Breaking News

ಜಿಲ್ಲೆ

ಪ್ರಿಯಾಂಕಾ ಗಾಂಧಿ ಕಿತ್ತೂರು ಚನ್ನಮ್ಮನಂತೆ‌:ಖರ್ಗೆ

ಬೆಳಗಾವಿ: ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಶಕ್ತಿಶಾಲಿಯಾಗಿ ಹೋರಾಟ ಮಾಡುವ ಹೆಣ್ಣುಮಗಳು ಪ್ರಿಯಾಂಕಾ ಗಾಂಧಿ. ಪ್ರಿಯಾಂಕಾ ಮೆತ್ತಗೆ ಕಾಣುತ್ತಾರೆ, ಮುಟ್ಟಿ ನೋಡಿ. ನಮ್ಮ ಕಿತ್ತೂರು ಚನ್ನಮ್ಮ ಪ್ರಿಯಾಂಕಾ ಗಾಂಧಿ. ನಾನೇನು ಹೊಗಳುತ್ತಿಲ್ಲ. ಅವರಿಗೆ ಅಷ್ಟೊಂದು ಶಕ್ತಿ ಇದೆ ಎಂದು ಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ಪಟ್ಟರು. ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಂದೆ ಕಳೆದುಕೊಂಡಾಗ ಪ್ರಿಯಾಂಕಾ ಅವರಿಗೆ ನಾಲ್ಕೈದು ವರ್ಷ. ತಾಯಿ ರಕ್ಷಣೆಯಲ್ಲಿ …

Read More »

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮಅನಾವರಣಕ್ಕೆ ಕ್ಷಣಗಣನೆ

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವಕ್ಕೆ ಸಾಕ್ಷಿಯಾಗಿರುವ ಬೆಳಗಾವಿಯಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶ ಮತ್ತು ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ ಶುರುವಾಗಿದೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ಮೊಟಕುಗೊಂಡಿದ್ದ ಕಾರ್ಯಕ್ರಮ ಮಂಗಳವಾರ (ಜ.21) ಆಯೋಜಿಸಲಾಗಿದೆ. ಸುವರ್ಣ ವಿಧಾನಸೌಧದ ಉತ್ತರ‌ ಪ್ರವೇಶ ದ್ವಾರದ ಎದುರಿನಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು …

Read More »

7.20 ಕೋಟಿ ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದ ಚೀಲದಲ್ಲಿ ಹುಳುಗಳು ಪತ್ತೆ

ಬಳ್ಳಾರಿ: 7.20 ಕೋಟಿ ರೂ.ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದ ಚೀಲದಲ್ಲಿ ಹುಳುಗಳು ಪತ್ತೆಯಾದ ಘಟನೆ ಬಳ್ಳಾರಿಯ ಕೆಎಸ್‌ಡಬ್ಲ್ಯೂಸಿ ಗೋಡಾನ್​ನಲ್ಲಿ ನಡೆದಿದೆ. ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನಿನ್ನೆ (ಶುಕ್ರವಾರ) ಕೆಎಸ್‌ಡಬ್ಲ್ಯೂಸಿಯ ಯುನಿಟ್ -2 ರ ಗೋದಾಮಿಗೆ ಭೇಟಿ ನೀಡಿದಾಗ ಜೋಳದ ಚೀಲದಲ್ಲಿ ಹುಳುಗಳು ಪತ್ತೆಯಾಗಿದೆ. ತಲಾ 50 ಕೆಜಿ ತೂಕದ 48,000 ಚೀಲ ಜೋಳದಲ್ಲಿ ಹುಳುಗಳು ಕಂಡುಬಂದಿವೆ. ನ್ಯಾಯಮೂರ್ತಿ ವೀರಪ್ಪ, ಉಪ ನೋಂದಣಾಧಿಕಾರಿ ಅರವಿಂದ್ ಎನ್.ವಿ ಪ್ರಶ್ನಿಸಿದಾಗ, ಕೆಎಸ್‌ಡಬ್ಲ್ಯುಸಿಯ …

Read More »

