Breaking News

ಜಿಲ್ಲೆ

0 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿ

ಬೈಲಹೊಂಗಲ: ತಾಲ್ಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿ ದಡದಲ್ಲಿರುವ ರೈತರ ಜಮೀನಿನ 10 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡದ ಮಾಳಾಪೂರ ಖಾದ್ರಿ ಗಲ್ಲಿ ನಿವಾಸಿಗಳಾದ ಮೊಹಮ್ಮದನದೀಮ ಮಹಮ್ಮದಹನೀಫ ಹೆಬ್ಬಳ್ಳಿ (33), ರಿಯಾಜ ರಫೀಕ ಕಾರಿಗಾರ (28), ಸಮೀರ ನಜೀರ ಹೆಬ್ಬಳ್ಳಿ (21), ಜಾಕೀರಹುಸೇನ ನೂರಹ್ಮದ ಮಾಲದಾರ (25) ಬಂಧಿತರು. ಬಂಧಿತರಿಂದ ₹2 ಲಕ್ಷ ಮೌಲ್ಯದ 10 ಪಂಪ್‌ಸೆಟ್‍ಗಳನ್ನು ಹಾಗೂ ಅಪಾರಧಕ್ಕೆ ಬಳಸಿದ್ದ …

Read More »

ಛಾವಣಿ ಕುಸಿದು ಅವಳಿ ಮಕ್ಕಳು ಸೇರಿ 3 ಸಾವು! ಮಲಗಿದ್ದವರನ್ನ ಬಲಿಪಡೆದ ಜವರಾಯ, ಪರಿಹಾರ ಘೋಷಣೆ

ಹಾವೇರಿ: ಬಡವ ನೀ ಮಡಗಿದಂಗೆ ಇರು ಎಂಬಂತೆ ತಾವಾಯಿತು ತಮ್ಮ ಕೆಲಸವಾಯಿತು ಎನ್ನುತ್ತಿದ್ದ ಕುಟುಂಬದ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದಾರೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ (Rain) ಕಾರಣ ಈ ಕುಟುಂಬಸ್ಥರು ರಾತ್ರಿ ಹಾಯಾಗಿ ನಿದ್ರೆಗೆ ಜಾರಿದ್ದರು. ಆದರೆ ನಸುಕಿನಜಾವ ಮಲಗಿದ್ದವರ ಮೇಲೆ ಆ ಮನೆಯ ಮೇಲ್ಚಾವಣಿ (Roof) ಯಮಸ್ವರೂಪಿಯಾಗಿದೆ. ಏಕಾಏಕಿ ಕುಸಿದಿದ್ದರಿಂದ ಮೈಮೇಲೆ ಮಣ್ಣು ಕುಸಿದು ಮಲಗಿದ್ದ ಕುಟುಂಬ ಮೂವರ ಉಸಿರುಗಟ್ಟಿ (suffocation) ಸಾವನ್ನಪ್ಪಿದ್ದಾರೆ. ಮಳೆಯಿಂದಾದ ಈ ದುರಂತದಲ್ಲಿ …

Read More »

ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು, ಜುಲೈ 19: ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ವಿಧಾನ ಪರಿಷತ್‌ ಕಲಾಪದಲ್ಲಿ ಶುಕ್ರವಾರ ನಡೆದ ಪ್ರಶ್ನೋತ್ತರ ವೇಳೆ ಸದಸ್ಯ ಕೆ.ಅಬ್ದುಲ್‌ ಜಬ್ಬರ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅದಷ್ಟು …

Read More »

ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಸ್ಥಳದಲ್ಲಿಯೇ ಇಬ್ಬರು ಮಕ್ಕಳು ಹಾಗೂ ಮಹಿಳೆ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಜು.19ರ ಶುಕ್ರವಾರ ಬೆಳಗಿನ ಜಾವ ಸವಣೂರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.   ನಸುಕಿನ ಜಾವ 4 ಗಂಟೆಯ ಸುಮಾರು ಗ್ರಾಮದ ಹರಕುಣಿ ಕುಟುಂಬಸ್ಥರ ಮನೆ ಮೇಲ್ಬಾವಣಿ ಕುಸಿದಿದೆ. ನಿದ್ರಿಸುತ್ತಿದ್ದ 18 ತಿಂಗಳ ಅವಳಿ ಮಕ್ಕಳಾದ ಅಮೂಲ್ಯ ಹಾಗೂ ಅನುಶ್ರೀ ಮತ್ತು ಮಕ್ಕಳ ಅತ್ತೆ …

