Breaking News

ಜಿಲ್ಲೆ

ಪಂಚಮಸಾಲಿ ಮೀಸಲಾತಿ ಬಗ್ಗೆ ಸದನದಲ್ಲಿ ಮತ್ತೆ ಪ್ರಸ್ತಾಪ ಮಾಡಿದ ಯತ್ನಾಳ್​​

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವ ಕುರಿತು ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಿದ ನಂತರ ಕಾನೂನು ಬದ್ದವಾಗಿ ಯಾರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಪಂಚಮಸಾಲಿ ಸಮುದಾಯ, ವಾಲ್ಮೀಕಿ ಸಮುದಾಯ, ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಅನೇಕ ಸಮುದಾಯಗಳು ಮೀಸಲಾತಿ ಹೆಚ್ಚಳದ ಬಗ್ಗೆ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಏನೇ ಕ್ರಮ ಕೈಗೊಂಡರೂ ಅದು ಕಾನೂನು ಬದ್ದವಾಗಿರಬೇಕು. ಹಾಗಾಗಿ ಯಾರಿಗೂ ಕೂಡ ಅನ್ಯಾಯವಾಗದಂತೆ ಕ್ರಮ …

Read More »

ಸಂಚಾರಿ ಪೊಲೀಸ್ ಎಂದು ಹೇಳಿಕೊಂಡು ದಂಡ ವಸೂಲಿ ಮಾಡುತ್ತಿದ್ದ ಅರಣ್ಯ ಅಧಿಕಾರಿಗೆ ಸಾರ್ವಜನಿಕರಿಂದ ಥಳಿತ

ಬಳ್ಳಾರಿ: ಬಳ್ಳಾರಿ ವಿಭಾಗದ ಅರಣ್ಯ ಅಧಿಕಾರಿಯೊಬ್ಬರು ರಾಜ್ಯ ಅರಣ್ಯ ಇಲಾಖೆಗೆ ಮುಜುಗರ ಉಂಟು ಮಾಡುವಂತೆ ಮಾಡಿದ್ದು, ತಾನು ಬಳ್ಳಾರಿ ಸಂಚಾರಿ ಪೋಲೀಸರಂತೆ ಪೋಸು ಕೊಟ್ಟು, ವಾಹನ ಸವಾರರಿಂದ ಹಣ ವಸೂಲಿ ಮಾಡಿದ್ದಕ್ಕೆ ಸಾರ್ವಜನಿಕರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.   ಪೊಲೀಸ್‌ ಅಧಿಕಾರಿಯ ಬಗ್ಗೆ ಅನುಮಾನಗೊಂಡ ಸಾರ್ವಜನಿಕರು, ಆರೋಪಿ ಉಪ ವಲಯ ಅರಣ್ಯಾಧಿಕಾರಿಯನ್ನು ಹಿಡಿದ ಥಳಿಸಿದ ಘಟನೆ ಸೋಮವಾರ ಬಳ್ಳಾರಿ ನಗರದಲ್ಲಿ ವರದಿಯಾಗಿದೆ. ಆರೋಪಿ ಅಧಿಕಾರಿ ಭಾನುವಾರ ‘ಡ್ಯೂಟಿ’ಯಲ್ಲಿದ್ದು, ಹಲವು ವಾಹನ …

Read More »

ರಾಮದುರ್ಗ: ಅನೈತಿಕ ಸಂಬಂಧ, ಪ್ರಿಯಕರನ ಜೊತೆ ಸೇರಿ ಪತಿ ಕೊಂದ ಪತ್ನಿ

ರಾಮದುರ್ಗ (ಬೆಳಗಾವಿ): ತಾಲ್ಲೂಕಿನ ಹೊಸೂರ ಗ್ರಾಮದ ಬಳಿ ಸೋಮವಾರ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಕೊಲೆಯಾದವರ ಪತ್ನಿ ಹಾಗೂ ಆಕೆಯ ಪ್ರಿಯಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹೊಸೂರ ನಿವಾಸಿ ಪಾಂಡಪ್ಪ ದುಂಡಪ್ಪ ಜಟಕನ್ನವರ (35) ಕೊಲೆಯಾದವರು. ಇವರ ಪತ್ನಿ ಲಕ್ಷ್ಮಿ ಜಟಕನ್ನವವರ (30) ಹಾಗೂ ಪ್ರಿಯಕರ ಎನ್ನಲಾದ ರಮೇಶ ಬಡಿಗೇರ (36) ಬಂಧಿತರು. ಅನೈತಿಕ ಸಂಬಂಧ ಕಾರಣ: ‘ಪಾಂಡಪ್ಪ ಹಾಗೂ ಲಕ್ಷ್ಮಿ ಕೆಲ ವರ್ಷಗಳಿಂದ ಹೊಸೂರ ಹೊರವಲಯದ ತಮ್ಮ ಜಮೀನಿನಲ್ಲಿ …

