ಬೆಂಗಳೂರು: ಡೀಸೆಲ್ ದರ, ಕೊರೋನಾದಿಂದ ಆರ್ಥಿಕ ನಷ್ಟ, ಬಿಡಭಾಗಗಳ ದರ ಹೆಚ್ಚಳವಾಗಿದ್ದರಿಂದ ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ಪ್ರಯಾಣ ದರ ಏರಿಕೆ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಸದ್ಯಕ್ಕೆ ಬಸ್ ದರ ಹೆಚ್ಚಳ ಮಾಡಿ ಜನರಿಗೆ ಮಾಡುವುದಿಲ್ಲವೆಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಇಲಾಖೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಲಾಭದತ್ತ ತೆಗೆದುಕೊಂಡು …
Read More »ಸಂಗೊಳ್ಳಿ ರಾಯಣ್ಣ ಜನ್ಮ ದಿನ, ಹುತಾತ್ಮರ ದಿನ ಆಚರಣೆಗೆ ರಾಜ್ಯ ಸರ್ಕಾರದ ಆದೇಶ
ಬೆಂಗಳೂರು: ಸ್ವಾತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನವಾದ ಆಗಸ್ಟ್ 15 ಹಾಗೂ ಹುತಾತ್ಮ ದಿನ ಜನವರಿ 26ರ ದಿನದಂದು ರಾಜಧಾನಿ ಮತ್ತು ಎಲ್ಲ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಂಡು ಸರ್ಕಾರಿ ಗೌರವ ಸಲ್ಲಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನವಾದ ಆಗಸ್ಟ್ 15 ಹಾಗೂ ಹುತಾತ್ಮ ದಿನ ಜನವರಿ 26 ದಿನದಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಸರ್ಕಾರದ ಸಕಲ …
Read More »ರಾಜ್ಯದ ಜನರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ‘ಅಮೃತ’ ಹೊಸ ಯೋಜನೆಗಳ ಘೋಷಣೆ
ಬೆಂಗಳೂರು: ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಮಾತನಾಡಿದ ಅವರು, ಕೃಷಿ, ರೈತರ ಬದುಕಿನಲ್ಲಿ ಸಂಕಷ್ಟದ ಸಮಯವಾಗಿದೆ. ರೈತರನ್ನು ಕೃಷಿಯನ್ನು ಕೇಂದ್ರವಾಗಿಟ್ಟುಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ರೈತ ಏಕಿಷ್ಟು ಪ್ರಾಮುಖ್ಯವೆಂಬುದಕ್ಕೆ ಒಂದು ಮಾತಿದೆ. ರವೀಂದ್ರನಾಥ ಠಾಗೋರ್ ಅವರಿಗೆ ದೇವರು ಎಲ್ಲಿದ್ದಾನೆ ಎಂದು ಒಬ್ಬನು ಪ್ರಶ್ನಿಸಿದ. ರೈತರ ಶ್ರಮದಲ್ಲಿ ಕೂಲಿಕಾರ ಬೆವರಲ್ಲಿ ದೇವರಿದ್ದಾನೆ ಎಂದು ಅವರು ಹೇಳಿದ್ದರು. …
Read More »ಲಸಿಕೆ ಜೊತೆಗೆ ಆಹಾರ, ಜೀವನ ಪದ್ಧತಿ ಬದಲಿಸಿಕೊಳ್ಳಿ: ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಲಸಿಕೆ ಜೊತೆಗೆ ಆಹಾರ ಮತ್ತು ಜೀವನ ಪದ್ಧತಿ ಬದಲಿಸಿಕೊಳ್ಳಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಮಣ್ಣೂರು ಗ್ರಾಮದಲ್ಲಿ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ಕೊರೊನಾ ಹೊಡೆದೋಡಿಸಲು ಲಸಿಕೆ ಹಾಕಿಸಿಕೊಳ್ಳುವ ಜೊತೆಗೆ ಮುಂದಿನ ದಿನಗಳಲ್ಲಿ ನಾವು ನಮ್ಮ ಆಹಾರ ಮತ್ತು ಜೀವನ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುಬೇಕು. ನಿರಂತರವಾಗಿ ರೋಗಗಳ ವಿರುದ್ಧ ಹೋರಾಡುವಂತೆ ನಮ್ಮ ದೇಹವನ್ನು ಸಿದ್ಧಪಡಿಸಿಕೊಳ್ಳಬೇಕು ಎಂದಿದ್ದಾರೆ. ಕೋವಿಡ್ ಲಸಿಕೆ …
