Breaking News

ಜಿಲ್ಲೆ

ಸಾಲಬಾಧೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ನೇಕಾರ

ಬೆಳಗಾವಿ: ಸಾಲಬಾಧೆಯಿಂದ ನೇಕಾರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಕೇವಲ 20 ದಿನಗಳ ಅವಧಿಯಲ್ಲಿ ಈ ಗ್ರಾಮದಲ್ಲಿ ಇಬ್ಬರು ನೇಕಾರರು ಆತ್ಮ*ಹತ್ಯೆ ಮಾಡಿಕೊಂಡಂತಾಗಿದೆ. ಸುಳೇಭಾವಿ ಗ್ರಾಮದ ಕಿರಣ ಬಾಳಣ್ಣ ಗೋಕಾವಿ (32) ಎಂಬ ಯುವ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮದ ವಿವಿಧ ಕಡೆಗೆ ಕೈಗಡ ಸಾಲ ಪಡೆದಿದ್ದನು. ಜತೆಗೆ ಸೊಸೈಟಿಯಲ್ಲಿಯೂ ಸಾಲ ಪಡೆದಿದ್ದನು. ಸಾಲಗಾರರ ಕಿರುಕುಳ ತಾಳಲಾರದೇ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು …

Read More »

ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ವೇತನ ಶ್ರೇಣಿ ನಿಗದಿಪಡಿಸಲು ಆಗ್ರಹ

ಬೆಳಗಾವಿ: ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ, ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಪದಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಇಲ್ಲಿನ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಯಾವ ಘೋಷಣೆ ಕೂಗದ ಪ್ರತಿಭಟನಕಾರರು, ಮೌನವಾಗಿ ಕುಳಿತುಕೊಂಡೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಶಿಂಧೆ, …

Read More »

ಪರಿಶಿಷ್ಟರ ಮೇಲೆ ದೌರ್ಜನ್ಯ: ತ್ವರಿತ ಕ್ರಮವಾಗಲಿ

ಬೆಳಗಾವಿ: ‘ಪರಿಶಿಷ್ಟರ ಮೇಲೆ ದೌರ್ಜನ್ಯ ನಡೆದ ಕುರಿತು ದೂರು ದಾಖಲಾದರೆ, ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಎಚ್ಚರಿಕೆ ಕೊಟ್ಟರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಎಸ್‌ಸಿ, ಎಸ್‌ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ‘ಈ ಸಭೆಗೆ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಸಭೆಗೆ ಹಾಜರಾದವರು ಅನುಪಾಲನಾ …

Read More »

ವಿಪತ್ತು ಬಂದಾಗ ಸೇವೆ ಮಾಡಿ’

ಹುಕ್ಕೇರಿ: ಹುಕ್ಕೇರಿ ಮತ್ತು ಸಂಕೇಶ್ವರ ವಲಯಗಳ ವಿಪತ್ತು ನಿರ್ವಹಣೆ ಘಟಕದ ಸ್ವಯಂ ಸೇವಕರಿಗೆ ತಾಲ್ಲೂಕಿನ ನಿಡಸೋಶಿಯ ದುರದುಂಡೇಶ್ವರ ಮಠದಲ್ಲಿ ಗುರುವಾರ ನಡೆದ ‘ಶೌರ್ಯ ವಿಪತ್ತು ಸ್ವಯಂ ಸೇವಕರ ತರಬೇತಿ’ ಕಾರ್ಯಕ್ರಮವನ್ನು ಸುಬೇದಾರ್ ಎಸ್.ಕೆ.ದೇಸಾಯಿ ಹಾಗೂ ನಿಡಸೋಸಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಮದೀನಾ ಶಾನೂರ್ ಮಕಾಂದಾರ್ ಉದ್ಘಾಟಿಸಿದರು.   ನಂತರ ಮಾತನಾಡಿದ ಸುಬೇದಾರ್ ಎಸ್.ಕೆ.ದೇಸಾಯಿ, ‘ಯುವಕರು ಸೈನ್ಯದಲ್ಲಿ ಸೇರಿ ದೇಶ ಮಾಡಬೇಕಂತಿಲ್ಲ. ದೇಶದ ಒಳಗೆ ಜನರಿಗೆ ವಿಪತ್ತು ಬಂದಾಗ ಸೇವೆ ಸಲ್ಲಿಸಿದರೆ, …

Read More »

