Breaking News

ಜಿಲ್ಲೆ

ಬೆಳಗಾವಿ ನಗರದ ಕ್ಲಬ್ ರೋಡ್ ನಲ್ಲಿರುವ ಸಿಪಿಇಡಿ ಗ್ರೌಂಡ್‌ನಲ್ಲಿ17ರಂದು ಅಪ್ಪು ಜನ್ಮದಿನೋತ್ಸವ

ಬೆಳಗಾವಿ: ಡಾ. ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಮಾರ್ಚ್ 17ರಂದು  ‘ಅಪ್ಪು ಜನ್ಮದಿನೋತ್ಸವ’  ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ಕ್ಲಬ್ ರೋಡ್ ನಲ್ಲಿರುವ ಸಿಪಿಇಡಿ ಗ್ರೌಂಡ್‌ನಲ್ಲಿ ಅದ್ಧೂರಿ ಸಮಾರಂಭವನ್ನು ಅಪ್ಪು ಅಭಿಮಾನಿ ಬಳಗ ಅಯೋಜಿಸಿದೆ. ಅಂದು ಸಂಜೆ 4.30ರಿಂದ ಕಾರ್ಯಕ್ರಮಗಳು ಆರಂಭವಾಗಲಿದ್ದು, ಈ ಶುಭ ಸಂದರ್ಭದಲ್ಲಿ ಮಮತ ಕ್ರಿಯೇಷನ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಪರ್ಯಾಯ ಕನ್ನಡ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗುವುದು ಎಂದು ಅಪ್ಪು ಜನ್ಮದಿನೋತ್ಸವ ದ ಸಂಘಟಕ …

Read More »

ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು:B.S.Y.

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೋ ಒಂದೆರಡು ಸಂದರ್ಭದಲ್ಲಿ ಹೇಳಿಕೆ ನೀಡಿರುವುದನ್ನು ನಾವು ಅಪರಾಧ ಎಂದು ಪರಿಗಣಿಸುವುದಿಲ್ಲ. ನಮ್ಮ ಮಧ್ಯದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಸ್ಪಷ್ಟಪಡಿಸಿದರು. ವಿಜಯೇಂದ್ರ ಹಾಗೂ ರಾಜ್ಯದ ಯಾವುದೇ ಬಿಜೆಪಿ ಶಾಸಕರ ಟಿಕೆಟ್‌ ನಿರ್ಧಾರವನ್ನು ಚುನಾವಣಾ ಸಮಿತಿ ಮಾಡುತ್ತದೆ. ನಾವು ಕೇವಲ ಸಲಹೆ ಕೊಡಬಹುದು. ಅಂತಿಮ …

Read More »

ಮಾ.20ರಂದುಬೆಳಗಾವಿಗೆ ಆಗಮಿಸಲಿದ್ದಾರೆ ರಾಹುಲ್ ಗಾಂಧಿ

ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾ.20ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದಿನಾಂಕ 16-03-2023 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬೆಳಗಾವಿ ವಿಭಾಗದ ಕಾಂಗ್ರೆಸ್ ಮುಖಂಡರುಗಳ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಈ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಚಿಕ್ಕೋಡಿ, ಬೆಳಗಾವಿ …

Read More »

ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು – ಪೊಲೀಸರ ಮಧ್ಯೆ ವಾಗ್ವಾದ; ಪಿಎಸ್‌ಐ ಕಾಲರ್ ಎಳೆದು ಹಲ್ಲೆ ಮಾಡಿದ ಶಾಸಕರ ಪುತ್ರ

ರಾಯಚೂರು: ಸಿಂಧನೂರಿನಲ್ಲಿ ನಿರ್ಮಾಣವಾಗಿರುವ ನೂತನ ರಂಗಮಂದಿರಕ್ಕೆ ಪುನೀತ್​ ರಾಜ್​​ಕುಮಾರ್ ಹೆಸರಿಡುವ ವಿಚಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ತಳ್ಳಾಟ ನಡೆದಿದ್ದು, ಪಿಎಸ್‌ಐ ಮಣಿಕಂಠ ಥಳಿತಕ್ಕೊಳಗಾಗಿದ್ದಾರೆ.   ಸಿಂಧನೂರು ನಗರದ ಸುಕಾಲಪೇಟೆ ರಸ್ತೆಯಲ್ಲಿ ನೂತನ ರಂಗ ಮಂದಿರ ನಿರ್ಮಾಣವಾಗಿದ್ದು, ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ ನಾಡಗೌಡ ಪುನೀತ್ ರಾಜಕುಮಾರ್ …

Read More »

ಕಾಂಗ್ರೆಸ್‌ ತೆಕ್ಕೆಗೆ ‘ಆಪರೇಷನ್‌ ಕಮಲ’ ರೂವಾರಿ ಕದಲೂರು ಉದಯ್‌ಗೌಡ

ಬೆಂಗಳೂರು: ‘ಆಪರೇಷನ್‌ ಕಮಲ’ದ ಮೂಲಕ ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ‌ ಉದ್ಯಮಿ, ಮದ್ದೂರು ವಿಧಾನಸಭೆ ಕ್ಷೇತ್ರದ ಮುಖಂಡ ಕದಲೂರು ಉದಯ್‌ಗೌಡ ಅವರು ತಮ್ಮ ಬೆಂಬಲಿಗರ ಜೊತೆ ಸೋಮವಾರ ಕಾಂಗ್ರೆಸ್‌ ಸೇರಿದರು.   ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ ಮುಖಂಡರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಅವರು ಉದಯ್ ಗೌಡ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್‌, ‘ಉದಯ್ ಯಾವುದೇ ಷರತ್ತು ಇಲ್ಲದೆ ಪಕ್ಷ …