Read More »ಎಂ.ಟಿ.ಬಿ, ನಿರಾಣಿ ಸೇರಿ ಬಿಜೆಪಿಯ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಈಶ್ವರ್ ಖಂಡ್ರೆ
ರಾಯಚೂರು: ಎಂ.ಟಿ.ಬಿ ನಾಗರಾಜ್, ನಿರಾಣಿ ಸೇರಿದಂತೆ ಬಿಜೆಪಿಯ ಅನೇಕ ಶಾಸಕರು ಕಾಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಂ.ಟಿ.ಬಿ.ನಾಗರಾಜ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಹಾಗೆ ನಿರಾಣಿ ಕೂಡ ಭೇಟಿಯಾಗಿದ್ದಾರೆ. ಇನ್ನೂ ಅನೇಕರು ಪಕ್ಷದ ಸಂಪರ್ಕದಲ್ಲಿದ್ದಾರೆ. ಆದರೆ, ಎಷ್ಟು ಶಾಸಕರು ಎಂದು ಈಗಲೇ ಹೇಳಲಿಕ್ಕಾಗದು ಎಂದರು. ರಾಜ್ಯದಲ್ಲಿ ಸರ್ಕಾರ ಅವಧಿ ಮುಗಿಸುವುದಿಲ್ಲ. ಮಧ್ಯಂತರ ಚುನಾಚಣೆ ಬರುವುದು ನಿಶ್ಚಿತ. ಆದರೆ, ಸರ್ಕಾರ …
Read More »ಸಾರಿಗೆ ನಿಗಮದ ನಿದ್ದೆಗೆಡಿಸಿದ ಗಾಂಜಾ ಸಾಗಣೆ! ಸದ್ಯದ ವ್ಯವಸ್ಥೆಯಲ್ಲಿ ಜಾಡು ಪತ್ತೆ ಅಸಾಧ್ಯ!
ಬೆಂಗಳೂರು: ಗಾಂಜಾ ಸಾಗಣೆಗೆ ಸರ್ಕಾರಿಬಸ್ಗಳನ್ನು ಸ್ವತಃ ಸಿಬ್ಬಂದಿ ಇಬ್ಬರು ಬಳಸಿಕೊಳ್ಳುತ್ತಿದ್ದ ಅಂಶ ಈಗ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳ ನಿದ್ದೆಗೆಡಿಸಿದ್ದು, ಬರುವ ದಿನಗಳಲ್ಲಿ ಇದರ ಜಾಡು ಪತ್ತೆ ಹಾಗೂ ಕಡಿವಾಣವೇ ದೊಡ್ಡ ಸವಾಲಾಗಿದೆ. ಬಸ್ಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕಿರಿಯ ಸಹಾಯಕ ವಿಠಲ್ ಭಜಂತ್ರಿ ಹಾಗೂ ಚಾಲಕ ಕಂ ನಿರ್ವಾಹಕ ಶರಣ ಬಸಪ್ಪ ಕ್ಷತ್ರೀಯ ಎಂಬುವರು ಲಗೇಜುಗಳ ರೂಪದಲ್ಲಿ ಗಾಂಜಾವನ್ನು ವಿಜಯಪುರ ಮತ್ತು ಕಲಬುರಗಿಯಿಂದ ಬೆಂಗಳೂರಿಗೆ …
Read More »ನಮ್ಮ ಗೆಳೆಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಕ್ಕೆ ಸ್ವತಃ ನಾನೇ ಸಿಎಂ ಆದ ಹಾಗೇ ಆಗಿದೆ : ರಮೇಶ್ ಜಾರಕಿಹೊಳಿ
ಬೆಳಗಾವಿ: ನನ್ನ ಮಿತ್ರ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಕ್ಕೆ ತುಂಬಾ ಸಂತಸವಾಗಿದೆ, ಅದೆಷ್ಟು ಸಂತೋಷವಾಗಿದೆ ಎಂದರೆ ನಮ್ಮ ಗೆಳೆಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಕ್ಕೆ ಸ್ವತಃ ನಾನೇ ಸಿಎಂ ಆದ ಹಾಗೇ ಆಗಿದೆ ಎಂದು ಮಾಜಿ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ನೂತನ ಸಿಎಮ್ ಹಾಗು ನೂತನ ಸಚಿವ ಸಂಪುಟ ರಚನೆಯತ್ತ ರಾಜಕೀಯ ಬೆಳವಣಿಗೆಗಳ ನಡುವೆ ತಮ್ಮದೆ ಆದ ಲೆಕ್ಕಾಚಾರದಲ್ಲಿದ್ದ ಜಾರಕಿಹೊಳಿ ಬ್ರದರ್ಸ್ ಅಲ್ಲಲ್ಲಿ ಅಸಮಾಧಾನಗೊಂಡ ಸಚಿವರ ಭೇಟಿಗೆ …
