Breaking News

ಜಿಲ್ಲೆ

ಶಾಸಕ ಅಭಯ ಪಾಟೀಲ್ ವಿರುದ್ಧ ಪರೋಕ್ಷ ಕಿಡಿ ಕಾರಿದ :ಕಾರಜೋಳ

ಚಿರತೆ ಪತ್ತೆಗೆ ಮುಧೋಳ ನಾಯಿ ತರೋಣ: ಬೆಳಗಾವಿ ಜಿಲ್ಲೆಯಲ್ಲಿ ಚಿರತೆ ಹಾವಳಿ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಬೆಳಗಾವಿ ನಗರದಲ್ಲಿ ಪ್ರತ್ಯೇಕ್ಷವಾಗಿರುವ ಚಿರತೆ ಸೆರೆ ಹಿಡಿಯಲು 8 ಕಡೆಗಳಲ್ಲಿ ಬೋನ್ ಇಟ್ಟು ಕಾಯುತ್ತಿದ್ದಾರೆ. 50 ಜನ ಸಿಬ್ಬಂದಿ ನೇಮಕ ಮಾಡಲಾಗಿದೆ. ತಜ್ಞರನ್ನು ಸಹ ನೇಮಕ ಮಾಡಿದೆ. ಇಷ್ಟಕ್ಕೂ ಸೆರೆ ಸಿಗದಿದ್ದರೇ ಮುಧೋಳ ನಾಯಿಯನ್ನು ತಂದು ಚಿರತೆ ಸೆರೆ ಹಿಡಿಯಲಾಗುವುದು ಎಂದರು. ಶಾಸಕ ಅಭಯ ಪಾಟೀಲ್ ವಿರುದ್ಧ ಪರೋಕ್ಷ ಕಿಡಿ ಜಿಲ್ಲಾ ಉಸ್ತುವಾರಿ …

Read More »

ವಿಟಿಯು “ಜ್ಞಾನ ಸಂಗಮ”ದಲ್ಲಿ ಗಮನ ಸೆಳೆದ 100 ಮೀಟರ್ ತಿರಂಗಾ ರ್ಯಾಲಿ

ಬೆಳಗಾವಿ: ಬೆಳಗಾವಿಯ ವಿಶ್ವೇಶ್ವರಯ್ಯ ‌ತಾಂತ್ರಿಕ ವಿಶ್ವವಿದ್ಯಾಲಯ “ಜ್ಞಾನ ಸಂಗಮ”ದಲ್ಲಿ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ 76ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ವಿ ತಾ ವಿ ಯ ಕುಲಪತಿಗಳಾದ ಪ್ರೋ. ಕರಿಸಿದ್ದಪ್ಪ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಲ್ ದೀಪಕ ಕುಮಾರ ಗುರುಂಗ ಆಗಮಿಸಿದ್ದರು. ಧ್ವಜಾರೋಹಣ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಿದ ಕರ್ನಲ್ ದೀಪಕ ಗುರುಂಗ, ಕನ್ನಡ ನಾಡನ್ನು ಆಳಿದ ರಾಜಮನೆತನಗಳ ಕೊಡುಗೆಗಳನ್ನು, ಸಂಗೀತ, …

Read More »

ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಗೆ ಚಾಲನೆ ನೀಡಿದ ಸಿದ್ದರಾಮಯ್ಯ, ಡಿ.ಕೆ.ಶಿ.

ಬೆಂಗಳೂರು: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಗೆ ಚಾಲನೆ ನೀಡಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬೃಹತ್ ಪಾದಯಾತ್ರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭವಾಗಿರುವ ಸ್ವಾತಂತ್ರ್ಯ ನಡಿಗೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ನಡೆಯಲಿದೆ. ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್,ಡಿ,ಕೆ.ಸುರೇಶ್,ಜಮೀರ್ ಅಹ್ಮದ್, ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್, ಚೆನ್ನರಾಜ ಹಟ್ಟಿಹೊಳಿ ಸೇರಿದಂತೆ …

Read More »

ಕುಟುಂಬ ಸಮೇತ ತಾಯಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಸಂತೋಷ್ ಜಾರಕಿಹೊಳಿ ಅವರು

