Breaking News

ಜಿಲ್ಲೆ

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 6ಕ್ಕೆ `ವೇತನ ಆಯೋಗ’ ಘೋಷಣೆ ಸಾಧ್ಯತೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯಸ ರ್ಕಾರಿ ವೇತನ ಆಯೋಗವನ್ನು ಸೆ. 6 ರಂದು ಘೋಷಣೆ ಮಾಡುವ ಸಾಧ್ಯತೆಗಳಿವೆ. ಸೆ.6 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಆಯೋಗ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.   …

Read More »

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ: ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ. ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌, ಬಾರ್‌ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.  

Read More »

ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಪ್ರಕಟ; ಐವರಿಗೆ ಗೌರವ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯು 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ 17ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ ಬಹುಮಾನಕ್ಕೆ ಆಯ್ಕೆಯಾದ ಕಲಾವಿದರ ಹೆಸರನ್ನು ಪ್ರಕಟಿಸಿದೆ. ಬಾಗಲಕೋಟೆಯ ಹಿರಿಯ ಕಲಾವಿದ ನಾಗಲಿಂಗಪ್ಪ ಗಂಗಪ್ಪ ಗಂಗೂರ (ಸಂಪ್ರದಾಯ ಶಿಲ್ಪ), ಉಡುಪಿಯ ರತ್ನಾಕರ ಎಸ್‌. ಗುಡಿಗಾರ್‌ (ಸಂಪ್ರದಾಯ ಶಿಲ್ಪ), ಬಳ್ಳಾರಿಯ ಪಿ. ಮುನಿರತ್ನಾಚಾರಿ (ಸಂಪ್ರದಾಯ ಶಿಲ್ಪ), ಕಲಬುರಗಿಯ ಮಾನಯ್ಯ ನಾ. ಬಡಿಗೇರ (ಎರಕ ಶಿಲ್ಪ) ಹಾಗೂ ಬೆಂಗಳೂರಿನ ಬಿ.ಸಿ. ಶಿವಕುಮಾರ್‌ (ಸಮಕಾಲೀನ ಶಿಲ್ಪ) ಅವರು …

Read More »

ಚಿರತೆ ಹಿಡಿಯುವಲ್ಲಿ ಸರ್ಕಾರ ಯಾವುದೇ ರೀತಿ ವಿಫಲ ಆಗಿಲ್ಲ: ಈರಣ್ಣ ಕಡಾಡಿ

ಬೆಳಗಾವಿಯಲ್ಲಿ ಚಿರತೆ ಪತ್ತೆಗೆ 25ನೇ ದಿನದ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆ ಗಾಲ್ಫ್ ಕ್ಲಬ್‍ಗೆ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಅರಣ್ಯಾಧಿಕಾರಿಗಳ ಜತೆಗೆ ಚಿರತೆ ಕಾರ್ಯಾಚರಣೆ ಬಗ್ಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಚರ್ಚೆ ನಡೆಸಿದರು. ಕಾರ್ಯಾಚರಣೆ ಬಗ್ಗೆ ಸಂಪೂರ್ಣ ವಿವರವನ್ನು ಪಡೆದ ಬಳಿಕ ಗಾಲ್ಫ್ ಕ್ಲಬ್‍ನಲ್ಲಿ ರೌಂಡ್ಸ್ ಹೊಡೆದ ಈರಣ್ಣ ಕಡಾಡಿ ಬೋನ್, ಕ್ಯಾಮರಾ ಇಟ್ಟ ಸ್ಥಳಗಳನ್ನು ಪರಿಶೀಲನೆ ನಡೆಸಿದರು.ನಂತರ ಮಾಧ್ಯಮಗಳ ಜೊತೆಗೆ …

Read More »

ಬೆಳಗಾವಿ ನಗರದಲ್ಲಿ ಅದ್ಧೂರಿ ಸಂಗೊಳ್ಳಿ ರಾಯಣ್ಣಾ ಶೋಭಾಯಾತ್ರೆ

ಬೆಳಗಾವಿ ನಗರದಲ್ಲಿ ಕರುನಾಡ ವಿಜಸೇನೆ ಜಿಲ್ಲಾ ಘಟಕ ಬೆಳಗಾವಿ ಜಿಲ್ಲೆ ಹಾಗೂ ರಾಯಣ್ಣನ ಅಭಿಮಾನಿ ಬಳಗದ ವತಿಯಿಂದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಅದ್ಧೂರಿ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಕರುನಾಡ ವಿಜಯಸೇನೆ ಜಿಲ್ಲಾ ಘಟಕ ಬೆಳಗಾವಿ ಹಾಗೂ ರಾಯಣ್ಣನ ಅಭಿಮಾನಿ ಬಳಗದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅದ್ಧೂರಿ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ರಾಯಣ್ಣ ಉತ್ಸವ ಪ್ರಯುಕ್ತ ಬೃಹತ್ ಶೋಭಾಯಾತ್ರೆಯನ್ನೂ ಕೂಡ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಟ್ರ್ಯಾಕ್ಟರ್‍ನಲ್ಲಿ ಬೃಹತ್ ರಾಯಣ್ಣನ ಮೂರ್ತಿಯನ್ನು …

Read More »

