Breaking News

ಜಿಲ್ಲೆ

ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ’ ಎಂದು ಬಿಜೆಪಿ ಮುಖಂಡನಿಗೆ ಬ್ಲ್ಯಾಕ್​ಮೇಲ್​ ಮಾಡಿದ ಅಪರಿಚಿತ

ಬೆಂಗಳೂರು: ‘ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ’ ಎಂದು ಬಿಜೆಪಿ ಮುಖಂಡನಿಗೆ ಅಪರಿಚಿತನೊಬ್ಬ ಬ್ಲ್ಯಾಕ್​ಮೇಲ್​ ಮಾಡಿದ್ದು, ಸುಮಾರು 30 ಸಾವಿರ ರೂಪಾಯಿ ವಸೂಲಿ ಕೂಡ ಮಾಡಿಕೊಂಡಿದ್ದಾನೆ. ಅಪರಿಚಿತ ವ್ಯಕ್ತಿಯ ಬೆದರಿಕೆ ಕರೆ ಕುರಿತು ಬಿಜೆಪಿ ಮುಖಂಡ ಪೊಲೀಸರಿಗೆ ದೂರು ನೀಡಿದ್ದಾರೆ. ಬಿಜೆಪಿ ಮುಖಂಡ ಚಿ.ನಾ. ರಾಮು ಇಂಥದ್ದೊಂದು ಬೆದರಿಕೆ ಕರೆಗೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರದ ಸಾಮಾಜಿಕ ಸಬಲೀಕರಣ ಇಲಾಖೆ ಅಧೀನದ ಅಂಬೇಡ್ಕರ್ ಫೌಂಡೇಷನ್​ ನಿರ್ದೇಶಕ ಆಗಿರುವ …

Read More »

ಪ್ರವಾಸಕ್ಕೆ ತೆರಳಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಕೊಚ್ಚಿ ಹೋಗಿ ಸಾವು

ಬಾಗಲಕೋಟೆ : ಜಿಲ್ಲೆಯ ಬಾದಾಮಿಯ ಶಿವಯೋಗಮಂದಿರ ಕ್ಷೇತ್ರದ ಬಳಿಕ, ಒಂದೇ ಕುಟುಂಬದ ಮೂವರು ಪಿಕ್ ನಿಕ್ ತೆರಳಿದ್ದರು. ಊಟ ಮುಗಿಸಿ, ನದಿಯಲ್ಲಿ ಕೈ ತೊಳೆಯುತ್ತಿದ್ದಂತ ಸಂದರ್ಭದಲ್ಲಿ ಬಿದ್ದಂತ ಕುಟುಂಬದ ಒಬ್ಬರನ್ನು ರಕ್ಷಿಸಲು ಹೋಗಿ, ಮೂವರು ನೀರು ಪಾಲಾಗಿರೋ ಘಟನೆ ನಡೆದಿದೆ.   ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಶಿವಯೋಗಮಂದಿರದ ಕ್ಷೇತ್ರದ ಬಳಿಯ ನದಿ ಹತ್ತಿರ ಒಂದೇ ಕುಟುಂಬದ ವಿಶ್ವನಾಥ ಮಾವಿನಪರದ, ಶ್ರೀದೇವಿ ಹಾಗೂ ನಂದಿನಿ ಮಾವಿನಮರದ ತೆರಳಿದ್ದರು.   ಹೀಗೆ …

Read More »

ನಿನ್ನೆ ಡಿಕೆ ಶಿವಕುಮಾರ್ ಭೇಟಿ ನಂತರ ದೆಹಲಿಗೆ ಹಾರಿದ್ದ ಜಮೀರ್ ಇಂದು ಮಧ್ಯಾಹ್ನ 4 ಗಂಟೆ ವಿಮಾನದಲ್ಲಿ ವಾಪಸ್ ಆಗಲಿದ್ದಾರೆ.

ನಿನ್ನೆ ಡಿಕೆ ಶಿವಕುಮಾರ್ ಭೇಟಿ ನಂತರ ದೆಹಲಿಗೆ ಹಾರಿದ್ದ ಜಮೀರ್ ಇಂದು ಮಧ್ಯಾಹ್ನ 4 ಗಂಟೆ ವಿಮಾನದಲ್ಲಿ ವಾಪಸ್ ಆಗಲಿದ್ದಾರೆ. ಬೆಂಗಳೂರು: ಇಂದು ಸಂಜೆ ನಾನು ಬೆಂಗಳೂರಿಗೆ ವಾಪಸಾಗುತ್ತೇನೆ ಎಂದು ಟಿವಿ9ಗೆ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ನಾನು ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದೆ. ದೆಹಲಿಯಲ್ಲಿ ಯಾವ ವಕೀಲರನ್ನೂ ಭೇಟಿಯಾಗಿಲ್ಲ. ಇಂದು ಸಂಜೆ‌ ಬೆಂಗಳೂರಿಗೆ ವಾಪಸ್ ಆಗುತ್ತಿದ್ದೇನೆ. ಶನಿವಾರ, ಭಾನುವಾರ ಯಾವ ED ಕಚೇರಿ ತೆರೆದಿರುತ್ತೆ ಹೇಳಿ. …

