Breaking News

ಜಿಲ್ಲೆ

ದಸರಾ ವೈಭವ ಆರಂಭ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದ ರಾಷ್ಟ್ರಪತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸಿದ್ದು, ಬೆಳಿಗ್ಗೆ 9.45 ರಿಂದ‌10.05ರ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.   ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದ ರಾಷ್ಟ್ರಪತಿಗಳು ತಾಯಿಯ ದರ್ಶನ ಪಡೆದರು. …

Read More »

ಮಾರ್ಕಂಡೇಯ ಡ್ಯಾಮ್‍ಗೆ ಹೋಯ್ತು ಭೂಮಿ: ಈಗ ಊರು ಇಲ್ಲದೇ ಅತಂತ್ರ ಸ್ಥಿತಿಯಲ್ಲಿ ಪಣಗುತ್ತಿ ಸಂತ್ರಸ್ತರು..!

ಇವರೆಲ್ಲಾ ಮಾರ್ಕಂಡೇಯ ಡ್ಯಾಮ್ ಕಟ್ಟಲು ತಮ್ಮ ಇದ್ದ ಭೂಮಿಯನ್ನೇ ಬಿಟ್ಟು ಕೊಟ್ಟವರು. ಆದರೆ ಇಂದು ಸರಿಯಾದ ಸೂರು ಇಲ್ಲದೇ, ಊರು ಇಲ್ಲದೇ ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. ಇದರಿಂದ ರೊಚ್ಚಿಗೆದ್ದಿರುವ ಸಂತ್ರಸ್ತರು ಪುನರ್ವಸತಿ ಕಲ್ಪಿಸಿ ತಮ್ಮ ಗ್ರಾಮವನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಹೋರಾಟದ ಹಾದಿ ಹಿಡಿದಿದ್ದಾರೆ. ಮಾರ್ಕಂಡೇಯ ನದಿಯ ಹಿನ್ನಿರಿನಲ್ಲಿ 2002ರಲ್ಲಿ ಮುಳುಗಡೆ ಆಗಿರುವ ಬೆಳಗಾವಿ ತಾಲೂಕಿನ ಪಣಗುತ್ತಿ ಗ್ರಾಮದ ಜನರು ಅಂದು ಭೂಮಿ ಕಳೆದುಕೊಂಡಿದ್ದರು. ಇದೀಗ ಇಲ್ಲಿನ ಸಂತ್ರಸ್ತರು ಹೆಚ್ಚಿನ ಪ್ರಮಾಣದಲ್ಲಿ …

Read More »

ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ಹಾಲಿನ ಬೆಲೆ ಹೆಚ್ಚಳ ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ಬ್ರೇಕ್!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ನೆಮ್ಮದಿಯ ಸುದ್ದಿ ನೀಡಿದ್ದು, ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ.   ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.   ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ …

Read More »

ವಿಧಾನಸಭೆ ಬಳಿಕವೇ ತಾ.ಪಂ.-ಜಿ.ಪಂ ಚುನಾವಣೆ?

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆಯ ಚುನಾವಣೆಗೆ “ಉಪಾಂತ್ಯ’ ಎಂದೇ ಪರಿಗಣಿಸಲಾಗಿದ್ದ ತಾ.ಪಂ.- ಜಿ.ಪಂ. ಚುನಾ ವಣೆ ಗಳು 2023ರ ಮೇ ಒಳಗೆ ನಡೆಯವುದಕ್ಕೆ ಸಾಧ್ಯವೇ ಇಲ್ಲ. ರಾಜ್ಯ ಸರಕಾರದಲ್ಲಿನ ಈಗಿನ ಬೆಳ ವಣಿಗೆಗಳನ್ನು ಗಮನಿಸಿದರೆ ವಿಧಾನಸಭೆ ಚುನಾವಣೆ ಬಳಿಕವಷ್ಟೇ ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳು ನಡೆಯಲಿವೆ. ಒಂದು ಕಡೆ ಕ್ಷೇತ್ರಗಳ ಗಡಿ ನಿಗದಿಗೆ ಸೀಮಾ ನಿರ್ಣಯ ಆಯೋಗ ಇನ್ನೂ ಮೂರು ತಿಂಗಳು ಕಾಲಾವಕಾಶ ಕೇಳಿದೆ. ಇನ್ನೊಂದಡೆ ಕ್ಷೇತ್ರಗಳು ನಿಗದಿಯಾದ ಅನಂತರ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ …

Read More »

ರಾಜ್ಯ ಸರ್ಕಾರ’ದಿಂದ ಬಿಗ್ ಆರ್ಡರ್: ‘ಸರ್ಕಾರಿ ಕಚೇರಿ ಲಂಚ ಮುಕ್ತ’ಕ್ಕೆ ಖಡಕ್ ಕ್ರಮ

ಬೆಂಗಳೂರು: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ.     ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ …