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಕೊಲೆ

ಬಾಗಲಕೋಟೆ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಹೊರವಲಯದಲ್ಲಿ‌ ನಡೆದಿದೆ. ಸಂಗೀತಾ ಹರಿಜನ (36) ಕೊಲೆಯಾದವರು. ಕಳೆದ ರಾತ್ರಿ 9 ಗಂಟೆಗೆ ಬಹಿರ್ದೆಸೆಗೆ ಹೋಗಿದ್ದಾಗ ಘಟನೆ ನಡೆದಿದೆ. ತಲೆ ಮತ್ತು ಕುತ್ತಿಗೆಗೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸ್​ಪಿ …

Read More »

ಶಿವಮೂರ್ತಿ ಶರಣರು, ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಸಂಬಂಧ ಪೋಕ್ಸೋ ಕಾಯಿದೆಯಡಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೂರ್ತಿ ಶರಣರು, ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಆರೋಪದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸ್ವಾಮೀಜಿಯನ್ನ ಬಂಧಿಸಿ ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ. ಶ್ರೀಮಠದ ಪೀಠಾಧ್ಯಕ್ಷರದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ …

Read More »

ಹಿಂದೂ-ಮುಸ್ಲಿಮ್ ಐಕ್ಯತೆಗೆ ಸಾಕ್ಷಿ: ಕೋಮು, ಧಾರ್ಮಿಕ ಸೌಹಾರ್ದತೆಗೆ ಗದಗ ಜಿಲ್ಲೆಯ ಈ ಗ್ರಾಮಸ್ಥರು ಮಾದರಿ!

ಗದಗ: ರಾಜ್ಯದ ವಿವಿಧೆಡೆ ಕೋಮುಗಲಭೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇಲ್ಲಿ ಹಿಂದೂ-ಮುಸ್ಲಿಮರು ಒಂದೆಡೆ ಸೇರಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಗದಗ ಪಟ್ಟಣದಿಂದ 5 ಕಿಲೋ ಮೀಟರ್ ದೂರದಲ್ಲಿರುವ ಕಳಸಾಪುರ ಕಳೆದ ಎಂಟು ವರ್ಷಗಳಿಂದ ಕೋಮು ಮತ್ತು ಧಾರ್ಮಿಕ ಸೌಹಾರ್ದತೆಗೆ ಮಾದರಿಯಾಗಿದೆ.   ವಿಶಿಷ್ಟ ಆಚರಣೆಯನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳು ಮತ್ತು ಗದಗ ಪಟ್ಟಣದ ಜನರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಕಳಸಾಪುರ ಗಣೇಶನನ್ನು ಈಗ ‘ಕೋಮು ಸೌಹಾರ್ದ ಗಣೇಶ’ ಎಂದು ಕರೆಯುತ್ತಾರೆ. …

Read More »

25 ದಿನವಾದರೂ ಸಿಗದ ಚಿರತೆ

ಬೆಳಗಾವಿ ಗಾಲ್ಫ್ ಮೈದಾನದಲ್ಲಿ 25ನೇ ದಿನವೂ ಚಿರತೆಯ ಕಾರ್ಯಾಚರಣೆ ಮುಂದುವರಿದಿದೆ. ಗಾಲ್ಫ್ ಮೈದಾನದ ಉತ್ತರ ಧಿಕ್ಕಿನ ನೀರಿನ ಹೊಂಡದ ಬಳಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದೆ. ಹೆಜ್ಜೆ ಗುರುತು ಜಾಡು ಹಿಡಿದು ಶೋಧ ಕಾರ್ಯವನ್ನು ಸಿಸಿಎಫ ಮಂಜುನಾಥ ಚವ್ಹಾಣ, ಡಿಎಫ್ಓ ಡಾ.ಅಂಥೋನಿ, ಎಸಿಎಫ್ ಮಲ್ಲಿನಾಥ ಕುಸನಾಳ ನೇತೃತ್ವದ ತಂಡದಿಂದ ಮಾಡಲಾಗುತ್ತಿದೆ. ಇನ್ನು ಹೆಜ್ಜೆ ಗುರುತು ಪತ್ತೆ ಸ್ಥಳಕ್ಕೆ ಅರವಳಿಕೆ ತಜ್ಞರು ಬಂದಿದ್ದು. ಹನುಮಾನ್, ಜಾಧವ ನಗರ ಸಂಪರ್ಕಿಸುವ ಡಬಲ್ ರಸ್ತೆ …

Read More »

ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ: ಉಮೇಶ ಕತ್ತಿ

ಚಿರತೆ ಸಿಗದ ಕಾರಣ ಉಮೇಶ ಕತ್ತಿ ರಾಜೀನಾಮೆಗೆ ಒತ್ತಾಯಿಸಿದ ಹಿನ್ನೆಲೆ ವಿಜಯಪುರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅರಣ್ಯ ಸಚಿವ ಉಮೇಶ ಕತ್ತಿ ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ ಎಂದಿದ್ದಾರೆ. ವಿಜಯಪುರದಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ.ಚಿರತೆ ಸಿಕ್ಕರೆ ನಂದೇನು ತಕರಾರಿಲ್ಲಾ .ಚಿರತೆ ಹಿಡಿಯಲು ಉತ್ತರ ಕರ್ನಾಟಕ ಭಾಗದ ಸ್ಟಾಫ್ ಹಾಕಿದ್ದೇವೆ. ಆನೆಗಳನ್ನು …

Read More »