Breaking News

ಜಿಲ್ಲೆ

ಕೊರೆಯುವ ಚಳಿಗೆ ವೃದ್ಧ ಬಲಿ

ಕೊರೆಯುವ ಚಳಿಗೆ ವೃದ್ಧ ಬಲಿಯಾಗಿರುವ ಘಟನೆ ಸಂಭವಿಸಿದೆ. ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಿಂದ ವಿಜಯಪುರ ಜಿ. ಮುದ್ದೇಬಿಹಾಳ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಭೀಮಪ್ಪ ಹಾದಿಮನಿ (75) ಎಂ ವೃದ್ಧ ಸಾವನ್ನಪ್ಪಿದ್ದಾನೆ. ಪಟ್ಟಣದ ನೇತಾಜಿ ನಗರ ನಿವಾಸಿಯಾಗಿರುವ ಭೀಮಪ್ಪ ನವರತ್ನ ಬಾರ್ ಎದುರು ವೃದ್ಧನ ಶವ ಪತ್ತೆಯಾಗಿದೆ. ಕೈ ಮುಷ್ಟಿ ಮಾಡಿ ಹಿಡಿದು ಬೊರಲು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ನಮಸ್ಕಾರ್ ರೀ. ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ.. ಎಂದು ಮಾತನಾಡುತ್ತಲೇ ಬೆಳಗ್ಗೆ ಸರಿಯಾಗಿ 11 ಗಂಟೆಗೆ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಿದ ಎಸ್ಪಿ ಡಾ. ಸಂಜೀವ ಪಾಟೀಲ್

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ನೇತೃತ್ವದಲ್ಲಿ ಜಿಲ್ಲೆಯ ಜನರ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಎರಡನೇ ಹಾಗೂ ಕೊನೆಯ ಶನಿವಾರದಂದು ನಡೆಸುತ್ತಿರುವ ಫೋನ್ ಇನ್ ಮೂರನೇ ಕಾರ್ಯಕ್ರಮದಲ್ಲಿಯೂ ಜನರು ಸಮಸ್ಯೆ ಹೇಳಿಕೊಂಡರು. ಇದಕ್ಕೆ ಎಸ್ಪಿ ಸ್ಪಂದನೆ ಮಾಡಿದ್ದಕ್ಕೆ ಜನರು ಕೃತಜ್ಞತೆ ತಿಳಿಸಿದರು. ನಮಸ್ಕಾರ್ ರೀ. ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ.. ಎಂದು ಮಾತನಾಡುತ್ತಲೇ ಬೆಳಗ್ಗೆ ಸರಿಯಾಗಿ 11 ಗಂಟೆಗೆ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಿದ ಎಸ್ಪಿ …

Read More »

ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಾಮ ದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ  ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ ಶ್ರೀ ಪಾಂಡುರಂಗ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ …

Read More »

ಬೆಳಗಾವಿಯಲ್ಲಿ ದೇಶದ ಮೊದಲ ಸೆನ್ಸಾರ್‌ ಕಸದ ತೊಟ್ಟಿ! ವಿಶೇಷತೆ ಏನು?