Read More »

ಕಬ್ಬಿನ ಗದ್ದೆಯಲ್ಲಿ ಮಹಿಳೆಯೋರ್ವರ ಶವ ಪತ್ತೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಕೂಕಿನ ಕೋಳಿಗುಡ್ಡ ಗ್ರಾಮದ ಬಳಿ ಕಬ್ಬಿನ ಗದ್ದೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಗೋಕಾಕ್—ಅಥಣಿ ರಾಜ್ಯ ಹೆದ್ದಾರಿ 31 ರ ಹತ್ತಿರ ಇರುವ ಕಬ್ಬಿನ ಗದ್ದೆಯಲ್ಲಿ ಸುಮಾರು 35 ವರ್ಷದ ಮಹಿಳೆ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ತಂದ್ದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಹಾರೂಗೇರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಮಹಿಳೆ ಯಾರು ಎಂದು ಗುರುತು ಪತ್ತೆಯಾಗಿಲ್ಲ. …

Read More »

ದೆಹಲಿಗೆ ಹೋದ್ರೂ ಸಿಗದ ‘ಆನಂದ’; ಇನ್ನೂ 3 ದಿನ ಆನಂದ್ ಸಿಂಗ್ ಮೌನ..!

ಬೆಂಗಳೂರು: ದೇವರ ಪೂಜೆ, ರಾಜಕೀಯ ವೈರಾಗ್ಯ, ಸಿಎಂ ಸಂಧಾನ, ದೆಹಲಿ ಭೇಟಿ.. ಇಷ್ಟೆಲ್ಲಾ ಸರ್ಕಸ್ ನಡೆದ್ರೂ ಆನಂದ್​ ಸಿಂಗ್​​​​ಗೆ ಮಾತ್ರ ಆನಂದವಾಗಿರೋ ಖಾತೆ ಇನ್ನೂ ಸಿಕ್ಕಿಲ್ಲ. ಹೀಗಾಗಿ ಆನಂದ್​ ಸಿಂಗ್​​​​​ ನಡೆ ಏನಾಗಿರಬಹುದು ಅನ್ನೋ ಆತಂಕ ಸಿಎಂಗೆ ಕಾಡ್ತಿದೆ. ಇದೇ ಕಾರಣಕ್ಕೆ ಸಿಎಂ ಬೊಮ್ಮಾಯಿ, ಆನಂದ್​​ ಸಿಂಗ್​​​ಗೆ 3 ದಿನ ಸುಮ್ಮನಿರುವಂತೆ ಸೂಚಿಸಿದ್ದಾರೆ. ಹಾಗಾದ್ರೆ 3 ದಿನದ ನಂತ್ರ ಏನಾಗುತ್ತೆ ಅನ್ನೋದೇ ಸದ್ಯದ ಕುತೂಹಲ. ದೆಹಲಿಗೆ ಹೋದ್ರೂ ಆನಂದ್​​ ಸಿಂಗ್​​​​​​​​ಗೆ …

Read More »

ನೀನು ನನ್ನ ಲವ್ವರ್ ನಂತಿಲ್ಲ, ಬೇರೆ ಮದ್ವೆ ಆಗು’ ಎಂದು ಟಾರ್ಚರ್ -ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಪತ್ನಿ

ಬೆಂಗಳೂರು: ‘ಪ್ಲೀಸ್​ ನನಗೆ ನೀನಂದ್ರೆ ಇಷ್ಟ ಇಲ್ಲ, ನಿನಗೆ ನಾನೇ ನಿಂತು ಇನ್ನೊಂದು ಮದುವೆ ಮಾಡ್ತೀನಿ, ಬೇರೆ ಮದುವೆಯಾಗಿ ಆರಾಮಾಗಿರು.. ನನ್ನ ಬಿಟ್ಟು ಬಿಡು’ ಈ ಮಾತುಗಳನ್ನ ಕೇಳಿದ್ರೆ ನೀವು ಯಾರೋ ಒಬ್ಬ ಪ್ರೇಮಿ ತನ್ನ ಪ್ರಿಯಕರನಿಗೋ, ಪ್ರಿಯಕರ ಪ್ರಿಯತಮೆಗೋ ಹೇಳ್ತಿರಬಹುದು ಎಂದೆನಿಸಬಹುದು. ಆದರೆ ಈ ಮಾತುಗಳನ್ನು ಸ್ವತಃ ಗಂಡನಾದವ ತನ್ನ ಹೆಂಡತಿಗೆ ಹೇಳ್ತಿದ್ದಾನಂದ್ರೆ ನೀವು ನಂಬಲೇಬೇಕು! ಹೌದು ಮದುವೆಯಾದ ಗಂಡನಿಂದಲೇ ಇನ್ನೊಂದು ಮದುವೆಯಾಗುವಂತೆ ಪತ್ನಿಗೆ ಟಾರ್ಚರ್ ನೀಡ್ತಿರುವ ಘಟನೆ …

Read More »

