Breaking News

ಜಿಲ್ಲೆ

ಆರ್.ವಿ.ದೇಶಪಾಂಡೆ ಹಿರಿಯರು ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ

ಬೆಳಗಾವಿ: ಮುಖ್ಯಮಂತ್ರಿಯಾಗುವ ಆಸೆ ಎಲ್ಲರಲ್ಲಿಯೂ ಇದೆ. ಆದರೆ ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಆರ್.ವಿ.ದೇಶಪಾಂಡೆ ಅವರು ಹೈಕಮಾಂಡ್ ಒಪ್ಪಿದರೆ ನಾನು ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ ಎಂದು ಹೇಳಿಕೆ ನೀಡಿದ್ದು ಅದು ಅವರ ವೈಯಕ್ತಿಕ ಹೇಳಿಕೆ. ಅಲ್ಲದೆ ಅವರು ಕಾಂಗ್ರೆಸ್ ನ ಹಿರಿಯ ಶಾಸಕರಿದ್ದಾರೆ. ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ. ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚಿಂತೆ ನಡೆದಿಲ್ಲ. ಹೈಕಮಾಂಡ್ …

Read More »

ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ: ಸೂಕ್ತ ಕ್ರಮಕ್ಕೆ ಆಗ್ರಹ

ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದ್ದು ಲೇಔಟ್ ಗಳ ಮಾಲೀಕರು ನಗರಸಭೆಯ ಯಾವುದೇ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಮತ್ತು ಲೇಔಟ್ ಗಳಲ್ಲಿ ಕಳಪೆ ಕಾಮಗಾರಿ ಮತ್ತು ಸುಳ್ಳು ಮಾಹಿತಿಯನ್ನು ನಗರಸಭೆಗೆ ನೀಡುತ್ತಿದ್ದಾರೆ. ಅಂಥವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸದಸ್ಯರು ನಗರಸಭೆಯ ಅಧಿಕಾರಿಗಳನ್ನು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಇಂಥ ಲೇಔಟ್ ಗಳನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ನಗರಸಭೆಯ ಸಾಮಾನ್ಯ ಸಭೆಯ ಅನುಮತಿಯನ್ನು …

Read More »

ಪ.ಪಂ ಸದಸ್ಯ ನಾಗರಾಜ ಅಪಹರಣ: ತಾಯಿ ಆಸ್ಪತ್ರೆಗೆ ದಾಖಲು

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣದಿಂದ, ತೀವ್ರ ನೊಂದು ಅನಾರೋಗ್ಯಕ್ಕೆ ಈಡಾಗಿರುವ ಅವರ ತಾಯಿಯನ್ನು ಧಾರವಾಡ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಾರ್ವಜನಿಕ ವೇದಿಕೆಯಲ್ಲಿ ಪುತ್ರನ ಅಪಹರಣ ಪ್ರಕರಣದಿಂದ ನೊಂದು ತಂದೆ ದುಃಖಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು …

Read More »

ಟಿಎಚ್‌ಒಗೆ ಪಿಡಿಒ ಅವಾಚ್ಯ ಪದ ಬಳಕೆ: ಖಂಡನೆ

ಸವದತ್ತಿ: ಇಂಚಲ ಪಿಡಿಒ, ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಅವಾಚ್ಯವಾಗಿ ಬೈದು, ನಿಂದಿಸಿದ್ದನ್ನು ಖಂಡಿಸಿ ಶಿಸ್ತುಕ್ರಮಕ್ಕೆ ಆಗ್ರಹಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೋಮವಾರ ಪ್ರತಿಭಟಿಸಿ ತಹಶೀಲ್ದಾರ್ ಎಂ.ಎನ್. ಹೆಗ್ಗನ್ನವರ ಅವರಿಗೆ ಮನವಿ ಸಲ್ಲಿಸಿದರು. ಮುಖ್ಯ ವೈದ್ಯಾಧಿಕಾರಿ ಎಚ್.ಎಂ. ಮಲ್ಲನಗೌಡರ ಮಾತನಾಡಿ, ‘ಇಂಚಲ ಗ್ರಾಮದ ಪಿಎಚ್‌ಸಿಯಲ್ಲಿ ವೈದ್ಯಾಧಿಕಾರಿ ಹುದ್ದೆ ಖಾಲಿ ಇದ್ದು, ಪರ್ಯಾಯವಾಗಿ ಚಚಡಿಯ ಪಿಎಚ್‌ಸಿಯ ಡಾ.ವಿಶಾಲು ಗದಗ ಮತ್ತು ಡಾ. ನಾಗರಾಜಗೌಡ ಮಾಳಿಪಾಟೀಲರನ್ನು ಹೆಚ್ಚುವರಿಯಾಗಿ ನೇಮಿಸಲಾಗಿದೆ. ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಇಲಾಖೆಯಿಂದ …

Read More »

ಪತ್ರ ಬರೆದು ಕ್ಷಮೆ ಸಿದ್ದರಾಮಯ್ಯನವರ ಕ್ಷಮೆ ಕೇಳಿದ ಅರವಿಂದ್ ಬೆಲ್ಲದ್

ಬೆಂಗಳೂರು,ಸೆ.3- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಈಗ ಪತ್ರ ಬರೆದು ಕ್ಷಮೆ ಯಾಚಿಸಿದ್ದಾರೆ. ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿಯಲ್ಲಿ ಸಿಎಂ ಅವರಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಕ್ಷಮೆ ಕೇಳಿದ್ದಾರೆ.   ಧಾರವಾಡದಲ್ಲಿ ಮಾತನಾಡಿದ್ದ ಅವರು, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ …

Read More »

ಬಡವರಿಗಾಗಿ ಮತ್ತೆರಡು ಗ್ಯಾರಂಟಿ ಜಾರಿ

ಬೆಂಗಳೂರು,ಸೆಪ್ಟೆಂಬರ್‌ 03: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿಯಾಗಿ ಕಾಂಗ್ರೆಸ್‌ ಗೆಲುವು ಸಾಧಿಸಲು ಪಂಚ ಗ್ಯಾರಂಟಿ ಯೋಜನೆಗಳೆ ಪ್ರಮುಖ ಕಾರಣವಾಗಿದ್ದು, ಇದೀದ ಕಾಂಗ್ರೆಸ್‌ ರಾಜ್ಯದ ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ.   ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯನ್ನ …

Read More »

ಗಣೇಶೋತ್ಸವದಲ್ಲಿ ‘ವಿಘ್ನ ನಿವಾರಕ’ನನ್ನು ಸ್ವಾಗತಿಸಲು ಜನರಷ್ಟೇ ಅಲ್ಲ; ಗುಂಡಿಗಳೂ ಸಜ್ಜಾಗಿವೆ.

ಬೆಳಗಾವಿ: ನಗರದಲ್ಲಿ ಈ ಬಾರಿ ಗಣೇಶೋತ್ಸವದಲ್ಲಿ ‘ವಿಘ್ನ ನಿವಾರಕ’ನನ್ನು ಸ್ವಾಗತಿಸಲು ಜನರಷ್ಟೇ ಅಲ್ಲ; ಗುಂಡಿಗಳೂ ಸಜ್ಜಾಗಿವೆ. ಮುಂಬೈ, ಪುಣೆ ಬಿಟ್ಟರೆ ಸಂಭ್ರಮದ ಚೌತಿ ವೀಕ್ಷಣೆಗೆ ಜನರು ಮುಖಮಾಡುವುದೇ ಬೆಳಗಾವಿಯತ್ತ. ಗಣೇಶೋತ್ಸವದಲ್ಲಿ ಇಲ್ಲಿ 11 ದಿನಗಳ ಕಾಲ ಸಡಗರವೇ ಮೈದಳೆಯುತ್ತದೆ. ನಗರ ಮತ್ತು ಉಪನಗರ ವ್ಯಾಪ್ತಿಯಲ್ಲಿ 370ಕ್ಕೂ ಅಧಿಕ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಮೊದಲ ದಿನದಂದು ಮೆರವಣಿಗೆಯಲ್ಲಿ ಗಣೇಶನ ಮೂರ್ತಿ ತಂದು ಪ್ರತಿಷ್ಠಾಪಿಸುತ್ತಾರೆ. ವಿಸರ್ಜನಾ ಮೆರವಣಿಗೆಯೂ …

Read More »