Read More »

ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಲಾಗಿರುವ ತಂಡಗಳು ಕಾರ್ಯೋನ್ಮುಖರಾಗಿ ಚುರುಕಿನಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮಾ.13) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಈಗಾಗಲೇ ನಿಯೋಜಿಸಲಾಗಿರುವ ತಂಡಗಳು ಪ್ರತಿಯೊಂದು ವಾಹನಗಳ ಮೇಲೆ ನಿಗಾ ವಹಿಸಬೇಕು. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ …

Read More »

ವಿಜಯಪುರದ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ವಿಜಯಪುರ:ನಗರದ ಐತಿಹಾಸಿಕ ಸ್ಮಾರಕ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಿಜಯಪುರದ ಚಂದಾಬಾವಡಿ ನಿವಾಸಿ ಖಾಜಾ ನದಾಫ್ ಮೃತಪಟ್ಟಿರುವ ವ್ಯಕ್ತಿ.   ಖಾಜಾ ನದಾಫ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನಗರದ ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »

2023 : ಪಕ್ಷ, ನಾಯಕರ ಮೇಲೆ ಬಿಎಸ್‌ವೈ ಪ್ರಭಾವವನ್ನು ತಗ್ಗಿಸಲು ಬಿಜೆಪಿ ಹೈಕಮಾಂಡ್‌ ಬಿಗ್‌ ಪ್ಲ್ಯಾನ್‌?

ಬೆಂಗಳೂರು, ಮಾರ್ಚ್‌ 13: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭಾರತೀಯ ಜನತಾ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಲಿಂಗಾಯತ ಪ್ರಬಲ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರಭಾವವನ್ನು ಮಿತಿಗೊಳಿಸಲು ಕೇಂದ್ರ ನಾಯಕತ್ವದ ಕ್ರಮವಾಗಿದೆ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ತಿಳಿದಿರುವ ನಾಯಕರೊಬ್ಬರು ಇದನ್ನು ‘ಹಿಂದೂಸ್ತಾನ್‌ ಟೈಮ್ಸ್‌’ಗೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅನುಭವಿ ರಾಜಕಾರಣಿ ಯಡಿಯೂರಪ್ಪ ಅವರು …

Read More »

ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಯುವತಿಯ ದೇಹ ಸಿಕ್ಕ ಪ್ರಕರಣ; ಆಕೆಯ ಪ್ರಿಯಕರನ ಬಂಧನದಿಂದ ಬಯಲಾಯ್ತು ಹತ್ಯೆಗೆ ಕಾರಣ.

ಬಾಗಲಕೋಟೆ: ಯುವತಿ ದೇಹದ ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಸಿಕ್ಕ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಮಹತ್ವದ ತಿರುವು ಲಭಿಸಿತದ್ದು, ಅನ್ಯರ ಜೊತೆಗೆ ಸಂಬಂಧ ಇದೆ ಎಂಬ ಸಂಶಯದಿಂದ ಆಕೆಯೆ ಪ್ರಿಯಕರನೇ ಕೊಲೆ ಮಾಡಿರುವುದು ಬಯಲಾಗಿದೆ. 18ರ ಹರೆಯದ ಚೈತ್ರಾ ಹೋಳಿ ಕೊಲೆಯಾದ ದುರ್ದೈವಿ. ಆರೋಪಿ ಮುತ್ತಪ್ಪ ಆಸಂಗಿ(26) ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ. ಕೊಲೆಯಾದ ಚೈತ್ರಾ ಹೋಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಆರೋಪಿ …

Read More »

ಚೀನಾದಲ್ಲಿ ನೀವು ಆಡಿದ್ದ ಮಾತುಗಳು ಭಾರತಕ್ಕೆ ಮಾಡಿದ ಅಪಮಾನವಲ್ಲವೇ? ಮೋದಿಗೆ ಖರ್ಗೆ

ಬೆಂಗಳೂರು: ಲಂಡನ್‌ ಭಾಷಣದ ವೇಳೆ ರಾಹುಲ್‌ ಗಾಂಧಿ ಅವರು ಭಾರತ ಮತ್ತು ಪ್ರಜಾಪ್ರಭುತ್ವದ ಅಪಮಾನ ಮಾಡಿದ್ದಾರೆ ಎಂದು ಆರೋಪಿಸುತ್ತಿರುವ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಮಾಡುವ ಮೊದಲು ಮೊದಲು ‘ಸತ್ಯದ ಕನ್ನಡಿ’ ನೋಡಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.   ಚೀನಾ ಮತ್ತು ದಕ್ಷಿಣ ಕೊರಿಯಾಗಳಲ್ಲಿ ಮೋದಿ ಅವರು ಆಡಿದ್ದ ಮಾತುಗಳನ್ನು ಮುನ್ನೆಲೆಗೆ ತಂದಿರುವ ಖರ್ಗೆ, ನೀವು ಮಾಡಿದ್ದು ಅಪಮಾನ ಅಲ್ಲವೇ ಎಂದು ಪ್ರಶ್ನೆ …

Read More »