Breaking News

ಜಿಲ್ಲೆ

ಚಿತ್ರಮಂದಿರ ಪೂರ್ಣ ತೆರೆಯಲು ಅವಕಾಶ: ಕೆಲವು ಜಿಲ್ಲೆಗಳಲ್ಲಿ ಮಾತ್ರ

ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಬಾಗಿಲು ಹಾಕಿದ್ದ ಚಿತ್ರಮಂದಿರಗಳು ಆ ನಂತರ ಸರ್ಕಾರದ ಆದೇಶದಂತೆ 50% ನಿಯಮಕ್ಕೆ ಬದ್ಧವಾಗಿ ಕೆಲಸ ಮಾಡುತ್ತಿದ್ದವು. ಇದೀಗ ಸರ್ಕಾರವು ಚಿತ್ರಮಂದಿರಗಳ ಮೇಲೆ ಕೃಪೆ ತೋರಿದ್ದು 100% ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ. ರಾಜ್ಯದ ಯಾವ ಜಿಲ್ಲೆಯಲ್ಲಿ ಕೊರೊನಾ ಶೇ 1ಕ್ಕಿಂತಲೂ ಕಡಿಮೆ ಪ್ರಸರಣ ಇದೆಯೋ ಆ ಜಿಲ್ಲೆಗಳಲ್ಲಿ ಮಾತ್ರವೇ ಚಿತ್ರಮಂದಿರಗಳು ಪೂರ್ಣವಾಗಿ ಬಾಗಿಲು ತೆರೆಯಬಹುದಾಗಿದೆ. ಯಾವ ಜಿಲ್ಲೆಗಳಲ್ಲಿ ಶೇ 1ಕ್ಕಿಂತಲೂ …

Read More »

ರಾಜ್ಯದಲ್ಲಿ ವಾರದೊಳಗೆ ಮಹತ್ವದ ಬದಲಾವಣೆಯಾಗಲಿದೆ: ಯತ್ನಾಳ

ಬೆಳಗಾವಿ: ‘ರಾಜ್ಯದಲ್ಲಿ ವಾರದೊಳಗೆ ಮಹತ್ವದ ಬದಲಾವಣೆಯಾಗಲಿದೆ. ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆಗೆದುಕೊಳ್ಳಲಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ಇಲ್ಲಿನ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಲಿಂಗಾಯತ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್‌ನಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೆರಳಲ್ಲ. ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಶಕ್ತಿ ಮತ್ತು ಅನುಭವ ಅವರಿಗಿದೆ. ಇನ್ನೊಂದು ವಾರದಲ್ಲಿ ಅವರು …

Read More »

ಸೋಮವಾರ ಭಾರತ್ ಬಂದ್: ಬೆಂಗಳೂರಲ್ಲಿ ರೈತರ ಪ್ರತಿಭಟನೆ ಹೇಗಿರುತ್ತೆ..?

ಬೆಂಗಳೂರು: ಸೆಪ್ಟೆಂಬರ್​ 27ರ ಭಾರತ್ ಬಂದ್ ಅನ್ನು ಯಶಸ್ವಿಗೊಳಿಸುವ ಸಲುವಾಗಿ ಬಹುತೇಕ ಎಲ್ಲ ಸಂಘಟನೆಗಳು ಬೆಂಬಲ ನೀಡಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿ ಭಾರತ ಬಂದ್​​ಗೆ ಬಹುತೇಕ ಸಂಘಟನೆಗಳ ಜೊತೆ ರೈತ ಸಂಘಟನೆಗಳ ಸಾಥ್ ಸಿಕ್ಕಿದೆ. ರೈತರೇ ಹೋರಾಟದ ಮುಂಚೂಣಿ ವಹಿಸಲಿದ್ದಾರೆ. ಕಾರ್ಮಿಕ ಸಂಘಟನೆಯೂ ಸಾಥ್ ನೀಡ್ತಿದೆ. ದಲಿತ ಸಮುದಾಯವೂ ಅಪಸ್ವರ ಎತ್ತಿಲ್ಲ ಬೇರೆ ಕಸುಬುಗಳ ಸಂಘಟನೆಗಳು ಬಂದ್‌ನಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದಿದ್ದಾರೆ. …

Read More »