Read More »

ರಾಹುಲ್‌ ಗಾಂಧಿ ಕ್ಷಮೆ ಕೇಳಲಿ: ಕುಮಾರ ಹೀರೆಮಠ

ಬೆಳಗಾವಿ: ‘ಅಗ್ನಿಪಥ ಯೋಜನೆ ಕುರಿತಾಗಿ ಅವಹೇಳನಾಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತಕ್ಷಣವೇ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ಪೂರ್ವ ಸೈನಿಕರ ‌ಪ್ರಕೋಷ್ಠದ ರಾಜ್ಯ ಸಂಚಾಲಕ ಕುಮಾರ ಹೀರೆಮಠ ಒತ್ತಾಯಿಸಿದರು. ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಜಾರಿಗೆ ತಂದ ಈ ಯೋಜನೆ ಆದರ್ಶ ಸೈನಿಕನನ್ನು ರೂಪಿಸುತ್ತದೆ. ಬಹಳಷ್ಟು ಯುವಕ-ಯುವತಿಯರು ಇದರ ಲಾಭ ಪಡೆದಿದ್ದಾರೆ. ಆದರೆ, ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ರಾಹುಲ್‌ ಗಾಂಧಿ ಈ ಯೋಜನೆ ವಿರೋಧಿಸಬಾರದು. ಇದರ …

Read More »

ಬೆಳಗಾವಿ: ನದಿಪಾತ್ರಗಳಿಗೆ ಭೇಟಿ ನೀಡಿದ DC; ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

ಬೆಳಗಾವಿ: ‘ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ‌ ಉದ್ಭವಿಸಿಲ್ಲ. ಆದಾಗಿಯೂ ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು. ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಪಾತ್ರದಗಳನ್ನು ಪರಿಶೀಲಿಸಿದ ನಂತರ ಅವರು ಮಾಹಿತಿ ನೀಡಿದರು. ‘ಈಗಾಗಲೇ 26 ಬೋಟ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಅಗತ್ಯಬಿದ್ದರೆ ಹೆಚ್ಚುವರಿ ಬೋಟ್‌ಗಳನ್ನು ಕಾರವಾರದಿಂದ ತರಿಸಲಾಗುವುದು’ …

Read More »

ಮಹಾರಾಷ್ಟ್ರದಲ್ಲಿ ನಿರಂತರ ಮಳೆಗೆ ಕುಸಿದ ಆವಕ; ₹100ರ ಗಡಿ ತಲುಪಿದ ಟೊಮೆಟೊ ದರ

ಬೆಳಗಾವಿ: ನಗರದ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ದರ ಕನಿಷ್ಠ ₹80ರಿಂದ ₹100ರವರೆಗೆ ಮಾರಾಟವಾಗುತ್ತಿದೆ. ವಾರದ ಹಿಂದೆ ₹50ರಷ್ಟಿದ್ದ ದರ ಏಕಾಏಕಿ ಗಗನಮುಖಿ ಆಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಸಗಟು ವ್ಯಾಪಾರದಲ್ಲಿ ಎರಡು ವಾರಗಳ ಹಿಂದೆ 10 ಕೆ.ಜಿಯ ಒಂದು ಬುಟ್ಟಿಗೆ ₹600 ದರವಿತ್ತು. ವಾರದಿಂದಲೂ ದರ ಏರಿಸುತ್ತಲೇ ಇದ್ದಾರೆ. ಬುಧವಾರ ಬೆಳಿಗ್ಗೆ 10 ಕೆ.ಜಿಯ ಒಂದು ಟ್ರೇ ಟೊಮೆಟೊಗೆ ₹1000 ತೆಗೆದುಕೊಂಡಿದ್ದಾರೆ. ನಾವು ₹100ಕ್ಕೆ ಮಾರಿದರೂ ಹಾನಿ ಸಂಭವಿಸುತ್ತದೆ’ ಎಂದು …

Read More »

