ಕರ್ನಾಟಕ ರತ್ನ, ಅಭಿಮಾನಿಗಳ ಪಾಲಿನ ಪ್ರೀತಿಯ ಅಪ್ಪು ಡಾ.ಪುನೀತ್ ರಾಜಕುಮಾರ ಇಂದಿಗೆ ಅಗಲಿ ಬರೊಬ್ಬರಿ ಒಂದು ವರ್ಷವಾಗಿದೆ. ಆ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪ್ಪು ಸಮಾಧಿ ಸೇರಿ ರಾಜ್ಯದ ಮೂಲೆ ಮೂಲೆಯಲ್ಲಿ ಮೊದಲ ವರ್ಷದ ಪುಣ್ಯಸ್ಮರಣೆ ಮಾಡಲಾಗುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಅರ್ಥಪೂರ್ಣವಾಗಿ ರಾಜರತ್ನನನ್ನು ನೆನೆಯಲಾಯಿತು. ಹೌದು ಅದು ಅಕ್ಟೋಬರ್ 29, 2021 ಶಿವರಾಜ್ಕುಮಾರ್ ನಟನೆಯ ಭಜರಂಗಿ 2 ರಿಲೀಸ್ ಆಗಿತ್ತು. ರಾಜ್ ಕುಟುಂಬದಲ್ಲಿ ಸಂಭ್ರಮದ ವಾತಾವರಣ ಇತ್ತು. ಪುನೀತ್ ರಾಜ್ಕುಮಾರ್ …
Read More »ಚಲಿಸುತ್ತಿದ್ದ ಕಾರ್ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕಾರು ಬ್ಲಾಸ್ಟ್
ಚಲಿಸುತ್ತಿದ್ದ ಕಾರ್ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕಾರು ಬ್ಲಾಸ್ಟ್ ಆಗಿರುವ ಘಟನೆ ಬೆಳಗಾವಿ ಚೋರ್ಲಾ ಘಾಟ್ ಬಳಿ ನಡೆದಿದೆ. ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಶನಿವಾರವ ಬೆಳಗಿನ ಜಾವ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕಾರಿಗೆ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಕಾರು ಧಗಧಗನೇ ಉರಿದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿ ಇದ್ದವರು ಕಾರಿನಿಂದ ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಯಾವುದೇ ಪ್ರಾಣ ಹಾನಿ ಆಗಲ್ಲ. ಖಾನಾಪುರ ಪೆÇಲೀಸ್ …
Read More »S.S.C.: ಮತ್ತೆ ಕನ್ನಡ ಕಡೆಗಣನೆ, ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಪರೀಕ್ಷೆ
ಬೆಂಗಳೂರು: ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಮತ್ತೊಮ್ಮೆ ಪ್ರಾದೇಶಿಕ ಭಾಷೆಗಳ ವಿರೋಧಿ ನೀತಿ ಅನುಸರಿಸಿದೆ. ಎಸ್ಎಸ್ಸಿ ನಡೆಸುವ ಪರೀಕ್ಷೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಕಡ್ಡಾಯಗೊಳಿಸಿರುವುದಕ್ಕೆ ಕನ್ನಡ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಎಸ್ಎಸ್ಸಿ ಧೋರಣೆಯಿಂದ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಸಂಘಟನೆ ಗಳ ಕಾರ್ಯಕರ್ತರು ಕಿಡಿಕಾರಿದ್ದಾರೆ. ಗಡಿ ಭದ್ರತಾ ಪಡೆ(ಬಿಎಸ್ಎಫ್), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್), …
Read More »ಜೀವಗಳು ಹೋಗುತ್ತಿದ್ದರು ಸ್ಥಳಕ್ಕೆ ಬಾರದ ಗೋವಿಂದ ಕಾರಜೋಳ ವರ್ತನೆಗೆ ನೆಟ್ಟಿಗರ ಆಕ್ರೋಶ
ರಾಮದುರ್ಗ (ಬೆಳಗಾವಿ ಜಿಲ್ಲೆ: ‘ಮುದೇನೂರು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ವಾಂತಿ ಭೇದಿ ಸಮಸ್ಯೆ ತಲೆದೋರಿದೆ. ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ದಿನದಿನಕ್ಕೆ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಜಿಲ್ಲಾಧಿಕಾರಿ ಆಗಲಿ ಸ್ಥಳಕ್ಕೆ ಬಂದಿಲ್ಲ. ನಮ್ಮ ಕಷ್ಟ ನೋಡಿಲ್ಲ’ ಎಂದು ಹಲವರು ಆಕ್ರೋಶ ಹೊರಹಾಕಿದರು. ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದಾಗ ಮಹಿಳೆಯರು ಸಂಕಷ್ಟ ತೋಡಿಕೊಂಡರು. ‘ಸಚಿವ ಗೋವಿಂದ ಕಾರಜೋಳ ಅವರು ಬಾಗಲಕೋಟೆಯಲ್ಲೇ ಇದ್ದಾರೆ. ಮುದೇನೀರಿಗೆ …
Read More »ಬಾಗಲಕೋಟೆ; ಕುಳಗೇರಿ ಬೀರಲಿಂಗೇಶ್ವರ ಜಾತ್ರೆಯ ವಿಶೇಷತೆ ಏನು?