ಬೆಳಗಾವಿ: ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಪರಿಸರ ಹಾಳಾಗುತ್ತಿರುವುದನ್ನು ತಡೆಯಲು ಶಾಸಕ ಅಭಯ ಪಾಟೀಲ್‌ ಅವರು ದೇಶದಲ್ಲೇ ಮೊದಲ ಸೆನ್ಸಾರ್‌ ತಂತ್ರಜ್ಞಾನ ಆಧಾರಿತ ಭೂಗತ ಕಸದ ತೊಟ್ಟಿಗಳನ್ನು ಬೆಳಗಾವಿಯ ತಮ್ಮ ಕ್ಷೇತ್ರದಲ್ಲಿ ಅಳವಡಿಸಿದ್ದಾರೆ.   ಬೆಳಗಾವಿ ಮಹಾನಗರ ಪಾಲಿಕೆಯ ದಕ್ಷಿಣ ಮತ ಕ್ಷೇತ್ರದ ಎಲ್ಲ ವಾರ್ಡ್‌ಗಳಲ್ಲಿ ಅಂಡರ್‌ ಗ್ರೌಂಡ್‌ ಡಸ್ಟ್‌ಬಿನ್‌ (ಭೂಗತ ಕಸದ ತೊಟ್ಟಿ)ಯನ್ನು ಅಳವಡಿಸಿದ್ದಾರೆ. ಒಟ್ಟು 24 ಕಸದ ತೊಟ್ಟಿಗಳಿಗೆ ಆರ್ಡರ್‌ ಮಾಡಲಾಗಿದ್ದು, 18 ತೊಟ್ಟಿ ಗಳು ಕಾರ್ಯ ನಿರ್ವಹಿಸುತ್ತಿವೆ. ಸಂಪೂರ್ಣ …

Read More »

ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಪುನರಾರಂಭ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವೆ ಬಂದ್ ಆಗಿದ್ದ ಸಾರಿಗೆ ಬಸ್ ಸಂಚಾರ ಇಂದಿನಿಂದ ಪುನರಾರಂಭವಾಗಿದೆ. ಕರ್ನಾಟಕದ ಬೆಳಗಾವಿ ಗಡಿ ಹಾಗೂ ಪುಣೆಯಲ್ಲಿ ಮಹಾರಾಷ್ಟ್ರ ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶ, ಎರಡೂ ರಾಜ್ಯಗಳ ಬಸ್, ಕಾರು ಸೇರಿದಂತೆ ವಾಹನಗಳ ಮೇಲೆ ಕಲ್ಲು ತೂರಾಟ, ಮಸಿ ಬಳಿದ ಪ್ರಕರಣಗಳ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಮಹಾರಾಷ್ಟ್ರ ಹಾಗೂ ಬೆಳಗಾವಿ ನಡುವಿನ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.   ಬಸ್ ಗಳಿಲ್ಲದೇ …

Read More »

ಸತ್ತು ಹೋಗಿರುವ M.E.S.ಗೆ ಮರು ಜೀವ ತುಂಬಲು ಮರಾಠಿ ಪುಂಡರಿಗೆ ಪುಷ್ಟಿ ಕೊಡಲಾಗುತ್ತಿದೆ: ಲಕ್ಷ್ಮಣ ಸವದಿ

ಸತ್ತು ಹೋಗಿರುವ ಎಮ್.ಇ.ಎಸ್ ಗೆ ಮರು ಜೀವ ತುಂಬಲು ಮರಾಠಿ ಪುಂಡರಿಗೆ ಪುಷ್ಟಿ ಕೊಡಲಾಗುತ್ತಿದೆ ಎಂದು ಮಾಜಿ ಉಪ ಮುಖ್ಯ ಮಂತ್ರಿ , ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ರಾಜಕೀಯ ಲಾಭಕ್ಕಾಗಿ ಗಡಿ ವಿವಾದವನ್ನು ಬಳಸಿಕೊಳ್ಳಲಾಗುತ್ತಿದೆ ಎಂದ ಅವರು ಈಗಾಗಲೇ ಗಡಿ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ‌. ಮರಾಠ ಸಮಾಜ ಭಾರತೀಯ ಜನತಾ ಪಕ್ಷದ …

Read More »

ಫಲಕದಲ್ಲಿ ಕಾಮಗಾರಿ ಸಿಸಿ ರಸ್ತೆ ಮಾಯ ಕಳಪೆ ಚರಂಡಿ ಕಾಮಗಾರಿ ಪಂಚಾಯತರಾಜ ಇಂಜಿನಿಯರಿಂಗನ ಬ್ರಹ್ಮಾಂಡ ಭ್ರಷ್ಟಾಚಾರ

