Breaking News
Home / ಜಿಲ್ಲೆ (page 51)

ಜಿಲ್ಲೆ

 ಬೈಕ್ ಮತ್ತು ಟೆಂಪೋ ನಡುವೆ ಭೀಕರ ಅಪಘಾತ ಮೂವರ ಸಾವು

ಚಿಕ್ಕೋಡಿ: ಬೈಕ್ ಮತ್ತು ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಯುವಕರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಸವನಾಳಗಡ್ಡೆ ಬಳಿ ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಇದಲ್ಲಿ ಕೇರೂರು ಗ್ರಾಮದ ಪ್ರಶಾಂತ ಬೈರು ಖೋತ(22), ಸತೀಶ ಕಲ್ಲಪ್ಪ ಹಿರೇಕೊಡಿ(23), ಯಲಗೌಡ ಚಂದ್ರಕಾಂತ ಪಾಟೀಲ (22) ಮೃತ ದುರ್ದೈವಿಗಳು. ಯುವಕರು ಬೈಕ್​​ ಮೇಲೆ ಚಿಕ್ಕೋಡಿ ಕಡೆಯಿಂದ ಕೇರೂರು ಗ್ರಾಮಕ್ಕೆ ತೆರಳುವ ಸಮಯದಲ್ಲಿ ಚಿಕ್ಕೋಡಿ ಅಂಕಲಿ …

Read More »

ಫ್ಲೈ ಓವರ್ ನಿರ್ಮಿಸುವ ಪ್ರಸ್ತಾವಿತ ಯೋಜನೆ ರಸ್ತೆಗೆ ಸಂಬಂಧಿಸಿದಂತೆ ಸಭೆ

ಬೆಳಗಾವಿ ಜನರ ಬಹುದಿನಗಳಿಂದ ಬೇಡಿಕೆಯಾಗಿದ್ದ ಸ್ಮಾರ್ಟ್ ಸಿಟಿ ಯೋಜನೆಯ ಫ್ಲೇಓವರ್ ನಿರ್ಮಾಣದ ಕನಸನ್ನು ನನಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಬೆಳಗಾವಿಗೆ ಕಳೆದ ಹಲವುವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು ಈಗ ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾದ ಮೇಲೆ ಮತ್ತೆ ಸ್ಮಾರ್ಟ್ ಸಿಟಿ ಯೋಜನೆಯನ್ನು ಕೈಗೆತ್ತಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಬೆಳಗಾವಿ ನಗರ ಪ್ರವೇಶಿಸುವ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಿಸುವ ಪ್ರಸ್ತಾವಿತ ಯೋಜನೆ ಹಾಗೂ ಸರ್ವಿಸ್ ರಸ್ತೆಗೆ ಸಂಬಂಧಿಸಿದಂತೆ ಮಂಗಳವಾರ …

Read More »

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಹತ್ಯೆ ಮಾಡಿದ ಸೊಸೆ.!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಕ್ಷುಲ್ಲಕ ವಿಷಯಕ್ಕೆ ತವರು ಮನೆಯವರನ್ನು ಕರೆಯಿಸಿ ಅತ್ತೆ, ಗಂಡನ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾದ ಅತ್ತೆ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಮಹಾಬೂಬಿ ಯಾಕೂಶಿ (53) ಎಂಬುವವರೆ ಸಾವನ್ನಪ್ಪಿದ್ದ ದುರ್ದೈವಿ ಅತ್ತೆ. ಕಳೆದ ಮೇ. 22ರಂದು ಸೊಸೆ ಮೇಹರೂಣಿ ಯಾಕೂಶಿ, ತನ್ನ ಇಬ್ಬರು ಸಹೋದರರ ಜೊತೆ ಸೇರಿ ಹಲ್ಲೆ ಮಾಡಿದ್ದಳು. ಈ ವೇಳೆ ರಾಡ್‌ನಿಂದ ಗಂಡ ಸುಬಾನ್ ಮತ್ತು ಅತ್ತೆ …

Read More »

ಇಂಧನ ಸಚಿವರ ಹೇಳಿಕೆ ಆಶ್ಚರ್ಯ ತಂದಿದೆ: ಎಲ್ಲರಿಗೂ 200 ಯೂನಿಟ್ ವಿದ್ಯುತ್ ಕೊಡಬೇಕೆಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

ಬೆಂಗಳೂರು: ”ಇಂಧನ ಸಚಿವ ಕೆ‌ ಜೆ ಜಾರ್ಜ್ ಹೇಳಿಕೆ ಬಹಳ ಆಶ್ಚರ್ಯ ಉಂಟುಮಾಡಿದೆ” ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಹೊಸದಾಗಿ ಮನೆ ಕಟ್ಟಿದವರು ಹಾಗೂ ಹೊಸ ಬಾಡಿಗೆದಾರರಿಗೆ 58 ಯೂನಿಟ್ ಉಚಿತ ಅಂತ ಹೇಳಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವೆಂದು ಹೇಳಿದ್ದಾರೆ. ನೀವು ಕೊಟ್ಟಿರುವ ಭರವಸೆ ಹಿನ್ನೆಲೆಯಲ್ಲಿ ಜನರು ನಿಮಗೆ ವೋಟ್ ಕೊಟ್ಟಿದ್ದಾರೆ. …

