಹೌದು, ಭವ್ಯ ವಿಧಾನಸೌಧ ವೀಕ್ಷಣೆಗೆ ರಾಜ್ಯ …

Read More »

ರಸ್ತೆ, ಬೀದಿಗಳಲ್ಲಿ ಉಗುಳಿದ್ರೆ ಬೀಳುತ್ತೆ 1000 ರೂ. ದಂಡ!

ಬೆಂಗಳೂರು: ಮೇ 31ಅನ್ನು ವಿಶ್ವ ತಂಬಾಕು ದಿನಾಚರಣೆಯಾಗಿ ಆಚರಿಸಲಾಯಿತು. ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವ ಜೊತೆಗೆ ರಾಜ್ಯ ಸರ್ಕಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಸೇವನೆಗೂ ನಿಷೇಧ ವಿಧಿಸಿ ಅಧಿಸೂಚನೆ ಹೊರಡಿಸಿದೆ. ಇಲ್ಲಿಯವರೆಗೆ ಸಿಗರೇಟು, ಬೀಡಿ ಸೇರಿದಂತೆ ಹೊಗೆಯುಕ್ತ ತಂಬಾಕು ಉತ್ಪನ್ನಗಳ ಸೇವನೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧಿಸಲಾಗಿತ್ತು. ಈಗ ಹೊಗೆರಹಿತ ತಂಬಾಕು ಉತ್ಪನ್ನಗಳ ಬಳಕೆಯನ್ನೂ …

Read More »

ಹಾವೇರಿ ಜಿಲ್ಲೆಯ 73 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ

ಹಾವೇರಿ : ನಾಲ್ಕು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಕೊರೊನಾ ಜಿಲ್ಲೆಯಲ್ಲಿ ಹಲವು ಅವಾಂತರಗಳನ್ನ ಸೃಷ್ಟಿಸಿತ್ತು. ಕೊರೊನಾದಲ್ಲಿ ನೂರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ಕೋವಿಡ್​ನಿಂದ ಹೆಚ್ಚು ಸಾವು ಕಂಡ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆಯೂ ಸಹ ಒಂದಾಗಿತ್ತು. ನಂತರ ಎರಡನೇ ಅಲೆ, ಮೂರನೇ ಅಲೆ ಕಾಣಿಸಿಕೊಂಡರೂ ಸಹ ಹೇಳಿಕೊಳ್ಳುವಂತಹ ಅನಾಹುತಗಳು ಸಂಭವಿಸಿರಲಿಲ್ಲ. ಮತ್ತೆ ಇದೀಗ ಕೊರೊನಾ ಕಾಣಿಸಿಕೊಂಡಿರುವುದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ. ಈಗಾಗಲೇ ಹಾವೇರಿ ತಾಲೂಕಿನ 73 ವರ್ಷದ ವೃದ್ಧನೊಬ್ಬನಿಗೆ ಕೊರೊನಾ …

Read More »

ಫೋರ್ಜರಿ ಸಹಿ ಮತ್ತು ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಇಲಾಖೆಗೆ ವಂಚನೆ ಮಾಡಿರುವ ಆರೋಪದಡಿ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಮಾನ್ಯತೆ ರದ್ದಾಗಿದೆ.

ಚಿಕ್ಕೋಡಿ (ಬೆಳಗಾವಿ): ನಕಲಿ ದಾಖಲಾತಿಗಳನ್ನು ಸೃಷ್ಟಿಸಿದ ಇಲಾಖೆಗೆ ವಂಚನೆ ಮಾಡಿರುವ ಹಿನ್ನೆಲೆಯಲ್ಲಿ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಮಾನ್ಯತೆಯನ್ನು ರದ್ದು ಪಡಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿಂಧು ಬಿ ರೂಪೇಶ್ ಆದೇಶ ಹೊರಡಿಸಿದ್ದಾರೆ. ಅಥಣಿ ಪಟ್ಟಣದ ಹೊರವಲಯದಲ್ಲಿ 2019-20ನೇ ಸಾಲಿನಲ್ಲಿ ಆರಂಭಗೊಂಡ ಶ್ರೀ ಅಣ್ಣಪ್ಪ ತೇರದಾಳ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆಯ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯವರು ಶಾಲಾ ಶಿಕ್ಷಣ ಇಲಾಖೆಯ (ಪದವಿ …

Read More »

ಹೆದ್ದಾರಿ ಕೆಲಸ ಮುಗಿಸಿ ಹೊರಟವರ ಮೇಲೆ ಹರಿದ ಟ್ಯಾಂಕರ್

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕೆಲಸ ಮುಗಿಸಿ, ಮನೆ ಕಡೆ ಹೊರಟಿದ್ದವರ ಮೇಲೆ ಎಣ್ಣೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಟ್ಯಾಂಕರ್ ಚಾಲಕ ಸೇರಿ ನಾಲ್ವರಿಗೆ ಗಾಯವಾಗಿರುವ ದಾರುಣ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿತು. ಕಾರ್ಮಿಕರು ಇನ್ನೇನು ಮನೆ ಕಡೆ ಹೋಗಬೇಕು ಅನ್ನುವಷ್ಟರಲ್ಲಿ ಟ್ಯಾಂಕರ್ ರೂಪದಲ್ಲಿ ಬಂದ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ರಾಮಚಂದ್ರ ಜಾಧವ (45), ಇವರ ಪುತ್ರ …

Read More »

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ….

