Breaking News

ಜಿಲ್ಲೆ

ಹಾನಗಲ್‌ನಲ್ಲಿ ಮತ್ತೆ 3 ದಿನ ಸಿಎಂ ಮೊಕ್ಕಾಂ

ಬೆಂಗಳೂರು: ಹಾನಗಲ್‌ ವಿಧಾನಸಭೆ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರದಿಂದ ಮೂರು ದಿನ ಹಾನಗಲ್‌ನಲ್ಲಿಯೇ ಮೊಕ್ಕಾಂ ಹೂಡಲಿದ್ದಾರೆ. ರವಿವಾರ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರು ಪರ ಪ್ರಚಾರ ನಡೆಸಿ, ಹುಬ್ಬಳ್ಳಿಗೆ ಆಗಮಿಸಿದ್ದ ಅವರು ಸೋಮವಾರದಿಂದ ಹಾನಗಲ್‌ನಲ್ಲಿ ನಿರಂತರ ಪ್ರಚಾರ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆಂದು ತಿಳಿದು ಬಂದಿದೆ. ಬಿಜೆಪಿಯ ಗೆಲುವಿನ ಅಂತರವನ್ನು ಹೆಚ್ಚಿಸುವ ಮೂಲಕ ತಮ್ಮ ನಾಯಕತ್ವವನ್ನು ಸಾಬೀತುಪಡಿಸಲು ಸಿಎಂ ಈ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಬಿಎಸ್‌ವೈ …

Read More »

ಕಿತ್ತೂರು ರಾಣಿ ಚನ್ನಮ್ಮನಿಂದಾಗಿ ಅಧಿಕಾರ ಹೋದರೆ ಸಂತಸಪಡುವೆ: ಸಿ.ಎಂ ಬೊಮ್ಮಾಯಿ

ಬೆಳಗಾವಿ: ‘ಕಿತ್ತೂರು ರಾಣಿ ಚನ್ನಮ್ಮನ ಸಲುವಾಗಿ ಯಾವುದೇ ಮೂಢನಂಬಿಕೆ ನನಗೆ ಅಡ್ಡಬರುವುದಿಲ್ಲ. ಚನ್ನಮ್ಮನ ಸಲುವಾಗಿ ಅಧಿಕಾರ ಹೋದರೆ ಬಹಳ ಸಂತೋಷಪಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಿಲ್ಲೆಯ ಕಿತ್ತೂರಿನಲ್ಲಿ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಕಿತ್ತೂರಿಗೆ ಬಂದ ಮುಖ್ಯಮಂತ್ರಿ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯಕ್ಕೆ ಸಡ್ಡು ಹೊಡೆದಿದ್ದೀರಿ’ ಎಂಬ ಪ್ರಶ್ನೆಗೆ, ‘ಚಾಮರಾಜನಗರಕ್ಕೆ ಹೋಗಬೇಡ ಎಂದಿದ್ದರು ಹೋಗಿದ್ದೆ. ಕಿತ್ತೂರಿಗೆ ಬರಬೇಡ ಎಂದಿದ್ದರು ಬಂದಿದ್ದೇನೆ. ಹಿಂದೆ ಕಾಕತಾಳೀಯವಾಗಿ …

Read More »

ಕಂಬಳಿ ಹೊದ್ದುಕೊಳ್ಳುವ ಯೋಗ್ಯತೆ ಬಗ್ಗೆ ವಿವರಿಸಿದ ಸಿಎಂ ಬಸವರಾಜ ಬೊಮ್ಮಾಯಿ!

ವಿಜಯಪುರ, ಅ. 24: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಂಬಳಿ ಹೊದ್ದುಕೊಳ್ಳುವ ಯೋಗ್ಯತೆ ಇಲ್ಲವಾ? ಯಾಕೆಂದರೆ ಹೇಳುವ ಮೂಲಕ ಪರೋಕ್ಷ ವಾಗ್ದಾಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಉಪ ಚುನಾವಣೆ ಅತ್ಯಂತ ಪ್ರತಿಷ್ಠೆಯ ವಿಷಯವಾಗಿದೆ. ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ಬಳಿಕ ಎದುರಾಗಿರುವ ಸವಾಲು ಎದುರಿಸಲು ಉಪ ಸಮರ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಸಿಎಂ ಬೊಮ್ಮಾಯಿ ಮಿಂಚಿನ ಸಂಚಾರ ನಡೆಸಿ ಪ್ರಚಾರ ಮಾಡುತ್ತಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ …

Read More »

ಚಿಕ್ಕಬಳ್ಳಾಪುರ: ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ಚಿಕ್ಕಬಳ್ಳಾಪುರ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆ ದಾಟಲು ಹೋಗಿ ಕೊಚ್ಚಿ ಹೋದ ಯುವಕ ಪ್ರಾಣಾಪಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕಮ್ಮಗುಟ್ಟನಹಳ್ಳಿ ವ್ಯಾಪ್ತಿಯ ನವಿಲುಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆ ಕಾರಣ ರಸ್ತೆ ಮೇಲೆ ರಭಸವಾಗಿ ನೀರು ಹರಿಯುತ್ತಿತ್ತು. ಈ ವೇಳೆ ಬೈಕ್ ಮೂಲಕ ಯುವಕ ರಸ್ತೆ ದಾಟಲು ಮುಂದಾಗಿದ್ದು ಈ ವೇಳೆ ಕೊಚ್ಚಿ ಹೋಗುತ್ತಿದ್ದ ಯುವಕನನ್ನ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ರಕ್ಷಣೆ ಮಾಡಿದ್ದಾರೆ. ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆಯಲ್ಲಿ …

Read More »

