Breaking News

ಜಿಲ್ಲೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ.

ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲಾರ, ಚನ್ನಪಟ್ಟಣ ಬೃಹತ್​​ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಮೈಸೂರಿಗೆ ತೆರಳಿ ಮೆಗಾ ರೋಡ್​​ ಶೋ ನಡೆಸಲಿದ್ದಾರೆ. ಕೋಲಾರ/ಮೈಸೂರು: ರಾಜ್ಯದಲ್ಲಿ ಚುನಾವಣೆಯ ಕಾವು‌ ದಿನೇ ದಿನೇ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳ ಪರ ಮತಯಾಚನೆ‌ ಮಾಡಲು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಲಗ್ಗೆಯಿಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ. …

Read More »

ಅತೀ ಹೆಚ್ಚು ನೇಕಾರರನ್ನು ಹೊಂದಿರುವ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಗೆಲುವಿನ ಹಾರ ಯಾರ ಕೊರಳಿಗೆ

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಅಖಾಡ ಸಿದ್ಧಗೊಂಡಿದೆ. ಸದ್ಯ ಬಿಜೆಪಿ ಹಿಡಿತದಲ್ಲಿರುವ ಈ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್​, ಜೆಡಿಎಸ್ ಮತ್ತು ಎಂಇಎಸ್​​ ಸಹ ಪೈಪೋಟಿ ನಡೆಸಿದ್ದು, ಗೆಲುವಿನ ಹಾರ ಯಾರ ಕೊರಳಿಗೆ ಎಂಬುದು ಕುತೂಹಲ ಮೂಡಿಸಿದೆ. ಬೆಳಗಾವಿ: ಕೈಗಾರಿಕೋದ್ಯಮದ ಶಕ್ತಿ ಕೇಂದ್ರ, ಅತೀ ಹೆಚ್ಚು ನೇಕಾರರನ್ನು ಹೊಂದಿರುವ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಕಪಿಲೇಶ್ವರ ಮಂದಿರ ಇರುವ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಅಖಾಡ ಸಿದ್ಧಗೊಂಡಿದ್ದು, ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ …

Read More »

ಕಾಂಗ್ರೆಸ್​ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಿಯಾಂಕಾ ಗಾಂಧಿ ರೋಡ್​ ಶೋ

ಕಾಂಗ್ರೆಸ್​ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಿಯಾಂಕಾ ಗಾಂಧಿ ರೋಡ್​ ಶೋ ನಡೆಸಿ ಮತಯಾಚನೆ ಮಾಡಿದರು. ಹುಬ್ಬಳ್ಳಿ: ಕಾಂಗ್ರೆಸ್​ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಕುಂದಗೋಳದಲ್ಲಿ ರೋಡ್​ ಶೋ ನಡೆಸಿ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಚಾರ ನಡೆಸಿದರು. ಹೆಲಿಕಾಪ್ಟರ್ ಮೂಲಕ ಕುಂದಗೋಳಕ್ಕೆ ಆಗಮಿಸಿದ ಪ್ರಿಯಾಂಕಾ ಗಾಂಧಿ ನೇರವಾಗಿ ಹೆಲಿಪ್ಯಾಡ್ ಸುತ್ತುವರಿದಿದ್ದ ಜನರತ್ತ ಹೋಗಿ ಕೈ ಕುಲುಕಿದರು. ನಂತರ ಪ್ರಚಾರದ ವಾಹನ ಏರಿದ ಅವರು ಹುಬ್ಬಳ್ಳಿ – ಲಕ್ಷ್ಮೇಶ್ವರ ರಾಜ್ಯ …

Read More »

ಕರ್ನಾಟಕ ಸೇರಿದಂತೆ ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.

‘ಆಡಳಿತಾರೂಢ ಬಿಜೆಪಿ ಯಾವ ವಿಚಾರ ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ಬರೀ ಭಾವನಾತ್ಮಕ ವಿಚಾರ ಇಟ್ಟುಕೊಂಡು, ಧರ್ಮಾಧಾರಿತ ರಾಜಕಾರಣವನ್ನು ಬಿಜೆಪಿ ಮಾಡುತ್ತಿದ್ದು, ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿಲ್ಲ” ಎಂದು ವಿಧಾನ ಪರಿಷತ್ ಎಚ್. ವಿಶ್ವನಾಥ್ ಗರಂ ಆದರು.  ವಿಧಾನ ಪರಿಷತ್ ಎಚ್. ವಿಶ್ವನಾಥ್ ಮಾತನಾಡಿದರು. ಮೈಸೂರು: ”ಪದೇ ಪದೆ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರೇ, ನೀವು ರಾಜ್ಯಕ್ಕೆ ನೀಡಿರುವ ಕೊಡುಗೆಯಾದರು ಏನು? ಲಜ್ಜೆಗೆಟ್ಟ ಕರ್ನಾಟಕದ ಬಿಜೆಪಿಯನ್ನು ಮೊದಲು ಸರಿಮಾಡಿ. …

Read More »

ರಾಮದುರ್ಗದಲ್ಲಿ ಕುಣಿಯುತ್ತಿದೆ ಕುರುಡು ಕಾಂಚಾಣ,ಸ್ವಾಭಿಮಾನದ ಗೆಲುವು ಪಡೆಯಬೇಕು ಎಂಬ ಮಾತು ರಾಮದುರ್ಗ ಕ್ಷೇತ್ರದಲ್ಲಿ  ಕೇಳಿ ಬರುತ್ತಿದೆ.

