ಬೆಳಗಾವಿ – ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗಿರೋದು ಒಂದು ಅಭ್ಯರ್ಥಿ ಗೆಲ್ಲಿಸುವ ಸಾಮರ್ಥ್ಯ. ಕಾಂಗ್ರೆಸ್ ಗೆ ಕೂಡ ಒಂದು ಅಭ್ಯರ್ಥಿ ಗೆಲ್ಲಿಸಿಕೊಳ್ಳುವ ಸಾಮರ್ಥ್ಯವಿದೆ. ಹಾಗಾಗಿ ಕವಟಗಿಮಠ ಅಥವಾ ಲಖನ್ ಜಾರಕಿಹೊಳಿ ಇಬ್ಬರಲ್ಲಿ ಒಬ್ಬರು ಸೋಲುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗಿರುವ ಮತ ಸಾಮರ್ಥ್ಯದಿಂದ ಒಬ್ಬರು ಮಾತ್ರ ಗೆಲ್ಲಲು ಸಾಧ್ಯವಿದೆ. ಇಬ್ಬರನ್ನು ಗೆಲ್ಲಿಸುವ ಶಕ್ತಿ ಅವರಿಗಿಲ್ಲ. ಯಾರನ್ನು ಗೆಲ್ಲಿಸುತ್ತಾರೆ ನೋಡೋಣ ಎಂದರು. ಡಿಕೆ.ಶಿವಕುಮಾರ …
Read More »ಒಮಿಕ್ರಾನ್ಗೆ ಇಂದು ತಜ್ಞರ ಜೊತೆಗೂಡಿ CM ಮಂತ್ರ; ರಾಜ್ಯದಲ್ಲಿ ಜಾರಿಯಾಗುತ್ತಾ ಟಫ್ ರೂಲ್ಸ್..?
ನವದೆಹಲಿ: ಆ ವೈರಿ ವೈರಸ್ ಭಾರತಕ್ಕೆ ಬರುತ್ತಾ? ಬರಬಹುದಾ? ಒಂದು ವೇಳೆ ಬಂದ್ರೆ ಮುಂದೇನು? ಅಂತಾ ಕಾಡಿದ್ದ ಪ್ರಶ್ನೆಗಳ ಗೊಂದಲಿಗೆ ಒಂದು ಉತ್ತರವಂತೂ ಸಿಕ್ಕಿದೆ. ಇಡೀ ಭಾರತದಲ್ಲೇ ಮೊದಲ ಬಾರಿಗೆ ಒಮಿಕ್ರಾನ್ ಕಾಣಿಸಿಕೊಂಡಿದೆ. ಬೆಂಗಳೂರಿನ ಏರ್ಪೋರ್ಟ್ ಗೇಟ್ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟ, ಒಮಿಕ್ರಾನ್ ಓಡಿಸಲು ಸಿಎಂ ಬೊಮ್ಮಾಯಿ ಇಂದು ಮಹತ್ವದ ಮೀಟಿಂಗ್ ಫಿಕ್ಸ್ ಮಾಡಿದ್ದಾರೆ. ಇಬ್ಬರು ವ್ಯಕ್ತಿಗಳಲ್ಲಿ ರಹಸ್ಯವಾಗಿ ಅಡಗಿ ಕೂತು ಸೌತ್ ಆಫ್ರಿಕಾದಿಂದ ಸದ್ದಿಲ್ಲದೇ ವಿಮಾನದ ಮೂಲಕ …
Read More »ರಾಜ್ಯದಲ್ಲಿ ಐದು ಜನಕ್ಕೆ ಹರಡಿದೆ ಓಮಿಕ್ರಾನ್: ಬಿಬಿಎಂಪಿ ಸ್ಪಷ್ಟನೆ
ಬೆಂಗಳೂರು ಡಿಸೆಂಬರ್ 2: ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಎರಡಲ್ಲ ಐದು ಜನಕ್ಕೆ ಹರಡಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಿಲಿಕಾನ್ ಸಿಟಿಗೆ ಓಮಿಕ್ರಾನ್ ಬಿಗ್ ಶಾಕ್ ಕೊಟ್ಟಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನ ಓಮಿಕ್ರಾನ್ ವೈರಸ್ ಸೋಂಕಿತ ಐದು ಪ್ರಕರಣಗಳು ದಾಖಲಾಗಿವೆ ಎಂದು ಗೌರವ್ ಗುಪ್ತ ಸ್ಪೋಟಕ ಮಾಹಿತಿ ನೀಡಿದ್ದಾರೆ. ಕರ್ನಾಟಕದ ಮೂಲಕವೇ ಭಾರತದಲ್ಲಿ ಮೊದಲ ಬಾರಿಗೆ ಐದು ಓಮಿಕ್ರಾನ್ …
Read More »ಭಾರೀ ಮಳೆಗೆ ಬೆಳಗಾವಿಯಲ್ಲಿ ನೆಲಕ್ಕುರುಳಿದ ಭಾರೀ ಮರ, ಕೆಲಕಾಲ ಟ್ರ್ಯಾಫಿಕ್ ಜ್ಯಾಮ್
ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಿಲಿಟರಿ ಮಹಾದೇವ ಮಂದಿರದ ಹಿಂದಿನ ಕ್ಯಾಂಪ್ನ ಸ್ಯಾಪಲ್ ರಸ್ತೆಯಲ್ಲಿ ಗುಲ್ಮೋಹರ್ ರಸ್ತೆಯಲ್ಲಿ ಇಂದು 1.20ರ ಸುಮಾರಿಗೆ ನೆಲಕ್ಕುರುಳಿದೆ. ಇದರ ಪರಿಣಾಮ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜ್ಯಾಮ್ ಉಂಟಾಗಿತ್ತು.ಇನ್ನು ಮರವು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಇನ್ನು ಕಾರೊಂದು ಇದೇ ಮಾರ್ಗವಾಗಿ ಹೋಗುತ್ತಿರುವಾಗ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದೆ. ಇನ್ನು ಕೂಡಲೇ ಸ್ಥಳಕ್ಕೆ ಆಗಮಿಸಿದ ಟ್ರ್ಯಾಫಿಕ್ ಎಎಸ್ಐ ಅಶೋಕ್ ಹಾಗೂ …
Read More »ಚಮಕ್ ಚಮಕ್ ಲೈಟ್ ಹಚ್ಚಿಕೊಂಡು ಹೊಸ ಬಸ್ ಬರುತ್ತಿವೆ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಅಥಣಿ : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ 4 ಸಾವಿರಕ್ಕೂ ಅಧಿಕ ಮತಗಳಿವೆ. ಅವುಗಳನ್ನು ಹಿಡಿದಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಇದರ ನಡುವೆ ಹೊಸ ಹೊಸ ಬಸ್ಗಳಲ್ಲಿ ಚಮಕ್ ಚಮಕ್ ಲೈಟು ಹಚ್ಚಿಕೊಂಡು ಬರುತ್ತಿದ್ದಾರೆ. ಹೊಸ ಬಸ್ಗಳು ಜಾತ್ರೆ ಮಾಡಿಕೊಂಡು ಹೋಗುತ್ತಾರೆ, ಹಳೆ ಬಸ್ಗಳೇ ರೆಗ್ಯುಲರಾಗಿ ಇರುತ್ತವೆ. ಇದರಿಂದ ಮತದಾರಿಗೆ ತಿಳುವಳಿಕೆ ನೀಡಲು ಎರಡನೇ ಬಾರಿ ಅಥಣಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ …
Read More »ಸುವರ್ಣ ವಿಧಾನಸೌಧ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರ ಪಿ.ಹೇಮಲತಾ
ಬೆಳಗಾವಿ: ವಿಧಾನಮಂಡಲ ಚಳಿಗಾಲ ಅಧಿವೇಶನ ಇದೇ ಡಿಸೆಂಬರ್13 ರಿಂದ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಪಿ.ಹೇಮಲತಾ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಬುಧವಾರ (ಡಿ.1) ಭೇಟಿ ನೀಡಿದ ಅವರು ಎಲ್ಲ ಸಿದ್ಧತೆಗಳನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ವಿಧಾನಸಭೆ, ಸಭಾಧ್ಯಕ್ಷರ ಕೊಠಡಿ, ಬ್ಯಾಂಕ್ವೆಟ್ ಸಭಾಂಗಣ, ಶಾಸಕರ ಹಾಗೂ ವಿರೋಧ ಪಕ್ಷದ ಮೊಗಸಾಲೆ, ಸೆಂಟ್ರಲ್ ಹಾಲ್, ಊಟದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯನ್ನು, ಕಾರ್ಯದರ್ಶಿಗಳ ಕ್ಯುಬಿಕಲ್ಸ್ …
Read More »ಬೆಳಗಾವಿ ಮಾರ್ಕೆಟ್ ಪೊಲೀಸರಿಂದ ಇಸ್ಪೀಟ್ ಅಡ್ಡೆ ಮೇಲೆ ದಾಳಿ: 9 ಮಂದಿ ಬಂಧನ
ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಇಸ್ಪೀಟ್ ಆಡುತ್ತಿದ್ದ ಬರೊಬ್ಬರಿ 9 ಮಂದಿಗೆ ಹೆಡೆಮುರಿ ಕಟ್ಟಿದ್ದಾರೆ. ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿ ಅವರ ನೇತೃತ್ವದ ತಂಡವು ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾಧ್ವ ರೋಡ ಬಳಿ ದಾಳಿ ಮಾಡಿದ್ದಾರೆ. ಈ ವೇಳೆ 9 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರಿಂದ 1,03,440 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ : ಶಾಲೆಗಳಿಗೆ ರಜೆ
