Breaking News

ಜಿಲ್ಲೆ

ಮೈಸೂರಲ್ಲಿ ದಸರಾ ಸಂಭ್ರಮ.. ರಾತ್ರಿ ಕಟ್ಟುನಿಟ್ಟಿನ ನೈಟ್ ಬೀಟ್​​ಗೆ DCP ಪಾಠ​..!

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಖಾಕಿ ಪಡೆ ಹೈ-ಅಲರ್ಟ್ ಆಗಿದೆ. ರಾತ್ರಿ ವೇಳೆ ಗಸ್ತು ಹೆಚ್ಚಿಸಿ, ಅಪರಾಧ ಪ್ರಕರಣಗಳ ಕಡಿವಾಣಕ್ಕೆ ಮುಂದಾಗಿದೆ. ನಗರದಲ್ಲಿ ಕಟ್ಟುನಿಟ್ಟಿನ ನೈಟ್ ಬೀಟ್ ಕಾರ್ಯಾಚರಣೆ ನಡೆಯುತ್ತಿದ್ದು, ಸಾರ್ವಜನಿಕರಿಗೆ ಮೈಸೂರು ಪೊಲೀಸರು ಅಭಯ ನೀಡುತ್ತಿದ್ದಾರೆ. ಜೊತೆಗೆ ನೈಟ್ ಬೀಟ್ ಸಂಬಂಧ ವಿವಿಧ ಠಾಣಾ ಸಿಬ್ಬಂದಿಗೆ ಡಿಸಿಪಿ ಮಾರ್ಗದರ್ಶನ ನೀಡಿದ್ದಾರೆ. ಸಾರ್ವಜನಿಕವಾಗಿ ರಸ್ತೆಯಲ್ಲೇ ಸಿಬ್ಬಂದಿಗೆ ಮಾರ್ಗದರ್ಶನವನ್ನ ಡಿಸಿಪಿ ಗೀತಾಪ್ರಸನ್ನ ನೀಡಿದ್ದಾರೆ. ರಾತ್ರಿ …

Read More »

ಯಡಿಯೂರಪ್ಪ ಆಪ್ತರಿಗೆ ಆಯಕಟ್ಟಿನ ಸ್ಥಾನಮಾನ: ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾಗಿ ಇಬ್ಬರ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಬ್ಬ ಮಾಜಿ ಶಾಸಕ ಮತ್ತು ಒಬ್ಬ ಹಾಲಿ ಶಾಸಕರನ್ನು ತಮ್ಮ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿಕೊಂಡಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಶೃಂಗೇರಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕವಾಗಿದ್ದಾರೆ. ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಎಂ.ಪಿ. ರೇಣುಕಾಚಾರ್ಯ ಮತ್ತು ಡಿ.ಎನ್. ಜೀವರಾಜ್ ಅವರು ಈ ಹಿಂದೆ ಬಿ ಎಸ್‌ ಯಡಿಯೂರಪ್ಪ …

Read More »

ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಮಧುಮೇಹ ತಪಾಸಣಾ ಕಾರ್ಯಕ್ರವiಕ್ಕೆ ತಹಶೀಲ್ದಾರ ಅವರು ಚಾಲನೆ ನೀಡುತ್ತಿರುವುದು.

ಗೋಕಾಕ ;- ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸಲು ಜನತೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ ಹೇಳಿದರು. ಬುಧವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಭಾರತದಾಧ್ಯಂತ ಒಂದೇ ದಿನದಲ್ಲಿ 10 ಲಕ್ಷ ಮಧುಮೇಹಿಗಳ ತಪಾಸಣಾ ಶಿಭಿರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ದೇಶದಲ್ಲಿ ಅತೀ ಹೆಚ್ಚು …

Read More »

