Breaking News
Home / ಜಿಲ್ಲೆ (page 2)

ಜಿಲ್ಲೆ

ಬಾಲ್ಯವಿವಾಹದಿಂದ ಐವರು ಬಾಲಕಿಯರ ರಕ್ಷಣೆ

ಕೊಪ್ಪಳ: ತಾಲ್ಲೂಕಿನ ಜಿನ್ನಾಪುರ ತಾಂಡದ ದೇವಸ್ಥಾನದಲ್ಲಿ ನಿಗದಿಯಾಗಿದ್ದ ಐದು ಜನ ಬಾಲಕಿಯರ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಡೆದಿದ್ದಾರೆ. ಅವರ ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. ಏ. 4ರಂದು ಜಿನ್ನಾಪುರ ತಾಂಡಾದಲ್ಲಿ ಮರಿಯಮ್ಮದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿವಾಹ ನಿಶ್ಚಯಿಸಲಾಗಿತ್ತು. ಈ ಬಗ್ಗೆ ಮಕ್ಕಳ ಸಹಾಯವಾಣಿ 1098/112 ಕರೆ ಬಂದ ಹಿನ್ನೆಲೆಯಲ್ಲಿ ಜಿನ್ನಾಪುರ ತಾಂಡಾಕ್ಕೆ ಅಂಗನವಾಡಿ ಮೇಲ್ವಿಚಾರಕಿ ಮಂಜುಳಾ, ಜಿಲ್ಲಾ …

Read More »

ರೈತರಿಗೆ ಕರೆಂಟ್ ಬರೆ

ಅಥಣಿ : ಕೃಷ್ಣಾ ನದಿ ಪಾತ್ರದಲ್ಲಿ ಸಧ್ಯ ರೈತರು ಸಂಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನಿಂದ ಕಬ್ಬು ಬೆಳೆ ರಕ್ಷಿಸುವ ಅವಸರದಲ್ಲಿದ್ದ ರೈತರಿಗೆ ಈಗ ಕೇವಲ ಒಂದು ಗಂಟೆ ವಿದ್ಯುತ್ ನೀಡುವ ಮೂಲಕ ಜಿಲ್ಲಾಡಳಿತ ಮತ್ತೊಂದು ಬರೆ ನೀಡಿದೆ. ಹೌದು ಕಳೆದ ನಾಲ್ಕು ದಿನಗಳಿಂದ ಕೃಷ್ಣಾ ನದಿ ಪಾತ್ರದಲ್ಲಿ ಕೇವಲ ಒಂದು ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದೆ. ಮುಂದೆ ಕುಡಿಯುವ ನೀರಿನ ಸಮಸ್ಯೆ ಕಾರಣ ನೀಡಿ ಸಧ್ಯ ವಿದ್ಯುತ್ ಕಡಿತ …

Read More »

ಧುಪದಾಳ ಜಲಾಶಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ

ಬೆಳಗಾವಿ: ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಘಟಪ್ರಭಾ ಹಾಗೂ ಹಿರಣ್ಯಕೇಶಿ‌ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ನೀರಿನ‌ ಸಂಗ್ರಹದ ಸಾಮರ್ಥ್ಯವನ್ನು ಪರಿಶೀಲಿಸಿದರು.  ಇದೇ ವೇಳೆ  ನೀರಿನ ಸಂಗ್ರಹ ಹೆಚ್ಚಿಗೆ ಮಾಡಲು ಯೋಜನೆ ರೂಪಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ ಅವರು, ಈ  ಜಲಾಶಯ   ಸಾಮರ್ಥ್ಯವನ್ನು ಹೆಚ್ಚಿಸುವುದರಿಂದ …

Read More »

ಪ್ರಿಯಾಂಕಾ ಪರ ಹೆಬ್ಬಾಳ್ಕರ್ ಭರ್ಜರಿ ಪ್ರಚಾರ

ರಾಯಭಾಗ : ಜಾರಕಿಹೊಳಿ ಕುಟುಂಬಕ್ಕೆ ರಾಜಕಾರಣ ಹೊಸದಲ್ಲ. ಪ್ರಿಯಾಂಕಾ ಜಾರಕಿಹೊಳಿ ಮುಗ್ದ ಹೆಣ್ಣುಮಗಳು, ಆದರೆ ತುಂಬಾ ಬುದ್ದಿವಂತೆ. ಈ ಯುವ ನಾಯಕಿಯನ್ನು ಗೆಲ್ಲಿಸುವ ಮೂಲಕ ಚಿಕ್ಕೋಡಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ರಾಯಭಾಗದಲ್ಲಿ ಸೋಮವಾರ ಪ್ರಿಯಾಂಕಾ  ಜಾರಕಿಹೊಳಿ ಪರ ಪ್ರಚಾರದ ಸಭೆಯಲ್ಲಿ ಮಾತನಾಡಿದ ಸಚಿವರು,  ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಡವರ ಹಸಿವನ್ನ …

