Breaking News

ಜಿಲ್ಲೆ

ಕಬ್ಬಿನ ದರ ಘೋಷಿಸಿ ಕಾರ್ಖಾನೆ ಪ್ರಾರಂಭಿಸಿ’

ಕಾಗವಾಡ: ರಾಜ್ಯ ಸರ್ಕಾರ ಕಬ್ಬಿನ ಕಾರ್ಖಾನೆಗಳನ್ನು ನ.8ರ ನಂತರ ಪ್ರಾರಂಭಿಸಲು ಆದೇಶ ನೀಡಿದ್ದು, ತಾಲ್ಲೂಕಿನ ಕೆಲ ಕಾರ್ಖಾನೆಗಳು ಈಗಾಗಲೇ ಪ್ರಾರಂಭಗೊಂಡಿವೆ‌. ಕಬ್ಬಿನ ದರ ಘೋಷಣೆ ಮಾಡದೇ ಕಾರ್ಖಾನೆಗಳು ಪ್ರಾರಂಭಿಸಿಸಬಾರದೆಂದು ಆಗ್ರಹಿಸಿ ತಾಲ್ಲೂಕಿನ ಕಬ್ಬು ಬೆಳೆಗಾರ ರೈತರು ಮಂಗಳವಾರ ತಹಶೀಲ್ದಾರ್ ರಾಜೇಶ ಬುರ್ಲಿ ಮತ್ತು ಕಾಗವಾಡ ಪಿಎಸ್‌ಐ ಜಿ.ಜಿ ಬಿರಾದರ ಅವರಿಗೆ ಮನವಿ ಸಲ್ಲಿಸಿದರು.   ರೈತ ಮುಖಂಡ ಸುರೇಶ ಚೌಗುಲೆ ಮಾತನಾಡಿ, ಈ ಮೊದಲು ರಾಜ್ಯ ಸರ್ಕಾರ ನ.15 ರ …

Read More »

ದಿ ಸೆಂಟ್ರಲ್ ಮೆಥೋಡಿಸ್ಟ್ ಕನ್ನಡ ಚರ್ಚ್ಗೆ ಭೇಟಿ ನೀಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

ಚಿಕ್ಕೋಡಿ ಲೋಕಸಭೆಯ ನೂತನ ಸಂಸದೆಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ದಿ ಸೆಂಟ್ರಲ್ ಮೆಥೋಡಿಸ್ಟ್ ಕನ್ನಡ ಚರ್ಚ್ಗೆ ಭೇಟಿ ನೀಡಿದರು. ಚಿಕ್ಕೋಡಿ ಲೋಕಸಭೆಯ ನೂತನ ಸಂಸದೆಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ದಿ ಸೆಂಟ್ರಲ್ ಮೆಥೋಡಿಸ್ಟ್ ಕನ್ನಡ ಚರ್ಚ್ಗೆ ಭೇಟಿ ನೀಡಿದರು. ಈ ವೇಳೆ ಬೆಳಗಾವಿ ನಗರದ ದಿ ಸೆಂಟ್ರಲ್ ಮೆಥೋಡಿಸ್ಟ್ ಕನ್ನಡ ಚರ್ಚ್ ನ ವತಿಯಿಂದ ಧರ್ಮಗುರು ರೇವರೆಂಡ್ ಫಾದರ್ ಶಾಂತಪ್ಪ ಅಂಕಲಗಿ, …

Read More »

ಕಳೆದು ಹೋದ I PHONE ಹಿಂದುರಿಗಿಸಿ ಮಾನವೀಯತೆ ಮೆರೆದ ಸಂಚಾರಿ ಪೊಲೀಸ್ ,ಶ್ಲಾಘನೆಗೆ ವ್ಯಕ್ತಪಡಿಸಿದ್ ಆಯುಕ್ತ

ಕಳೆದು ಹೋದ ಐ-ಫೋನ್ ಹಿಂದುರಿಗಿಸಿ ಮಾನವೀಯತೆ ಮೆರೆದ ಸಂಚಾರಿ ಪೊಲೀಸ್ ಸಿಬ್ಬಂದಿ… ಸಂಚಾರ ನಿರ್ವಹಣೆ ಮಾಡುವುದರ ಐ ಫೋನ್ ಕಳೆದುಕೊಂಡಿದ್ದವರಿಗೆ ಐ ಫೋನ್ ವಿತರಿಸಿ ದಕ್ಷಿಣ ಸಂಚಾರ ಪೊಲೀಸ್ ಸಿಬ್ಬಂದಿ ಶಿವಾನಂದ ಟಪಾಲರ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ನಗರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಚಾರ ದಕ್ಷಿಣ ಪೊಲೀಸ್ ಠಾಣೆಯ ಸಿಬ್ಬಂದಿ ಶಿವಾನಂದ ಟಪಾಲದಾರ ನಿನ್ನೆ ಸಂಜೆ ಬೆಳಗಾವಿಯ ಸೆಕೆಂಡ್ ರೈಲ್ವೆ ಹತ್ತಿರ ಕರ್ತವ್ಯ ನಿರ್ವಹಿಸುವಾಗ ಸಿಕ್ಕಂತ Iphone …