ಕಳೆದ ಒಂದೂವರೆ ವರ್ಷದಲ್ಲಿ ವೈದ್ಯಕೀಯ ನಿರ್ಲಕ್ಷ್ಯದ 153 ದೂರು ದಾಖಲು

ಬೆಂಗಳೂರು: ಕಳೆದ ಒಂದೂವರೆ ವರ್ಷಗಳಲ್ಲಿ, ಕರ್ನಾಟಕ ವೈದ್ಯಕೀಯ ಮಂಡಳಿ (ಕೆಎಂಸಿ) ವೈದ್ಯಕೀಯ ನಿರ್ಲಕ್ಷ್ಯ ಮತ್ತು ವೃತ್ತಿಪರ ದುರ್ನಡತೆಗೆ ಸಂಬಂಧಿಸಿದಂತೆ 153 ದೂರುಗಳನ್ನು ಸ್ವೀಕರಿಸಿದೆ ಎಂದು ತಿಳಿದುಬಂದಿದೆ. 2020 ರಲ್ಲಿ 88 ದೂರುಗಳನ್ನು ಸ್ವೀಕರಿಸಿದ್ದು, 2021 ರಲ್ಲಿ 65 ದೂರುಗಳನ್ನು ಆಗಸ್ಟ್ ತಿಂಗಳವರೆಗೆ ದಾಖಲಿಸಿಕೊಳ್ಳಲಾಗಿದೆ. ಅಂತೆಯೇ ಹೊಸ ದೂರುಗಳ ಕುರಿತು 84 ಪ್ರತಿವಾದಿಗಳು ಅಥವಾ ಆಸ್ಪತ್ರೆಗಳಿಂದ ಪ್ರಾಥಮಿಕ ವಿವರಣೆಗಳನ್ನು ಕೇಳಲಾಗಿದೆ. ಆದಾಗ್ಯೂ, ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಲಾದ ಕೌನ್ಸಿಲ್ ಚುನಾವಣೆ ರಿಟ್ ಅರ್ಜಿಯ ಕಾರಣದಿಂದಾಗಿ ಎಲ್ಲಾ …

Read More »

ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮದಲ್ಲಿ ಬಸವರಾಜ ದೇಶನೂರ ಮಾತನಾಡುತ್ತಿರುವುದು. 

ಗೋಕಾಕ  ;- ನಗರಸಭೆಯಿಂದ “ಸ್ವಚ್ಛ ಭಾರತ ಮಿಷಣ್’ ಯೋಜನೆಯಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ ಬುಧವಾರದಂದು “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ದೇಶನೂರ ಅವರು ಮಾತನಾಡಿ, ನಗರವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ನಗರಸಭೆಯವರು ಕಸ ವಿಲೇವಾರಿ ಮಾಡುತ್ತಿದ್ದಾರೆ. ಈ ಕಾರ್ಯಕ್ಕೆ ಜನತೆಯು ನಗರಸಭೆಯವರು ತಿಳಿಸಿದಂತೆ ಒಣಕಸ, ಹಸಿಕಸ ಹಾಗೂ ಹಾನಿಕಾರಕ ಕಸವನ್ನು ಪ್ರತ್ಯೇಕಿಸಿ ನಗರಸಭೆಯ ವಾಹನಗಳಿಗೆ ನೀಡಬೇಕು. …

Read More »

ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದ ನಳೀನ್​ ಕುಮಾರ್ ಕಟೀಲ್.​..!

ಆರ್​​ಎಸ್​ಎಸ್​ನದ್ದು ತಾಲಿಬಾನ್​ ಸಂಸ್ಕೃತಿ ಎಂದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​​ ಭರ್ಜರಿ ಟಾಂಗ್​ ನೀಡಿದ್ದಾರೆ. ಮಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದು ಗುಡುಗಿದ್ರು. ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಆಡಳಿತದಲ್ಲಿ ಅನೇಕರ ಹತ್ಯೆಯಾಯ್ತು. ಅವರ ಆಡಳಿತದಲ್ಲಿ ರಾಜ್ಯದಲ್ಲಿ ತಾಲಿಬಾನ್​ ಸ್ಥಿತಿಯೇ ಇತ್ತು. ರಾಜ್ಯದಲ್ಲಿ 24 ಹಿಂದೂ ಯುವಕರನ್ನು ಕೊಲೆಗೈಯಲಾಯ್ತು. ದಕ್ಷಿಣ ಕನ್ನಡದಲ್ಲಿ …

Read More »

ಬೆಳಗಾವಿ ಮಹಾನಗರ ಪಾಲಿಕೆಗೆ ಶಾಕ್ ಕೊಟ್ಟ ಹೈಕೋರ್ಟ್.. ಏನಿದು ಪ್ರಕರಣ..?

