Breaking News

ಜಿಲ್ಲೆ

ಕನ್ನಡ ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನೆಡುವಾಗ ವಿದ್ಯುತ್ ಶಾಕ್: ಬೆಳಗಾವಿ ಜಿಲ್ಲೆಯ ಯುವಕ ದುರ್ಮರಣ

ಬೆಳಗಾವಿ: ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಧ್ವಜಸ್ತಂಭ ನೆಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಒಕ್ಕುಂದ ಗ್ರಾಮದಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಪ್ರಜ್ವಲ್ ಚನಗೌಡ ಮುನೇಪ್ಪನವರ(18) ಮೃತ ಯುವಕ. ಕನ್ನಡ ರಾಜ್ಯೋತ್ಸವ ಆಚರಣೆಗಾಗಿ ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನಿರ್ಮಿಸಿ ನವೆಂಬರ್ 1ರಂದು ಧ್ವಜಾರೋಹಣಕ್ಕೆ ಗ್ರಾಮದ ಯುವಕರು ಸಿದ್ಧತೆ ನಡೆಸಿದ್ದರು. ಶನಿವಾರ ಸಂಜೆ ಧ್ವಜಸ್ತಂಭ ನೆಡುವಾಗ ಅಲ್ಲಿಯೇ ಹಾದು ಹೋಗಿದ್ದ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಹಿರೇನಂದಿ ಗ್ರಾಮದ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ಲಕ್ಷ್ಮಣ್ ಸವದಿ ನಿವಾಸದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಶೋಧ; ಹುಲಿ ಉಗುರು ಮಾದರಿಯ ಪೆಂಡೆಂಟ್‌ ವಶಕ್ಕೆ

ಚಿಕ್ಕೋಡಿ: ಮಾಜಿ ಡಿಸಿಎಂ, ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿ ಪುತ್ರ ಸುಮಿತ್ ಸವದಿ ಕೊರಳಲ್ಲಿ ಹುಲಿ ಉಗುರು ಹೋಲುವಂತಹ ಪೆಂಡೆಂಟ್ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಥಣಿ ಅರಣ್ಯ ಇಲಾಖೆ ಅಧಿಕಾರಿಗಳು ಸರ್ಚ್ ವಾರಂಟ್‌ನೊಂದಿಗೆ ಇಂದು ಅಥಣಿಯಲ್ಲಿರುವ ಸವದಿ ನಿವಾಸದಲ್ಲಿ ಶೋಧ ಕಾರ್ಯ ನಡೆಸಿದರು. ಅರಣ್ಯ ಇಲಾಖೆ ಅಧಿಕಾರಿ ಪ್ರಶಾಂತ ಗಾಣಿಗೇರ ನೇತೃತ್ವದಲ್ಲಿ ಹತ್ತು ಮಂದಿ ಸಿಬ್ಬಂದಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಚಿದಾನಂದ ಸವದಿ ಅವರಿಂದ ಮಾಹಿತಿ ಪಡೆದುಕೊಂಡರು. ಇದೇ ವೇಳೆ, …

Read More »

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು.

ಬೆಂಗಳೂರು : ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಇದರಲ್ಲಿ ಪ್ರಾದೇಶಿಕ ನ್ಯಾಯವನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗದವರಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಮಾತನಾಡಿದರು. ಈ ವೇಳೆ ಕರ್ನಾಟಕ ಎಂದು …

Read More »

ಬಾಗಲಕೋಟೆಯ ಮಹಿಳಾ ಒಕ್ಕೂಟದ ಮಹಿಳೆಯರು ಸ್ವಸಹಾಯ ಸಂಘದಡಿಯ ಪರಿಸರ ಸ್ನೇಹಿ ಬ್ಯಾಗ್​ ತಯಾರಿಕೆ,

ಬಾಗಲಕೋಟೆ: ಮಹಿಳೆ ಮನಸ್ಸು ಮಾಡಿದರೆ ಪ್ರಪಂಚವನ್ನೇ ಗೆಲ್ಲಬಹದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ ಮಹಿಳೆಯರು ಮಾದರಿಯಾಗಿದ್ದಾರೆ. ಇವರ ಸಾಧನೆಯ ಫಲ ಎಂಬಂತೆ ಇದೀಗ ಕೇಂದ್ರ ಸರ್ಕಾರ 5 ಕೋಟಿ ರೂಪಾಯಿ ಅನುದಾನ ನೀಡಿ ಬೃಹತ್ ಕಾರ್ಖಾನೆ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಹೌದು.. ಪರಿಸರಸ್ನೇಹಿ ಬ್ಯಾಗ್​ ತಯಾರಿಕೆ ಮೂಲಕ ಬಾಗಲಕೋಟೆ ವನಿತೆಯರು ರಾಜ್ಯವಲ್ಲದೇ ಕೇಂದ್ರ ಸರ್ಕಾರದ ಗಮನ ಸೆಳೆಯುವಲ್ಲೂ ಯಶಸ್ವಿಯಾಗಿದ್ದಾರೆ. ಕಟಗೇರಿ ಗ್ರಾಮದಲ್ಲಿರುವ ಪಂಚಾಯತ್​ ಮಟ್ಟದ ಸಂಜೀವಿನಿ ಮಹಿಳಾ …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಅವರ ಕೊರಳಲ್ಲಿ ಹುಲಿ ಉಗುರು ಹೋಲುವ ಲಾಕೆಟ್ ಚಿತ್ರ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಬೆಳಗಾವಿ : ಸಧ್ಯ ರಾಜ್ಯದಲ್ಲಿ ಹುಲಿ ಉಗುರು ವಿವಾದ ಜೋರಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿಯೂ ಸದ್ದು ಮಾಡುತ್ತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊರಳಲ್ಲೂ ಹುಲಿ ಉಗುರು ಹೋಲುವ ಚೈನ್ ಪೋಟೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಅವರ ಕೊರಳಲ್ಲಿ ಹುಲಿ ಉಗುರು ಹೋಲುವ ಲಾಕೆಟ್ ಚಿತ್ರ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಫೇಸ್ಬುಕ್ ಖಾತೆಯಲ್ಲಿ ಹಾಕಿಕೊಂಡ …