ಲಾಲ್‌ಬಾಗ್​ ತರಕಾರಿ, ತೆಂಗಿನ ಗರಿಗಳ ಕೆತ್ತೆನೆ ಪ್ರದರ್ಶನ

ಬೆಂಗಳೂರು: ನಗರದ ಸಸ್ಯಕಾಶಿ ಲಾಲ್​ಬಾಗ್‌ನಲ್ಲಿ ನಡೆಯುತ್ತಿರುವ 217ನೇ ಫಲಪುಷ್ಪ ಪ್ರದರ್ಶನದ ಅಂಗವಾಗಿ ಹಮ್ಮಿಕೊಂಡಿದ್ದ ಇಕೆಬಾನ, ಪುಪ್ಪಭಾರತಿ, ಪುಷ್ಪ ರಂಗೋಲಿ, ತರಕಾರಿ ಕೆತ್ತನೆ, ಡಚ್ ಹೂವಿನ ಜೋಡನೆ, ಥಾಯ್ ಆರ್ಟ್‌ನ ಪೂರಕ ಕಲೆಗಳ ಪ್ರದರ್ಶನವನ್ನು ಬಹುಭಾಷಾ ನಟಿ ಪ್ರೇಮಾ ಶನಿವಾರ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಹೂವು, ಬಾಳೆಎಲೆ, ತೆಂಗಿನ ಗರಿ, ತರಕಾರಿಗಳಲ್ಲಿ ಬಗೆ ಬಗೆಯ ವಿನ್ಯಾಸದ ಕಲಾಕೃತಿಗಳನ್ನು ಮಾಡುವುದೆಂದರೆ ಇದೊಂದು ರೀತಿ ಧ್ಯಾನ ಇದ್ದಂತೆ ಎಂದು ಹೇಳಿದರು

Read More »

ಚಿಕ್ಕೋಡಿ ಹಿರಿಯ ಉಪನೋಂದಣಾಧಿಕಾರಿ ವಿರುದ್ಧ ರೈತರ ಪ್ರತಿಭಟನೆ:ನ್ಯಾಯ ಸಿಗದೇ ಹೋದರೆ ವಿಷಸೇವಿಸಿ ಆತ್ಮಹತ್ಯೆ

ಅನ್ಯಾಯವಾದ ರೈತರಿಗೆ ನ್ಯಾಯ ಸಿಗದೇ ಹೋದರೆ ವಿಷಸೇವಿಸಿ ಆತ್ಮಹತ್ಯೆ ಚಿಕ್ಕೋಡಿ ಹಿರಿಯ ಉಪನೋಂದಣಾಧಿಕಾರಿ ವಿರುದ್ಧ ರೈತರು ಪ್ರತಿಭಟನೆ ಚಿಕ್ಕೋಡಿ: ಭೂಮಿ ಖರೀದಿಯ ವ್ಯಾಜ್ಯವು ನ್ಯಾಯಾಲಯದಲ್ಲಿ ಇರುವಾಗಲೇ ಚಿಕ್ಕೋಡಿ ಉಪನೋಂದನಾಧಿಕಾರಿ ಮತ್ತೊಬ್ಬರಿಗೆ ಆಸ್ತಿಗಳನ್ನು ಮಾರಾಟ ಮಾಡಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ರೈತರಿಗೆ ಅನ್ಯಾಯ ಮಾಡಿದ್ದಾರೆ. ಬರುವ ಹದಿನೈದು ದಿನಗಳ ಒಳಗಾಗಿ ರೈತರಿಗೆ ನ್ಯಾಯ ಸಿಗದೇ ಹೋದರೆ ಮಿನಿವಿಧಾನಸೌಧದ ಮುಂಭಾಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಿಕ್ಕೋಡಿ …

Read More »

ಓಂಶಕ್ತಿ ಮಾಲಾಧಾರಿಗಳಿಗೆ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ

ಚಿತ್ರದುರ್ಗದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಬೆಂಜ್ ಕಾರು ರಸ್ತೆ ದಾಟುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ. ನೆಲಮಂಗಲದಲ್ಲಿ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಅಪಘಾತಕ್ಕೀಡಾದ ಕಾರನ್ನು ಜಪ್ತಿ ಮಾಡಲಾಗಿದೆ. ಶಾಸಕ ಕೆ.ಸಿ.ವೀರೇಂದ್ರ (kc veerendra) ಪಪ್ಪಿ ಕಾರು ಡಿಕ್ಕಿ ಹೊಡೆ ಪರಿಣಾಮ ಇಬ್ಬರು ಓಂಶಕ್ತಿ ಮಾಲಾಧಾರಿಗಳು ಗಂಭೀರ …

Read More »

