ಬೆಳಗಾವಿ: ತನ್ನ ಮಗನನ್ನು ಕೊಂದಿದ್ದಾರೆಂದು ತಪ್ಪು ತಿಳಿದು ವ್ಯಕ್ತಿಯೊಬ್ಬನ ಕುತ್ತಿಗೆಗೆ ಇರಿದು ಕೊಲೆ ಮಾಡಲು ಯತ್ನಿಸಿದ್ದ ಮಹಿಳೆಗೆ ಬೆಳಗಾವಿಯ 9ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಮೂಲತಃ ಬೆಳಗಾವಿ ತಾಲೂಕಿನ ಸೋನಟ್ಟಿಯ ಹಾಲಿ ಕಾಕತಿ ಲಕ್ಷ್ಮೀ ನಗರ ನಿವಾಸಿ ಈರವ್ವಾ ಸಿದ್ದಪ್ಪ ಮುಚ್ಚಂಡಿ ಶಿಕ್ಷೆಗೀಡಾದ ಆರೋಪಿ ಮಹಿಳೆ. ಆರೋಪಿಯ ಪುತ್ರ 2017ರಲ್ಲಿ …
Read More »14 ತಿಂಗಳ ಮಗುವಿನ ನೇತ್ರದಾನ: ಮಗನ ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ರಾಯಚೂರು ದಂಪತಿ
ರಾಯಚೂರು: 14 ತಿಂಗಳ ಮಗು ಸಾವಿನಲ್ಲೂ ಸಾರ್ಥಕತೆ ಮೆರೆದಿದೆ. ಮಗನನ್ನು ಕಳೆದುಕೊಂಡ ನೋವಲ್ಲೂ ಆತನ ಕಣ್ಣುಗಳನ್ನು ದಾನ ಮಾಡಿ ಹಲವರ ಬದುಕಿಗೆ ಬೆಳಕು ನೀಡಿ ಮಾನವೀಯತೆ ಮರೆದಿದ್ದಾರೆ. ಇಂತಹ ಮನಕಲಕುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ. ಗೆಜ್ಜಲಗಟ್ಟಾ ಗ್ರಾಮದ ನಿವಾಸಿ, ಗಣಿ ಕಂಪನಿ ನೌಕರ ಅಮರೇಗೌಡ ಕಾಮರೆಡ್ಡಿ ಮತ್ತು ವಾಣಿ ದಂಪತಿಯು ತಮ್ಮ ಮೂರನೇ ಪುತ್ರ 14 ತಿಂಗಳ ಬಸವಪ್ರಭುವಿನ ಎರಡೂ ಕಣ್ಣುಗಳನ್ನು ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿಗೆ ದಾನ …
Read More »ಹಾವೇರಿ: ಸಾಹಿತ್ಯ ಜಾತ್ರೆಯಲ್ಲಿ ವಸ್ತ್ರ ವೈಭವ, ಕೈಮಗ್ಗದ ವಸ್ತ್ರಗಳಿಗೆ ಬೇಡಿಕೆ
ಹಾವೇರಿ: ಇಳಕಲ್ ಸೀರೆ, ಕೈಮಗ್ಗದ ವಸ್ತ್ರಗಳು, ಕನ್ನಡ ಅಂಗಿಗಳು, ಖಾದಿ ಬಟ್ಟೆಗಳಿಗೆ ಭಾರಿ ಬೇಡಿಕೆ ವ್ಯಕ್ತವಾಯಿತು. ಸಾಹಿತ್ಯ ಜಾತ್ರೆಯ ಕೊನೆಯ ದಿನ ಭಾನುವಾರ ವಸ್ತ್ರ ವೈಭೋಗ ಗರಿಗೆದರಿತ್ತು. ನಗರದ ಹೊರವಲಯದಲ್ಲಿ ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆವರಣದ ವಾಣಿಜ್ಯ ಮಳಿಗೆಗಳಲ್ಲಿ ಬಟ್ಟೆ ಮಳಿಗೆಗಳದ್ದೇ ಕಾರುಬಾರು. ಸೀರೆಗೆ ಮುಗಿಬಿದ್ದ ನಾರಿಯರು: ನೇಕಾರರು ನೇಯ್ದ ಇಳಕಲ್ ಸೀರೆಗಳನ್ನು ಕೊಳ್ಳಲು ನೀರೆಯರು ಮುಗಿಬಿದ್ದರು. ಕಸೂತಿ, ಚದುರಂಗ, ರಾಗಾವಳಿ, ಕರಿಚಂದ್ರಕಾಳಿ, ಪ್ಲೇನ್ ಮತ್ತು …
Read More »ಕಾನೂನಾತ್ಮಕ ಅನುಮತಿ ಪಡೆದು ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ನಿರ್ಮಾಣ: ಕವಟಗಿಮಠ
