ಕಿತ್ತೂರು: ಎರಡು ಲಾರಿ ಟ್ಯೂಬ್ ಗಳಿಗೆ ಗಾಳಿ ತುಂಬಿಸಿ ಅದರ ಮೇಲೆ ಕಟ್ಟಿಗೆಯಿಟ್ಟು, ಎರಡೂ ದಂಡೆಗೆ ನೆಡಲಾಗಿರುವ ಗೂಟಗಳಿಗೆ ಹಗ್ಗ ಕಟ್ಟಿ ಮಾಡಿರುವ ‘ಜಗ್ಗುವ ಟ್ಯೂಬ್ ತೆಪ್ಪ’ದಲ್ಲಿ ತಾಲ್ಲೂಕಿನ ಕುಲವಳ್ಳಿಯ ನಿಂಗಾಪುರ ಗ್ರಾಮಸ್ಥರು, ಶಾಲಾ ಮಕ್ಕಳು, ಮಹಿಳೆಯರು, ರೈತರಿಗೆ ಇದೇ ಸಂಚಾರದ ಜಲಮಾರ್ಗವಾಗಿದೆ. ‘ಧಾರವಾಡ ತಾಲ್ಲೂಕಿನ ಅಳ್ನಾವರ ಬಳಿಯ ಹುಲಿಕೆರೆ ಭರ್ತಿಯಾದರೆ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ನಿಂಗಾಪುರಕ್ಕೆ ಈ ಅಪಾಯಕಾರಿ ನೀರ ಮೇಲಿನ ಸಂಚಾರ ತಪ್ಪಿದ್ದಲ್ಲ’ ಎನ್ನುತ್ತಾರೆ ಗ್ರಾಮಸ್ಥರು. ‘ಅಲ್ಲದೇ, …
Read More »ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆಗಾಗಿ ಕೂಗು
ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆಗಾಗಿ ಕೂಗು ಕರ್ನಾಟಕದ ಎರಡನೇ ದೊಡ್ಡ ಜಿಲ್ಲೆಯಾದ ಬೆಳಗಾವಿಯನ್ನು ಆಡಳಿತದ ಸುಧಾರಣೆಯ ದೃಷ್ಟಿಯಿಂದ ವಿಭಜನೆ ಮಾಡಬೇಕೆಂಬ ಬೇಡಿಕೆಗಳು ಮತ್ತೆ ಎದ್ದಿವೆ. 50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಜಿಲ್ಲೆ, 18 ವಿಧಾನಸಭಾ ಮತ್ತು 2 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಬೆಳಗಾವಿ ಜಿಲ್ಲೆಯನ್ನು ಚಿಕ್ಕೋಡಿ ಮತ್ತು ಗೋಕಾಕವೆಂಬ ಎರಡು ಜಿಲ್ಲಾ ಕೇಂದ್ರಗಳಾಗಿ ವಿಭಜಿಸುವ ಹೋರಾಟ ಕಳೆದ ಎರಡು ದಶಕಗಳಿಂದ ನಡೆಯುತ್ತಿದೆ. ಇತ್ತ ಅಥಣಿ ಮತ್ತು …
Read More »ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.