Read More »

ಬೆಳಗಾವಿ | ‘ಸ್ವೀಪ್‌’ ರಾಯಭಾರಿಗಳಿಂದ ‘ಮತ’ ಜಾಗೃತಿ

ಬೆಳಗಾವಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಸ್ವೀಪ್ (ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಸಮಿತಿಯು ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಮೂವರನ್ನು ರಾಯಭಾರಿಗಳನ್ನಾಗಿ ನೇಮಿಸಿದೆ. ಇಲ್ಲಿನ ಅಂತರರಾಷ್ಟ್ರೀಯ ಅಂಗವಿಕಲ ಈಜುಪಟು ರಾಘವೇಂದ್ರ ಅಣ್ವೇಕರ್‌, ಲಿಂಗತ್ವ ಅಲ್ಪಸಂಖ್ಯಾತರಾದ ಚಿನ್ನು ತಳವಾರ ಮತ್ತು ರಾಷ್ಟ್ರೀಯ ಜುಡೋಪಟು ಸಹನಾ ಎಸ್‌.ಆರ್‌. ರಾಯಭಾರಿಗಳಾಗಿ ನೇಮಕ ಗೊಂಡವರು. ನಾಲ್ಕನೇ ಬಾರಿ ರಾಯಭಾರಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ …

Read More »

ಸಂಚಾರ ದಟ್ಟಣೆಯಿಂದ ಹೈರಾಣದ ಜನ

ಅಥಣಿ: ಪಟ್ಟಣದಲ್ಲಿ ದಿನೇದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಕಾರಣ ಜನ ಬೇಸತ್ತು ಹೋಗಿದ್ದಾರೆ. ಕೆಲಸ ಕಾರ್ಯಗಳಿಗೆ ಪಟ್ಟಣಕ್ಕೆ ಬರುವ ಜನರೂ ಹೈರಾಣಾಗಿದ್ದಾರೆ. ಸಂಚಾರ ಪೊಲೀಸರು ಇದ್ದೂ ಇಲ್ಲದಂತಾಗಿದೆ. ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದು, ಒನ್‌ ವೇಗಳಲ್ಲಿ ಓಡಿಸುವುದು, ಬೇಕಾಬಿಟ್ಟಿ ಪಾರ್ಕಿಂಗ್‌ ಮಾಡುವುದು ನಡೆದೇ ಇದೆ.   ಭಾರಿ ವಾಹನಗಳ ಪ್ರವೇಶ, ಪಟ್ಟಣದಲ್ಲಿ ಪಾರ್ಕಿಂಗ್ ಸಮಸ್ಯೆ, ಸಂಚಾರಿ ಪೊಲೀಸ್ ಸಿಬ್ಬಂದಿಯ ಕೊರತೆ, ಎಲ್ಲೆಂದರಲ್ಲಿ ಖಾಸಗಿ ವಾಹನಗಳ ನಿಲುಗಡೆ ಪಟ್ಟಣದ ಸಂಚಾರ ಶಿಸ್ತನ್ನು ಹಾಳು …

Read More »

