ಕಬ್ಬೂರ: 72 ವರ್ಷದ ಈ ಹಿರಿಯರು ಜಲಯೋಗದಲ್ಲಿ ವಿಶ್ವದಾಖಲೆ ಮಾಡಿದ್ದಾರೆ. ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿದ್ದಾರೆ. ನೀರಿನ ಮೇಲೆ ಮೂರು ತಾಸಿಗೂ ಅಧಕ ಸಮಯ ಲೀಲಾಜಾಲವಾಗಿ ಯೋಗದ ಭಂಗಿಗಳನ್ನು ಪ್ರದರ್ಶಿಸುತ್ತಾರೆ. ಅವರ ಸಾಮರ್ಥ್ಯ, ಚುರುಕುತನ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಎಂಥವರನ್ನೂ ನಿಬ್ಬೆರಗು ಮಾಡುತ್ತದೆ. ಚಿಕ್ಕೋಡಿ ತಾಲ್ಲೂಕಿನ ಕಬ್ಬೂರ ಪಟ್ಟಣದ ಪ್ರಕಾಶ ಬಸಲಿಂಗಪ್ಪ ಬೆಲ್ಲದ ಅವರೇ ಈ ಯೋಗ ಸಾಧಕ. ಬ್ಯಾಂಕ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅವರು 37 …
Read More »ಸೂರಜ್ ರೇವಣ್ಣಗೆ ಬ್ಲಾಕ್ ಮೇಲ್, ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಯುವಕನ ವಿರುದ್ಧ ದೂರು
ಹಾಸನ: ವಿಧಾನ ಪರಿಷತ್ ಸದಸ್ಯ (MLC) ಡಾ. ಸೂರಜ್ ರೇವಣ್ಣಗೆ (Suraj Revanna) ಬ್ಲಾಕ್ ಮೇಲ್ ಮಾಡಲಾಗಿದ್ಯಂತೆ. ಯುವಕನೊಬ್ಬ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಐದು ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದನಂತೆ. ಇದೀಗ ಆ ಯುವಕನ ವಿರುದ್ಧ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬುವರು ಪೊಲೀಸರಿಗೆ ದೂರು (Police Complaint) ನೀಡಿದ್ದಾರೆ. ಸೂರಜ್ ರೇವಣ್ಣಗೆ ಯುವಕನಿಂದ ಬ್ಲಾಕ್ ಮೇಲ್ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ …
Read More »ಕನ್ನಡ ಶಿಕ್ಷಕರ ನೇಮಕವೇ ಆಗಿಲ್ಲ !ಚಕಾರ ಎತ್ತದ ಕರ್ನಾಟಕ ಗಡಿಯ ಶಾಸಕರು
ಬೆಳಗಾವಿ: ಕರ್ನಾಟಕದ ಗಡಿಭಾಗದಲ್ಲಿ ರುವ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುತ್ತಿರುವ ಮಹಾರಾಷ್ಟ್ರ ಸರಕಾರವು ಸದ್ದಿಲ್ಲದೆ ಇನ್ನೊಂದು ಪಿತೂರಿ ಮಾಡುತ್ತಿದೆ ಎಂದು ಆರೋಪಿಸ ಲಾಗಿದೆ. ಅದು ಕಳೆದ 15 ವರ್ಷಗಳಿಂದ ಕನ್ನಡ ಶಾಲೆಗಳಿಗೆ ಶಿಕ್ಷಕರ ನೇಮಕಾತಿಯನ್ನೇ ಮಾಡಿಲ್ಲ ಎನ್ನುವ ಸಂಗತಿ ಈಗ ಹೊರಬಿದ್ದಿದೆ. ಉರ್ದು ಭಾಷಾ ಶಿಕ್ಷಕರ ನೇಮಕಾತಿ ಮಾಡಿದ್ದು, ಕನ್ನಡ ಶಾಲೆಗಳಿಗೆ ಮಾತ್ರ ಅರ್ಹ ಶಿಕ್ಷಕರಿದ್ದರೂ ಮಹಾರಾಷ್ಟ್ರ ಸರಕಾರ ಅವರನ್ನು ಪರಿಗಣಿಸಿಲ್ಲ. 15 ವರ್ಷಗಳಿಂದ ಕನ್ನಡ ಶಾಲೆಗಳಿಗೆ ಶಿಕ್ಷಕರ ನೇಮಕಾತಿ …
