Breaking News

ಜಿಲ್ಲೆ

ಕರ್ನಾಟಕದಲ್ಲಿ ಹೊಸದಾಗಿ 1,003 ಜನರಿಗೆ ಕೊರೊನಾ ದೃಢ; 18 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 17) ಹೊಸದಾಗಿ 1,003 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,66,194 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,12,633 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 18 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,573 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 15,960 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …

Read More »

ಜಿಎಸ್​ಟಿ ಮಂಡಳಿ ಸಭೆ: ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ, ಓದಿ

    ದೆಹಲಿ: ಉತ್ತರ ಪ್ರದೇಶದ ಲಖನೌನಲ್ಲಿ 45ನೇ ಜಿಎಸ್‌ಟಿ ಮಂಡಳಿಯ ಸಭೆಯಲ್ಲಿ ಕೊರೊನಾ ಲಸಿಕೆ ಸಂಬಂಧಿತ ಔಷಧಗಳ ಮೇಲೆ ಜಿಎಸ್​ಟಿ ವಿನಾಯಿತಿಯನ್ನು ಡಿಸೆಂಬರ್ 31ರವರೆಗೆ  ಮುಂದುವರಿಸಲು ನಿರ್ಧರಿಸಲಾಯಿತು. ಕಬ್ಬಿಣ, ಮ್ಯಾಂಗನೀಸ್, ತಾಮ್ರ, ನಿಕಲ್, ಕೋಬಾಲ್ಟ್, ಅಲ್ಯೂಮಿನಿಯಂ, ಸೀಸ, ಸತು, ತವರ, ಕ್ರೋಮಿಯಂ – ಅದಿರು ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 5 ರಿಂದ ಶೇಕೆಡಾ 18 ಕ್ಕೆ ಹೆಚ್ಚಿಸಲು ಜಿಎಎಸ್​ಟಿ ಕೌನ್ಸಿಲ್ ಅನುಮೋದನೆ ನೀಡಿತು. ತೆಂಗಿನ ಎಣ್ಣೆ ಮೇಲೆ …

Read More »

ಪ್ರಿಯಾಂಕಾ ಜಾರಕಿಹೊಳಿ ನೇತೃತ್ವದಲ್ಲಿ ನಿರುದ್ಯೋಗ ದಿನ ಆಚರಣೆ; ರಸ್ತೆಯಲ್ಲೇ ಪಕೋಡಾ ತಯಾರಿಸಿ ಆಕ್ರೋಶ

    ಗೋಕಾಕ: ನಗರದಲ್ಲಿ ಇಂದು ಗೋಕಾಕ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ವತಿಯಿಂದ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಬದಲು ‘ರಾಷ್ಟ್ರೀಯ ನಿರುದ್ಯೋಗ ದಿನ’ ಆಚರಿಸಿ, ಪ್ರತಿಭಟನೆ ನಡೆಸಲಾಯಿತು.   ಇಲ್ಲಿನ ಬಸವೇಶ್ವರ ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಮಧ್ಯದಲ್ಲಿಯೇ ಪಕೋಡಾ (ಮಿರ್ಚಿ ಬಜಿ) ತಯಾರಿಸಿ, ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ …

Read More »

IPS Bhaskar Rao: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಒಪ್ಪಿಗೆ ಸೂಚಿಸಿದ ಪ್ರವೀಣ್ ಸೂದ್

ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಒಪ್ಪಿಗೆ ಸಿಕ್ಕಿದೆ. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದಾರೆ. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿದೆ. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿದೆ. ಇನ್ನು ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸುವುದು ಬಾಕಿ ಇದೆ. ರೈಲ್ವೇ ಪೊಲೀಸ್ ಆಗಿರುವ ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ …

Read More »

