Breaking News

ಜಿಲ್ಲೆ

ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಈ ಭಾಗದಲ್ಲಿ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮೂರು ಬೊಲೇರೋ ವಾಹನ ನೀಡಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರದಂದು ಡಾಲ್ಮಿಯಾ ಭಾರತ ಸಿಮೆಂಟ್ ಲಿ., ಯಾದವಾಡ ಯುನಿಟ್‍ದಿಂದ 30 ಲಕ್ಷ ರೂ. ವೆಚ್ಚದ ಮೂರು …

Read More »

ಯತ್ನಾಳ್, ಬೆಲ್ಲದ್‍ಗೆ ಅಭಿನಂದನೆ ಸಲ್ಲಿಸಿದ ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಇಂದು 29ನೇ ದಿವಸಕ್ಕೆ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನ ಕಾಲಿಟ್ಟಿದೆ ಎಂದು ಬೆಳಗಾವಿಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಮೀಸಲಾತಿ ನೀಡುವ ವಿಚಾರವಾಗಿ ಧ್ವನಿ ಎತ್ತಿದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರ ಶಾಸಕರಿಗೆ ಈ ಮೂಲಕ ಅಭಿನಂದನೆಯನ್ನು ತಿಳಿಸಿದರು. ಮೀಸಲಾತಿ ನೀಡುವ ಬಗ್ಗೆ ಮಾರ್ಚ್ 15ರಂದು ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರ …

Read More »

ಕೆಎಸ್​ಆರ್​ಟಿಸಿ 4 ನಿಗಮಗಳಿಗೆ ಹೆಚ್ಚುವರಿ ಹಣ ನೀಡುವಂತೆ ಬಸವರಾಜ ಬೊಮ್ಮಾಯಿಗೆ ಮನವಿ

ಬೆಂಗಳೂರು: ಕೆಎಸ್​ಆರ್​ಟಿಸಿ ಸಂಸ್ಥೆ ಕುರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಮುಕ್ತಾಯಗೊಂಡಿದೆ. ವಿಧಾನಸೌಧದಲ್ಲಿ ಗುರುವಾರ ನಡೆದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಸಭೆ ಅಂತ್ಯಗೊಂಡಿದೆ. ಸಭೆಯಲ್ಲಿ 4 ನಿಗಮಗಳಿಗೆ ಹೆಚ್ಚುವರಿಯಾಗಿ ಹಣ ನೀಡುವಂತೆ ಮನವಿ ಮಾಡಲಾಗಿದೆ. ಕೆಎಸ್ಆರ್‌ಟಿಸಿ ನಿಗಮದಿಂದ ಸಿಎಂ ಬೊಮ್ಮಾಯಿಗೆ ಹೀಗೆ ಮನವಿ ಮಾಡಲಾಗಿರುವ ಬಗ್ಗೆ ತಿಳಿದುಬಂದಿದೆ. ವಾರ್ಷಿಕ 2,500 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿತ್ತು. 3 ಸಾವಿರ ಕೋಟಿ ರೂಪಾಯಿ ಅನುದಾನಕ್ಕೆ ಕೆಎಸ್​ಆರ್​ಟಿಸಿ ನಿಗಮ ಬೇಡಿಕೆ ಇಟ್ಟಿದೆ. ಆರ್ಥಿಕ ಪರಿಸ್ಥಿತಿ …

Read More »

ಓಂ ಬಿರ್ಲಾರಿಂದ ಜಂಟಿ ಅಧಿವೇಶನ: ಬಿಜೆಪಿಯಿಂದ ಕೆಟ್ಟ ಸಂಪ್ರದಾಯ; ಕಾರ್ಯಕ್ರಮ ಬಹಿಷ್ಕಾರಕ್ಕೆ ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಓಂ ಬಿರ್ಲಾ ಕಾರ್ಯಕ್ರಮಕ್ಕೆ ಕಾಂಗ್ರೆಸ್​ನಿಂದ ಬಹಿಷ್ಕಾರ ಹಾಕಲಾಗಿದೆ. ವಿಧಾನಸಭೆಯಲ್ಲಿ ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಲೋಕಸಭೆ ಸ್ಪೀಕರ್​ ಓಂ ಬಿರ್ಲಾರಿಂದ ಜಂಟಿ ಅಧಿವೇಶನ ನಡೆಸುವ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಆಡಳಿತಾರೂಢ ಬಿಜೆಪಿಯಿಂದ ಕೆಟ್ಟ ಸಂಪ್ರದಾಯ ಆರೋಪ ಆರಂಭವಾಗಲಿದೆ. ಸರ್ಕಾರ ವಿಧಾನಸೌಧದಲ್ಲಿ ಇತಿಹಾಸ ಸೃಷ್ಟಿಸಲು ಹೊರಟಿದೆ ಎಂದು ಈ ಕ್ರಮದ ಬಗ್ಗೆ ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮ …

