ಬೆಳಗಾವಿ: ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ವಂಟಮುರಿ ಗ್ರಾಮದ ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು ಮಾಡಿ ಆದೇಶಿಸಲಾಗಿರುತ್ತದೆ. ಪರಿಶಿಷ್ಟ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ
ಬೆಳಗಾವಿ : ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ತುಂಬಿದ ಹಿನ್ನೆಲೆ ಸುವರ್ಣ ಸೌಧ ಆವರಣದಲ್ಲಿ ನಡೆದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ವಾರಾಂತ್ಯದಲ್ಲಿ ಸುವರ್ಣ ಸೌಧವನ್ನು ಸಾರ್ವಜನಿಕರಿಗೆ ಮುಕ್ತವಾಗಿ ತೆರೆದು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. …
Read More »ತಮ್ಮ ಪಕ್ಷದ ವಿರುದ್ಧವೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೇಸರ
ಬೆಳಗಾವಿ: ಯಾರೇ ಮಂತ್ರಿಯಾಗಬೇಕಂದರೂ, ಅದಕ್ಕೆ ಜಾದು ಮಾಡ್ಬೇಕು. ನಮಗೆ ಮಂತ್ರಿಯಾಗೋ ಜಾದುವೇ ಗೊತ್ತಿಲ್ಲ. ಇನ್ನು ಮುಖ್ಯಮಂತ್ರಿಯಾಗೋದು ಎಲ್ಲಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರೋಕ್ಷವಾಗಿ ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಚರ್ಚೆಯಲ್ಲಿ ಬಿ.ಆರ್. ಪಾಟೀಲ್ ಮಾತನಾಡುತ್ತಾ, ಕೇಂದ್ರ ಸಾರಿಗೆ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯ ಕೆಲಸ ಮಾಡುವ ಕನಸುಗಳಿವೆ. ಆದರೆ, ನಿಮ್ಮವರು ಅದನ್ನು ಮಾಡಲು ಬಿಡುತ್ತಿಲ್ಲ. ನನಗೆ ಅನುಕಂಪ ಇದೆ …
Read More »ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ನಾಮಕರಣ ಮಾಡುವ ನಿರ್ಣಯ ಅಂಗೀಕಾರ
ಬೆಳಗಾವಿ : ವಿಧಾನಸಭೆಯಲ್ಲಿ ರಾಜ್ಯದ ನಾಲ್ಕು ಏರ್ಪೋರ್ಟ್ಗಳಿಗೆ ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಪಡೆದುಕೊಳ್ಳಲಾಯಿತು. ಈ ಸಂಬಂಧ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ ಪಾಟೀಲ್, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯ ಮಂಡಿಸಿದರು. ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ …
Read More »ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ ಅಂಗೀಕಾರ-ಕನಿಷ್ಠ 500 ಕೋಟಿ ರೂ
ಬೆಂಗಳೂರು : ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ- 2023ನ್ನು ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದಾಗ ಸದಸ್ಯರು ಸರ್ವಾನುಮತದಿಂದ ಮೇಜು ಕುಟ್ಟಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ವಿಧೇಯಕವು ವಿಧಾನಪರಿಷತ್ತಿನಲ್ಲಿ ಅಂಗೀಕಾರ ಪಡೆಯಿತು. ಸದಸ್ಯ ರವಿಕುಮಾರ್ ಮಾತನಾಡಿ, ಪ್ರಾಧಿಕಾರ ರಚಿಸುತ್ತಿರುವುದು ಸ್ವಾಗತಾರ್ಹ. ಕನಿಷ್ಠ 500 ಕೋಟಿ ರೂ.ಮೀಸಲಿಟ್ಟು …
Read More »ಮಹಿಳೆ ಮೇಲಿನ ಹಲ್ಲೆ ಅಮಾನವೀಯ ಹೇಯಕೃತ್ಯ: ಹೆಬ್ಬಾಳ್ಕರ್
ಬೆಳಗಾವಿ : ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಮಹಿಳೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು. ಸಂತ್ರಸ್ತ ಮಹಿಳೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಯಾವುದೇ ಕಾರಣಕ್ಕೂ ಧೃತಿಗೆಡದಂತೆ ಧೈರ್ಯ ಹೇಳಿದರು. …
Read More »ಮುಂದಿನ ವರ್ಷದಿಂದ ಉಚಿತ ಸೈಕಲ್ ನೀಡಲಾಗುವುದು : ಮಧು ಬಂಗಾರಪ್ಪ
ಬೆಳಗಾವಿ: ರಾಜ್ಯದ ಪ್ರಾಥಮಿಕ ಹಾಗು ಪ್ರೌಢಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ಯೋಜನೆಯಡಿ ಮುಂದಿನ ವರ್ಷದಿಂದ ಸೈಕಲ್ ವಿತರಣೆ ಆರಂಭಿಸಲಾಗುತ್ತದೆ. ಆದರೆ, ಈ ಬಾರಿ ಸೈಕಲ್ ವಿತರಣೆ ಅಸಾಧ್ಯ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳಿಗೆ ಸೈಕಲ್ ಕೊಡಬಾರದಂತಲ್ಲ, ಇದಕ್ಕೆ ನಮಗೆ ಹಣಕಾಸು ಸಮಸ್ಯೆಯೂ ಆಗುವುದಿಲ್ಲ. ಆದರೆ, ಒಂದೇ ಬಾರಿ ಅಷ್ಟು …
Read More »ಸಣ್ಣಪುಟ್ಟ ಸಮಾಜವಿರಲಿ,ದೊಡ್ಡ ಸಮಾಜವಿರಲಿ. ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ.: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ( ಹಕ್ಕ- ಬುಕ್ಕ ವೇದಿಕೆ ಸುಣಧೋಳಿ) – ಸಣ್ಣಪುಟ್ಟ ಸಮಾಜವಿರಲಿ,ದೊಡ್ಡ ಸಮಾಜವಿರಲಿ. ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ. ಸಮಾಜಗಳ ಅಶೋತ್ತರಗಳಿಗೆ ಸ್ಪಂದಿಸುವ ಮೂಲಕ ಎಲ್ಲ ಸಮುದಾಯಗಳಿಗೆ ಬೆನ್ನಲಬು ಆಗಿ ಕೆಲಸ ಮಾಡುತ್ತೇನೆ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರದಂದು ಜರುಗಿದ ಭಕ್ತ ಕನಕದಾಸರ 536ನೇ ಜಯಂತಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಸಮುದಾಯಗಳ ಆಶೀರ್ವಾದದಿಂದ …
Read More »ಸಿದ್ದೇಶ್ವರ ಸ್ವಾಮೀಜಿ ನಿಧನರಾಗಿ ಜನವರಿ 2ಕ್ಕೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆ ಅಗಲಿದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ವಿಜಯಪುರ: ಸಿದ್ದೇಶ್ವರ ಸ್ವಾಮೀಜಿ ನಿಧನರಾಗಿ ಜನವರಿ 2ಕ್ಕೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆ ಅಗಲಿದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಆಹ್ವಾನ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಅವರು ಆಗಮಿಸುತ್ತಾರೋ, ಇಲ್ಲವೋ ಎಂಬುದು ಗೊತ್ತಾಗಲಿದೆ ಎಂದರು. ಜ.2ರಂದು ನಡೆಯುವ ಕಾರ್ಯಕ್ರಮದಲ್ಲಿ …
Read More »
Laxmi News 24×7