Breaking News

ಜಿಲ್ಲೆ

ಮೋದಿಯವರ ರೋಡ್ ಶೋ ಗೆ ಐತಿಹಾಸಿಕ ನಗರ ಬೆಳಗಾವಿ ಸಾಕ್ಷಿಯಾಗಲಿದೆ; ಪ್ರಧಾನಿ ನರೇಂದ್ರ ಮೋದಿ ಅವರ ಬೆಳಗಾವಿ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಮೊಟ್ಟ ಮೊದಲ ಬಾರಿಗೆ ಮೋದಿಯವರ ರೋಡ್ ಶೋ ಗೆ ಐತಿಹಾಸಿಕ ನಗರ ಬೆಳಗಾವಿ ಸಾಕ್ಷಿಯಾಗಲಿದೆ. ಬೆಳಗ್ಗೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ನೆರವೇರಿಸುವ ಮೋದಿ ಅಲ್ಲಿಂದ 2.30ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎಪಿಎಂಸಿ ಮೈದಾನಕ್ಕೆ ಆಗಮಿಸುವರು. ಅಲ್ಲಿಂದ ಕಾರ್ಯಕ್ರಮ ನಡೆಯಲಿರುವ ಮಾಲಿನಿ ಸಿಟಿವರೆಗೆ 10 ಕಿಮೀ ರೋಡ್ ಶೋ ನಡೆಯಲಿದೆ. ಎಂಪಿಎಂಸಿ …

Read More »

ಯಮಕನಮರಡಿ ಮತಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಸೇರ್ಪಡೆ: ಸತೀಶ್‌ ಜಾರಕಿಹೊಳಿ

ಗೋಕಾಕ: 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಯಮಕನಮರಡಿ ಮತಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವುದು ಖುಷಿ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಕುರಣಿ, ಖಲಕಂಬಾ ಗ್ರಾಮದ 200ಕ್ಕೂ ಹೆಚ್ಚು ಯುವಕರನ್ನು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸರ್ವರ ಸರ್ವತೋಮುಖ ಪ್ರಗತಿ ಸಾಧ್ಯವಿದೆ ಎಂದು ತಿಳಿಸಿದರು. 2023ರಲ್ಲಿ ಕಾಂಗ್ರೆಸ್‌ ಪಕ್ಷವನ್ನು …

Read More »

ಮಿಸ್ಟರ್ ಸವದಿ ಕಾಂಗ್ರೆಸ್ ಕಾರ್ಯಕರ್ತರ ಸುದ್ದಿಗೆ ಬರಬೇಡಿ: ಮಾಜಿ ಸಚಿವೆ ಉಮಾಶ್ರೀ ಕಿಡಿ

ರಬಕವಿ-ಬನಹಟ್ಟಿ: ಮಿಸ್ಟರ್ ಸಿದ್ದು ಸವದಿ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ನಾಯಕರ ಸುದ್ದಿಗೆ ಬಂದರೆ, ಪ್ರಕರಣ ದಾಖಲೆ ಮಾಡಿದರೆ ಅವರ ಭಾವನೆಗಳಿಗೆ ಉರಿ ಹಚ್ಚಿದರೆ ಇಡೀ ತೇರದಾಳ ಕಾಂಗ್ರೆಸ್ ಹೊತ್ತಿ ಉರಿಯುತ್ತಿದೆ ಎಚ್ಚರವಿರಲಿ ಎಂದು ಮಾಜಿ ಸಚಿವೆ ಉಮಾಶ್ರೀ ಬಿಜೆಪಿ ಶಾಸಕ ಸಿದ್ದು ಸವದಿಯವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.   ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಶಾಸಕ ಸಿದ್ದು ಸವದಿಯವರು ಧಾರವಾಡ, ಬೆಳಗಾವಿ, ರಾಮದುರ್ಗ ಸೇರಿದಂತೆ …

Read More »