ಕಿತ್ತೂರು ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮ

ಬೆಳಗಾವಿ: ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮನ ಸೈನ್ಯದ ವಿಜಯೋತ್ಸವದ ಸವಿ ನೆನಪಿಗಾಗಿ ಆಚರಿಸಲ್ಪಡುವ ಕಿತ್ತೂರ ಉತ್ಸವಕ್ಕೆ ಈಗ ಬೆಳ್ಳಿ ಹಬ್ಬದ ಸಂಭ್ರಮ. ಕೊರೊನಾದ ಸಂಕಷ್ಟದ ಸಮಯದಲ್ಲೂ ಎರಡು ದಿನಗಳ ಕಾಲ ಉತ್ಸವವನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಸಿದ್ಧತೆಗಳು ನಡೆದಿವೆ. ಉತ್ಸವದಲ್ಲಿ ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳನ್ನು ಜನರ ಮನತಣಿಸಲಿವೆ. ಸೋಮವಾರ ಬೆಳಗಾವಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …

Read More »

ಕಿತ್ತೂರು ಉತ್ಸವಕ್ಕೆ ಸಿಗಲಿ ರಾಜ್ಯಮಟ್ಟದ ಮಾನ್ಯತೆ

ಬೆಳಗಾವಿ: ಸತತವಾಗಿ ಕಾಡುತ್ತಲೇ ಇರುವ ಕೊರೊನಾ ಹಾವಳಿ ನಡುವೆ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಇಡೀ ಕಿತ್ತೂರು ಸಂಸ್ಥಾನ ಸಜ್ಜಾಗಿದ್ದು, ಜಿಲ್ಲಾಡಳಿತ ಕೊರೊನಾ ಮಾರ್ಗಸೂಚಿ ಅನ್ವಯ ಎರಡು ದಿನಗಳ ಉತ್ಸವದ ಅರ್ಥಪೂರ್ಣ ಆಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಉತ್ಸವದ ಈ ಬಾರಿಯ ವಿಶೇಷ ಆಕರ್ಷಣೆ ಎಂದರೆ ಬಹಳ ವರ್ಷಗಳ ನಂತರ ಮುಖ್ಯಮಂತ್ರಿಗಳು ಉತ್ಸವದ ಉದ್ಘಾಟನೆಗೆ ಬರುತ್ತಿದ್ದಾರೆ. ಉತ್ಸವಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೂಢ ನಂಬಿಕೆ ಮಾತುಗಳಿಗೆ ಕಿವಿಗೊಡದೆ ಸಿಎಂ ಬಸವರಾಜ ಬೊಮ್ಮಾಯಿ ಉತ್ಸವದ …

Read More »

ಈ ಬಾರಿ ಕಿತ್ತೂರು ಉತ್ಸವದ complete details

ಬೆಳಗಾವಿ : ಕಿತ್ತೂರು ರಾಣಿ ಚನ್ನಮ್ಮ ಉತ್ಸವವು ಅ.೨೩ ಹಾಗೂ ೨೪ ರಂದು ಜರುಗಲಿದೆ. ಈ ಬಾರಿ ಕಿತ್ತೂರು ಉತ್ಸವದ (೨೫ ವರ್ಷ) ಬೆಳ್ಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಿತ್ತೂರಿನ ಕೋಟೆ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅ.೨೩ ರಂದು ಕಿತ್ತೂರಿನ ಕೋಟೆ ಆವರಣದಲ್ಲಿ ಸಾಯಂಕಾಲ ೭ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …

Read More »

ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕದ ತಂಡವನ್ನು ಪ್ರತಿನಿಧಿಸಲಿದ್ದಾನೆ

ಗೋಕಾಕ: ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿ ಮಹಾಂತಯ್ಯ ಮಲ್ಲಿಕಾರ್ಜುನ ಮಠದ ಇವರು ಇದೆ ತಿಂಗಳು 29ರಂದು ಹರಿಯಾಣ ರಾಜ್ಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕದ ತಂಡವನ್ನು ಪ್ರತಿನಿಧಿಸಲಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಯನ್ನು ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ ಬಿ ಮನ್ನಿಕೇರಿ, ಡಿಪಿಇಒ ಸಾಂಗಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ …

Read More »

90ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ 15ಪ್ರೌಢ ಶಾಲಾ ಕೋಠಡಿಗಳನ್ನು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ರಮೇಶ ಜಾರಕಿಹೊಳಿ

ಗೋಕಾಕ: ಕೊರೋನಾ ಆಘಾತದಿಂದ ಸಹಜ ಸ್ಥಿತಿಯತ್ತ ಶಾಲೆಗಳು ಪ್ರಾರಂಭವಾಗುತ್ತಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ಹಾಗೂ ಕಠೀಣ ಪರಿಶ್ರಮದಿಂದ ಶೈಕ್ಷಣಿಕವಾಗಿ ಪ್ರಗತಿಸಾಧಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಸರ್ವಶಿಕ್ಷಣ ಅಭಿಯಾನದಲ್ಲಿ 90ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ 15ಪ್ರೌಢ ಶಾಲಾ ಕೋಠಡಿಗಳನ್ನು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಾಲೆಗಳಲ್ಲಿ ಕೊರೋನಾ ವೈರಸ್ ನಿಯಂತ್ರಣ ನಿರ್ದೇಶನಗಳನ್ನು …

Read More »

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ‘ಪೊಲೀಸರು ತಪ್ಪಿತಸ್ಥರಲ್ಲ’ ಎಂದ ಸರ್ಕಾರ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್‌ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ. ಗೋಲಿಬಾರ್ ಘಟನೆ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ. ಗೋಲಿಬಾರ್ ಘಟನೆ ಸಂಬಂಧ ‌ಮ್ಯಾಜಿಸ್ಟ್ರೇಟ್ ತನಿಖೆ ಮುಗಿದಿದೆ. ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ …

Read More »