ಚಿಕ್ಕೋಡಿ: ಚಿಕ್ಕೋಡಿ ನಗರದಲ್ಲಿ ನಿರ್ಮಾಣವಾಗುತ್ತಿರುವ ಕಿತ್ತೂರ ರಾಣಿ ಚೆನ್ನಮ್ಮ ಪುತ್ಥಳಿ ನಿರ್ಮಾಣಕ್ಕೆ ಕೆಲವು ರಾಜಕೀಯ ಹಿತಾಸಕ್ತಿಗಳು ವಿರೋಧ ಮಾಡುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ. ಪುತ್ಥಳಿ ನಿರ್ಮಾಣಕ್ಕೆ ಬೇಕಾದ ಅನುಮತಿ ಕುರಿತು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ ಯಾರು ದೃತಿಗೆಡಬಾರದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು. ಚಿಕ್ಕೋಡಿ ನಗರದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಪುತ್ಥಳಿ ನಿರ್ಮಾಣದ ತಡೆಯಾಜ್ಞೆ ಹಿನ್ನಲ್ಲೆಯಲ್ಲಿ ಪುರಸಭೆ ಮುಂಭಾಗದಲ್ಲಿ …
Read More »ಕೋಕಿತ್ಕರ್ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಶನಿವಾರ ರಾತ್ರಿ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಣಕಾಸಿನ ವ್ಯವಹಾರವೇ ಈ ಪ್ರಕರಣಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಪತ್ರಕರ್ತರಿಗೆ ಪ್ರಕರಣದ ಕುರಿತು ಮಾಹಿತಿ ನೀಡಿದರು. 20, 07-01-2023 ರಂದು ಸಾಯಂಕಾಲ ಸುಮಾರು 7 ರಿಂದ 07.30 ಗಂಟೆಗೆ ಹಿಂದೂ ಸಂಘಟನೆಯ ಜಿಲ್ಲಾ ಮುಖಂಡರಾದ ರವಿ ಕೋಕಿತಕರ ಇವರಿಗೆ ಹಿಂಡಲಗಾದಲ್ಲಿರುವ ತಮ್ಮ …
Read More »ಶ್ರೀ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ಬೃಹತ್ ಕೃಷಿ ಮೇಳ ಕಾರ್ಯಕ್ರಮಕೆ
ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಶ್ರೀ ಕೆರಿ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ರವಿವಾರ ದಿ 15 ರಿಂದ 19 ರವರೆಗೆ ಬೃಹತ್ ಕೃಷಿ ಮೇಳ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕೃಷಿ ಮಳಿಗೆ ನಿರ್ಮಿಸಲು ಅಡಿಗಲ್ ಪೂಜೆ ಸಿದ್ದೇಶ್ವರ ದೇವರ ಜಾತ್ರಾ ಕಮಿಟಿ ಉಪಾಧ್ಯಕ್ಷ ರಾಜುಗೌಡ ಪಾಟೀಲ್ ಇವರು ನೆರವೇರಿಸಿ ಚಾಲನೆ ನೀಡಿದರು. ಬುದುವಾರ ರಂದು ಐನಾಪುರದಲ್ಲಿ ಕೃಷಿ ಮೇಳದ 150 ಮಳಿಗೆಳು ನಿರ್ಮಿಸುವ ಕಾಮಗಾರಿಗೆ ಚಾಲನೆ ನೀಡಲಾಯಿತು. ಕರ್ನಾಟಕ ಹಾಗೂ …
Read More »ಶೀರಾಮಸೇನಾ ಅಧ್ಯಕ್ಷನ ಮೇಲೆ ಗುಂಡೇಟು