ಪ್ರಿಯತಮೆಗಾಗಿ 15,000ಕ್ಕೆ ‘ಲವ್ ಸುಪಾರಿ’! ಪೊಲೀಸರ ಗುಂಡೇಟು ತಿಂದ ರೌಡಿ ಕಥೆಯ ರಹಸ್ಯ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕುಖ್ಯಾತ ರೌಡಿಶೀಟರ್​ ಅವಿನಾಶ ಅಲಿಯಾಸ್ ರೆಬೆಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿ ಅವಿನಾಶ್ ಸಂಜಯನಗರ ಠಾಣೆ ರೌಡಿಶೀಟರ್ ಆಗಿದ್ದು, ವ್ಯಕ್ತಿಯೊರ್ವರನ್ನು ಕೊಲ್ಲಲು 15000 ಸಾವಿರ ರೂಪಾಯಿ ಸುಪಾರಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಈ ಹಿಂದೆ ಮುನಿರಾಜು ಎಂಬವರ ಮೇಲೆ ಹಾಡಹಗಲೇ ಅವಿನಾಶ್​​ ಹಲ್ಲೆ ಮಾಡಿ ಎಸ್ಕೇಪ್​ ಆಗಿದ್ದ. ಈ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್‌ …

Read More »

ಪೂಜೆ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದ ಪೂಜಾರಿ ಸಾವು; ನೋಡನೋಡುತ್ತಿದ್ದಂತೆ ನೂರಾರು ಅಡಿ ಆಳಕ್ಕೆ ಉರುಳಿದ ದೇಹ..

ಚಿಕ್ಕಬಳ್ಳಾಪುರ: ಪೂಜೆಯ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದು ಪೂಜಾರಿಯೊಬ್ಬರು ಮೃತಪಟ್ಟಿದ್ದು, ನೆರೆದಿದ್ದ ಭಕ್ತರೆಲ್ಲ ನೋಡನೋಡುತ್ತಿದ್ದಂತೆ ಅವರ ದೇಹ ನೂರಾರು ಅಡಿ ಆಳಕ್ಕೆ ಉರುಳಿ ಬಿದ್ದಿದೆ. ಬೆಟ್ಟದ ಮೇಲಿನಿಂದ ಪೂಜಾರಿ ಕೆಳಕ್ಕೆ ಬೀಳುವ ದೃಶ್ಯ ಭಕ್ತರ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ವೈರಲ್ ಆಗಿವೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸಿಂಗನಮಲ ಗ್ರಾಮದ ಗಂಪಮಲ್ಲಯ್ಯಸ್ವಾಮಿ ಬೆಟ್ಟದಲ್ಲಿ ಈ ಅವಘಡ ನಡೆದಿದೆ. ಶ್ರಾವಣ ಮಾಸದಲ್ಲಿ ನಡೆಯುವ ವಿಶೇಷ ಪೂಜೆಯ ಸಂದರ್ಭದಲ್ಲಿ ಈ ದುರಂತ ನಡೆದುಹೋಗಿದೆ. ಪೂಜೆಗೆ …

Read More »

ಬದುಕಿರುವ ಯೋಧನ ಮನೆಗೆ ಹೋಗಿ ಕೇಂದ್ರ ಸಚಿವರು ಸಾಂತ್ವನ ಹೇಳಿರುವುದು ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿ: ಡಿ.ಕೆ. ಶಿವಕುಮಾರ್‌

ಬೆಂಗಳೂರು: ಬದುಕಿರುವ ಯೋಧನ ಮನೆಗೆ ಹೋಗಿ ಕೇಂದ್ರ ಸಚಿವರು ಸಾಂತ್ವನ ಹೇಳಿರುವುದು ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಟೀಕಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸಚಿವ ನಾರಾಯಣ ಸ್ವಾಮಿ ಅವರಿಗೆ ಅಧಿಕಾರ ಸಿಕ್ಕಿದೆ, ಆ ಬಗ್ಗೆ ನಮ್ಮ ತಕರಾರಿಲ್ಲ. ಅವರು ಬದುಕಿರುವ ಯೋಧನ ಮನೆಗೆ ಹೋಗಿ ಸಾಂತ್ವನ ಹೇಳಿರುವ ಸುದ್ದಿ ಕೇಳಿದೆ. ಜಿಲ್ಲಾಧಿಕಾರಿಗಳು, ತಹಶೀಲ್ದಾರರು, …

Read More »

ನಾಡಿನ ಸಮಸ್ತ ಜನತೆಗೆ ಸಾಮರಸ್ಯ ಹಾಗೂ ಸಹೋದರತ್ವದ ಪ್ರತೀಕವಾದ ಪವಿತ್ರ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು.

ನಾಡಿನ ಸಮಸ್ತ ಜನತೆಗೆ ಸಾಮರಸ್ಯ ಹಾಗೂ ಸಹೋದರತ್ವದ ಪ್ರತೀಕವಾದ ಪವಿತ್ರ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಶ್ರೀ ಸಂತೋಷ  ಜಾರಕಿಹೊಳಿ

Read More »