ಟೀಕೆ-ಟಿಪ್ಪಣಿಗೆ ಪ್ರತಿಕ್ರಿಯೆ ಕೊಡುವುದಿಲ್ಲ: ಜಗದೀಶ ಶೆಟ್ಟರ್

ಬೆಳಗಾವಿ: ‘ಇದು ರಾಷ್ಟ್ರೀಯ ವಿಚಾರಧಾರೆಗಳ ಆಧಾರದಲ್ಲಿ ನಡೆಯುವ ಚುನಾವಣೆ. ಇಲ್ಲಿ ರಾಷ್ಟ್ರೀಯ ವಿಚಾರಗಳೇ ಚರ್ಚೆಯಾಗಬೇಕು. ಆದರೆ, ಕಾಂಗ್ರೆಸ್‌ನವರಿಂದ ಸಣ್ಣ-ಪುಟ್ಟ ‌ವಿಷಯ ಚರ್ಚಿಸಲಾಗುತ್ತಿದೆ. ಇದಕ್ಕೆ ನಾವು ಉತ್ತರ ನೀಡುವುದಿಲ್ಲ’ ಎಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಹೇಳಿದರು.   ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ನನ್ನ ಕರ್ಮಭೂಮಿ. ಆದರೆ, ಕಾಂಗ್ರೆಸ್‌ನವರು ನಾನು ಹೊರಗಿನವನು ಎನ್ನುತ್ತಿದ್ದಾರೆ. ಅವರಿಗೆ ಚರ್ಚಿಸಲು ಯಾವುದೇ ವಿಷಯವೇ ಇಲ್ಲ. ಟೀಕೆ-ಟಿಪ್ಪಣಿಗೆ ಯಾವುದೇ ಪ್ರತಿಕ್ರಿಯೆ …

Read More »

ಶೆಟ್ಟರ್‌ರನ್ನು ಕೀಳಾಗಿ ಕಾಣಬೇಡಿ: ಬಾಲಚಂದ್ರ

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರನ್ನು ಯಾರೂ ಕೀಳಾಗಿ ಕಾಣಬಾರದು’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೆಟ್ಟರ್ ಅವರು ಅರಭಾವಿ ಮತ್ತು ಗೋಕಾಕ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ, ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. ವಿವಿಧ ಮಠಾಧೀಶರ ಆಶೀರ್ವಾದ ಪಡೆದಿದ್ದಾರೆ. ನಾನು, ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದೇವೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ನಮ್ಮನ್ನು …

Read More »

ಸಂಕೇಶ್ವರ ಮಾರುಕಟ್ಟೆಗೆ ಮಹಾರಾಷ್ಟ್ರ ಮಾವಿನಕಾಯಿ ಲಗ್ಗೆ

ಸಂಕೇಶ್ವರ: ಸಂಕೇಶ್ವರ ಪಟ್ಟಣಕ್ಕೆ ಮಹಾರಾಷ್ಟ್ರದಿಂದ ಮಾವಿನಕಾಯಿಗಳು ಬರುತ್ತಿದ್ದು ಪಟ್ಟಣದ ತುಂಬೆಲ್ಲ ಮಾವಿನಕಾಯಿಗಳದ್ದೇ ರಾಶಿ.   ಆದರೆ ದರ ಮಾತ್ರ ಗಗನಕ್ಕೇರಿದ್ದು ದುಬಾರಿ ದರಕ್ಕೆ ಮಾವಿನಕಾಯಿಗಳನ್ನು ಖರೀದಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ದೇವಗಡ ಆಪೂಸ್ ಮಾವಿನಕಾಯಿ ದರ ಒಂದು ಡಜನ್ನಿಗೆ ₹800 ರಿಂದ ₹1,000 ಗಳಿದ್ದು ರತ್ನಾಗಿರಿ ಆಪೂಸ್ ಮಾವಿನಕಾಯಿ ದರ ₹1,200 ರೂಪಾಯಿಗಳಷ್ಟಿದೆ.   ಯುಗಾದಿ ನಂತರವೇ ಮಾವಿನ ಹಣ್ಣಿನ ದರ ಇಳಿಮುಖವಾಗಲಿದೆ.

Read More »

ಎಸೆಸೆಲ್ಸಿ ಪರೀಕ್ಷೆ ನಕಲಿಗೆ ಸಹಕಾರ: ನಾಲ್ವರು ಸಹ ಶಿಕ್ಷಕರ ಅಮಾನತು

ಚಿತ್ರದುರ್ಗ: ಎಸೆಸೆಲ್ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ಆರೋಪದಲ್ಲಿ ನಾಲ್ವರು ಸಹ ಶಿಕ್ಷಕರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್‌ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಚಳ್ಳಕೆರೆ ತಾಲೂಕು ಪರಶುರಾಂಪುರ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಳ್ಳಕೆರೆ ತಾಲೂಕು ಪಿ.ಈಬನಹಳ್ಳಿ ಶಾಲೆಯ ಚಂದ್ರಶೇಖರ್‌, ಕೊರ್ಲಕುಂಟೆ ಶಾಲೆಯ ಪ್ರಕಾಶ್‌, ಗೋಸಿಕೆರೆ ರಾಧಾಕೃಷ್ಣ ಶಾಲೆಯ ರಾಘವೇಂದ್ರ ಹಾಗೂ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ರೇವಣ್ಣ ಅಮಾನತುಗೊಂಡ …

Read More »