Read More »

ಬೈಲಹೊಂಗಲ: ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಬೈಲಹೊಂಗಲ: ಮಲಪ್ರಭಾ ಏತ ನೀರಾವರಿಗಾಗಿ ಭೂ ಸ್ವಾಧೀನಗೊಂಡ ಪ್ರದೇಶವನ್ನು 50 ವರ್ಷಗಳ ನಂತರ 2022 ರಲ್ಲಿ ದಾಖಲಿಸಿರುವ ತಹಶೀಲ್ದಾರ್ ಕ್ರಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ಉಪವಿಭಾಗಾಧಿಕಾರಿ ಕಚೇರಿ ಎದುರು ರೈತರು ಸೋಮವಾರ ಪ್ರತಿಭಟನೆ ನಡೆಸಿದರು.   ಹೊಸೂರು ಮಡಿವಾಳೇಶ್ವರ ಮಠದ ಗಂಗಾಧರ ಮಹಾಸ್ವಾಮೀಜಿ, ವೇದಮೂರ್ತಿ ಮಾಹಾಂತಯ್ಯ ಆರಾದ್ರಿಮಠ ಶಾಸ್ತ್ರಿಗಳು, ಪಟ್ಟಣದ ಬೆಳಗಾವಿ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ಚನ್ನಮ್ಮ ವೃತ್ತದಿಂದ ಇಂಚಲ …

Read More »

ಚಿಕ್ಕೋಡಿ: ಅಕ್ರಮ ಮದ್ಯ ಮಾರಾಟ ಮಾಡಿದ ವ್ಯಕ್ತಿಗೆ 3 ವರ್ಷ ಕಠಿಣ ಶಿಕ್ಷೆ; 20 ಸಾವಿರ ದಂಡ

ಚಿಕ್ಕೋಡಿ: ಅಕ್ರಮ ಸಾರಾಯಿ ಮಾರಾಟ ಮಾಡಿದ ವ್ಯಕ್ತಿಗೆ ಚಿಕ್ಕೋಡಿ ಜೆಎಂಎಫ್‌ಸಿ ನ್ಯಾಯಾಲಯ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಚಿಕ್ಕೋಡಿ ತಾಲೂಕಿನ ಜೈನಾಪೂರ ಗ್ರಾಮದ ಆನಂದ ಮಹಾದೇವ ಗರಬುಡೆ ಎಂಬಾತನೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದಾನೆ. ಕಳೆದ 24-09- 2015 ರಂದು ಜೈನಾಪೂರ ಕ್ರಾಸ್ ಹತ್ತಿರ ಅಕ್ರಮ ಸಾರಾಯಿ ಮಾರಾಟ ಮಾಡುವ ಕುರಿತು ಆರೋಪಿ ಮೇಲೆ ಅಬಕಾರಿ ಉಪ ನಿರೀಕ್ಷಕ ವಿ.ಎ.ಕಳ್ಳಿಕದ್ದಿ …

Read More »

ಖಿಲಾರದಡ್ಡಿಗೆ ಕೊನೆಗೂ ಬಂತು ಬಸ್‌!