ಬಾವಿಗೆ ಬಿದ್ದು ಶಿಂಧೊಳ್ಳಿ ಗ್ರಾಮದ ಮಹಿಳೆ ಸಾವು

ಬೆಳಗಾವಿ: ತಾಲ್ಲೂಕಿನ ಶಿಂಧೊಳ್ಳಿ ಗ್ರಾಮದ ತೆರೆದ ಬಾವಿಯಲ್ಲಿ ಗುರುವಾರ ಬೆಳಿಗ್ಗೆ ಮಹಿಳೆಯೊಬ್ಬರು ಬಿದ್ದು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಭಾರತಿ ಪೂಜಾರಿ(48) ಮೃತರು. ‘ಶಿಂಧೊಳ್ಳಿಯ ಮಸಣವ್ವ ದೇವಸ್ಥಾನಕ್ಕೆ ಗುರುವಾರ ಕಳ್ಳರು ನುಗ್ಗಿದ್ದರು. ಇದೇ ವೇಳೆ, ಭಾರತಿ ತಮ್ಮ ಮನೆಯ ದನ-ಕರುಗಳ ಸಗಣಿ ಎತ್ತಿ, ತಿಪ್ಪೆಗೆ ಎಸೆಯಲು ಹೋಗಿದ್ದರು. ಆಗ ದೇವಾಲಯದಲ್ಲಿ ಕಳ್ಳತನ ನಡೆಯುತ್ತಿರುವುದನ್ನು ನೋಡಿದ್ದರು. ಈ ವಿಷಯ ಗ್ರಾಮಸ್ಥರಿಗೆ ಗೊತ್ತಾಗಿ, ತಾವು ಸಿಕ್ಕಿಬೀಳುತ್ತೇವೆ ಎಂಬ ಭಯದಿಂದ ಕಳ್ಳರು ಭಾರತಿ ಅವರನ್ನೇ ಬಾವಿಯಲ್ಲಿ …

Read More »

ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಸಮಿತಿ ಆಶ್ರಯದಲ್ಲಿ ಕಲಬುರಗಿಯಲ್ಲಿ ಇದೇ ದಿ.29 ಹಾಗೂ 30 ರಂದು ಬೃಹತ್ ಸಮ್ಮೇಳನ

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಮೇಲೆ ಒತ್ತಡ ತರಲು ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಸಮಿತಿ ಆಶ್ರಯದಲ್ಲಿ ಕಲಬುರಗಿಯಲ್ಲಿ ಇದೇ ದಿ.29 ಹಾಗೂ 30 ರಂದು ಬೃಹತ್ ಸಮ್ಮೇಳನವನ್ನು ಆಯೋಜನೆ ಮಾಡಿದೆ.   ಈ ಕುರಿತು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಚಾಲಕ ಎನ್.ಎಲ್.ಭರತರಾಜ್ ಹೇಳಿಕೆ ನೀಡಿದ್ದು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಂದು ಟನ್ ಕಬ್ಬಿಗೆ ಐದು ಸಾವಿರ …

Read More »

ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

ಬೆಳಗಾವಿ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಕೇವಲ ಐದು ದಿನಗಳಲ್ಲಿ 9 ಜನ ಆರೋಪಿಗಳಿಗೆ ತಲಾ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವ ಮೂಲಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಶೀಘ್ರಗತಿ ಫೋಕ್ಸೋ ನ್ಯಾಯಾಲಯದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡುವ ಮೂಲಕ ಸಮಾಜದಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.   ಬಾಲಕಿಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. …

Read More »

ಇನ್ಮುಂದೆ ಇವರಿಗೆ ಬರಲ್ಲ `ಗೃಹಲಕ್ಷ್ಮಿ’ ಹಣ!

ಬೆಂಗಳೂರು: ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.   ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ …

Read More »

ಚಂದ್ರ ಬಾಬು ನಾಯಡು ಹೇಳಿಕೆಯಿಂದ ನಂದಿನಿ ತುಪ್ಪಕ್ಕೆ ಭಾರಿ ಡಿಮಾಂಡ್.:ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ -ತಿರುಪತಿ ಲಡ್ಡು ಬಗ್ಗೆ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನೀಡುವ ಮೂಲಕ ದೇಶದಲ್ಲೇ ನಂದಿನಿ ತುಪ್ಪಕ್ಕೆ ಬಾರೀ ಬೇಡಿಕೆ ಬಂದಿದೆ ಎಂದು ಕೆಎಂಎಫ್‌ ಮಾಜಿ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಧಿಕಾರವಧಿಯಲ್ಲಿ 4 ವರ್ಷದ ಹಿಂದೆ ಕೆಎಂಎಫ್‌ನ ನಂದಿನಿ ತುಪ್ಪ ದೇಶದ ದೊಡ್ಡ ದೇವಸ್ಥಾನ ತಿರುಪತಿ ಬಾಲಾಜಿ ಮಂದಿರದ ಲಡ್ಡು ಪ್ರಸಾದಕ್ಕೆ ಪೂರೈಕೆಯಾಗುತ್ತಿತ್ತು. ತಿರುಪತಿ ಬಾಲಾಜಿ ಮಂದಿರದ …

Read More »

ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್‌ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್

ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್‌ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್ ಬೆಳಗಾವಿ: ಮಹಾಲಕ್ಷ್ಮೀ ಕೋ ಆಪ್ ರೇಟಿವ್ ಬ್ಯಾಂಕ್ ನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 14 ಜನರ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ತಿಳಿಸಿದ ಅವರು, ಗೋಕಾಕ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನಲ್ಲಿ 74.86 ಕೋಟಿ ಅವ್ಯವಹಾರ ನಡೆದಿರುವ …

Read More »