Read More »ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿದ ತಮಿಳುನಾಡು ಸರ್ಕಾರ; ಕರ್ನಾಟಕದಲ್ಲಿ ಯಾವಾಗ?; ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಪ್ರತಿ ಲೀಟರೆ ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿ ಆದೇಶಿಸಿದ್ದು, ತಮಿಳುನಾಡು ಸರ್ಕಾರ ಈ ನಿರ್ಧಾರವನ್ನು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ ಯಾವಾಗ ಎಂದು ಶುಕ್ರವಾರ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪೆಟ್ರೋಲ್ ಮೇಲಿನ ಸುಂಕವನ್ನು ರೂ.3 ಇಳಿಸಿ ತಮಿಳುನಾಡು ಸರ್ಕಾರ ಲಕ್ಷಾಂತರ ಜನರಿಗೆ ಸಹಾಯ ಮಾಡಿದೆ. ನಾನು …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಈ ಬಾರಿ ಪಕ್ಷದ ಚಿಹ್ನೆ ಮೇಲೆ ನಡೆಯುವುದು ಫಿಕ್ಸ್ ಆಗಿದೆ.
ಬೆಂಗಳೂರು – ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಈ ಬಾರಿ ಪಕ್ಷದ ಚಿಹ್ನೆ ಮೇಲೆ ನಡೆಯುವುದು ಫಿಕ್ಸ್ ಆಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣೆಗೆ ಸಜ್ಜಾಗುತ್ತಿದ್ದು, ಉಸ್ತುವಾರಿಗಳನ್ನು ನೇಮಿಸಲಾಗಿದೆ. ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಸ್ತುವಾರಿ ಸಚಿವಗೋವಿಂದ ಕಾರಜೋಳ ಮತ್ತು ಶಾಸಕ ಅಭಯ ಪಾಟೀಲ ಅವರಿಗೆ ಚುನಾವಣೆ ಹೊಣೆ ವಹಿಸಿದೆ. ಕಾಂಗ್ರೆಸ್ ಮಾಜಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಜವಾಬ್ದಾರಿ ನೀಡಿದೆ. ತನ್ಮೂಲಕ ಚುನಾವಣೆಗೆ ಎಲ್ಲ ಸಿದ್ಧತೆ ಆರಂಭವಾಗಿದೆ. ಬಿಜೆಪಿ ಹುಬ್ಬಳ್ಳಿ -ಧಾರವಾಡಕ್ಕೆ …
Read More »ಆಂಟಿ ಹಿಂದೆ ಬಿದ್ದು ಸಂಬಂಧ ಬೆಳೆಸಿ ಆಕೆಯಿಂದಲೇ ಹೆಣವಾದ ಯುವಕ
ಹಾವೇರಿ: ಮಹಿಳೆಯೊಬ್ಬಳು ಪ್ರಿಯಕರನನ್ನೇ ಕೊಲೆಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಧಾರವಾಡದ ನಾಗರಾಜ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಹಿಳೆಯ ಸಹವಾಸ ಮಾಡಿದ್ದ ನಾಗರಾಜ ಆಕೆಯಿಂದಲೇ ಕೊಲೆಯಾಗಿದ್ದಾನೆ. ಗಂಡ ಜೈಲಿಗೆ ಹೋದ ನಂತರ ಯುವಕನೊಂದಿಗೆ ಲವ್ವಿಡವ್ವಿ ಶುರುಮಾಡಿದ್ದ ಮಹಿಳೆ, ತನ್ನನ್ನು ಬಿಟ್ಟು ಬೇರೆ ಯುವತಿ ಮದುವೆಯಾಗಲು ಮುಂದಾಗಿದ್ದ ಯುವಕ ನಾಗರಾಜನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಧಾರವಾಡದ ಶೋಭಾ ಎಂಬಾಕೆಯೇ ಕೃತ್ಯವೆಸಗಿದ ಆರೋಪಿಯಾಗಿದ್ದಾಳೆ. ಮೊದಲೇ ಮದುವೆಯಾಗಿ ಹೆಣ್ಣು ಮಗುವಿದ್ದ ಶೋಭಾ ಗಂಡನನ್ನು ಬಿಟ್ಟು …
Read More »
Laxmi News 24×7