ಹುಕ್ಕೇರಿ: ಉದ್ಘಾಟನೆಗೆ ಸಜ್ಜಾದ ‘ಸುವರ್ಣ ಕರ್ನಾಟಕ ಭವನ’

ಹುಕ್ಕೇರಿ: ಇಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸರ್ಕಾರಿ ಕಾರ್ಯಕ್ರಮ ಆಯೋಜಿಸಲು ಸುಸಜ್ಜಿತ ಸಭಾಂಗಣ ಹುಡುಕುವುದೇ ಸಂಘಟಕರು ಹಾಗೂ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿತ್ತು. ಇನ್ಮುಂದೆ ಆ ಕೊರತೆ ನೀಗಲಿದೆ. ಅನಿವಾರ್ಯವಾಗಿ ಅವರು ಖಾಸಗಿ ಸಭಾಂಗಣಗಳತ್ತ ಮುಖಮಾಡುವುದು ತಪ್ಪಲಿದೆ.   ಪಟ್ಟಣದ ಹೊರವಲಯದ ಕ್ಯಾರಗುಡ್ಡದ ಕಾಲೇಜು ಕ್ಯಾಂಪಸ್ ಬಳಿ ತಲೆ ಎತ್ತಿರುವ ‘ಪ್ರಾದೇಶಿಕ ಸುವರ್ಣ ಕರ್ನಾಟಕ ಭವನ’ ಉದ್ಘಾಟನೆಗೆ ಸಜ್ಜಾಗಿದ್ದು, ಶೀಘ್ರವೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಹುಕ್ಕೇರಿಗೆ ಮಂಜೂರಾಗಿದ್ದ ಈ ಭವನದ ನಿರ್ಮಾಣಕ್ಕೆ …

Read More »

ಸವದತ್ತಿ: 99 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ

ಸವದತ್ತಿ: ಇಲ್ಲಿನ ಗುರ್ಲಹೊಸೂರಿನ ಚಿದಂಬರೇಶ್ವರ ದೇವಸ್ಥಾನದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಜರುಗಿತು. ಪಿಐ ಧರ್ಮಾಕರ ಧರ್ಮಟ್ಟಿ ಮಾತನಾಡಿ, ಮಹಿಳೆಯರ ಆರ್ಥಿಕಾಭಿವೃದ್ಧಿಗೆ ಮಾತ್ರವಲ್ಲದೇ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ಧರ್ಮಸ್ಥಳ ಸಂಘ ಆರ್ಥಿಕ ನೆರವು ನೀಡುತ್ತಿರುವ ಕಾರ್ಯ ಶ್ಲಾಘನೀಯ. ತಾಲ್ಲೂಕಿನ 99 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಿ ಬಡ ಮಕ್ಕಳನ್ನು ಶೈಕ್ಷಣಿಕವಾಗಿ ಮೇಲೆತ್ತುವ ಕಾರ್ಯ ಮಾದರಿಯಾಗಿದೆ ಎಂದರು. ವೇದಿಕೆಯಲ್ಲಿ 99 ಮಂದಿ …

Read More »

ನಿಪ್ಪಾಣಿ ನಗರಸಭೆ: ಮತ್ತೆ ಬಿಜೆಪಿ ಮೇಲುಗೈ

ನಿಪ್ಪಾಣಿ: ಸ್ಥಳೀಯ ನಗರಸಭೆಯ ಎರಡನೇಯ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆದು ಈ ಅವಧಿಯಲ್ಲೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಬಿಜೆಪಿ ಪಕ್ಷದ ಸೋನಲ್ ಕೋಠಡಿಯಾ ಅಧ್ಯಕ್ಷರಾಗಿ ಹಾಗೂ ಸಂತೋಷ ಸಾಂಗಾವಕರ ಉಪಾಧ್ಯಕ್ಷರಾಗಿ ಬಹುಮತಗಳಿಂದ ಆಯ್ಕೆಯಾದರು.   ಇಬ್ಬರೂ ತಲಾ 17 ಮತಗಳನ್ನು ಪಡೆದು ವಿರೋಧಿ ಬಣದ ಶರದ ಪವಾರ ಗುಂಪು ಎನ್‍ಸಿಪಿ ಬೆಂಬಲಿತ ಅಧ್ಯಕ್ಷ ಸ್ಥಾನದ ಅಭ್ಯರ್ಥಿ …

Read More »