ಸವದತ್ತಿ: ಸವದತ್ತಿ ಯಲ್ಲಮ್ಮ ನಮ್ಮ ಬೆಳಗಾವಿಯ ಆರಾಧ್ಯ ದೇವತೆ ಸದಾ ಭಕ್ತಿ ಭಾವ ಸಾಮಾಜಿಕ ಚಟುವಟಿಕೆ ಗಳಲ್ಲಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರು ಇಂದು ಕುಟುಂಬ ಸಮೇತ ತಾಯಿ ಯಲ್ಲಮ್ಮನ ಗುಡ್ಡಕ್ಕೆ ಪ್ರಯಾಣ ಬೆಳೆಸಿದ್ದರು. ಇಂದು 75ನೆಯ ಸ್ವತಂತ್ರ ಮಹೋತ್ಸವ ಅಂಗವಾಗಿ ಸವದತ್ತಿ ಕ್ಷೇತ್ರಕ್ಕೆ ಸಂತೋಷ್ ಜಾರಕಿಹೊಳಿ ಹಾಗೂ ಅವರ್ ಪತ್ನಿ ಹಾಗೂ ಮಗ ಸೂರ್ಯ ಶ್ರೇಷ್ಠ ಅವರ್ ಜೊತೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು. ಶ್ರಾವಣ ಮಾಸದಲ್ಲಿ …

Read More »

ಸಿಎಂ ಇತಿಹಾಸದ ಸತ್ಯ ಎತ್ತಿ ಹಿಡಿಯಲಿ: ಡಿಕೆ ಶಿವಕುಮಾರ್‌

ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ದೇಶದ ಪ್ರಥಮ ಪ್ರಧಾನಿ ನೆಹರೂ ಅವರನ್ನು ಕಡೆಗಣಿಸಿದ್ದು, ಆಗಿರುವ ಪ್ರಮಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ಷಮೆಯಾಚಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ.   ಈ ಬಗ್ಗೆ ಭಾನುವಾರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ದೇಶ ಸ್ವಾತಂತ್ರ್ಯ ಹೋರಾಟ ಮತ್ತು ನವಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ಹಿರಿದು. ಇದು ನಿಮಗೂ ಗೊತ್ತಿದೆ. ಈ ಇತಿಹಾಸ ಓದಿಯೇ …

Read More »

ಒತ್ತಾಯಪೂರಕವಾಗಿ ಧರ್ಮಾಚರಣೆ ಮಾಡಿಸುವುದು ಸರಿಯಲ್ಲ.

ರಾಯಚೂರು: ಒಬ್ಬರಿಂದ ಒತ್ತಾಯಪೂರಕವಾಗಿ ಧರ್ಮಾಚರಣೆ ಮಾಡಿಸುವುದು ಸರಿಯಲ್ಲ. ಇನ್ನೊಬ್ಬರ ಧರ್ಮದ ಬಗ್ಗೆ ಅಗೌರವ ತೋರಿಸದೇ ನಮ್ಮ ಧರ್ಮ ಆಚರಿಸಬೇಕು. ಇದನ್ನು ಎಲ್ಲರೂ ಅರ್ಥೈಸಿಕೊಂಡು ಸೌಹಾರ್ದವಾಗಿ ಬಾಳಬೇಕು ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು.   ಮಂತ್ರಾಲಯದಲ್ಲಿ ಭಾನುವಾರ ಶ್ರೀ ರಾಘವೇಂದ್ರ ಸ್ವಾಮಿಗಳವರ 351ನೇ ಉತ್ತರಾರಾಧನೆ ನಿಮಿತ್ತ ಶ್ರೀ ಪ್ರಹ್ಲಾದರಾಜರ ಮಹಾರಥೋತ್ಸವಕ್ಕೆ ಚಾಲನೆ ನೀಡಿ ಅನುಗ್ರಹ ಸಂದೇಶ ನೀಡಿದ ಶ್ರೀಗಳು, ನಾವೆಲ್ಲ ಹಿಂದೂಗಳು. ಸನಾತನ ಭಾರತೀಯ ಹಿಂದೂ …

Read More »

ಬೆಳಗಾವಿ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ಆಗಿತ್ತು. ಮಹಾತ್ಮ ಗಾಂಧಿ ಅಧ್ಯಕ್ಷರಾಗಿದ್ದ ಕಾಂಗ್ರೆಸ್ ಮಹಾ ಅಧಿವೇಶನದಲ್ಲಿ ಗಾಂಧಿ ಅವರು ಸ್ವಾತಂತ್ರ್ಯ ಕಹಳೆ ಮೊಳಗಿಸಿದ್ದರು.