ಬಾಗಲಕೋಟೆ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ…. ಬಾಗಲಕೋಟೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ ನಡೆಯಿತು. ಕರ್ನಾಟಕ ರಾಜ್ಯ ವಸತಿ ಶಾಲೆಗಳ ಸಂಘದಿಂದ ಪ್ರತಿಭಟನೆಗೆ ಕರೆ ನೀಡಲಾಗಿತ್ತು ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕಿಗೆ ಆಗ್ರಹಿಸಲಾಯಿತು ವಸತಿ ಶಾಲೆ ಮತ್ತು ಸಿಬ್ಬಂದಿಗಳನ್ನ ಆಯಾ ಇಲಾಖೆ ವಶಕ್ಕೆ ಒಪ್ಪಿಸುವುದು, ಜ್ಯೋತಿ ಸಂಜೀವಿನಿ ಅನುಷ್ಠಾನ & ವಿಶೇಷ ಭತ್ಯೆ …

Read More »

ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿ ಸಾವಿನಲ್ಲಿ ಅಂತ್ಯ,

ದೇವನಹಳ್ಳಿ, ಮೇ 31: ಸಾಂಬಾರ್ ವಿಚಾರಕ್ಕೆ ದಂಪತಿ (couple) ನಡುವೆ ಉಂಟಾದ ಕಲಹ ಪತ್ನಿ ಸಾವಿನಲ್ಲಿ (death) ಅಂತ್ಯವಾಗಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರತ್ನ (38) ಸಾವನ್ನಪಿದ ಗೃಹಿಣಿ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಮಗಳದ್ದು ಆತ್ಮಹತ್ಯೆಯಲ್ಲ‌, ಕೊಲೆ ಅಂತ ಮಹಿಳೆಯ ತವರು ಮನೆಯವರ ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡ ಕೊಲೆ ಮಾಡಿದ್ದಾನೆ ಅಂತ …

Read More »

ಸಲೂನ್ & ಸ್ಪಾಗೆ ನುಗ್ಗಿ ಲೇಡಿ ಗ್ಯಾಂಗ್‌ ಅಟ್ಟಹಾಸ

ಬೆಂಗಳೂರು, ಮೇ 31: ನಗರದಲ್ಲಿ ಅಮೃತಹಳ್ಳಿಯ ರಾಯಲ್ ಸಲೂನ್ ಮತ್ತು ಸ್ಪಾಗೆ ಎಂಟ್ರಿ ಕೊಟ್ಟಿದ್ದ ಲೇಡಿ ಡಾನ್‌ ಗ್ಯಾಂಗ್ (Lady Don Gang) ಮಾಲೀಕ ಸಂಜು ಮೇಲೆ ದಾಳಿ (attack) ಮಾಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತ ಮೂವರಲ್ಲಿ ಕಾವ್ಯಗೆ ರೌಡಿಸಂ ಲಿಂಕ್​ ಇದೆ. ಹೇಗೆ ಅಂದರೆ ಬೆಂಗಳೂರಿನ ರೌಡಿಶೀಟರ್ ಮುನಿಕೃಷ್ಣ ಅಲಿಯಾಸ್​ ಅಮೃತಹಳ್ಳಿ ಕಪ್ಪೆ ಪ್ರಿಯತಮೆ ಈ ಕಾವ್ಯ. ತನ್ನ ರೌಡಿ ಲವರ್​ ಕಪ್ಪೆ ಹೆಸರನ್ನ ಬಳಸಿಕೊಂಡು ಏರಿಯಾದಲ್ಲಿ ಕಾವ್ಯ …

Read More »

ಬಾಗಲಕೋಟೆಯ ಜಿ.ಪಂ. ಅಕೌಂಟೆಂಟ್ ಮನೆ ಮೇಲೆ ದಾಳಿ

ಬಾಗಲಕೋಟೆಯ ಜಿ.ಪಂ. ಅಕೌಂಟೆಂಟ್ ಮನೆ ಮೇಲೆ ದಾಳಿ ಏಕಕಾಲಕ್ಕೆ ಮೂರು ಮನೆಗಳ ಮೇಲೆ ದಾಳಿ ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯತ್ ಅಕೌಂಟೆಂಟ್ ಶ್ರೀಶೈಲ್ ತತ್ರಾಣಿ ಅವರಿಗೆ ಸೇರಿದ ಮೂರು ಮನೆಗಳ ಏಕಕಾಲಕಕ್ಕೆ ದಾಳಿ ನಡೆಸಲಾಗಿದೆ ಹುನಗುಂದ ತಾಲೂಕಿನ ಅಮೀನಗಢದಲ್ಲಿ ಇವರ ಮೂರು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮನೆಗಳಲ್ಲಿ ದೊರೆತ ದಾಖಲೆ ಪತ್ರಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅಲ್ಲದೇ, ಕಾರ್ಯಾಲಯದಲ್ಲಿಯೂ ಅಧಿಕಾರಿಗಳಿಂದ …

Read More »