Read More »

ಅತ್ಯಾಚಾರ ಪ್ರಕರಣ: ವಿಧಾನಸಭೆಯಲ್ಲಿ ಸ್ಪೀಕರ್ ಕಾಗೇರಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಡುವೆ ಮಾತಿನ ಸಮರ

ಬೆಂಗಳೂರು: ಮೈಸೂರು ಅತ್ಯಾಚಾರ ಪ್ರಕರಣ ಸಂಬಂಧ ವಿಧಾನಸಭೆ ಕಲಾಪ ಚರ್ಚೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಡುವೆ ಮಾತಿನ ಸಮರ ನಡೆಯಿತು. ಸ್ಪೀಕರ್ ಕಾಗೇರಿ, ನೀವು ಪ್ರತಿಯೊಂದಕ್ಕೂ ಹೀಗೆ ಗದ್ದಲ ಮಾಡಿಕೊಂಡು ಇರಿ. ನಾನು ನಿಮ್ಮ ಗದ್ದಲ ಕೇಳಿಕೊಂಡು ಇರ್ತೀನಿ. ಉಳಿದ ಸದಸ್ಯರು ಮಾಡುವಂತಿಲ್ಲ. ಬಿಲ್ ಬರುವಂಗಿಲ್ಲ. ಬರಿ ನಿಮ್ಮ ಮಾತು ಕೇಳಿಕೊಂಡು ಇರ್ಬೇಕಾ ಅಂತ ಸದಸ್ಯರು ಬಂದು ನನಗೆ ಕೇಳುತ್ತಿದ್ದಾರೆ. ನೀವು ಈ ರೀತಿ …

Read More »

ಗೋಕಾಕ : ಗ್ರಾಮ ಪಂಚಾಯತಗಳಲ್ಲಿ ಕಡ್ಡಾಯವಾಗಿ ಸಿ ಸಿ ಟಿವಿ ಕ್ಯಾಮೆರಾ ಅಳವಡಿಸಿಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿಕೆ.

ಗೋಕಾಕ : ‘ ಸುರಕ್ಷತೆಯ ದೃಷ್ಟಿಯಿಂದ ಯಮಕನಮರಡಿ ಕ್ಷೇತ್ರದ ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ಸಿಸಿ ಕ್ಯಾಮರ್ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ್ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಯಮಕನಮರಡಿ ಗ್ರಾಮದ ಪ್ರಮುಖ ರಸ್ತೆ ಹಾಗೂ ಗ್ರಾಮ ಪಂಚಾಯ್ತಿಗೆ ಈಗಾಗಲೇ ಸಿಸಿ ಕ್ಯಾಮರ್ ಅಳವಡಿಸಲಾಗಿದೆ. ಅದೇ ರೀತಿ ಕ್ಷೇತ್ರದ 33 ಗ್ರಾಮ ಪಂಚಾಯ್ತಿಗೆ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದರು.   …

Read More »

ಮೈಶುಗರ್ ಕಾರ್ಖಾನೆ ಖಾಸಗೀಕರಣ ಮಾಡಿದರೆ ರಕ್ತಪಾತ: ಜೆಡಿಎಸ್ ಶಾಸಕ

ಬೆಂಗಳೂರು, ಸೆಪ್ಟೆಂಬರ್ 22: ಮಂಡ್ಯ ಮೈಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಸುರೇಶ್‌ ಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, “ಕಾರ್ಖಾನೆ ಖಾಸಗೀಕರಣ ಮಾಡಿದರೆ ರಕ್ತಪಾತವಾಗುತ್ತದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಮೈಶುಗರ್ ಕಾರ್ಖಾನೆ ಖಾಸಗೀಕರಣದ ಬಗ್ಗೆ ಮಾತನಾಡಿದ ಅವರು, “ಮಂಡ್ಯ ಮೈಶುಗರ್ ಕಾರ್ಖಾನೆ ವಿಚಾರದಲ್ಲಿ ಸರ್ಕಾರ ತಮಾಷೆ ಮಾಡಬಾರದು. ಸರ್ಕಾರಕ್ಕೆ ನಿರ್ವಹಣೆ ಮಾಡಲು ಏಕೆ ಸಾಧ್ಯವಾಗುತ್ತಿಲ್ಲ? ನಿಮಗೆ ಮಾಡಲು ಸಾಧ್ಯವಾಗದಿದ್ದರೆ ನಮಗೆ ಬಿಟ್ಟುಕೊಡಿ. …