ಬೆಳಗಾವಿ: ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಅಲರವಾಡದಲ್ಲಿ ನಿರ್ಮಾಣವಾಗ್ತಿದ್ದ ಎಸ್​ಟಿಪಿ ಘಟಕ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ಮಾಡಲು ಲೋಕಾಯುಕ್ತಕ್ಕೆ ಹೈಕೋರ್ಟ್ ಆದೇಶ ನೀಡಿದೆ. ಈಗಾಗಲೇ 2 ಕೋಟಿ ಖರ್ಚು ಮಾಡಿ ಬೇರೆ ಕಡೆ ನಿರ್ಮಾಣ ಮಾಡ್ತಿದೆ. ಮೊದಲು ಶುರುವಾಗಿದ್ದ ಜಾಗಕ್ಕೆ 2 ಕೋಟಿ ಖರ್ಚು ಮಾಡಿ ವ್ಯರ್ಥ ಮಾಡಿದೆ. ಬೆಳಗಾವಿ ಮ. ಪಾಲಿಕೆ ಈಗ ಬೇರೆ ಜಾಗದಲ್ಲಿ ನಿರ್ಮಾಣ ಮಾಡ್ತಿದೆ ಎನ್ನಲಾಗಿದೆ. ಪ್ರಕರಣದ ತನಿಖೆ …

Read More »

ಕುಡುಕುನ ವೇಷ ಧರಿಸಿ ಆರೋಪಿ ಬಂಧಿಸಿದ ಪೊಲೀಸರು.. 9 ವರ್ಷಗಳ ಹಿಂದಿನ ಕೇಸ್​ಗೆ ಕೊನೆಗೂ ಮುಕ್ತಿ

ಬೆಂಗಳೂರು: ಒಂಭತ್ತು ವರ್ಷದ ಹಿಂದಿನ ಪ್ರಕರಣವೊಂದನ್ನ ಪೊಲೀಸರು ಬೇಧಿಸಿದ್ದಾರೆ, ಕುಡುಕನ ಸೋಗಿನಲ್ಲಿ ಹೋಗಿ ಆರೋಪಿಯನ್ನ ಬಂಧಿಸಿದ್ದಾರೆ. ಟ್ರ್ಯಾಕ್ಟರ್ ಓಡಿಸುತ್ತಿದ್ದ ಆಂಥೋನಿ ಎಂಬಾತ ಆಟೋಗೆ ಡಿಕ್ಕಿಹೊಡೆದು ಪರಾರಿಯಾಗಿದ್ದನಂತೆ. ಘಟನೆಯಲ್ಲಿ 8 ವರ್ಷದ ಕೌಶಲ್ ಕುಮಾರ್​ ಎಂಬಾತ ಮೃತಪಟ್ಟಿದ್ದ. ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಬಾಪೂಜಿನಗರದಲ್ಲಿ ಘಟನೆ ನಡೆದಿತ್ತು. ಪ್ರಕರಣ ಸಂಬಂಧ ಆರೋಪಿಗೆ 10 ತಿಂಗಳು 15 ದಿನ ಜೈಲು ಶಿಕ್ಷೆಯಾಗಿತ್ತು. ಆತನಿಗೆ ಶಿಕ್ಷೆ ಪ್ರಕಟ ಆಗ್ತಿದ್ದಂತೆ ಆತ ತಲೆಮೆರೆಸಿಕೊಂಡಿದ್ದ. ಬಳಿಕ ವಿಳಾಸ ಬದಲಿಸಿಕೊಂಡು …

Read More »

ಸರಕಾರಿ ಕಾಲೇಜುಗಳಲ್ಲಿ ದಾಖಲಾತಿ ದಾಖಲೆ!

ಬೆಂಗಳೂರು: ರಾಜ್ಯದ ಸರಕಾರಿ ಕಾಲೇಜುಗಳಲ್ಲಿ ಪ್ರವೇಶಾತಿ ಹೊಸ ದಾಖಲೆ ಸೃಷ್ಟಿಸಿದ್ದು, ಉನ್ನತ ಶಿಕ್ಷಣದ ದಾಖಲಾತಿಯೂ ಹೆಚ್ಚಿದೆ. ದ್ವಿತೀಯ ಪಿಯುಸಿಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿ ರುವುದರಿಂದ ಪದವಿ, ವೃತ್ತಿಪರ ಕೋರ್ಸ್‌ಗಳಲ್ಲಿಯೂ ದಾಖಲಾತಿ ಹೆಚ್ಚಲಿದೆ ಎಂಬ ನಿರೀಕ್ಷೆಯನ್ನು ಈ ಹಿಂದೆಯೇ ಸರಕಾರ ಮಾಡಿತ್ತು. ಈಗ ಸರಕಾರಿ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಅಕ್ಟೋಬರ್‌ ಮೊದಲ ವಾರದ ವರೆಗೂ ಅವಕಾಶ ನೀಡಲಾಗಿದೆ. ರಾಜ್ಯದ 330 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಈಗಾಗಲೇ …

Read More »

ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರಿನಲ್ಲಿ ಇಂದು ಒಣ ಹಲವೆ ಇರಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka …

Read More »