“ರಾಮದುರ್ಗದಲ್ಲಿ ಹಗಲಿರುಳು ಸೇವೆ ಮಾಡಿದ್ದ ಮಹಾದೇವಪ್ಪ ಯಾದವಾಡ ಇದ್ದರು. ಜಿಲ್ಲೆಯಲ್ಲೇ ಸಂಘಟನೆ ಮೂಲಕ ಯುವ ನಾಯಕ ರಮೇಶ್ ದೇಶಪಾಂಡೆ ಇದ್ದರು. ಕಾರ್ಯಕರ್ತರ ಜೊತೆ ಒಳ್ಳೆಯ ಸಂಪರ್ಕ ಇಟ್ಟುಕೊಂಡಿದ್ದ ಮಲ್ಲಣ್ಣ ಯಾದವಾಡ ಇದ್ದರು. ಮಹಿಳಾ ಶಕ್ತಿ ಮೂಲಕ ಸಂಘಟನೆ ಮಾಡಿದ್ದ ರೇಖಾ ಚಿನ್ನಾಕಟ್ಟಿ ಇದ್ದರು‌. ಪಂಚಮಸಾಲಿ ಸಮುದಾಯದ ಗಟ್ಟಿ ಧ್ವನಿಯಾದ ಪಿ.ಎಫ್ ಪಾಟೀಲ್ ಹಾಗೂ ವಿಜಯ್ ಗುಡದಾರಿ ಇದ್ದರು.” ರಾಮದುರ್ಗ : ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಅವರಿಗೆ ಈ ಬಾರಿ ಟಿಕೆಟ್ …

Read More »

ನಿಪ್ಪಾಣಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಚಿವೆ ಶಶಿಕಲಾ ಅ ಜೊಲ್ಲೆ ಬಿರುಸಿನ ಪ್ರಚಾರ

ನಿಪ್ಪಾಣಿ ಮತಕ್ಷೇತ್ರದ ಮಾಂಗುರ, ಕುನ್ನುರ, ನಾಂಗನುರ, ಸೌಂದಲಗಾ, ಆಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಅವರು ಮಾತನಾಡಿದರು, ಕಳೆದ ಎರಡು ಬಾರಿ ಶಾಸಕಿಯಾಗಿ ಆಯ್ಕೆ ಮಾಡುವ ಮೂಲಕ ಕ್ಷೇತ್ರದಲ್ಲಿ ಆಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಸದಾವಕಾಶ ನೀಡಿದ್ದೀರಿ. ನಾನು ಕ್ಷೇತ್ರದ ಮತದಾರರು ನನ್ನ ಮೇಲಿಟ್ಟ ಭರವಸೆಯನ್ನು ಉಳಿಸಿಕೊಂಡಿದ್ದೇನೆ. ಕಳೆದ 10 ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ.ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದು, ಕ್ಷೇತ್ರದ …

Read More »

ಹಲವು ವರ್ಷಗಳಿಂದಲೂ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗವನ್ನು ಉಳಿಸಿಕೊಳ್ಳುವುದೇ ಜೆಡಿಎಸ್​ಗೆ ದೊಡ್ಡ ಸವಾಲಾಗಿದೆ.

ಹಲವು ವರ್ಷಗಳಿಂದಲೂ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗವನ್ನು ಉಳಿಸಿಕೊಳ್ಳುವುದೇ ಜೆಡಿಎಸ್​ಗೆ ದೊಡ್ಡ ಸವಾಲಾಗಿದೆ.ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಕಳೆದ ಬಾರಿ ಜೆಡಿಎಸ್​ ಭರ್ಜರಿ ಗೆಲುವು ಗಳಿಸಿತ್ತು. ಆದರೆ, ಈ ಬಾರಿ ಜೆಡಿಎಸ್​ಗೆ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಪ್ರಬಲ ಪೈಪೋಟಿ ಎದುರಾಗಿದೆ.ಹಾಗಾಗಿ ಭದ್ರಕೋಟೆ ಉಳಿಸಿಕೊಳ್ಳುವುದು ಜೆಡಿಎಸ್​ಗೆ ಸವಾಲಾಗಿದೆ ಎಂದೇ ಹೇಳಬಹುದು. ಹೆಚ್​ಡಿ ದೇವೇಗೌಡ ಹಾಗೂ ಹೆಚ್​ಡಿ ಕುಮಾರಸ್ವಾಮಿ ಅವರು ಮತದಾರರನ್ನು ಸೆಳೆಯುವ ಪ್ರಮುಖ ನಾಯಕರು. ಆದ್ರೆ ದೇವೇಗೌಡರಿಗೆ ಆರೋಗ್ಯ ಸಮಸ್ಯೆ ಇರುವುದರಿಂದ …