Read More »40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಚಿಕ್ಕೋಡಿ: ನೀರಿಲ್ಲದ 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ಚಿಕ್ಕೋಡಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ ಜೀವದಾನ ನಿಡಿದ್ದಾರೆ. ಚಿಕ್ಕೋಡಿ ನಗರದ ವಾಡ ಗಲ್ಲಿಯ ಶ್ರೀನಿವಾಸ್ ದೊಡಮನಿ ಅವರ ಸುಮಾರು 40 ಅಡಿ ಆಳದ ಬಾವಿಯಲ್ಲಿ ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಬೆಕ್ಕು ಕಾಲು ಜಾರಿ ಬಿದ್ದಿದೆ. ಹೀಗಾಗಿ ದೊಡಮನಿ ಮನೆಯವರು ಚಿಕ್ಕೋಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಬೆಕ್ಕನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ. ಅದರಂತೆ ಅಗ್ನಿಶಾಮಕ ದಳದ ಸಿಬ್ಬಂದಿ …
Read More »ಸಿದ್ದು ಸಿಎಂ ಇರುವವರೆಗೆ ಮಾತ್ರ ಕಾಂಗ್ರೆಸ್ ಸರ್ಕಾರ ಸೇಫ್; : ರಮೇಶ್ ಜಾರಕಿಹೊಳಿ
ಬೆಳಗಾವಿ: ಸಿದ್ದರಾಮಯ್ಯ ಸಿಎಂ ಇರುವವರೆಗೆ ಕಾಂಗ್ರೆಸ್ ಸರ್ಕಾರ ಇರುತ್ತದೆ. ಅವರ ಅವ ಧಿ ಮುಗಿದ ನಂತರ ಹೇಳಲಾಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಬೆಳಗಾವಿ ನಗರದ ಯೋಗಿಕೊಳ್ಳ ಪ್ರದೇಶದಲ್ಲಿ 6 ಟಿಎಂಸಿ ನೀರು ನಿಲ್ಲಿಸಲು ಉದ್ದೇಶಿಸಿ ಮಾಡಲಾದ ಘಟ್ಟಿ ಬಸವಣ್ಣ ಡ್ಯಾಂ ಯೋಜನೆಯನ್ನು ನಿಲ್ಲಿಸಲು ಮಹಾನಾಯಕ ಪ್ಲಾನ್ ಮಾಡಿದ್ದ. ಯೋಜನೆ ನಿಲ್ಲಿಸಲು ಅಧಿ ಕಾರಿಗಳಿಂದ ಸತೀಶ್ ಜಾರಕಿಹೊಳಿ ಹೆಸರು ಹೇಳಿಸಿದ್ದ. ಆದರೆ ನಾನು ಸತೀಶ ಜತೆ ಮಾತನಾಡಿದಾಗ …
Read More »ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ: ಪ್ರಯಾಣಿಕರಿಗೆ 2.50 ಲಕ್ಷ ರೂ. ಬ್ಯಾಗ್ ವಾಪಸ್
ರಾಯಚೂರು: ಬಸ್ ನಲ್ಲಿಯೇ ಹಣ ಇದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಅದನ್ನು ಮರಳಿಸಿದ್ದಾರೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ ನಲ್ಲಿ ಮಾನ್ವಿ ಬಸ್ ನಿಲ್ದಾಣದಿಂದ ರಾಯಚೂರಿಗೆ ಬರುತ್ತಿದ್ದ ಪ್ರಯಾಣಿಕ ಸೋಮಶೇಖರ ಪಾಟೀಲ ಅವರು 2.50 ಲಕ್ಷ ರೂ. ಇದ್ದ ಬ್ಯಾಗ್ ಅನ್ನು ಬಸ್ ನಲ್ಲಿ ಬಿಟ್ಟು ರಾಯಚೂರಿನಲ್ಲಿ ಇಳಿದು ಹೋಗಿದ್ದಾರೆ. ಹೈದರಾಬಾದ್ ಬಸ್ ನಿಲ್ದಾಣದಲ್ಲಿ ಎಲ್ಲಾ ಪ್ರಯಾಣಿಕರು ಬಸ್ ನಿಂದ ಇಳಿದ ನಂತರ ಕಂಡಕ್ಟರ್ …
Read More »ಕೆಎಲ್ಇ ಆಸ್ಪತ್ರೆಯಲ್ಲಿ ಮಗುವಿಗೆ ಮರುಜನ್ಮ