ರವೀಂದ್ರ ಕೌಶಿಕ್ ಇ-ಗ್ರಂಥಾಲಯ ಜಗತ್ತಿಗೆ ಮಾದರಿ ಗ್ರಂಥಾಲಯ: ಶಾಸಕ ಅಭಯ್ ಪಾಟೀಲ

ಬೆಳಗಾವಿ: ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರನ್ನು ನೆನಪಿಸುವ ದೃಷ್ಟಿಯಿಂದ ಮರೆತು ಹೋಗಿದ್ದ ದೇಶ ಪ್ರೇಮಿ ರವೀಂದ್ರ ಕೌಶಿಕ್ ಅವರ ಹೆಸರನ್ನು ಇ- ಗ್ರಂಥಾಲಯಕ್ಕೆ ನಾಮಕರಣ ಮಾಡಲಾಗಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು. ರವೀಂದ್ರ ಕೌಶಿಕ್ ಇ ಲೈಬ್ರರಿ ಕುರಿತು ಮಾಹಿತಿ ನೀಡುತ್ತಿರುವ ಶಾಸಕ ಅಭಯ ಪಾಟೀಲನಗರದ ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ನಲ್ಲಿ ಶಿವಾಜಿ ಉದ್ಯಾನದ ಹತ್ತಿರವಿರುವ ರವೀಂದ್ರ ಕೌಶಿಕ್ ಇ-ಗ್ರಂಥಾಲಯದಲ್ಲಿ ಶನಿವಾರ (ಸೆ.25) ನಡೆದ ಪತ್ರಿಕಾಗೋಷ್ಠಿಯನ್ನ …

Read More »

ಯುಪಿಎಸ್ ಸಿ ಪರೀಕ್ಷೆಯಲ್ಲಿ ಬೆಳಗಾವಿಯ ಶಾಕೀರ್ ಅಹ್ಮದ್ ಗೆ 583ನೇ ರ್ಯಾಂಕ್

ಬೆಳಗಾವಿ: ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರಾಮಾಪುರಸೈಟ್ ಗ್ರಾಮದ ಶಾಕೀರ್ ಅಹ್ಮದ್ 583ನೇ ರ್ಯಾಂಕ್ ಪಡೆದಿದ್ದಾರೆ. ಶಾಕೀರ್ ಅಹ್ಮದ್ ಅವರು 2014ರಲ್ಲಿ ಕೆಪಿಎಸ್‌ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದರು. ಮತ್ತೆ 2015ರಲ್ಲಿ ಕೆಪಿಎಸ್‌ ಸಿ ಪರೀಕ್ಷೆ ಬರೆದು ಹೆಚ್ಚಿನ ಅಂಕದೊಂದಿಗೆ ತೇರ್ಗಡೆಯಾಗಿ ಹುಬ್ಬಳ್ಳಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಯುಪಿಎಸ್ ಸಿ …

Read More »

ವೈದ್ಯರ ಬದಲಿಗೆ ನರ್ಸ್​​​​ಗಳಿಂದ ಗರ್ಭಿಣಿ ಹೆರಿಗೆ; ನವಜಾತ ಗಂಡು ಮಗು ಸಾವು

ಬೆಂಗಳೂರು: ಗರ್ಭಿಣಿಗೆ ಡಾಕ್ಟರ್ ಬದಲು ನರ್ಸ್​ಗಳು ಹೆರಿಗೆ ಮಾಡಿಸಿದ್ದರಿಂದ ನವಜಾತ ಗಂಡು ಮಗು ಸಾವನಪ್ಪಿದೆ ಎಂಬ ಆರೋಪ ಕೇಳಿ ಬಂದಿದೆ. ನಗರದ ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವಿರುದ್ಧ ಹೀಗೊಂದು ಆರೋಪ ಖುದ್ದು ಮಗು ಕಳೆದುಕೊಂಡ ತಾಯಿ ಪವಿತ್ರ ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ. ಪಲ್ಲವಿ, ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚೆಕಪ್ ಮಾಡಿಸುತ್ತಿದ್ದರು. ಇನ್ನು ನಿನ್ನೆ ರಾತ್ರಿ 10.30ಕ್ಕೆ ಪವಿತ್ರಗೆ ಹೆರಿಗೆ ನೋವು ಕಾಣಿಸಿಕೊಂಡ ಈ ಹಿನ್ನೆಲೆ ಆಕೆಯನ್ನ ಆಸ್ಪತ್ರೆಗೆ …

Read More »