ಸತೀಶ್​​ಗೆ ನಾನು ಹೃದಯಪೂರ್ವಕ ಧನ್ಯವಾದ ಹೇಳುತ್ತೇನೆ:ಮಾಜಿ ಸಚಿವ ರಮೇಶ ಜಾರಕಿಹೊಳಿ‌

ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಸೈಲೆಂಟ್ ಆಗಿ ಇರಬಾರದು. ಉಗ್ರವಾಗಿ ವರ್ತಿಸಿದರೆ ಮಾತ್ರ ಅವರಿಗೆ ಉಳಿಗಾಲ. ಇಲ್ಲದಿದ್ದರೆ ನಿಮ್ಮನ್ನು ರಾಜಕೀಯವಾಗಿ ಮುಗಿಸುತ್ತಾರೆ ಎನ್ನುವ ಮೂಲಕ ಸಹೋದರ ಸತೀಶ ಜಾರಕಿಹೊಳಿ ಅವರಿಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಕಿವಿಮಾತು ಹೇಳಿದ್ದಾರೆ. ಸತೀಶ್​​ಗೆ ನಾನು ಹೃದಯಪೂರ್ವಕ ಧನ್ಯವಾದ ಹೇಳುತ್ತೇನೆ: ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ‌ ಮಾತನಾಡಿದ ಅವರು,‌ ಬೆಳಗಾವಿ ಕಾಂಗ್ರೆಸ್ ಕಚೇರಿ ನಿರ್ಮಾಣದ ವಿಚಾರದಲ್ಲಿ ಡಿಕೆಶಿ ರಾಜ್ಯದ ಜನತೆಗೆ …

Read More »

ಪೊಲೀಸರು ಸ್ಥಳ ಮಹಜರಿಗೂ ಮೊದಲೇ ಕಾರನ್ನು ಬೆಳಗಾವಿ ಹೊರ ವಲಯದಲ್ಲಿರುವ ಶೋರೂಮ್​ಗೆ ಶಿಫ್ಟ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಬೆಳಗಾವಿ,  ಸಚಿವೆ ಲಕ್ಷ್ಮೀ ಹೆಬ್ಬಾಕ್ಳರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಇಂದು (ಜನವರಿ 14) ಸಂಕ್ರಾಂತಿ ಹಬ್ಬದ ದಿನವೇ ಬೆಳಗಾವಿಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿಗಳು ಅಡ್ಡಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಹೆಬ್ಬಾಳ್ಕರ್​ ಗಾಯಗಳಾಗಿವೆ. ಇನ್ನು ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಸರ್ಕಾರಿ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ಗನ್​ಮ್ಯಾನ್ ಈರಪ್ಪ ಹುಣಶಿಕಟ್ಟಿ ದೂರಿನ ಮೇರೆಗೆ …

Read More »

ಮಗಳಿಗೆ ಸಂಕ್ರಾಂತಿ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಹತ್ಯೆ

ಬೆಳಗಾವಿ: ಮಗಳಿಗೆ ಸಂಕ್ರಾಂತಿ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ಇಂದು ನಡೆದಿದೆ. ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪದಮುಕಿ(43) ಕೊಲೆಯಾದ ಮಹಿಳೆ. ಮಲ್ಲಪ್ರಭಾ ನಗರದ ಶುಭಂ ದತ್ತಾ ಬಿರ್ಜೆ(24) ಕೊಲೆ ಮಾಡಿದ ಆರೋಪಿ. ರೈತ ಗಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ಮಗಳು ಛಾಯಾ, ಅಳಿಯ ಶುಭಂ ಜೊತೆ ವಾಸವಾಗಿದ್ದರು. ಕಳೆದ 7 ತಿಂಗಳ ಹಿಂದೆ ಅಷ್ಟೇ ಇವರ ಮದುವೆ …

Read More »

ಹೊನಗಾ ಗ್ರಾಮದಲ್ಲಿ ನಿರ್ಮಾಣಗೊಂಡ ಉನ್ನತಿಕರಿಸಿದ ಸರ್ಕಾರಿ ಪ್ರೌಢ ಶಾಲೆಗಳ ಹೊಸ 2 ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಲೋಕೋಪಯೋಗಿ ಸಚಿವರು ಹಾಗೂ ಕುಮಾರಿ ಪ್ರಿಯಾಂಕ ಜಾರಕಿಹೊಳಿ ಮೇಡಂ ಚಿಕ್ಕೋಡಿ ಲೋಕಸಭಾ ಸದಸ್ಯರು ಇವರ ಆದೇಶದ ಮೇರೆಗೆ ಇಂದು ಹೊನಗಾ ಗ್ರಾಮದಲ್ಲಿ ನಿರ್ಮಾಣಗೊಂಡ ಉನ್ನತಿಕರಿಸಿದ ಸರ್ಕಾರಿ ಪ್ರೌಢ ಶಾಲೆಗಳ ಹೊಸ 2 ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಇಂದು ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಇವರ ಅಮೃತ ಹಸ್ತದಿಂದ ಉದ್ಘಾಟನೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಶ್ರೀ ಸಿದ್ದು ಸುಣಗಾರ ಶ್ರೀ …

Read More »