ಬಾಗಲಕೋಟೆ, ಅಕ್ಟೋಬರ್, 28; ಕಳೆದ ಎರಡು ವರ್ಷಗಳಿಂದ ಜಾತ್ರೆಗಳಿಗೆ ಕೋವಿಡ್ ಕಂಟಕ ಎದುರಾಗಿತ್ತು. ಆದರೆ ಈ ಬಾರಿ ಮುಕ್ತ ಅವಕಾಶ ಸಿಕ್ಕಿದ್ದು, ಜಾತ್ರೆಗಳಿಗೆ ಮತ್ತೆ ಕಳೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಕುಳಗೇರಿ ಗ್ರಾಮದಲ್ಲಿ ನಡೆದ ಜಾತ್ರೆ ಎಲ್ಲರ ಗಮನ ಸೆಳೆಯಿತು. ಇಡೀ ಜಾತ್ರೆ ತುಂಬಾ ಭಂಡಾರದ ಓಕುಳಿ ಆಡಿ ಬೀರಲಿಂಗನ ಭಕ್ತರು ಸಂಭ್ರಮಿಸಿದರು. ಅದ್ದೂರಿಯಾಗಿ ನೆರವೇರುತ್ತಿರುವ ರಥೋತ್ಸವವನ್ನು ನೋಡುವುದಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಎಲ್ಲ ಕಡೆ ಭಂಡಾರಮಯ …
Read More »ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್ ಆಕ್ಟಿಂಗ್ : ಸಾಮಾಜಿಕ ಜಾಲತಾಣದಲ್ಲಿ ಟೀಕೆ
ಬೆಂಗಳೂರು: ನಿರೂಪಕಿ ಅನುಶ್ರೀ ಅವರ ನಿರೂಪಣೆ ಬಗ್ಗೆ ಸದಾ ಒಂದಲ್ಲ ಒಂದು ವಿವಾದ ಇದ್ದೇ ಇರುತ್ತದೆ. ನಿರೂಪಣೆ ಮಾಡೋದು ಬಿಟ್ಟು ಬಾಕಿ ಎಲ್ಲ ಮಾಡ್ತಾರೆ ಅನ್ನೋದು ಅನೇಕರ ಅಭಿಪ್ರಾಯ ಕೂಡ. ಟಿವಿ ಟಿಆರ್ಪಿಗಾಗಿ, ದುಡ್ಡಿಗಾಗಿ ಅನುಶ್ರೀ ನಡೆದುಕೊಳ್ಳುತ್ತಿದ್ದಾರೆ ಅಂತ ಅವರ ನಿರೂಪಣೆ ರೀತಿಯನ್ನು ಟೀಕೆ ಮಾಡುವವರು ಕೂಡ ಇದ್ದಾರೆ. ಈ ನಡುವೆ ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್ ಆಕ್ಟಿಂಗ್ ಮಾಡುತ್ತಿದ್ದಾರೆ ಅಂತ ಅನೇಕ ಮಂದಿ ಅನುಶ್ರೀಯವರ ನಡೆಯನ್ನು ಕಿಡಿಕಾರುತ್ತಿದ್ದಾರೆ. …
Read More »ನ.1ರಂದು ಪುನೀತ್ ಗೆ ಕರ್ನಾಟಕರತ್ನ ಪ್ರಶಸ್ತಿ; ರಜಿನಿಕಾಂತ್, ಜೂ.ಎನ್ಟಿಆರ್ ಭಾಗಿ: CMಘೋಷಣೆ
ಬೆಂಗಳೂರು: ಈ ಬಾರಿ ನವೆಂಬರ್ ಒಂದನೇ ತಾರೀಕು ದಿವಂಗತ ನಟ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನವೆಂಬರ್ ಒಂದರಂದು ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತೇವೆ. ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ …
Read More »ಡಿನಾಡು ಬೆಳಗಾವಿಯ ರಾಜ್ಯೋತ್ಸವ ಈಡೀ ರಾಜ್ಯದಲ್ಲೇ ಆಕರ್ಷಕ ಮತ್ತು ಭಿನ್ನ