ಬೆಳಗಾವಿ: ಭಾರತವು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ದೇಶದ ಮನೆ ಮನೆಗಳ ಮೇಲೂ ತಿರಂಗಾ ಧ್ವಜ ಹಾರಾಡುತ್ತಿದೆ. ಸ್ವಾತಂತ್ರ್ಯ ಸಂಗ್ರಾಮ, ಹೋರಾಟಗಾರರ ಸ್ಮರಣೆ ಆಗುತ್ತಿದೆ. ಈ ಹೊತ್ತಿನಲ್ಲಿ ಬೆಳಗಾವಿಯನ್ನು ಮರೆಯುವಂತಿಲ್ಲ. ಖಾದಿ ಗ್ರಾಮೋದ್ಯೋಗ ಸಂಸ್ಥೆ: ಜಿಲ್ಲೆಯ ಗೋಕಾಕ್ ತಾಲೂಕಿನ ಹುದಲಿ ಗ್ರಾಮ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ಆಗಿತ್ತು. ಮಹಾತ್ಮ ಗಾಂಧಿ ಅವರ ಸ್ಫೂರ್ತಿಯೊಂದಿಗೆ ಇಲ್ಲಿ ಆರಂಭವಾದ ಖಾದಿ ಗ್ರಾಮೋದ್ಯೋಗ ಸಂಸ್ಥೆ ಇಂದಿಗೂ ಕಾರ್ಯನಿರ್ವಹಿಸುತ್ತಿದೆ. ದೇಶದ ವಿವಿಧ ನಗರಗಳಿಗೆ ಇಲ್ಲಿಂದ ಖಾದಿ ಬಟ್ಟೆ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ. ಲೋಳಸೂರ, ಅರಭಾವಿ, ದುರದುಂಡಿ, ಬಡಿಗವಾಡ ಮಾರ್ಗವಾಗಿ ನಾಗನೂರುವರೆಗೆ ರ್ಯಾಲಿ.

          ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿಂದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್‍ದಲ್ಲಿ ಚಾಲನೆ ನೀಡಲಾಯಿತು.   ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನೂರಾರು ರೈತರು …

Read More »

ಕೇಂದ್ರ ಕಾರಾಗೃಹದಿಂದ ನಾಳೆ 10 ಖೈದಿಗಳು ಬಿಡುಗಡೆ

ವಿಜಯಪುರ: 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸನ್ನಡತೆ ತೋರಿದ 10 ಜೈಲು ಹಕ್ಕಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ. ನಗರದ ಕೇಂದ್ರ ಕಾರಾಗೃಹದಿಂದ ನಾಳೆ 10 ಖೈದಿಗಳು ಬಿಡುಗಡೆಯಾಗಲಿದ್ದಾರೆವಿವಿಧ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿ ಹಲವು ವರ್ಷಗಳಿಂದ ಜೈಲಿನಲ್ಲಿ ದ್ದರೂ ತಮ್ಮ ಸನ್ನಡತೆಯಿಂದ. ಉತ್ತಮ ಜೀವ ರೂಪಿಸಿಕೊಳ್ಳುವ ಭರವಸೆ ಮೂಡಿಸಿರುವ ಖೈದಿಗಳಲ್ಲಿ ಮೂವರು ಸಹೋದರರು ಹಾಗೂ ಅವರ ತಂದೆ ಸೇರಿ ಒಂದೇ ಕುಟುಂಬದ ನಾಲ್ವರು ಇದ್ದಾರೆ. ಬಸಪ್ಪ ಮಲಕಾರಿ ಜಟಗೊಂಡ, ಗೌಡಪ್ಪ ಜಟಗೊಂಡ, …

Read More »

ಗೋಕಾಕ್‌ನಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಶಾಸಕ ಸತೀಶ್ ಜಾರಕಿಹೊಳಿ

ದೇಶಕ್ಕೆ ಸ್ವಾತಂತ್ರೋತ್ಸವನ್ನು ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ದೊಡ್ಡದಿದೆ. ಆದರೆ ಬಿಜೆಪಿಯವರು ಈಗ ಬಂದು ಜಂಡಾ ಹಾರಿಸಿ ಎಂದು ಕುಳಿತಲ್ಲೇ ಕುಳಿತು ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.  ಗೋಕಾಕ್‌ನಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ಸರಕಾರದ ಹರ್ ಘರ್ ತಿರಂಗಾ ಕಾರ್ಯಕ್ರಮ ಕುರಿತಂತೆ ವ್ಯಂಗ್ಯವಡಿದ್ದಾರೆ. ದೇಶಕ್ಕೆ ಸ್ವಾತಂತ್ರö್ಯವನ್ನು ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ತುಂಬಾ …

Read More »