ಮಾಜಿ-ಹಾಲಿ ಶಾಸಕರ ನಡುವೆ ಜಟಾಪಟಿ; ಗ್ರಾಮದವರಿಗೆ ಕಲುಷಿತ ನೀರು ಕುಡಿಯುವ ಭಾಗ್ಯ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣ ನಿವಾಸಿಗಳು ಕಳೆದ ನಾಲ್ಕು ತಿಂಗಳಿಂದ ಕಲುಷಿತ ನೀರನ್ನ ಕುಡಿದು ಆಸ್ಪತ್ರೆ ಪಾಲಾಗುತ್ತಿದ್ದಾರಂತೆ. ಇಲ್ಲಿನ ನೀರು ಹೇಗಿದೆ ಅಂದ್ರೆ ನೀರು ಬಗೆ ಬಗೆ ಬಣ್ಣಕ್ಕೆ ತಿರುಗಿದೆ. ಕುಡಿಯುವ ಜಲವೂ ವಾಸನೆ ಬರುತ್ತಿದೆ. ದಾಹ ತಣಿಸುವ ಹನಿಯೆಲ್ಲವೂ, ಒಗರೊಗರು ರುಚಿ ಬರುತ್ತಿದೆ. ಶುದ್ಧ ನೀರಿನಲ್ಲಿ ಯಾವೆಲ್ಲ ಗುಣಗಳು ಇರಬಾರದೋ ಅದೆಲ್ಲವೂ ಈ ನೀರಿನಲ್ಲಿದೆ. ಅಷ್ಟಕ್ಕೂ ಇದಕ್ಕೆಲ್ಲ ಕಾರಣ, ಮಾಜಿ ಶಾಸಕ ಅಶೋಕ ಪಟ್ಟಣ, ಹಾಲಿ ಬಿಜೆಪಿ ಶಾಸಕ …

Read More »

ಮೋದಿಜೀಯವರ ೭೧ನೇಯ ಜನ್ಮದಿನ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ

  ಗೋಕಾಕ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೭೧ನೇಯ ಜನ್ಮದಿನದ ಅಂಗವಾಗಿ ಗೋಕಾಕ ಬಿಜೆಪಿ ವತಿಯಿಂದ ಶಾಸಕ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಶಾಸಕರ ಗೃಹ ಕಚೇರಿಯಲ್ಲಿ ಮೋದಿಯವರ ಜನ್ಮದಿನದ ಆಚರಣೆ ನಡೆಸಿ ಸಿಹಿ ಹಂಚಿ ಸರಳವಾಗಿ ಆಚರಿಸಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್‌ನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.   …

Read More »

ಇಲ್ಲಿನ ಎಲ್ಲ ವಿದ್ಯಾರ್ಥಿಗಳು 20 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.

    ಗೋಕಾಕ: ಸಾರಿಗೆ ಸಂಸ್ಥೆ ಬಸ್‌ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್‌ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್‌ ಸೇವೆ ಆರಂಭಗೊಂಡಿಲ್ಲ.   ಇದರಿಂದ ವಿದ್ಯಾರ್ಥಿಗಳು ಬಸ್‌ಗಳಿಗಾಗಿ ರಸ್ತೆ ಬದಿಯಲ್ಲಿ ಕಾದು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಗೋಕಾಕ …

Read More »

ಕ್ಷೀರಭಾಗ್ಯ ಯೋಜನೆ ಹಾಲಿನಪುಡಿ ಅಕ್ರಮ ಸಾಗಾಟ, ಗ್ರಾಮಸ್ಥರಿಂದ ಓರ್ವನ ಸೆರೆ..

    ಆಂಕರ್: ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರದ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ, ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆ ಅಡಿಯಲ್ಲಿ ಹಾಲಿನ ಪುಡಿ ಸರಬರಾಜು ಮಾಡಲಾಗುತ್ತದೆ. ಆದರೆ ಚಿಕ್ಕೋಡಿ ಉಪವಿಭಾಗ ಅಥಣಿ ತಾಲೂಕಿನ ಖಿಳೆಗಾಂವ್ ಗ್ರಾಮದಲ್ಲಿ ಅಕ್ರಮವಾಗಿ ಹಾಲಿನ ಪುಡಿ ಸಾಗಾಟ ಮಾಡುತ್ತಿರುವ ಓರ್ವನನ್ನು ಗ್ರಾಮಸ್ಥರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.   ಅಕ್ರಮವಾಗಿ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಬೈಕ್ ಮೇಲೆ ಸಾಗಾಟ ಮಾಡುತ್ತಿರುವ ಅಥಣಿ …