Read More »

ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ; ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಹಾಗೂ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ ಮಾಡಿದರು.             ಸಂತೋಷ ಜಾರಕಿಹೊಳಿ ಅವರ ಅಭಿಮಾನಿಗಳು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಾಗೂ ಉಪಹಾರ ವಿತರಣೆ ಮಾಡುವ ಮೂಲಕ ಸರಳವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸಂತೋಷ ಜಾರಕಿಹೊಳಿ ಅವರ …

Read More »

ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ.

ಬೆಳಗಾವಿ: ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ. ಕಲರ್​ಫುಲ್ ಲೈಟಿಂಗ್ಸ್‌ನಿಂದ​ ಕಂಗೊಳಿಸುತ್ತಿದ್ದ ಕೋಟೆಯಲ್ಲಿ ಜನರು ಸೆಲ್ಫಿ ಫೋಟೋ ತೆಗೆಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಉತ್ಸವಕ್ಕೆ ಬಂದವರು ಕೋಟೆ ಅಭಿವೃದ್ಧಿಯಾಗಿ, ಪ್ರಸಿದ್ಧ ಪ್ರವಾಸಿ ತಾಣವಾಗಬೇಕು, ದಸರಾ ಮಾದರಿಯಲ್ಲಿ ಕಿತ್ತೂರು ಉತ್ಸವ ಜರುಗಬೇಕು ಎಂದು ಆಶಿಸಿದರು. ವೀರರಾಣಿ ಚನ್ನಮ್ಮಾಜಿ ಆಳಿದ ಕೋಟೆಯಲ್ಲಿ ಯುವಕ, ಯುವತಿಯರು, ಚಿಕ್ಕ ಮಕ್ಕಳು, ಮಹಿಳೆಯರು ಸೇರಿ ಇಡೀ ಕುಟುಂಬಸ್ಥರು ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ವಸ್ತು ಪ್ರದರ್ಶನದಲ್ಲಿ ಮಾರಾಟಕ್ಕೆ ಇಟ್ಟಿರುವ ವಿವಿಧ ವಸ್ತುಗಳ …

Read More »

ಶಾಸಕ ಅಭಯ್ ಪಾಟೀಲ್​ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ.

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇತ್ತೀಚೆಗೆ ಆಸ್ತಿ ತೆರಿಗೆ ಹೆಚ್ಚಳ ನಿರ್ಣಯದ ದಿನಾಂಕ ತಿದ್ದಿದ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಬುಧವಾರ ಬಿಜೆಪಿ ಶಾಸಕ ಅಭಯ್ ಪಾಟೀಲ್ ದಲಿತ ಅಧಿಕಾರಿಗಳ ಮೇಲೆ ವೈಯಕ್ತಿಕ ಹಗೆತನ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.   ಪ್ರಗತಿಪರ ಸಂಘಟನೆಗಳು, ಕಾಂಗ್ರೆಸ್ ನಗರಸಭೆ ಸದಸ್ಯರು, ವಿವಿಧ ದಲಿತ ಸಂಘಟನೆಗಳು ಹಾಗೂ ಸಚಿವ ಸತೀಶ್​ …

Read More »

ಹಿರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ಅಡ್ಡ ಪಲ್ಲಕ್ಕಿ ಉತ್ಸವ ಜರಗಿಸುವ ಮೂಲಕ ದಸರಾ ಹಬ್ಬಕ್ಕೆ ತೆರೆ

ಹುಕ್ಕೇರಿ ನಗರದಲ್ಲಿ ಕಳೆದ 9 ದಿನಗಳಿಂದ ಜರಗುತ್ತಿರುವ ನವರಾತ್ರಿ ಉತ್ಸವಕ್ಕೆ ಹಿರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ಅಡ್ಡ ಪಲ್ಲಕ್ಕಿ ಉತ್ಸವ ಜರಗಿಸುವ ಮೂಲಕ ದಸರಾ ಹಬ್ಬಕ್ಕೆ ತೆರೆ ಎಳೆಯಲಾಯಿತು. ನವರಾತ್ರಿ ಅಂಗವಾಗಿ ಹುಕ್ಕೇರಿ ನಗರದ ಹಿರೇಮಠದಲ್ಲಿ ಒಂಬತ್ತು ದಿನಗಳ ಕಾಲ ಗುರುಶಾಂತೇಶ್ವರನಿಗೆ ಅಭಿಷೇಕ,ಮಹಾ ಚಂಡಿಕಾಹೋಮ, ಅದ್ಯಾತ್ಮೀಕ ಪ್ರವಚನ ದೊಂದಿಗೆ ಭಾವೈಕ್ಯ ದಸರಾ, ಕೃಷಿ ದಸರಾ, ಮಹಿಳಾ ದಸರಾ, ಜಾನಪದ ದಸರಾ, ಮಕ್ಕಳ ದಸರಾ, ಯುವ ದಸರಾ ಕಾರ್ಯಕ್ರಮಗಳಲ್ಲಿ ನಾಡಿನ ವಿವಿಧ ಮಠಾಧೀಶರು, …

Read More »