Read More »

ಬಿಲ್ ಎಷ್ಟೇ ಬಂದರೂ ಎಲ್ಲರೂ ಅದನ್ನು ಕಡ್ಡಾಯವಾಗಿ ತುಂಬಬೇಕು.: ಹೆಸ್ಕಾಂ ಎಂಡಿ

ಬೆಳಗಾವಿ : ಸರ್ಕಾರ ಹಾಗೂ ಹೆಸ್ಕಾಂ ವತಿಯಿಂದ ಲೆಕ್ಕಾಚಾರ ಮಾಡಿದ ಹಾಗೆಯೇ ವಿದ್ಯುತ್ ದರ ನಿಗದಿಪಡಿಸಲಾಗಿದೆ. ವಿದ್ಯುತ್ ದರ ಹೆಚ್ಚಳ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಇದಕ್ಕೆ ಪರಿಹಾರ ಸೂಚಿಸಿದರೆ ಅದನ್ನು ಅನುಷ್ಠಾನ ಮಾಡಲಾಗುವುದು. ಹೀಗಾಗಿ ವಿದ್ಯುತ್ ಬಿಲ್ ಎಷ್ಟೇ ಬಂದರೂ ಎಲ್ಲರೂ ಅದನ್ನು ಕಡ್ಡಾಯವಾಗಿ ತುಂಬಲೇಬೇಕು ಎಂದು ಹೆಸ್ಕಾಂ ಎಂ.ಡಿ. ಮಹಮ್ಮದ್ ರೋಷನ್ ಹೇಳಿದರು. ಮಂಗಳವಾರ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಉದ್ಯಮಿಗಳ ಜೊತೆಗೆ ಅವರು ಸಭೆ ನಡೆಸಿದರು. …

Read More »

ಟ್ರಾಪಿಕ್ ಸಮಸ್ಯ ಕುರಿತು ಸ್ವತಃ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಸಂಜೀವ್ ಪಾಟೀಲ್ ಬಗ್ಗೆ ಗಮನ ಹರಿಸಿ ಯೋಗ್ಯ ರೀತಿಯಲ್ಲಿ ಕ್ರಮ ಕೈಗೊಂಡ

ಬೆಳಗಾವಿ ಜಿಲ್ಲೆಯ ಪಟ್ಟಣಗಳ ಮುಖ್ಯ ರಸ್ತೆಗಳಲ್ಲಿ ಟ್ರಾಪಿಕ್ ಸಮಸ್ಯ ಕುರಿತು ಸ್ವತಃ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಸಂಜೀವ್ ಪಾಟೀಲ್ ಬಗ್ಗೆ ಗಮನ ಹರಿಸಿ ಯೋಗ್ಯ ರೀತಿಯಲ್ಲಿ ಕ್ರಮ ಕೈಗೊಂಡರು ತಾಲೂಕಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲು ತುಂಬ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಜಿಲ್ಲಾ ಎಸ್ ಪಿ ಸಂಜೀವ್ ಪಾಟೀಲ್ ಅವರಿಗೆ ದೂರು ನೀಡಿದ್ದರು. ಆ ಹಿನ್ನಲೆಯಲ್ಲಿ ಇವತ್ತು ನಿಪ್ಪಾಣಿ ನಗರ ಸವದತ್ತಿ, ಖಾನಾಪುರ, ಕುಡುಚಿ ಹಾರೋಗೇರಿ ಯರಗಟ್ಟಿ,ಗೋಕಾಕ ನಗರಗಳ ಪ್ರಮುಖ ಮಾರುಕಟ್ಟೆ …

Read More »

ಮಳೆಗಾಲ ಆರಂಭವಾದರೂ ಉತ್ತರ ಕರ್ನಾಟದಲ್ಲಿ ಮಾತ್ರ ಬರಗಾಲ

ಚಿಕ್ಕೋಡಿ: ಮಳೆಗಾಲ ಆರಂಭವಾದರೂ ಉತ್ತರ ಕರ್ನಾಟದಲ್ಲಿ ಮಾತ್ರ ಬರಗಾಲದ ಛಾಯೆ ಕಾಣ್ತಿದೆ. ಜೀವಜಲಕ್ಕಾಗಿ ಜನರು ಸೇರಿದಂತೆ ಜಾನವಾರುಗಳಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳೆಗಳಂತೂ ಸಂಪೂರ್ಣವಾಗಿ ಒಣಗಿ ಹೋಗಿ ಮಳೆರಾಯನ ಆಗಮನಕ್ಕಾಗಿ ರೈತಾಪಿ ವರ್ಗ ಎದುರು ನೋಡುತ್ತಿದೆ. ಚಿಕ್ಕೋಡಿ ಉಪವಿಭಾಗದ ಬಹುತೇಕ ಹಳ್ಳಿಗಳಿಗೆ ಬರದ ಛಾಯೆ ಎದ್ದು ಕಾಣ್ತಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಬೆಳೆಗಳು ನಾಶವಾದರೂ ಪರವಾಗಿಲ್ಲ ಆದರೆ, ಊರ ಜನ ಜಾನುವಾರುಗಳಿಗೆ ಯಾವುದೇ ಅನಾನುಕೂಲವಾಗದು ಎಂದು ತಮ್ಮ ಬಾವಿಯ ನೀರನ್ನು …

Read More »

ಶಕ್ತಿ ಯೋಜನೆ ಎಫೆಕ್ಟ್… ಖಾಸಗಿ ಬಸ್​ಗಳ ‘ಖಾಲಿ’ ಓಡಾಟ.