ಹುಬ್ಬಳ್ಳಿ: ಇಲ್ಲಿನ ಆದರ್ಶ ನಗರದ ಜಿ.ವಿ. ಜೋಶಿ ರೋಟರಿ ಶಾಲೆಯ ಒಬ್ಬ ವಿದ್ಯಾರ್ಥಿಗೆ ಬುಧವಾರ ಕೋವಿಡ್ ದೃಢಪಟ್ಟಿದ್ದು, ಡಿ. 5ರ ವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ. ಇತ್ತೀಚೆಗೆ ಎಸ್ಡಿಎಂ ಕಾಲೇಜಿನ ಹಲವು ವಿದ್ಯಾರ್ಥಿಗಳಿಗೆ ಕೋವಿಡ್ ಆಗಿತ್ತು. ಜೋಶಿ ಶಾಲೆಯ ವಿದ್ಯಾರ್ಥಿ ಅಲ್ಲಿನವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ‘ಜೋಶಿ ಶಾಲೆಯ ಒಬ್ಬ ವಿದ್ಯಾರ್ಥಿಗೆ ಕೋವಿಡ್ ದೃಢವಾಗಿದ್ದು, ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಶಿಕ್ಷಕರು ಹಾಗೂ ಸಿಬ್ಬಂದಿ ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದ …
Read More »ನಾಲ್ವರ ಆತ್ಮಹತ್ಯೆ ಪ್ರಕರಣದ: ಪತ್ರಕರ್ತ ಹಲ್ಲೇಗೆರೆ ಶಂಕರ್ ಹಾಗೂ ಆತನ ಇಬ್ಬರು ಅಳಿಯಂದಿರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ
ಬೆಂಗಳೂರು: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಬ್ಯಾಡರಹಳ್ಳಿ ಪೊಲೀಸರು, ಪತ್ರಕರ್ತ ಹಲ್ಲೇಗೆರೆ ಶಂಕರ್ ಹಾಗೂ ಆತನ ಇಬ್ಬರು ಅಳಿಯಂದಿರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ತಿಗಳರಪಾಳ್ಯದಲ್ಲಿ ವಾಸವಿದ್ದ ಭಾರತಿ (51), ಅವರ ಮಕ್ಕಳಾದ ಸಿಂಚನಾ (34), ಸಿಂಧುರಾಣಿ (33) ಹಾಗೂ ಮಧುಸಾಗರ್ (25) ಆತ್ಮಹತ್ಯೆ ಮಾಡಿಕೊಂಡಿದ್ದರು ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಭಾರತಿ ಅವರ ಪತಿ ಶಂಕರ್ ಹಾಗೂ ಅಳಿಯಂದಿರನ್ನು ಬಂಧಿಸಲಾಗಿತ್ತು. ಮೂವರು ಸದ್ಯ …
Read More »ಬೆಳಗಾವಿಯಲ್ಲಿ ನಡೆಯಲಿದೆ ಚಳಿಗಾಲ ಅಧಿವೇಶನ
ಬೆಂಗಳೂರು: ಕೊರೊನಾ ಆತಂಕ ಕಡಿಮೆಯಾದ್ರೂ ರೂಪಾಂತರಿಯ ಆತಂಕ ಕಡಿಮೆಯಾಗ್ತಿಲ್ಲ. ಈಗ ಎಲ್ಲೆಲ್ಲೂ ಓಮಿಕ್ರಾನ್ ಭಯ ಶುರುವಾಗಿದೆ. ಇದು ಅಧಿವೇಶನಕ್ಕೂ ತಟ್ಟುತ್ತಾ ಎಂಬ ಅನುಮಾನ ಕಾಡುತ್ತಿದೆ. ಕೊವೀಡ್ ಬಿಗಿ ಕ್ರಮಗಳೊಂದಿಗೆ ಸದನ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ. ನಿಗಧಿಯಂತೆ 13 ರಿಂದ 26ರವರೆಗೆ ಅಧಿವೇಶನ ನಡೆಸಲು ಸಿದ್ದತೆ ನಡೆಸಲಾಗಿದೆ. ಈ ಹಿನ್ನೆಲೆ ಇಂದು ಸಂಜೆ ಬೆಳಗಾವಿಗೆ ತೆರಳುತ್ತಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ತಿಳಿಸಿದ್ದಾರೆ. ಅಧಿವೇಶನದ ಹಿನ್ನೆಲೆ ಸ್ಪೀಕರ್ ನಾಳೆ …
Read More »
Laxmi News 24×7