ಬೆಳಗಾವಿ: ಹಿಂಡಲಗಾ ಗ್ರಾಮದಲ್ಲಿ ಹಿಂದೂ ರಾಷ್ಟ್ರ ಸೇನಾ ಹಾಗೂ ಶ್ರೀರಾಮಸೇನಾ ಅಧ್ಯಕ್ಷ ರವಿ ಕೋಕಿತಕರ ಹಾಗೂ ಕಾರು ಚಾಲಕನ ಮೇಲೆ ಶನಿವಾರ ರಾತ್ರಿ ನಡೆದ ಫೈರಿಂಗ್ ಗೆ ಸಂಬಂಧಿಸಿದಂತೆ ನಾಲ್ಕು ತಂಡಗಳನ್ನು ರಚಿಸಿ ನಗರದೆಲ್ಲೆಡೆ ನಾಕಾಬಂಧಿ ಹಾಕಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ. ಬೋರಲಿಂಗಯ್ಯ ತಿಳಿಸಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ನಗರದಿಂದ ಸ್ಕಾರ್ಪಿಯೋ ವಾಹನದಲ್ಲಿ ನಾಲ್ಕು ಜನರೊಂದಿಗೆ ರವಿ ಕೋಕಿತಕರ ಅವರು ತಮ್ಮ ಸ್ವಂತ …
Read More »1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.
ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಅರಭಾವಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ಮಠದ …
Read More »ಪೋಷಕರು ಮಾಡಿದ ಸಾಲಕ್ಕೆ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ
ಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ (Assault on boy) ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೂಸೂರಿನಲ್ಲಿ ಡಿಸೆಂಬರ್ನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಕನಕರಾಯಪ್ಪ, ರಾಜೇಶ್ವರಿ ಸೇರಿ 6 ಜನರು, 14 ವರ್ಷದ ಬಾಲಕನನ್ನು ಗಿಡಕ್ಕೆ ಕಟ್ಟಿ ಥಳಿಸಿದ್ದಾರೆ. ಬಾಲಕನ ಮೈಮೇಲೆ ಹಾಗೂ ಗುಪ್ತಾಂಗಕ್ಕೂ ಗಾಯವಾಗಿದೆ. ಕನಕರಾಯಪ್ಪ ಎಂಬುವರು ಮಂಜುಳಾ ಮಡಿವಾಳ ಎಂಬುವರಿಗೆ …
Read More »ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟು ಕೊಡಬಾರದು: ಬಿಎಸ್ವೈ
ಹಾವೇರಿ : ನಗರ ಪ್ರದೇಶಗಳಲ್ಲಿ ಕನ್ನಡ ಮಾತನಾಡಲು ಹಿಂಜರಿಯುವ ಸ್ಥಿತಿ ಆತಂಕಕಾರಿ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟುಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿ ಅವರು ಮಾತನಾಡಿ, ಕನ್ನಡದ ನೆಲ, ಜಲ, ಗಡಿ ವಿಚಾರದಲ್ಲಿ ಸರ್ಕಾರ ಎಂದೂ ಉದಾಸೀನ ಮಾಡುವುದಿಲ್ಲ. ಕನ್ನಡ ಕೇವಲ ಭಾಷೆಯಲ್ಲ. ಅದು …
Read More »
Laxmi News 24×7