ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ.ದಂಪತಿಗಳಿಬ್ಬರು ಕುರ್ಚಿಗಾಗಿ ಕಾದಾಟ ನಡೆಸಿದ್ದಾರೆ. ಹೌದು ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾವೇ ಶವೊಂದರಲ್ಲಿ ವೀಣಾ ಕಾಶಪ್ಪನವರು ಸಿದ್ದರಾಮಯ್ಯ ಬಳಿ ಬಂದು ಪಕ್ಕದ ಕುರ್ಚಿಯಲ್ಲೇ ಆಸೀನರಾದಂತಹ ಸಂದರ್ಭದಲ್ಲಿ ವಿಜಯಾನಂದ ಕಾಶಪ್ಪ ನವರು ಸಿದ್ದರಾಮಯ್ಯ ಬಳಿ ಬಂದು ವೀಣಾ ರವರನ್ನು ಬೇರೆಡೆ ಕೂರಿಸುವಂತೆ ಹೇಳುತ್ತಾರೆ. ಈ ಕಾರಣದಿಂದ ಸಿದ್ದರಾಮಯ್ಯ ವೀಣಾ ಕಾಶಪ್ಪರವರನ್ನು ಬೇರೆಡೆ ಆಸೀನರಾಗುವಂತೆ ಸಲಹೆ ನೀಡುತ್ತಾರೆ. ಇದೀಗ ವೇದಿಕೆ ಮೇಲೆಯೇ ನಡೆದ ದಂಪತಿಗಳ ಕುರ್ಚಿ ಕಾದಾಟ ಸದ್ದು …
Read More »ಯಾದಗಿರಿ ಮತ್ತು ಕಲಬುರಗಿಯ ಬಂಧಿತ ಪಿಎಫ್ಐ ನಾಯಕರನ್ನು ನ್ಯಾಯಾಂಗ ಬಂಧನ
ಯಾದಗಿರಿ/ಕಲಬುರಗಿ: ಯಾದಗಿರಿ ಮತ್ತು ಕಲಬುರಗಿಯಲ್ಲಿ ಇಂದು ಬೆಳಗ್ಗೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದ ಪಿಎಫ್ಐ ಮುಖಂಡರನ್ನು ನ್ಯಾಯಾಂಗ ವಶಕ್ಕೆ ನೀಡಲು ತಾಲೂಕು ದಂಡಾಧಿಕಾರಿಗಳು ಆದೇಶ ಹೋರಡಿಸಿದ್ದಾರೆ. ಕಲಬುರಗಿಯ ಇಕ್ಬಾಲ್ ಕಾಲೋನಿ ನಿವಾಸಿ ಮಜರ್ ಹುಸೇನ್ , ಮಿಲ್ಲತ್ ನಗರದ ಇಸಾಮೊದ್ದಿನ್ ಇಬ್ಬರ ಮನೆ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿ, ನಂತರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬಳಿಕ ಕಲಬುರಗಿ ತಾಲೂಕು ದಂಡಾಧಿಕಾರಿ ಪ್ರಕಾಶ ಕುದರಿ ಅವರ ಮುಂದೆ ಇಬ್ಬರನ್ನು …
Read More »ಹೆಂಡತಿ ಹೊಟ್ಟೆಗೆ ಚೂರಿ ಹಾಕಿದ ಗಂಡ: ಭಯಗೊಂಡು ಆತ್ಮಹತ್ಯೆಗೆ ಶರಣು
ಚಿಕ್ಕೋಡಿ (ಬೆಳಗಾವಿ): ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಂಡ – ಹೆಂಡತಿ ಜಗಳ ವಿಕೋಪಕ್ಕೆ ತಿರುಗಿದ್ದು, ಹೆಂಡತಿ ಹೊಟ್ಟೆಗೆ ಗಂಡ ಚೂರಿ ಹಾಕಿದ್ದಾನೆ. ಬಳಿಕ ಇದರಿಂದ ಭಯಗೊಂಡ ಆತ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಪ್ಪಲಗುದ್ದಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ನಿವಾಸಿ ಪ್ರಭು ರಾಮಪ್ಪ ಮೇತ್ರಿ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಪ್ರಭು ರಾಮಪ್ಪ ಮತ್ತು ಆತನ ಹೆಂಡತಿ ಪಾರ್ವತಿ ಮಧ್ಯೆ ಆಗಾಗ …
Read More »೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ*
ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ …
Read More »ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ಮೈಸೂರು: ನಾಡಹಬ್ಬ ದಸರಾದ ಪ್ರಧಾನ ಕವಿಗೋಷ್ಠಿಯ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರನ್ನು ಪ್ರಕಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಧಾನ ಕವಿಗೋಷ್ಟಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಲಿದ್ದು, ನಿಧನರಾದ ಆಕಾಶವಾಣಿ ನಿಲಯ ನಿರ್ದೇಶಕ ಜಿ.ಕೆ ರವೀಂದ್ರ ಕುಮಾರ್ ಅವರ ಹೆಸರು ಆಹ್ವಾನ ಪತ್ರಿಕೆಯಲ್ಲಿದೆ. ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಸೆನೆಟ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಕವಿಗೋಷ್ಠಿ ನಡೆಯಲಿದೆ. ಒಟ್ಟು 37 ಮಂದಿ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. …
Read More »ಬಾಗಲಕೋಟೆ: ಸಚಿವ ಮುರುಗೇಶ ನಿರಾಣಿ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ
ಬಾಗಲಕೋಟೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಮುಧೋಳದಲ್ಲಿ ಸಚಿವ ಮುರುಗೇಶ ನಿರಾಣಿಯವರ ನಿವಾಸಕ್ಕೆ ಭೇಟಿ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಜನ್ಮ ದಿನ ಕಾರ್ಯಕ್ರಮಕ್ಕೆ ಬಂದಿದ್ದ ಅವರು ನಿರಾಣಿ ಅವರ ನಿವಾಸದ ಬಳಿ ಇರುವ ಹೆಲಿಪ್ಯಾಡ್ ನಲ್ಲಿ ಇಳಿದಿದ್ದರು. ಕಾರ್ಯಕ್ರಮಕ್ಕೆ ತೆರಳುವ ಮುನ್ನ ನಿರಾಣಿ ಮನೆಗೆ ಹೋದರು. ಇದಕ್ಕೂ ಮುನ್ನ ಜಮಖಂಡಿಯಲ್ಲಿ ನಡೆದ ಸಿದ್ದು ನ್ಯಾಮಗೌಡರ …
Read More »ಅಜ್ಜನ ಜೊತೆ ಈಜು ಕಲಿಯಲು ಹೋಗಿದ್ದ ಬಾಲಕ ಬಾವಿಯಲ್ಲಿ ಮುಳುಗಿ ಸಾವು
ಬೆಳಗಾವಿ : ಅಜ್ಜನ ಜೊತೆ ಈಜು ಕಲಿಯಲು ಹೋಗಿದ್ದ ಬಾಲಕ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪೇಟೆಬಸವಣ್ಣ ಓಣಿಯ ಸಿದ್ಧಾರೂಢ ಮಂಜುನಾಥ ಗಾಣಗಿ (8) ಮೃತ ಬಾಲಕ. ಇಂದು ಬೆಳಗಿನ ಜಾವ ಅಜ್ಜನ ಜೊತೆಗೆ ಈಜು ಕಲಿಯಲು ಸಿದ್ಧಾರೂಢ ಹೋಗಿದ್ದನು. ಈ ವೇಳೆ, ಬೆನ್ನಿಗೆ ಪ್ಲಾಸ್ಟಿಕ್ ಡಬ್ಬಿ ಕಟ್ಟಿಕೊಂಡು ಬಾಲಕ ನೀರಿಗೆ ಇಳಿದಿದ್ದನು. ಆದರೆ, ಬಾವಿಯಲ್ಲಿ ಈಜುವಾಗಲೇ ಡಬ್ಬಿ ಕಳಚಿದ್ದರಿಂದ …