Read More »

ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ: ಅಭ್ಯರ್ಥಿಗಳ ಪರ ಮತಬೇಟೆ

ಕಲಬುರಗಿ ಹಾಗೂ ಯಾದಗಿರಿಯಲ್ಲಿ ಸಿಎಂ ಬೊಮ್ಮಾಯಿ ಶುಕ್ರವಾರ ಅದ್ಧೂರಿ ರೋಡ್ ಶೋ ನಡೆಸಿದರು. ಅಭ್ಯರ್ಥಿಗಳಾದ ತೆಲ್ಕೂರ ಹಾಗೂ ಅಮೀನರೆಡ್ಡಿ ಪರವಾಗಿ ಮತಯಾಚನೆ ಮಾಡಿದರು.ಕಲಬುರಗಿ/ಯಾದಗಿರಿ: ‘ಮೋದಿ ಎಂದರೆ ವಿಷವನ್ನು ನುಂಗಿ ಇಡೀ ದೇಶದ ಹಿತ ಬಯಸುವ ನೀಲಕಂಠನಿದ್ದಂತೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಶುಕ್ರವಾರ ಸೇಡಂ ಪಟ್ಟಣದಲ್ಲಿ ಅಭ್ಯರ್ಥಿ ರಾಜಕುಮಾರ್​ ಪಾಟೀಲ್ ತೆಲ್ಕೂರ ಪರವಾಗಿ ಬೃಹತ್ ರೋಡ್ ಶೋ ಮೂಲಕ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕರ …

Read More »

ಡಿಕೆಶಿ ಭದ್ರಕೋಟೆಯಲ್ಲಿ ತ್ರಿಕೋನ ಸ್ಪರ್ಧೆ!

ರಾಮನಗರದ ಕನಕಪುರದಲ್ಲಿ ಈ ಬಾರಿ ಘಟಾನುಘಟಿ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದು, ಅವರ ಕುರಿತಾದ ಸಂಪೂರ್ಣ ಸ್ಟೋರಿ ಇಲ್ಲಿದೆ ನೋಡಿ.. ದಶಕಗಳಿಂದ ವಿರೋಧಿಗಳಿಲ್ಲದೇ ಪಾರುಪತ್ಯ ಸಾಧಿಸಿದ್ದ ಡಿಕೆಶಿಗೆ ಟಕ್ಕರ್ ಕೊಡಲು ಬಿಜೆಪಿಯಿಂದ ಸಚಿವ ಆರ್.ಅಶೋಕ್ ಕಣದಲ್ಲಿದ್ದಾರೆ. ಹಾಗೆಯೇ ಸ್ಥಳೀಯ ಜೆಡಿಎಸ್​ ಅಭ್ಯರ್ಥಿಯಾದ ನಾಗರಾಜ್ ಸಂಪ್ರದಾಯಿಕ ಮತಗಳನ್ನು ಸೆಳೆದರೇ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟರೂ ಅಚ್ಚರಿ ಪಡಬೇಕಿಲ್ಲ. ಕನಕಪುರ ಬಂಡೆ ಸೋಲಿಸಲು ಬಿಜೆಪಿ ರಣತಂತ್ರ: ಈ ಬಾರಿ ಕನಕಪುರ ಕ್ಷೇತ್ರದಲ್ಲಿ ಡಿ.ಕೆ ಶಿವಕುಮಾರ್ ಅವರು …

Read More »

ಗದಗ ಬಿಜೆಪಿ ಸಮಾವೇಶ , ಕೂಲ್‌ ಡ್ರಿಂಕ್ಸ್‌ ತಂದವ ಕಕ್ಕಾಬಿಕ್ಕಿ : ಫ್ರೀ.. ಫ್ರೀ..ಎಂದು ಮುಗಿಬಿದ್ದ ಜನ, ವ್ಯಾಪಾರಿ ಕಣ್ಣೀರು

ಗದಗ: ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿ ಜನರು ಬೇಸಿಗೆಯ ಬಿಸಿಲಿಗೆ ಬಾಯಾರಿಕೆಯಿಂದ ತತ್ತರಿಸಿಹೋಗಿದ್ದರು, ಕೂಲ್‌ ಡ್ರಿಂಕ್ಸ್‌ ವ್ಯಾನ್ ಕಂಡು ಮುಗಿಬಿದ್ದು ಕೊಂಡೊಯ್ದ ಘಟನೆ ನಡೆದಿದೆ.   ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಆದ್ರೆ ಕಾರ್ಯಕ್ರಮಕ್ಕೆ ಬಂದ ಜನರಿಗೆ ಆಯೋಜಕರು ನೀರಿನ ವ್ಯವಸ್ಥೆ ಮಾಡದ ಕಾರಣದಿಂದಾಗಿ ಜನರು ಬೇಸಿಗೆಯ ಬಿಸಿಲಿನಿಂದ ನೀರು ಕುಡಿಯದೇ …

Read More »