ಪಂಚಮಹಾಭೂತ ಲೋಕೋತ್ಸವದಲ್ಲಿ ಮಹಿಳೆಯರ ದಂಡು

ಚಿಕ್ಕೋಡಿ: ಕಣ್ಣು ಹಾಯಿಸಿದಷ್ಟು ಜನ ಜಂಗುಳಿ, ಎಲ್ಲಿ ನೋಡಿದರಲ್ಲಿ ವಾಹನಗಳ ಸಾಲು, ಕರ್ನಾಟಕ-ಮಹಾರಾಷ್ಟ್ರ ಬಾಂಧವ್ಯದ ಜೊತೆಗೆಯೇ ಇಡೀ ಭಾರತದ ಸಂತರು, ತಜ್ಞರು ಸಮಾಗಮದಲ್ಲಿ ಮಹಿಳೆಯರದ್ದೇ ಸಿಂಹಪಾಲು. ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದಲ್ಲಿ ಹಮ್ಮಿಕೊಂಡಿರುವ ಬೃಹತ್‌ ಪಂಚಮಹಾಭೂತ ಲೋಕೋತ್ಸವದಲ್ಲಿ ಶುಕ್ರವಾರ ನಡೆದ ಮಹಿಳಾ ಲೋಕೋತ್ಸವದಲ್ಲಿ ಕಂಡು ಬಂದ ಚಿತ್ರಣವಿದು. ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಲಕ್ಷಾಂತರ ಮಹಿಳೆಯರು ಕನೇರಿ ಮಠದತ್ತ …

Read More »

ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ.; 18 ಚಿನ್ನದ ಪಡೆದ ವಿದ್ಯಾರ್ಥಿಗೆ ಶಿಕ್ಷಕನಾಗುವ ಆಸೆ

ಬೆಳಗಾವಿ: ಬೆಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ 18 ಚಿನ್ನದ ಪದಕ ಪಡೆದಿರುವ ಮುರಳಿ ಎಸ್‌. ಮುಂದೆ ತಮ್ಮ ಜೀವನದ ಏಕೈಕ ಗುರಿ ಬೋಧಕ ವೃತ್ತಿ ಮಾಡಬೇಕು ಎಂದುಕೊಂಡಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವದಲ್ಲಿ ಚಿನ್ನದ ಹುಡುಗನಾಗಿ ಹೊರಹೊಮ್ಮಿದ್ದಾರೆ. ಎಂಜಿನಿಯರಿಂಗ್‌ ಮುಗಿಯುತ್ತಿದ್ದಂತೆ ಪಿಎಚ್‌. ಡಿಗಾಗಿ ಮುರಳಿ ತಯಾರಿ ನಡೆಸಿದ್ದಾರೆ. ನಂತರದಲ್ಲಿ ಬೋಧಕ ವೃತ್ತಿ ಮಾಡಬೇಕು ಎಂದುಕೊಂಡಿದ್ದಾರೆ. ಇಷ್ಟೊಂದು ಚಿನ್ನದ ಪದಕ ಪಡೆದಿದ್ದು ಖುಷಿ ಆಗಿದೆ. ಕಷ್ಟಪಟ್ಟು ಶ್ರಮವಹಿಸಿ …

Read More »

ಬೆಳಗಾವಿಯಲ್ಲಿ ಫೆ. 27ರಂದು 8 ಕಿ.ಮೀ ರೋಡ್‌ ಶೋ ನಡೆಸಲಿರುವ ಪ್ರಧಾನಿ ಮೋದಿ

ಬೆಳಗಾವಿ: ‘ನಗರದಲ್ಲಿ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು 8 ಕಿ.ಮೀ.ವರೆಗೆ ರೋಡ್‌ ಶೋ ನಡೆಸಲಿದ್ದಾರೆ. ಇದನ್ನು ನೋಡಲು 3 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.   ‘ಅಂದು ಮಧ್ಯಾಹ್ನ 1ರ ಸುಮಾರಿಗೆ ‍ಪ್ರಧಾನಿ ನಗರಕ್ಕೆ ಆಗಮಿಸಲಿದ್ದಾರೆ. ಜಿಲ್ಲೆಯ ಜನ ಮೋದಿ ಅವರನ್ನು ನೋಡಲು ಕಾತರರಾಗಿದ್ದಾರೆ. ಅವರೊಂದಿಗೆ ಹೆಜ್ಜೆ ಹಾಕಲಿದ್ದಾರೆ. ವಿಶಾಲವಾದ ರಸ್ತೆಗಳಲ್ಲಿ ಇದೊಂದು ಐತಿಹಾಸಿಕ ರೋಡ್‌ …

Read More »