ಚಾಮರಾಜನಗರ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಮಹಿಳೆಯರಲ್ಲಿ ಸಂತಸ ಮೂಡಿಸಿದ್ದರೇ, ಖಾಸಗಿ ಬಸ್​ ಮಾಲೀಕರಿಗೆ ಸಂಕಷ್ಟ ತಂದಿಟ್ಟಿದೆ. ಚಾಮರಾಜನಗರ ಜಿಲ್ಲಾ ಕೇಂದ್ರದಿಂದ ಸುಮಾರು 70ರಿಂದ 80 ಖಾಸಗಿ ಬಸ್​ಗಳು ದಿನನಿತ್ಯ ಸಂಚರಿಸುತ್ತಿವೆ. ಉಚಿತ ಪ್ರಯಾಣದಿಂದ ಮಹಿಳೆಯರು ಸರ್ಕಾರಿ ಬಸ್​ಗಳ ಕಡೆ ಮುಖ ಮಾಡಿದ್ದಾರೆ. ಖಾಸಗಿ ಬಸ್​ಗಳಲ್ಲಿ ಪ್ರಯಾಣಿಕರು ಬಾರದಿದ್ದರಿಂದ ಖಾಸಗಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿದ್ದ ದೃಶ್ಯಗಳು ಕಂಡುಬಂದವು. ಟಂಟಂ, ಖಾಸಗಿ ಬಸ್​ಗಳನ್ನು ಆಶ್ರಯಿಸಿದ್ದ ಪ್ರಯಾಣಿಕರು ಈಗ ಕೆಎಸ್​ಆರ್​ಟಿಸಿ ಬಸ್​ಗಳತ್ತ …

Read More »

ಹಾವೇರಿ : ಸರ್ಕಾರಿ ಬಸ್​​ನಿಂದ ಬಿದ್ದು ಶಾಲಾ ಬಾಲಕಿ ಸಾವು

ಹಾವೇರಿ : ಸರ್ಕಾರಿ ಸಾರಿಗೆ ಬಸ್​​ನಿಂದ ಬಿದ್ದು ಶಾಲಾ ಬಾಲಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮಧು ಕುಂಬಾರ(14) ಎಂದು ಗುರುತಿಸಲಾಗಿದೆ. ಬಾಲಕಿಯು ವಾಸನ ಗ್ರಾಮದಿಂದ ಕುಸನೂರು ಗ್ರಾಮದಲ್ಲಿರುವ ಪ್ರೌಢಶಾಲೆಗೆ ಆಗಮಿಸುವ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಬಸ್​ ಜನರಿಂದ ತುಂಬಿದ್ದ ಕಾರಣಕ್ಕಾಗಿ ಬಾಲಕಿ ಬಾಗಿಲ ಬಳಿಯೇ ಬಾಲಕಿ ನಿಂತಿದ್ದಳು. ಅಲ್ಲದೆ ರಸ್ತೆ ಕೂಡ ಹದಗೆಟ್ಟಿತ್ತು ಎಂದು ಹೇಳಲಾಗಿದೆ. …

Read More »

ಕೈಗಾರಿಕೆಗಳ ವಿದ್ಯುತ್ ದರ ಇಳಿಸಿ – ಸರ್ಕಾರಕ್ಕೆ ಏಳು‌ ದಿನಗಳ‌ ಗಡುವು ಕೊಟ್ಟ ಬೆಳಗಾವಿ ಉದ್ಯಮಿಗಳು

ಬೆಳಗಾವಿ: ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಹೆಚ್ಚಳ ಮಾಡಿರುವುದಕ್ಕೆ ಕೈಗಾರಿಕೋದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಳು ದಿನಗಳೊಳಗೆ ಹೆಚ್ಚಿಸಿರುವ ವಿದ್ಯುತ್ ದರ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬೆಳಗಾವಿ ಚೇಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ರೋಹನ್ ಜುವಳಿ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಳಗಾವಿಯಲ್ಲಿ “ಈಟಿವಿ ಭಾರತ” ಜೊತೆಗೆ ಅವರು ಮಾತನಾಡಿದರು. ನಾಳೆ ಬೆಳಗ್ಗೆ ಚನ್ನಮ್ಮ ವೃತ್ತದಿಂದ ಮೌನ ರ್‍ಯಾಲಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ …

Read More »