ಕೈ ಸನ್ನೆ ಮಾಡಿ ಕರೆದೊಯ್ದೊಳು- ಹಲ್ಲೆ ಮಾಡಿ ಹಣ ದೋಚಿದ್ರು

ಹುಬ್ಬಳ್ಳಿ: ನಗರದ ಹಳೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬಳು ಕೈ ಸನ್ನೆ ಮಾಡಿ ಯುವಕನೊಬ್ಬನನ್ನು ಆಟೋದಲ್ಲಿ ಬಂಜಾರ ಕಾಲನಿ ಬಳಿ ಕರೆದುಕೊಂಡು ಹೋಗಿ ಸಹಚರರಿಂದ ಹಲ್ಲೆ ಮಾಡಿ ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ.   ಹುಬ್ಬಳ್ಳಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಯಚೂರು ಮೂಲದ ಶಿರಡಿ ನಗರ ಹಾಸ್ಟೆಲ್‍ನಲ್ಲಿ ವಾಸವಿರುವ ಕುಮಾರ ಚವ್ಹಾಣ್ ಹಲ್ಲೆಗೀಡಾದ ಯುವಕ, ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದ ಕುಮಾರ ಚವ್ಹಾಣ್, ಬಟ್ಟೆ ಖರೀದಿಸಿ ಹಾಸ್ಟೆಲ್‍ಗೆ …

Read More »

ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಅಕ್ಟೋಬರ್ 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಅ.6 ರಿಂದ 8 ರವರೆಗೆ ರಾಮನಾಥ್ ಕೋವಿಂದ್ ರಾಜ್ಯ ಪ್ರವಾಸದಲ್ಲಿರಲಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6ರ ಸಂಜೆ 5.30ಕ್ಕೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಅ.07 ರ ಬೆಳಗ್ಗೆ 11.40ಕ್ಕೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ …

Read More »

ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಬರ್ತ್​​ ಡೇ ಪಾರ್ಟಿ, ಜಕ್ಕಲಮಡಗು ಹಿನ್ನೀರಿನಲ್ಲಿ ಶವವಾದ ಬೆಂಗಳೂರಿನ ಅಕ್ಸೆಂಚರ್ ಟೆಕ್ಕಿ

ಚಿಕ್ಕಬಳ್ಳಾಪುರ: ಬೆಂಗಳೂರು ನಗರದ ಸುಂಕದಕಟ್ಟೆಯ ಯುವಕ ಬರ್ತ್​​ ಡೇ ಪಾರ್ಟಿ ಆಗಮಿಸಿ ಜಕ್ಕಲಮಡಗು ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಈ ದುರ್ಘಟನೆ ನಡೆದಿದ್ದು, ಅಕ್ಸೆಂಚರ್ ಕಂಪನಿಯ ಸಾಫ್ಟ್​​ವೇರ್ ಎಂಜಿನಿಯರ್​ ರೋಹಿತ್ (24) ಮೃತಪಟ್ಟ ಯುವಕ. ಕುಡಿದ ಅಮಲಿನಲ್ಲಿ ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಅಕ್ಸೆಂಚರ್ ಸಾಫ್ಟ್​​ವೇರ್​ ಎಂಜಿನಿಯರ್ ರೋಹಿತ್ 5 ಮಂದಿ ಸ್ನೇಹಿತರೊಂದಿಗೆ ಬರ್ತ್​​ ಡೇ ಪಾರ್ಟಿ ಆಚರಣೆಗೆ ಬಂದಿದ್ದರು. ಆತನ ಸ್ನೇಹಿತರು ಹಿನ್ನೀರಿನಲ್ಲಿರುವ …

Read More »

ರಾಷ್ಟ್ರೀಯ ಶಿಕ್ಷಣ ನೀತಿ; ಕಾಂಗ್ರೆಸ್ ವಿರುದ್ಧ ಡಾ.ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕಾಂಗ್ರೆಸ್ ಪಕ್ಷ ದ್ವಂದ್ವ ನೀತಿ ಅನುಸರಿಸುವ ಮೂಲಕ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಗಂಭೀರ ಆರೋಪ ಮಾಡಿದರು. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಬೆಂಗಳೂರಿನಲ್ಲಿಂದು ಬಿಜೆಪಿ ಕೇಂದ್ರ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಹಿಂದಿನ ಕಾಂಗ್ರೆಸ್ ಸರಕಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಪ್ರಹಾರ ನಡೆಸಿದರು. ರಾಷ್ಟ್ರೀಯ …

Read More »