ಗಡಿನಾಡು ಬೆಳಗಾವಿಯ ರಾಜ್ಯೋತ್ಸವ ಈಡೀ ರಾಜ್ಯದಲ್ಲೇ ಆಕರ್ಷಕ ಮತ್ತು ಭಿನ್ನವಾಗಿರುತ್ತದೆ. ಈ ಬಾರಿಯಂತೂ ಬೆಳಗಾವಿಯ ರಾಜ್ಯೋತ್ಸವ ಅದ್ಧೂರಿ-ಮಹಾ ಅದ್ಧೂರಿಯಾಗಿ ನಡೆಯಲಿದೆ. ೧೦ ಸಾವಿರ ಅಡಿಯ ಕನ್ನಡ ಬಾವುಟದ ಮೆರವಣಿಗೆ ನಡೆಸಿ ಲಂಡನ್ ಬುಕ್ ಆಫ್ ರೆಕಾರ್ಡ್ ನಿರ್ಮಿಸಲು ಹೊರಟಿರುವ ಕನ್ನಡದ ಕುವರರು ಯಾರು ಅನ್ನುವ ಕುರಿತು ಇಲ್ಲಿದೆ ಒಂದು ಸ್ಟೋರಿ. ಹಳದಿಗೆಂಪು ಬಾವುಟ ಹಿಡಿದು ನಲಿಯುತ್ತಿರುವ ಕನ್ನಡದ ಕುವರರು.. ನಾಡದೇವಿಯ ಜಾತ್ರೆಯ ದಿನ ಮೆರವಣಿಗೆಗೆ ಸಿದ್ಧವಾಗುತ್ತಿದ್ದೆ ಈ ಬೃಹತ್ ಬಾವುಟ. …
Read More »ರಾಷ್ಟ್ರ-ಅಂತರಾಷ್ಟ್ರದಲ್ಲಿ ಬೆಳಗಾವಿಯ ಕೀರ್ತಿಯನ್ನು ಹೆಚ್ಚಿಸಿ-ರಾಹುಲ ಜಾರಕಿಹೊಳಿ
ಬೆಳಗಾವಿಯನ್ನು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಆರ್ಥಿಕ ಸಹಾಯ, ಸಹಕಾರ ನೀಡಲಾಗುವುದು” ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ಕಾಕತಿ ಗ್ರಾಮದ ಹೆಮ್ಮೆಯ ಪುತ್ರ ಸಂಭಾಜಿ ಪರಮೋಜಿ ಮುಕ್ತ ರಾಷ್ಟ್ರೀಯ ನಾಗಾ ಕುಸ್ತಿ ಚಾಂಪಿಯನ್ಶಿಪ್ ಗೆ ಆಯ್ಕೆಯಾಗಿದ್ದು, ನಾಗಾಲ್ಯಾಂಡ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಇವರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ೨೫ ಸಾವಿರ ರೂ. ಆರ್ಥಿಕ ಸಹಾಯ ನೀಡಿ, ಸನ್ಮಾನಿಸಿ ಶುಭಹಾರೈಸಿದರು. ವಿದ್ಯಾರ್ಥಿಗಳ ಏಳಿಗೆಗಾಗಿ ಯಮಕನಮರಡಿ …
Read More »ಸರ್ಕಾರ ಆದೇಶಿಸಿದರೂ ಸರ್ಕಾರಿ ಸೌಲಭ್ಯಗಳನ್ನು ನೀಡದಿರುವ ಸರ್ಕಾರಿ ಸೌಲಭ್ಯ
ಕಾರ್ಮಿಕ ಕಾರ್ಡ್ ಮಾಡಿಕೊಂಡ ಕಾರ್ಮಿಕರಿಗೆ ಮತ್ತು ಅವರ ಮಕ್ಕಳಿಗೆ ಸರ್ಕಾರ ಆದೇಶಿಸಿದರೂ ಸರ್ಕಾರಿ ಸೌಲಭ್ಯಗಳನ್ನು ನೀಡದಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ಕಟ್ಟಡ ಕಾರ್ಮಿಕರು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯದೆದುರು ಪ್ರತಿಭಟನೆ ನಡೆಸಿದರು. ಶುಕ್ರವಾರದಂದು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಕಾರ್ಮಿಕ ಕಾರ್ಡ್ ಮಾಡಿಕೊಂಡ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳನ್ನು ನೀಡದಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಈ ವಿಷಯದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಕಟ್ಟಡ ನಿರ್ಮಾಣ …
Read More »
Laxmi News 24×7