Read More »

ವಿಜಯಪುರ: ಮಕ್ಕಳ ಕಳ್ಳರ ವದಂತಿ; ಮಹಿಳೆಯರು ಸೇರಿ ನಾಲ್ವರಿಗೆ ಸಾರ್ವಜನಿಕರಿಂದ ಥಳಿತ

ವಿಜಯಪುರ: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ.   ನಗರದ ಗ್ಯಾಂಗ್ ಬಾವಡಿ ಪರಿಸರದಲ್ಲಿ ಅಪರಿಚಿತ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಉತ್ತರ ಭಾರತದ ಶೈಲಿಯಲ್ಲಿ ಮಾತನಾಡಿದ್ದು, ಅನುಮಾನದ ಬಂದ ಸ್ಥಳೀಯರು, ಮಕ್ಕಳ ಕಳ್ಳರೆಂದು ಶಂಕಿಸಿ, ಸಾರ್ವಜನಿಕರ ಸಹಕಾರದಿಂದ ನಾಲ್ವರನ್ನೂ ಹಿಡಿದು ಥಳಿಸಿದ್ದಾರೆ. ನಗರಕ್ಕೆ ಉತ್ತರ ಭಾರತದಿಂದ …

Read More »

ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದು, ವೈದ್ಯರ ತಂಡ ಆರೈಕೆ ಮಾಡ್ತಿದೆ: ಎಸ್‍ಎಂಕೆ ಹೆಲ್ತ್ ಬುಲೆಟಿನ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (S.M Krishna) ಅವರು ಸದ್ಯ ಐಸಿಯು (ICU) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರ ತಂಡ ಆರೈಕೆ ಮಾಡುತ್ತಿದೆ ಎಂದು ಮಣಿಪಾಲ್‌ ಆಸ್ಪತ್ರೆಯಿಂದ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಲಾಗಿದೆ. ಶ್ವಾಸಕೋಶದ (Lungs) ಸೊಂಕಿನಿಂದ ಬಳಲುತ್ತಿರುವ ಎಸ್‍ಎಂಕೆಗೆ ಡಾ ಸತ್ಯನಾರಾಯಣ್ ಮತ್ತು ಡಾ ಸುನೀಲ್ ಕಾರಂತ್ ರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದು ವೈದ್ಯರ ತಂಡ ಆರೈಕೆ ಮಾಡ್ತಾ ಇದೆ. ಶ್ವಾಸಕೋಶದ ಒಳಗಡೆ ಆಕ್ಸಿಜನ್ …

Read More »

ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ

ಬೆಳಗಾವಿ: ಜಿಲ್ಲೆಯ ಬೆಳಗಾವಿ (Belgavi) ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (Lumpy Skin Disease) (ಲಂಪಿ ಸ್ಕಿನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷ್ಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ (ಸೊಳ್ಳೆ, ನೊಣ, ಉಣ್ಣೆ) ಇತ್ಯಾದಿಗಳಿಂದ ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ (Rainy Season) ಮತ್ತು ನಂತರದ ದಿನಗಳಲ್ಲಿ …

Read More »

ಉಮೇಶ್ ಕತ್ತಿ ನಿಧನ ಹಿನ್ನೆಲೆ ಅದ್ದೂರಿ ದಸರಾ ಆಚರಣೆ ಇಲ್ಲ : ಹುಕ್ಕೇರಿ ಹಿರೇಮಠ ಶ್ರೀ

ಚಿಕ್ಕೋಡಿ: ಹುಕ್ಕೇರಿ ಮತಕ್ಷೇತ್ರದ ಶಾಸಕ ಹಾಗೂ ಸಚಿವರಾಗಿದ್ದ ಉಮೇಶ್ ಕತ್ತಿ (Umesh Katthi) ಅವರು ಅಕಾಲಿಕ ನಿಧನರಾದ ಹಿನ್ನೆಲೆ ಹುಕ್ಕೇರಿ ಹಿರೇಮಠದ ದಸರಾ ಉತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಹುಕ್ಕೇರಿ ಹಿರೇಮಠದ (Hukkeri Hiremath) ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳು (Chandrasekhar Shivacharya Mahaswami) ತಿಳಿಸಿದರು. ಹುಕ್ಕೇರಿ ಹಿರೇಮಠದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು (Mysuru) ನಂತರದಲ್ಲಿ ಹುಕ್ಕೇರಿ ಹಿರೇಮಠ ದಸರಾ ಉತ್ಸವ ಉತ್ತರ ಕರ್ನಾಟಕ (UttarKarnataka) ಭಾಗದಲ್ಲಿ ಹೆಸರಾಗಿದೆ. …

Read More »

ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ*

  *ಗೋಕಾಕ :* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ …

Read More »