Read More »

ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ

ವಿಜಯಪುರ: ವಕ್ಫ್ ನಿಂದ ಭೂ ಕಬಳಿಕೆ ವಿರೋಧಿಸಿ ಭಾರತೀಯ ಕಿಸಾನ್ ಸಂಘದ ವತಿಯಿಂದ ವಿಜಯಪುರ ಜಿಲ್ಲೆಯ ಮಠಾಧೀಶರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಹೋರಾಟ ಮಾಡಲಾಗುತ್ತಿದೆ. ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ, ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮೀಜಿ, ಪಂಚಮಸಾಲಿ ಜಗದ್ಗುರು ಡಾ. ಮಹಾದೇವ ಶಿವಾಚಾರ್ಯರು, ಯರನಾಳ ವಿರಕ್ತಮಠದ ಶ್ರೀ …

Read More »

ಸವಣೂರ ವಿಧಾನಸಭಾ ಕ್ಷೇತ್ರ ಪ್ರಚಾರದಲ್ಲಿ ಭಾಗವಹಿಸಿದ ಸತೀಶ್ ಜಾರಕಿಹೊಳಿ

ಶಿಗ್ಗಾವಿ (ಹಾವೇರಿ ಜಿಲ್ಲೆ): ಶಿಗ್ಗಾವಿ ವಿಧಾನಸಭಾ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಮುಖಂಡರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹ್ಮದ್ ಖಾನ್ ಪಠಾಣ ಪರ ಪ್ರಚಾರ ನಡೆಸುತ್ತಿರುವ ಮುಖಂಡರು, ‘ಜನಪರವಾದ ಐದು ಗ್ಯಾರಂಟಿ ಯೋಜನೆ ನೋಡಿ ಕಾಂಗ್ರೆಸ್‌ಗೆ ಮತ ನೀಡಿ’ ಎಂದು ಕೋರುತ್ತಿದ್ದಾರೆ. ಶಿಗ್ಗಾವಿ ಕ್ಷೇತ್ರದ ಚಾಕಾಪುರದಲ್ಲಿ ಭಾನುವಾರ ಪ್ರಚಾರ ನಡೆಸಿದ ಸಚಿವ ಸತೀಶ ಜಾರಕಿಹೊಳಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ …

Read More »

ರಾಜ್ಯೋತ್ಸವ ಮೆರವಣಿಗೆ ಯಶಸ್ವಿ: ‍ಪೊಲೀಸರ ಕಾರ್ಯಕ್ಕೆ ಪ್ರಶಂಸೆ

ಬೆಳಗಾವಿ: ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ವೈಭವದಿಂದ ನಡೆದ ರೂಪಕ ವಾಹನಗಳ ಮೆರವಣಿಗೆ ಶುಕ್ರವಾರ ತಡರಾತ್ರಿ ಮುಕ್ತಾಯವಾಯಿತು. ಸತತ 24 ತಾಸಿಗೂ ಅಧಿಕ ಹೊತ್ತು ಪೊಲೀಸರು ಸಮರ್ಥವಾಗಿ ಕೆಲಸ ಮಾಡಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿದರು. ರಾಜ್ಯೋತ್ಸವದ ಮುನ್ನಾದಿನವಾದ ಗುರುವಾರ ಮಧ್ಯರಾತ್ರಿಯೇ ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ‘ಕನ್ನಡ ಹಬ್ಬ’ದ ಆಚರಣೆಗೆ ಚಾಲನೆ ಸಿಕ್ಕಿತು. ಶುಕ್ರವಾರ ಬೆಳಿಗ್ಗೆಯಿಂದ ತಡರಾತ್ರಿಯವರೆಗೆ ಅದ್ದೂರಿ ಮೆರವಣಿಗೆ ನಡೆಯಿತು. ಬೆಳಗಾವಿ ಮಾತ್ರವಲ್ಲದೆ; ರಾಜ್ಯದ ವಿವಿಧ ಜಿಲ್ಲೆಗಳಿಂದ …

Read More »