ಬೆಳಗಾವಿ: ಜನ್ಮತಃವಾಗಿ ‘ಕರೋನರಿ ಕ್ಯಾಮೆರಾಲ ಫಿಸ್ತುಲಾ’ ಎಂಬ ಹೃದ್ರೋಗದಿಂದ ಬಳಲುತ್ತಿದ್ದ 20 ತಿಂಗಳ ಮಗುವಿಗೆ ಮರುಜನ್ಮ ನೀಡುವಲ್ಲಿ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದ ಹೃದ್ರೋಗ ತಜ್ಞರು ಯಶಸ್ವಿಯಾಗಿದ್ದಾರೆ. ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಮೂಲದ 20 ತಿಂಗಳ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಸುಮಾರು 2,000 ಮಕ್ಕಳಲ್ಲಿ ಒಬ್ಬರಿಗೆ ಇಂಥ ಕಾಯಿಲೆ ಕಂಡುಬರುತ್ತದೆ. ಮಗುವಿಗೆ ಮೇಲಿಂದ ಮೇಲೆ ಶೀತ, ಕೆಮ್ಮು, ಉಸಿರಾಟದ ತೊಂದರೆ, ಆಯಾಸ ಮತ್ತು …
Read More »ಬೆಳಗಾವಿ ವ್ಯಾಕ್ಸಿನ್ ಡಿಪೋ ಆವರಣದಲ್ಲಿ ಕೆಟ್ಟು ನಿಂತಿರುವ ಹಳೆಯ ಆಂಬುಲೆನ್ಸ್ಗಳು
ಬೆಳಗಾವಿ: ಇಲ್ಲಿನ ವ್ಯಾಕ್ಸಿನ್ ಡಿಪೋ ಆವರಣದಲ್ಲಿ ಕೆಟ್ಟು ನಿಂತಿರುವ ಹಳೆಯ ಆಂಬುಲೆನ್ಸ್ಗಳು ದೂಳು ತಿನ್ನುತ್ತಿವೆ. ಕೆಲವು ವಾಹನಗಳ ಕಿಟಕಿ, ಬಾಗಿಲು ಮುರಿದಿದ್ದರೆ, ಹಲವು ವಾಹನಗಳು ತುಕ್ಕು ಹಿಡಿಯುತ್ತಿವೆ. 50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ ಬೆಳಗಾವಿ ಜಿಲ್ಲೆಯಲ್ಲಿ ಜನರಿಗೆ ಈ ಆಂಬುಲೆನ್ಸ್ಗಳು ಉತ್ತಮ ಸೇವೆ ಒದಗಿಸಿದ್ದವು. ತ್ವರಿತವಾಗಿ ರೋಗಿಗಳು ಆಸ್ಪತ್ರೆ ಸೇರಲು ನೆರವಾಗಿದ್ದವು. ಇದರೊಂದಿಗೆ ಬೇರೆ ಐದು ವಾಹನಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಬಳಸಲಾಗುತ್ತಿತ್ತು. ಆದರೆ, …
Read More »ಎರಡು ಬೈಕ್ ಡಿಕ್ಕಿ: ಮೂವರ ಸಾವು
ರಾಯಬಾಗ : ಎರಡು ಬೈಕ್ಗಳ ಡಿಕ್ಕಿಯಲ್ಲಿ ಮೂವರು ಮತಪಟ್ಟು, ಮಗುವೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಕಂಕಣವಾಡಿ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಕಂಕಣವಾಡಿ ಗ್ರಾಮದ ಸುಕದೇವ ರಾಯಪ್ಪ ಪೂಜಾರಿ (60), ಚಿಮ್ಮಡ ಗ್ರಾಮದ ನಿವಾಸಿಗಳಾದ ಸದಾಶಿವ ಹಣಮಂತ ದೊಡಮನಿ (45), ಕಿರಣ ಸದಾಶಿವ ದೊಡಮನಿ(20) ಮೃತಪಟ್ಟಿದ್ದಾರೆ.
Read More »ಮುನವಳ್ಳಿ: ಪಟ್ಟಣದ ವಿಠ್ಠಲ ಮಂದಿರದಿಂದ ಜೂನ್ 26ರಂದು 30ನೇ ಆಷಾಡಿವಾರಿ ಪಾದಯಾತ್ರೆ ಪ್ರಾರಂಭ
ಮುನವಳ್ಳಿ: ಪಟ್ಟಣದ ವಿಠ್ಠಲ ಮಂದಿರದಿಂದ ಜೂನ್ 26ರಂದು 30ನೇ ಆಷಾಡಿವಾರಿ ಪಾದಯಾತ್ರೆ ಪ್ರಾರಂಭವಾಗಲಿದೆ. ಸುಕ್ಷೇತ್ರ ಆಳಂದಿಯವರೆಗೆ ವಾಹನಗಳ ಮೂಲಕ ಹೊರಟು ಜೂನ್ 30ಕ್ಕೆ ಆಳಂದಿಯಿಂದ ಪಾದಯಾತ್ರೆ ಮೂಲಕ ಪಂಢರಪುರವನ್ನು ಜುಲೈ 17 ರಂದು ತಲುಪಲಿದೆ. ಜುಲೈ 17 ರಂದು ಆಷಾಡ ಏಕಾದಶಿ ಮುಗಿಸಿ ಜುಲೈ 18 ರಂದು ಮರಳಿ ತಮ್ಮ ತಮ್ಮ ಗ್ರಾಮಗಳಿಗೆ ವಾಹನ ಮೂಲಕ ಬೆಲಾಗುವುದು. ಸಂಪ್ರದಾಯದಂತೆ ಪ್ರತಿವರ್ಷದಂತೆ ಈ ವರ್ಷವೂ ಜ್ಞಾನೇಶ್ವರ ಮಹಾರಾಜರ ಆಷಾಡಿವಾರಿ ಪಾಲಕಿ ಮಹೋತ್ಸವ …
Read More »
Laxmi News 24×7