ಗೋಕಾಕ: ಪ್ರವಾಹದಿಂದ ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು. ಸೋಮವಾರದಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇತ್ತಿಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಸುಮಾರು 30 ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ …
Read More »ಯಡಿಯೂರಪ್ಪ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ: ಸಿದ್ದರಾಮಯ್ಯ ವ್ಯಂಗ್ಯ
ಗೋಕಾಕ (ಬೆಳಗಾವಿ ಜಿಲ್ಲೆ): ‘ಯಡಿಯೂರಪ್ಪ ನನ್ನ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. ಅವರ ತಟ್ಟೆಯಲ್ಲಿ ಹೆಗ್ಗಣ ಮಾತ್ರವಲ್ಲ; ಕತ್ತೆಯೇ ಸತ್ತು ಬಿದ್ದಿದೆ. ಅಂಥವರಿಗೆ ನನ್ನ ರಾಜೀನಾಮೆ ಕೇಳುವ ಹಕ್ಕು ಇದೆಯೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಪಾದಯಾತ್ರೆ ಮುಗಿಯುವುದರೊಳಗೆ ನಾನು ರಾಜೀನಾಮೆ ನೀಡಬೇಕು ಎಂದು ಯಡಿಯೂರಪ್ಪ ಕೇಳಿದ್ಧಾರೆ. ಸ್ವತಃ ಅವರೇ ಪೋಕ್ಸೊ ಪ್ರಕರಣದಲ್ಲಿ ಸೊಕ್ಕಿಕೊಂಡಿದ್ದಾರೆ. ಯಾವ ನೈತಿಕತೆ ಇದೆ ಅವರಿಗೆ’ ಎಂದರು. …
Read More »ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ; ಸಿಎಂ ಕಾಲಿಗೆ ಬಿದ್ದ ಸಂತ್ರಸ್ತರು
ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ; ಸಿಎಂ ಕಾಲಿಗೆ ಬಿದ್ದ ಸಂತ್ರಸ್ತರು ಬೆಳಗಾವಿ: ನದಿ ನೀರಿನ ಪ್ರವಾಹದಲ್ಲಿ ಸಿಲುಕಿ ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು, ನಮ್ಮಸಮಸ್ಯೆ ಬಗೆಹರಿಸುವಂತೆ ಸಂತ್ರಸ್ತ ಮಹಿಳೆಯರು ಬೇಡಿಕೊಂಡ ಘಟನೆ ಸೋಮವಾರ (ಆ 05) ನಡೆದಿದೆ. ಗೋಕಾಕ ನಗರದಲ್ಲಿರುವ ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭೇಟಿ ನೀಡಿದಾಗ, ಅನೇಕ ಮಹಿಳೆಯರು ಕೈ ಮುಗಿದು ಬೇಡಿಕೊಂಡರು. ನಮಗೆ ಪರಿಹಾರ ಕೊಡಿ, …
Read More »ಹಾಸನದಲ್ಲಿ ಆಶ್ಲೀಲ ಪೆನ್ಡ್ರೈವ್ ಹಂಚಿಸಿದ್ದೇ ವಿಜಯೇಂದ್ರ; ಯತ್ನಾಳ ಗಂಭೀರ ಆರೋಪ
ಹಾಸನದಲ್ಲಿ ಆಶ್ಲೀಲ ಪೆನ್ಡ್ರೈವ್ ಹಂಚಿಸಿದ್ದೇ ವಿಜಯೇಂದ್ರ; ಯತ್ನಾಳ ಗಂಭೀರ ಆರೋಪ ವಿಜಯಪುರ: ಭ್ರಷ್ಟ ವಿಜಯೇಂದ್ರನನ್ನು ಬಿಜೆಪಿ ರಾಜ್ಯಾಧ್ಯಕ್ಷನೆಂದು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ. ವಿಜಯೇಂದ್ರನ ನಾಲ್ಕಾರು ಚೇಲಾ ಶಾಸಕರ ಹೊರತಾಗಿ 55ಕ್ಕೂ ಹೆಚ್ಚು ಶಾಸಕರ ವಿರೋಧವಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರನ್ನು ನಾವು ಪ್ರಶ್ನಿಸುತ್ತೇವೆ. ಪಕ್ಷದಲ್ಲಿ ಹೈಕಮಾಂಡ್ ಭ್ರಷ್ಟ ವಿಜಯೇಂದ್ರನನ್ನು ವಿರುದ್ಧ ಕ್ರಮ ಕೈಗೊಳ್ಳಲಿ, ತಪಿದ್ದರೆ ನಮ್ಮ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ರಾಜನಕಟ್ಟಿ ಗ್ರಾಮದ ಶ್ರೀ ಬ್ರಹ್ಮಲಿಂಗೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಲಗಮಣ್ಣ ಬಾದರವಾಡಿ, ಮಲ್ಲಪ್ಪಾ ನಿ …