Read More »ಹಿಂದೂ-ಮುಸ್ಲಿಂರನ್ನು ಬೇರೆ ಮಾಡೋ ಕೆಲಸ ಎಸ್ ಡಿಪಿಐ- ಪಿಎಫ್ಐ ಮಾಡುತ್ತಿದ್ದವು: ಈಶ್ವರಪ್ಪ
ಶಿವಮೊಗ್ಗ: ರಾಷ್ಟ್ರದ್ರೋಹಿ ಚಟುವಟಿಕೆ ಮಾಡಿದ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಬಂಧನ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಹಿಂದೂ – ಮುಸ್ಲಿಂ- ಕ್ರೈಸ್ತರು ಒಟ್ಟಾಗಿ ಬಾಳಲು. ಎಸ್ ಡಿಪಿಐ ಮತ್ತು ಪಿಎಫ್ಐ ಹಿಂದೂ-ಮುಸ್ಲಿಂರನ್ನು ಬೇರೆ ಬೇರೆ ಮಾಡು ಕೆಲಸ ಮಾಡುತ್ತಿದ್ದರು. ಗೋಹತ್ಯೆ ಜೊತೆಗೆ ಹಿಂದೂ ಸಂಸ್ಕೃತಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದ್ದರು. …
Read More »ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು: BJP ರಾಜ್ಯಾಧ್ಯಕ್ಷರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
ಬಾಗಲಕೋಟೆ: ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಟೀಲ್ ಒಬ್ಬ ವಿದೂಷಕ, ಅವರಿಗೆ ಮೆಚ್ಯೂರಿಟಿ ಇಲ್ಲ ಎಂದು ಕಿಡಿಕಾರಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ನಾವು 40% ಕಮಿಷನ್ ಆರೋಪ ಮಾಡಿದ ಮೇಲೆ ಬಿಜೆಪಿಯವರು ಈಗ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿತ್ತು ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರ ಹೋಗಿ ಎಷ್ಟು …
Read More »7 ಜನ ಪಿಎಫ್ಐ ಮುಖಂಡರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಸಿಆರ್ಪಿಸಿ ಸೆಕ್ಷನ್ 110ರ ಅಡಿ ಪ್ರಕರಣ ದಾಖಲಾಗಿದ್ದು, ಹಿಂಡಲಗಾ ಜೈಲಿಗೆ
ಬೆಳಗಾವಿ: ನಗರದಲ್ಲಿ ಇಂದು ಬೆಳಗ್ಗೆ ವಶಕ್ಕೆ ಪಡೆಯಲಾದ 7 ಜನ ಪಿಎಫ್ಐ ಮುಖಂಡರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಸಿಆರ್ಪಿಸಿ ಸೆಕ್ಷನ್ 110ರ ಅಡಿ ಪ್ರಕರಣ ದಾಖಲಾಗಿದ್ದು, ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ. ಆಜಂ ನಗರದ ನಿವಾಸಿ ಪಿಎಫ್ಐ ಮಾಜಿ ಜಿಲ್ಲಾಧ್ಯಕ್ಷ ಝಕೀವುಲ್ಲಾ ಫೈಜಿ, ಅಸಾದ್ಖಾನ್ ಸೊಸೈಟಿ ನಿವಾಸಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಕಡೋಲಿ, ಶಿವಾಜಿ ನಗರದ ನಿವಾಸಿ ಸಲಾವುದ್ದೀನ್ ಖಿಲೆವಾಲೆ, ಅಸಾದ್ಖಾನ್ ನಿವಾಸಿ ಬದ್ರುದ್ದೀನ್ ಪಟೇಲ್, ಅಮನ್ ನಗರ ನಿವಾಸಿ ಸಮೀವುಲ್ಲಾ …
Read More »
Laxmi News 24×7