Read More »

ಮನೆಯಲ್ಲಿಯೇ ಡ್ರಗ್ಸ್‌ ತಯಾರಿ, ನ್ಯೂಜಿಲೆಂಡ್‌ ಸೇರಿ ವಿದೇಶಗಳಿಗೆ ಸರಬರಾಜು – ಸಿಸಿಬಿ ಬಲೆಗೆ ಬಿದ್ದ ನೈಜೀರಿಯಾ ಪ್ರಜೆ

ಬೆಂಗಳೂರು:ಮನೆಯಲ್ಲಿಯೇ ಡ್ರಗ್ಸ್‌ (ಮಾದಕವಸ್ತು) ತಯಾರಿ ಮಾಡಿ ನ್ಯೂಜಿಲೆಂಡ್‌ ಸೇರಿ ವಿದೇಶಗಳಿಗೆ ಸರಬರಾಜು ಮಾಡುತ್ತಿದ್ದ ಜಾಲವೊಂದನ್ನು ಬಯಲಿಗೆಳೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಈ ಜಾಲದಲ್ಲಿ ಭಾಗಿಯಾಗಿದ್ದ ನೈಜೀರಿಯಾ ಮೂಲದ ಡೇವಿಡ್‌ ಜೊಹೊ ಮಲ್ವೆ ಎಂಬಾತನನ್ನು ಬಂಧಿಸಿರುವ ಸಿಸಿಬಿ ಮಾದಕವಸ್ತು ನಿಗ್ರಹ ಘಟಕ ಆರೋಪಿ ಬಳಿಯಿಂದ ಐದು ಕೋಟಿ ರೂ. ಮೌಲ್ಯದ ಕ್ರಿಸ್ಟೆಲ್‌, ಎಂಡಿಎಂಎ ಡ್ರಗ್ಸ್‌, ಹಾಗೂ ಈ ಡ್ರಗ್ಸ್‌ ತಯಾರಿಕೆಗೆ ಬಳಸಲಾಗುತ್ತಿದ್ದ ರಸಾಯನಿಕ ವಸ್ತುಗಳು ಹಾಗೂ ಇತರೆ ಪರಿಕರಗಳನ್ನು ಜಪ್ತಿ …

Read More »

ಡೇಟಿಂಗ್‌ ಆ್ಯಪ್ ಸುಂದರಿ ಬೀಸಿದ ಮೋಹಕ ಬಲೆಗೆ ಬಿದ್ದ ಚಾಲಕ- ಹಣ ಕಳೆದುಕೊಂಡು ಕಕ್ಕಾಬಿಕ್ಕಿ!

ಬೆಂಗಳೂರು: ಡೇಟಿಂಗ್  ವೆಬ್ ಸೈಟ್ ನಲ್ಲಿ ಪರಿಯಚಯವಾದ ಯುವತಿಯೊಬ್ಬಳನ್ನು ನಂಬಿ ಚಾಲಕನೊಬ್ಬ ಹಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸುಂದರಿ ಬೀಸಿದ ಮೋಹದ ಬಲೆಗೆ ಬಿದ್ದ ಚಾಲಕ ಆಕೆ ಹೇಳಿದ ಬಣ್ಣದ ಮಾತುಗಳನ್ನು ನಂಬಿದ್ದಾನೆ. ಅಷ್ಟೇ ಅಲ್ಲದೆ ಆಕೆಯ ಸನಿಹ ಸೇರಲು ಹರಸಾಹಸಪಟ್ಟು ಆಕೆ ಹೇಳಿದಂತೆ ಹಣ ನೀಡಿ ಕಳೆದುಕೊಂಡು ಇದೀಗ ಆಕೆ ಹೇಳಿದ ಜೀವ ಬೆದರಿಕೆ ಕೇಳಿ ಕಕ್ಕಾಬಿಕ್ಕಿಯಾಗಿದ್ದಾನೆ. ಯಲಹಂಕ ಉಪನಗರದ ನಿವಾಸಿ ಮನೋಹರ್‌  (ಹೆಸರು ಬದಲಿಸಲಾಗಿದೆ) ವೃತ್ತಿಯಲ್ಲಿ …

Read More »