ತೆಲಸಂಗ: ಸಮೀಪದ ಖಿಲಾರದಡ್ಡಿ ಗ್ರಾಮಕ್ಕೆ ಕೊನೆಗೂ ಸೋಮವಾರ ಬಸ್‌ ಬಂದಿದ್ದು, ಬಸ್ಸೇ ಕಾಣದ ಗ್ರಾಮಸ್ಥರಲ್ಲಿ ಸಂಭ್ರಮವೋ ಸಂಭ್ರಮ. ಸ್ವಾತಂತ್ರ್ಯ ದೊರೆತು 75 ವರ್ಷವಾದರೂ ಖಿಲಾರದಡ್ಡಿ ಗ್ರಾಮಕ್ಕೆ ಬಸ್‌ ವ್ಯವಸ್ಥೆ ಇರಲಿಲ್ಲ. ಸದ್ಯ ಬಸ್‌ ಗ್ರಾಮದಲ್ಲಿ ಬರುತ್ತಿದ್ದಂತೆ ಗ್ರಾಮಸ್ಥರೆಲ್ಲ ಸೇರಿ ಚಾಲಕ, ನಿರ್ವಾಹಕ, ನಿಯಂತ್ರಣಾಧಿಕಾರಿಯನ್ನು ಸತ್ಕರಿಸಿ ಬಸ್‌ ಗೆ ಪೂಜೆ ಸಲ್ಲಿಸಿ, ಕುಣಿದು ಕುಪ್ಪಳಿಸಿದರು.   280ಕ್ಕೂ ಹೆಚ್ಚು ಶಾಲಾ ಮಕ್ಕಳು ಬಂದು ಹೋಗುವುದು ಸೇರಿ 16 ಕಿ.ಮೀ ನಿತ್ಯ ಕಾಲ್ನಡಿಗೆಯಲ್ಲಿಯೇ ಶಾಲೆಗೆ …

Read More »

ಹಾಫ್ ಹೆಲ್ಮೆಟ್ ಧರಿಸುವ ಪೊಲೀಸರಿಗೆ ದಂಡ: ಮುಂದಿನ ದಿನಗಳಲ್ಲಿ ವಾಹನ ಸವಾರರಿಗೂ ಬಿಸಿ

ಬೆಂಗಳೂರು: ಹಾಫ್ ಹೆಲ್ಮೆಟ್ ಧರಿಸದಂತೆ ನಗರದ ಗಲ್ಲಿ-ಗಲ್ಲಿಗಳಲ್ಲಿಯೂ ಸಂಚಾರಿ ಪೊಲೀಸರು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಸಿಗ್ನಲ್, ಜಂಕ್ಷನ್, ಇನ್ನಿತರ ಆಯಕಟ್ಟಿನ ಸ್ಥಳಗಳಲ್ಲಿ ಐಎಸ್‌ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸುವಂತೆ ಬೈಕ್ ಸವಾರರಿಗೆ ತಿಳಿ ಹೇಳುತ್ತಿದ್ದಾರೆ. ಆದರೆ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವಂತೆ ಹೇಳುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ನಿಯಮ ಉಲ್ಲಂಘಿಸುತ್ತಿದ್ದಾರೆ.‌ ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿರೋಧ ಅಳಿಸಿ ಹಾಕಲು ಪೊಲೀಸ್ ಇಲಾಖೆ ಲಾ ಅಂಡ್ …

Read More »

ಈಗ ೨೦೨೩ರ ಚುನಾವಣೆಯಲ್ಲಿ ಉಭಯ ನಾಯಕರ ಮಧ್ಯೆ ಮತ್ತೆ ಟಿಕೆಟ್‌ಗೆ ಫೈಟ್ ಶುರುವಾಗಿದೆ. ಇತ್ತೀಚೆಗೆ ಬೈಲಹೊಂಗಲಕ್ಕೆ ಭೇಟಿ ನೀಡಿದ್ದ ಮಾಜಿ ಸಿಎಂ ಬಿಎಸ್‌ವೈ ಈ ವೇಳೆ ಜಾಣನಡೆ ಪ್ರದರ್ಶನ ಮಾಡಿದ್ದಾರೆ. ಗಾಣಿಗ ಸಮಾಜ ಹಾಗೂ ನೌಕರರ ಸಮಾವೇಶಕ್ಕೆಂದು ಬೈಲಹೊಂಗಲಕ್ಕೆ ಬಿಎಸ್ ಯಡಿಯೂರಪ್ಪ ಆಗಮಿಸಿದ್ದರು. ಬೈಲಹೊಂಗಲದ ಪೃಥ್ವಿ ಗಾರ್ಡನ್‌ನಲ್ಲಿ ಮೊನ್ನೆ ನಡೆದಿದ್ದ ಕಾರ್ಯಕ್ರಮ ಹಿನ್ನೆಲೆ ಬೈಲಹೊಂಗಲಕ್ಕೆ ಬರುತ್ತಿದ್ದಂತೆ ಬಿಎಸ್‌ವೈ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮನೆಗೆ ಭೇಟಿ ನೀಡಿದ್ದರು. ಮಾಜಿ ಶಾಸಕ ಜಗದೀಶ್ ಮೆಟಗುಡ್ಡ ಮನೆಯಲ್ಲಿ ಉಪಹಾರ ಸೇವಿಸಿ ಕಾರ್ಯಕ್ರಮಕ್ಕೆ ತೆರಳಿದ್ದರು.

ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗೆ ಮಾಜಿ ಸಿಎಂ ಬಿಎಸ್‌ವೈ ಬೈಲಹೊಂಗಕ್ಕೆ ಆಗಮಿಸಿದ್ದು ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೌದು ಬೈಲಹೊಂಗಲ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ-ಕೆಜೆಪಿ ಕಿಚ್ಚು ಇನ್ನೂ ಆರಿಲ್ಲ. ಬೈಲಹೊಂಗಲ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಜಗದೀಶ್ ಮೆಟಗುಡ್ ಹಾಗೂ ಡಾ.ವಿಶ್ವನಾಥ ಪಾಟೀಲ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ೨೦೧೩ರ ವಿಧಾನಸಭೆ ಚುನಾವಣೆಯಲ್ಲಿ ಡಾ. ವಿಶ್ವನಾಥ್ ಪಾಟೀಲ್ …

Read More »

ಬೆಳಗಾವಿ| ವರ್ಷ ಮುಗಿದರೂ ಪಾಲಿಕೆಗೆ ಬಿಡದ ಗ್ರಹಣ: ಅಧಿಕಾರ ಸ್ವೀಕರಿಸದ ಚುನಾಯಿತರು

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆ ಮುಗಿದು ವರ್ಷ ಕಳೆದರೂ ಆಯ್ಕೆಯಾದ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸುವ ಭಾಗ್ಯ ಕೂಡಿಬಂದಿಲ್ಲ. ಇದೇ ಮೊದಲಬಾರಿಗೆ ಪಾಲಿಕೆ ಚುನಾವಣೆ ರಾಜಕೀಯ ಪಕ್ಷಗಳ ಚಿಹ್ನೆ ಆಧಾರದಲ್ಲಿ ನಡೆದಿದ್ದರಿಂದ ತೀವ್ರ ಕುತೂಹಲ ಕೆರಳಿಸಿತ್ತು. ಆದರೆ, ವರ್ಷದ ಬಳಿಕವೂ ಅಧಿಕಾರ ಕೈಗೆ ಸಿಗದ ಕಾರಣ ಹೊಸ ಸದಸ್ಯರು ಇದ್ದೂ ಇಲ್ಲದಂತಾಗಿದೆ. ತಾವು ಪ್ರತಿನಿಧಿಸುವ ವಾರ್ಡ್‌ನ ಜನರು ಒಂದಿಲ್ಲೊಂದು ಸಮಸ್ಯೆ ಹೊತ್ತು ಮನೆಬಾಗಿಲಿಗೆ ಬರುತ್ತಲೇ ಇದ್ದಾರೆ. ಆದರೆ, ಅವುಗಳನ್ನು ಬಗೆಹರಿಸಲು …

Read More »

ಕರ್ನಾಟಕ ಕೈಗಾರಿಕಾ ವಿವಾದ ಮಸೂದೆ 2020 ಹಿಂಪಡೆದ ಸರ್ಕಾರ

ಬೆಂಗಳೂರು: ಕರ್ನಾಟಕ ಕೈಗಾರಿಕಾ ವಿವಾದ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ 2020ನ್ನು ಸರ್ಕಾರ ವಾಪಸ್​ ಪಡೆದಿದೆ. ನಿನ್ನೆ(ಸೋಮವಾರ) ವಿಧಾನಸಭೆಯಲ್ಲಿ ಈ ಮಸೂದೆಯನ್ನು ಹಿಂಪಡೆಯಲಾಯಿತು. ಕೈಗಾರಿಕಾ ವಿವಾದ ಮಸೂದೆ ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿತ್ತು.‌ ಆದರೆ ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲದ ಕಾರಣ ಬಿದ್ದು ಹೋಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಈ‌ ಮಸೂದೆಯನ್ನು ಪರಿಷತ್​​ನಲ್ಲಿ ವಿರೋಧಿಸಿದ್ದರು. ರಾಜ್ಯದಲ್ಲಿ ವಹಿವಾಟನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕವನ್ನು ತಂದಿತ್ತು. ತಿದ್ದುಪಡಿ ವಿಧೇಯಕ …

Read More »