ಮಂಗನ ದಾಳಿಯಿಂದ 20ಕ್ಕೂ ಹೆಚ್ಚು ಜನ ಗಾಯಗೊಂಡು ಆಸ್ಪತ್ರೆಗೆ ದಾಖಲ

ರಾಮದುರ್ಗ: ಮಂಗನ ದಾಳಿಯಿಂದ 20ಕ್ಕೂ ಹೆಚ್ಚು ಜನ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಶನಿವಾರ ಮತ್ತು ಭಾನುವಾರ ಪಟ್ಟಣದ ನೇಕಾರ ಪೇಟೆ, ಸಾಯಿ ನಗರದಲ್ಲಿ ಮಂಗನ ಹಾವಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಒಂಟಿಯಾಗಿ ಸುತ್ತಾಡುವ ಜನರನ್ನು ಗುರಿಯಾಗಿಸಿಕೊಂಡು ಮಂಗ ದಾಳಿ ಮಾಡುತ್ತಿದೆ. ಮಂಗನಿಂದ ಕಚ್ಚಿಸಿಕೊಂಡವರು ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ರಾಮದುರ್ಗ ಪೊಲೀಸರು ಕಾರ್ಯಾಚರಣೆ ನಡೆಸಿದರೂ ಮಂಗ ಸೆರೆ ಸಿಕ್ಕಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ …

Read More »

ಆರ್ಥಿಕ ಮುಗ್ಗಟ್ಟು ಮಧ್ಯೆಯೇ ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!

ಬೆಳಗಾವಿ: ಆರ್ಥಿಕ ಮುಗ್ಗಟ್ಟಿನಲ್ಲಿ ಸಿಲುಕಿ ಒದ್ದಾಡುತ್ತಿರುವ ಮಹಾನಗರ ಪಾಲಿಕೆ ದುಂದು ವೆಚ್ಚ ಮಾಡುತ್ತಿದೆ. ಕಳೆದ ವರ್ಷ ಕರ್ನಾಟಕ ರಾಜ್ಯೋತ್ಸವ ವೇಳೆ ಪ್ರತಿಮೆಗಳಿಗೆ ಹೂವಿನ ಹಾರ ಹಾಕಿರುವ ಬಿಲ್‌ 37 ಸಾವಿರ ರೂ. ಪಾವತಿಸಿರುವುದು ಎಲ್ಲರೂ ಹೌಹಾರುವಂತೆ ಮಾಡಿದೆ.   ನಗರದಲ್ಲಿ ಹಮ್ಮಿಕೊಳ್ಳುವ ಉತ್ಸವ, ಕಾರ್ಯಕ್ರಮ, ಜಯಂತಿಗಳಿಗೆ ಹಣ ಪೋಲು ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ದುಂದುವೆಚ್ಚ ಆಗಿರುವುದು ಕಂಡು ಬಂದಿದ್ದು, ಪಾಲಿಕೆ ಉತ್ತರಿಸಬೇಕಿದೆ. 2023ರ ಕರ್ನಾಟಕ ರಾಜ್ಯೋತ್ಸವದಲ್ಲಿ ಹೂವಿನ ಹಾರಕ್ಕೆ …

Read More »

ಎಂಇಎಸ್‌ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕರ್ನಾಟಕ ಆಚರಣೆ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಮತ್ತೆ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಕರಾಳ ದಿನಾಚರಣೆ ಮಾಡಿದೆ. ಜಿಲ್ಲಾಡಳಿತ ಇದಕ್ಕೆ ಅನುಮತಿ ನೀಡದಿದ್ದರೂ ಎಂಇಎಸ್ ನಾಯಕರು ಕರಾಳ ದಿನಾಚರಣೆ ಮಾಡಿದ್ದಾರೆ. ಕರಾಳ ದಿನಾಚರಣೆ ಮಾಡಿರುವ ಎಂಇಎಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.   ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಿಸುವ ಅಗತ್ಯ ಇಲ್ಲ. ಅದು ಹೆಸರಿಗಷ್ಟೇ ಇದೆ. ವರ್ಷದಲ್ಲೊಮ್ಮೆ ಅದಕ್ಕೆ …

Read More »

ಎಚ್.ಕೆ. ಪಾಟೀಲ ಜಿಲ್ಲಾ ಪ್ರವಾಸ

ಗದಗ: ಸಚಿವ ಡಾ.ಎಚ್.ಕೆ. ಪಾಟೀಲ ಶುಕ್ರವಾರ ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಬೆಳಿಗ್ಗೆ 7.45ಕ್ಕೆ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕನ್ನಡ ತಾಯಿ ಭುವನೇಶ್ವರಿಯ ಪುತ್ಥಳಿಯ ಮೆರವಣಿಗೆಗೆ ಚಾಲನೆ ನೀಡುವರು. ಬೆಳಿಗ್ಗೆ 8.30ಕ್ಕೆ ಬೆಟಗೇರಿ ತೆಂಗಿನಕಾಯಿ ಬಜಾರ್‌ನಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.   ಬೆಳಿಗ್ಗೆ 9ಕ್ಕೆ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ನಡೆಯುವ ಕರ್ನಾಟಕ ರಾಜ್ಯೋತ್ಸವದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸುವರು. ಮಧ್ಯಾಹ್ನ 12ಕ್ಕೆ …

Read More »