ಸಿದ್ದರಾಮಯ್ಯಗೆ ಒಂದು ಮತವನ್ನೂ ಹಾಕಲ್ಲ; ಇಡೀ ಗ್ರಾಮದಿಂದ ವರ್ತೂರು ಪ್ರಕಾಶ್‌ಗೆ ಭರವಸೆ

ಕೋಲಾರ: ತಾಲೂಕಿನ ವೇಮಗಲ್‌ ಹೋಬಳಿಯ ಕುರುಬರಹಳ್ಳಿ ಗ್ರಾಮಕ್ಕೆ ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದ್ದ ಬೆನ್ನಲ್ಲಿಯೇ ಗ್ರಾಮಸ್ಥರು ವರ್ತೂರು ಪ್ರಕಾಶ್‌ ಅವರನ್ನು ಆಹ್ವಾನಿಸಿ ಸಿದ್ದರಾಮಯ್ಯರಿಗೆ ಒಂದು ಮತವನ್ನೂ ಹಾಕುವುದಿಲ್ಲ ಎಂದು ಭರವಸೆ ನೀಡಿರುವ ಕುತೂಹಲ ಸಂಗತಿ ನಡೆದಿದೆ. ಕುರುಬರಹಳ್ಳಿ ಗ್ರಾಮಸ್ಥರು ಸಾಮೂಹಿಕವಾಗಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ಅವರನ್ನು ಗ್ರಾಮಕ್ಕೆ ಕರೆಯಿಸಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಿ ಸನ್ಮಾನಿಸಿ, ನಮ್ಮ ಗ್ರಾಮದಿಂದ ಒಂದು ಮತ ಕೂಡ ಸಿದ್ಧರಾಮಯ್ಯನವರಿಗೆ …

Read More »

ತಡವಾಗಿ ಬಂದ ವೈದ್ಯರು; ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ಕೊಟ್ಟ ಮಹಿಳೆ

ವಿಜಯಪುರ: ಬೆಳಗ್ಗೆ ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಮಹಿಳೆ ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿ ನರಳಾಡುತ್ತಿದ್ದ ಘಟನೆ ವಿಜಯಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಹೆರಿಗೆಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆ ಮಹಿಳೆ ವಿಜಯಪುರ ತಾಲೂಕಿನ ನಾಗಠಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆಗೆ ಬಂದಿದ್ದಾರೆ. ಬೆಳಗ್ಗೆಯೇ ಆಸ್ಪತ್ರೆಗೆ ಬಂದಿದ್ದು ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಹೊರಗಡೆಯೇ ಹೆರಿಗೆಯಾಗಿದೆ. ಅರ್ಧ ಗಂಟೆಯಾದರೂ ಶಿಶುವಿನ ಹುರಿ ಕಟ್ ಮಾಡದ …

Read More »

ಬೆಳಗಾವಿ: ಪ್ರಧಾನಿ ಮೋದಿ ಆಗಮನಕ್ಕೆ ವಾಹನ ನೀಡಲು ಅಧಿಕಾರಿಗಳ ನಿರಾಕರಣೆ!

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಫೆ. 27ರಂದು ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಿಷ್ಟಾಚಾರದ ಕರ್ತವ್ಯಕ್ಕಾಗಿ ಸರ್ಕಾರಿ ಇಲಾಖೆಯ ವಾಹನಗಳು ಅಗತ್ಯ ಇವೆ. ಆದರೆ ಸಂಬಂಧಿಸಿದ ಇಲಾಖೆಯಿಂದ ವಾಹನಗಳನ್ನು ಬಿಡುಗಡೆ ಮಾಡಲು ಅಧಿಕಾರಿಗಳು ನಿರಾಸಕ್ತಿ ತೋರುತ್ತಿದ್ದಾರೆ.   ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ 70ಕ್ಕೂ ಹೆಚ್ಚು ಇನ್ನೋವಾ ಹಾಗೂ ಸುಮೋ, ಬೊಲೆರೋ ಸೇರಿದಂತೆ ಇತರೆ ವಾಹನಗಳ ಅಗತ್ಯವಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಡಾ. ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಆದರೆ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾ ರೋಹಣ ಕಾರ್ಯಕ್ರಮ

ಹಿರೆನಂದಿ: ಸಂತೋಷ್ ಜಾರಕಿಹೊಳಿ ಅವರ ನೇತೃತ್ವದ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ, ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗಿ, ಹಾಗೂ ಜೊತೆಗೆ ಸೂರ್ಯ ಶ್ರೇಷ್ಠ ಜಾರಕಿಹೊಳಿ ಸಣ್ಣ ಸಾಹುಕಾರರು ಶ್ರೀಮತಿ ಜಯಶ್ರೀ ರಮೇಶ್ ಜಾರಕಿಹೊಳಿ, ಹಾಗೂ ಜಯಶ್ರೀ ನಾಯಿಕ ಈ ಒಂದು ಸಮಾರಂಭಕ್ಕೆ ಹಾಜರ್ ಇದ್ದರೂ ಹೌದು ತಮ್ಮ ಫ್ಯಾಕ್ಟರಿ ಆವರಣ ದಲ್ಲಿ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಅಧ್ಬ್ಬೂತ …

Read More »