Read More »

ಚಾಣಕ್ಯ ವಿವಿಗೆ ಜಮೀನು: ದೊಡ್ಡ ಹಗರಣ

ಬೆಂಗಳೂರು: ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರದ ವತಿಯಿಂದ ಅರ್ಹತೆ ಹಾಗೂ ಆನುಭವ ಇಲ್ಲದ ಸೆಸ್‌ ಎಂಬ ಸಂಸ್ಥೆಗೆ ಕಡಿಮೆ ದರದಲ್ಲಿ 116.16 ಎಕರೆ ಜಮೀನು ನೀಡಿದ್ದು ಸರ್ಕಾರ ಆ ತೀರ್ಮಾನ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದ ರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್‌ ಒತ್ತಾ ಯಿಸಿದ್ದಾರೆ. ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಏರೋಸ್ಪೇಸ್‌ ಹಾಗೂ ಡಿಫೆನ್ಸ್‌ ಪಾರ್ಕ್‌ಗಾಗಿ ರೈತರಿಂದ ಸ್ವಾಧೀನಪಡಿಸಿಕೊಂಡಿರುವ ಜಮೀನು ಆರ್‌ …

Read More »

ದೇಶದಲ್ಲೇ ಮೂರು ಕೈಗಾರಿಕಾ ಕಾರಿಡಾರ್ ಗಳನ್ನು ಹೊಂದಿದ ಏಕೈಕ ರಾಜ್ಯ ಕರ್ನಾಟಕ: ಸಚಿವ ನಿರಾಣಿ

ಬೆಂಗಳೂರು: ಕರ್ನಾಟಕವು ಜಾಗತಿಕ ಹೂಡಿಕೆದಾರರಿಗೆ ಅತ್ಯುತ್ತಮ ತಾಣವಾಗಿದ್ದು, ದೇಶದಲ್ಲೇ ಮೂರು ಕೈಗಾರಿಕಾ ‌ಕಾರಿಡಾರ್ ಗಳನ್ನು ‌ಹೊಂದಿದ ಏಕೈಕ ರಾಜ್ಯವಾಗಿದೆ ಎಂದು ‌ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಗುರುವಾರ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಕೆಐಎಡಿಬಿ ಆಯೋಜಿಸಿದ್ದ ಭಾರತದ 75 ನೇ ಸ್ವಾತಂತ್ರ್ಯವದ ಸವಿನೆನಪಿಗಾಗಿ ಸಪ್ತಾಹದ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಹೂಡಿಕೆ ಮಾಡುವ ಜಾಗತಿಕ ಉದ್ಯಮಿಗಳಿಗೆ ಕರ್ನಾಟಕ ಯಾವಾಗಲೂ ಅತ್ಯುತ್ತಮ …

Read More »

ನಿಪ್ಪಾಣಿ ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ

  ನಿಪ್ಪಾಣಿ: ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಸ್ಥಳೀಯ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ನಿಪ್ಪಾಣಿ ಪಟ್ಟಣದ ಬಾದಲ್ ಪ್ಲಾಟ್‍ನ ಸೋಹೆಲ್ ಶಬ್ಬೀರ ದೇಸಾಯಿ(26) ಹಾಗೂ ಶಿವಾಜಿನಗರ ಹಮೀದ ಸಲಮಾನ ಶೇಖ(21) ಬಂಧಿತ ಯುವಕರು. ಬಂಧಿತರಿಂದ ಸುಮಾರು 15 ಸಾವಿರ ಮೌಲ್ಯದ ಒಂದು ಕೆ.ಜಿ ಗೂ ಅಧಿಕ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಇನ್ನೊಬ್ಬ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ. ನ್ಯಾಯಾಂಗ ಬಂಧನಕ್ಕಾಗಿ ಇಬ್ಬರನ್ನೂ ಸ್ಥಳೀಯ …

Read More »