ದಾಂಡೇಲಿಯ ಗಣೇಶನಗರದ ಅವಿವಾಹಿತ ಯುವಕ ನಾಪತ್ತೆ

ದಾಂಡೇಲಿ : ಸ್ಥಳೀಯ ಗಣೇಶನಗರದ ಅವಿವಾಹಿತ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದ್ದು, ಈ ಬಗ್ಗೆ ನಗರ ಪೊಲೀಸ್ ಠಾಣೆಯಿಂದ ಮಾಹಿತಿ ಲಭ್ಯವಾಗಿದೆ. ಖಾಸಗಿ ಕೋರಿಯರ್ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಸ್ಥಳೀಯ ಗಣೇಶನಗರದ ನಿವಾಸಿ 27 ವರ್ಷ ವಯಸ್ಸಿನ ಪ್ರವೀಣ್ ತೆಗ್ಗಿ ಎಂಬಾತನೆ ನಾಪತ್ತೆಯಾದ ಯುವಕನಾಗಿದ್ದಾನೆ. ಈತ ಜುಲೈ 3 ರಂದು ಯಾವುದೋ ವಿಚಾರವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆ ಬಿಟ್ಟು ಹೋದವನು ಈವರೆಗೆ ಮನೆಗೆ ಬಂದಿಲ್ಲ. ಈತನ ಕುಟುಂಬಸ್ಥರು ಹಾಗೂ ಸ್ನೇಹಿತರು ಆತನನ್ನು …

Read More »

ಜಮೀನು ವರ್ಗಾವಣೆ: 15 ದಿನಗಳಲ್ಲಿ ವರದಿ‌ ನೀಡಿ

ಬೆಳಗಾವಿ: ನಗರದ ಕ್ಯಾಂಟೋನ್ಮೆಂಟ್‌ನ ವಸತಿ ಪ್ರದೇಶವನ್ನು ಮಹಾನಗರ ಪಾಲಿಕೆಯಲ್ಲಿ ಸೇರಿಸುವುದಕ್ಕೆ ಸಂಬಂಧಿಸಿದಂತೆ ಕ್ಯಾಂಟೋನ್ಮೆಂಟ್‌ ಬೋರ್ಡ್‌ನ ಒಟ್ಟು 1763.78 ಎಕರೆ ಜಾಗೆಯ ಸಮೀಕ್ಷೆ ಕೈಗೊಂಡು 15 ದಿನಗಳೊಳಗಾಗಿ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದ್ದಾರೆ.   ರಕ್ಷಣಾ ಸಚಿವಾಲಯದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಮಂಗಳವಾರ ಜರುಗಿದ ವಿಡಿಯೊ ಸಂವಾದ ಸಭೆಯ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕ್ಯಾಂಟೋನ್ಮೆಂಟ್‌ ಪ್ರದೇಶಗಳನ್ನು …

Read More »

ಸೌಹಾರ್ದದ ಮೊರಬದ ಮೊಹರಂ

ರಾಯಬಾಗ: ಜಾತಿಯ ಹಂಗಿಲ್ಲದೇ ಮನುಕುಲ ಒಂದೇ ಎಂಬ ಸಂದೇಶ ಸಾರಿ, ಸರ್ವಧರ್ಮಗಳ ಭಾವೈಕ್ಯದ ಕೊಂಡಿಯಾಗಿರುವ ಮೊಹರಂ ಹಬ್ಬ ಆಚರಣೆ ಆಧುನಿಕ ಯುಗದಲ್ಲೂ ಸ್ನೇಹ, ಭ್ರಾತೃತ್ವದ ಸಂಕೇತವಾಗಿ ನಡೆದುಕೊಂಡು ಬಂದಿದೆ. ಮೊರಬದಲ್ಲಿ ಮೊಹರಂ ಸರ್ವ ಧರ್ಮೀಯರು ಆಚರಿಸುವ ವೈಶಿಷ್ಟ್ಯಪೂರ್ಣ ಹಬ್ಬವಾಗಿದೆ.   ಇದಕ್ಕೆ ಅಲಾಯಿ ಹಬ್ಬ ಅಂತಲೂ ಹೆಸರು. ಮೊರಬ ಗ್ರಾಮದಲ್ಲಿ ಈ ಹಬ್ಬವನ್ನು ಉತ್ಸಾಹದಿಂದ ಆಚರಿಸುತ್ತಾರೆ. ಈ ಹಬ್ಬದಲ್ಲಿ ಚಿಣ್ಣರನ್ನು ನೋಡುವುದೇ ಒಂದು ಮಜವಾಗಿರುತ್ತದೆ. ಐದು ದಿನಗಳ ಕಾಲ ಕೂರಿಸಲಾಗುವ …

Read More »