Read More »ಬೆಳಗಾವಿ | ಬೋಟ್ ಪಲ್ಟಿ: ತಪ್ಪಿದ ಅನಾಹುತ
ಬೆಳಗಾವಿ: ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದ ಬಳಿ ಗುರುವಾರ, ಎನ್ಡಿಆರ್ಎಫ್ ತಂಡ ಬೋಟ್ ಕೃಷ್ಣಾ ನದಿ ಸೆಳವಿಗೆ ಸಿಕ್ಕು ಪಲ್ಟಿಯಾಯಿತು. ಎಲ್ಲ ಸಿಬ್ಬಂದಿ ಲೈಫ್ ಜಾಕೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾದರು. ಇಲ್ಲಿರುವ ಜಾಕ್ವೆಲ್ ಕೃಷ್ಣಾ ನದಿ ನೀರಿನಲ್ಲಿ ಮುಳುಗಿದೆ. ಇದರಿಂದ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದೆ. ಈ ಜ್ವಾಕ್ವೆಲ್ ದುರಸ್ತಿಗೆ ವಾಟರ್ ಮ್ಯಾನ್, ಲೈನ್ ಮ್ಯಾನ್ ಹಾಗೂ ಎನ್ಡಿಆರ್ಎಫ್ ತಂಡದವರು ಬೋಟ್ ಮೂಲಕ ತೆರಳಿದ್ದರು. ನೀರಿನ ರಭಸಕ್ಕೆ ಬೋಟ್ ನಿಯಂತ್ರಣ …
Read More »CMಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ
ಬೆಂಗಳೂರು: “ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿ.ಜೆ ಅಬ್ರಾಹಂ ಅವರ ದೂರಿನನ್ವಯ ಮಾನ್ಯ ಮುಖ್ಯಮಂತ್ರಿಗಳಿಗೆ ಜುಲೈ 26ರಂದು ನೀಡಿರುವ ಶೋಕಾಸ್ ನೋಟಿಸ್ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟ ಮಾನ್ಯ ರಾಜ್ಯಪಾಲರಿಗೆ ಸಲಹೆ ನೀಡಲು ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗುರುವಾರ ಹೇಳಿದ್ದಾರೆ. ಸಚಿವ ಸಂಪುಟ ಸಭೆಯ ತೀರ್ಮಾನದ ಬಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಸಿಎಂ “ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾ ಪ್ರಕರಣಕ್ಕೆ …
Read More »ಹೊಟ್ಟೆ ತುಂಬಿಸದ ಕಾಳಜಿ ಕೇಂದ್ರ. ಸಂತ್ರಸ್ಥರೇ ತಯಾರಿಸುತ್ತಿದ್ದಾರೆ ಅಡುಗೆ
ಮುಧೋಳ: ಘಟಪ್ರಭಾ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ನೆರವಾಗಬೇಕಿದ್ದ ಕಾಳಜಿ ಕೇಂದ್ರಗಳು ಸಂತ್ರಸ್ಥರ ಹೊಟ್ಟೆ ತುಂಬಿಸುತ್ತಿಲ್ಲ. ಅರೆಹೊಟ್ಟೆ ಊಟ ತಡೆಯದೆ ಸಂತ್ರಸ್ಥರು ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಬಳಕೆ ಮಾಡಿ ಹಚ್ಚಿನ ಆಹಾರ ತಯಾರಿಸುತ್ತಿದ್ದಾರೆ. ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಆರಂಭಿಸಿರುವ ಬಿ.ಬಿ. ಮುಧೋಳ ಶಾಲೆಯಲ್ಲಿನ ಸಂತ್ರಸ್ಥರು ತಮ್ಮ ಅಗತ್ಯ ಅಡುಗೆಗಾಗಿ ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಒಲೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎರಡು ಚಪಾತಿ ಸಾಲಲ್ಲ : ಹಳ್ಳಿಗಾಡಿನ ರೈತಾಪಿ ವರ್ಗಕ್ಕೆ ಹೊಟ್ಟೆ ತುಂಬಾ ರೊಟ್ಟಿ ತಿಂದಾಗ …
Read More »
Laxmi News 24×7