ಬೆಳಗಾವಿ: ಫಲಕದಲ್ಲಿ ಕಾಮಗಾರಿ ಸಿಸಿ ರಸ್ತೆ ಮಾಯ ಕಳಪೆ ಚರಂಡಿ ಕಾಮಗಾರಿ ಪಂಚಾಯತರಾಜ ಇಂಜಿನಿಯರಿಂಗನ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಗಾವಿ ನಗರದ ಕಂಗ್ರಾಳಿ ಕೆ ಎಚ್ ಗ್ರಾಮ ಪಂಚಾಯತ ವ್ಯಾಪ್ತಿಯ ವಾರ್ಡ ನಂಬರ್ 12 ರ ಆಶ್ರಯ ಕಾಲೋನಿ ಸಾರಥಿ ನಗರದಲ್ಲಿ ಕಳಪೆ ಚರಂಡಿ ಕಾಮಗಾರಿ ಮಾಡಿದ್ದು ಬಿಟ್ಟರೆ ಬೇರೆ ಯಾವೂದೇ ಸಿಸಿ ರಸ್ತೆ ಮಾಡದೆ ಕಾಮಗಾರಿ ನಡೆಯದೆ ನಿನ್ನೇ ತಡರಾತ್ರಿ ರಾತ್ರೊ ರಾತ್ರಿ ಈ ಬೋರ್ಡು ಹಾಕಿ ಬಿಲ್ ತೆಗೆದುಕೊಳ್ಳಲು …

Read More »

ಗಡಿ ವಿವಾದ: ಬಸ್ ಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಧನ್ಯವಾದ ಹೇಳಿಕೆ ಮಹಾರಾಷ್ಟ್ರ ಸಾರಿಗೆ ಸಂಸ್ಥೆ

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೂ ಬಸ್ ಹಾಗೂ ವಾಹನಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್ಟಿಸಿ)ಯು ಧನ್ಯವಾದಗಳನ್ನು ತಿಳಿಸಿದೆ. ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೂ ಬಸ್ ಹಾಗೂ ವಾಹನಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್ಟಿಸಿ)ಯು ಧನ್ಯವಾದಗಳನ್ನು ತಿಳಿಸಿದೆ. ಬೆಳಗಾವಿಯ ಸವದತ್ತಿ ಯಲ್ಲಮ್ಮನ …

Read More »

ಕನ್ನಡ ತೇರೆಳೆಯಲು ಗಡಿಯ ಭೋಜ ಗ್ರಾಮ ಸಜ್ಜಾಗುತ್ತಿದೆ

ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ಶಾಂತಿಸಾಗರ ” ಸ್ಮಾರಕ ಸಭಾಮಂಟಪದಲ್ಲಿ ನಿಪ್ಪಾಣಿ ತಾಲೂಕು 3ನೇ ಕನ್ನಡ ಸಾಹಿತ್ಯಸಮ್ಮೇಳನ ಡಿ.11ರಂದು ನಡೆಯಲಿದ್ದು ಸಕಲಸಿದ್ಧತೆಗಳು ನಡೆದಿವೆ. ”ಗಡಿಭಾಗದ ಬಹುತೇಕ ಹಳ್ಳಿಗಳ ದಾನಿಗಳು ಕನ್ನಡ ಸಮ್ಮೇಳನ ಯಶಸ್ವಿಗೊಳಿಸಲು ಜೋಡಿಸಿದ್ದು ಅತ್ಯಂತ ಅದ್ಧೂರಿಯಿಂದ ಸಮ್ಮೇಳನ ಜರುಗಲಿದೆ,” ಎಂದು ಕಸಾಪ ನಿಪ್ಪಾಣಿ ತಾಲೂಕಾಧ್ಯಕ್ಷ ಈರಣ್ಣಾ ಶಿರಗಾವಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ವೇಳೆ ಅವರು ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು. ಕಸಾಪ ಕಾರ್ಯದರ್ಶಿ ಹಾಗೂ ಶರಣ ಸಾಹಿತ್ಯ ಪರಿಷತ್‌ …

Read More »

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ! ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ ಆಸ್ಪತ್ರೆಯ …

Read More »