Breaking News

ಜಿಲ್ಲೆ

ಕಿಸಾನ್ ಸಮ್ಮಾನ್ ಯೋಜನೆಯಡಿ 51. 19 ಲಕ್ಷ ರೈತರಿಗೆ ₹ 1,023 ಕೋಟಿ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ : ಬಿ.ಸಿ. ಪಾಟೀಲ್

ಬೆಂಗಳೂರು: ಕಿಸಾನ್ ಸಮ್ಮಾನ್ ಯೋಜನೆಯಡಿ ಎರಡನೇ ಕಂತಿಯಲ್ಲಿ ರಾಜ್ಯದ 51. 19 ಲಕ್ಷ ರೈತರಿಗೆ ₹ 1,023 ಕೋಟಿ ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಫೆಬ್ರವರಿ 1, 2019ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ ₹ 6 ಸಾವಿರ ಆರ್ಥಿಕ ನೆರವನ್ನು …

Read More »

ಬೊಮ್ಮಾಯಿ, ಯಡಿಯೂರಪ್ಪನವರ ರಬ್ಬರ್ ಸ್ಟ್ಯಾಂಪ್​-ಸಿದ್ದರಾಮಯ್ಯ

ಬೆಂಗಳೂರು: ಯಡಿಯೂರಪ್ಪ ಒಬ್ಬ ಭ್ರಷ್ಟ ಮುಖ್ಯಮಂತ್ರಿ. ಈಗ ಅವರು‌ ಹೋಗಿ ಬೊಮ್ಮಾಯಿ ಬಂದಿದ್ದಾರೆ. ಇವರು ಯಡಿಯೂರಪ್ಪನವರ ರಬ್ಬರ್ ಸ್ಟ್ಯಾಂಪ್​. ಇವರಿಂದ ಇನ್ನೇನು ‌ನಿರೀಕ್ಷೆ ಮಾಡಲು ಸಾಧ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಯಡಿಯೂರಪ್ಪನವರ ಪ್ರಾಕ್ಸಿ ಇದ್ದಂಗೆ. ಈಗ ಕಾಲ ಕೂಡಿ ಬಂದಿದೆ. ಹೀಗಾಗಿ ನಾವೆಲ್ಲರೂ ಹೋರಾಟ ಮನೋಭಾವದಿಂದ ಒಟ್ಟಾಗಿ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಬಿಜೆಪಿಯನ್ನು …

Read More »

ಇಡಿ ದಾಳಿ: ನಂಗೆ ಎಚ್‌ಡಿಕೆ ಮೇಲೆಯೇ ಡೌಟ್; ಜಮೀರ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.​ಡಿ ಕುಮಾರಸ್ವಾಮಿ ಯಾಕೆ ಹಾಗೆ ಹೇಳಿದರು. ಎಲ್ಲೋ ಒಂದು ಕಡೆ ಅವರೇ ಜಾರಿ ನಿರ್ದೇಶನಾಲಯ (ಇಡಿ)ಗೆ ಮಾಹಿತಿ ಕೊಟ್ಟಿರಬಹುದು ಅಂತ ಡೌಟ್​ ಶುರುವಾಗಿದೆ ಎಂದು ಕಾಂಗ್ರೆಸ್​ ಶಾಸಕ ಜಮೀರ್ ಅಹಮ್ಮದ್ ಹೇಳಿದ್ದಾರೆ. ತಮ್ಮ ನಿವಾಸದ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಬೆಳವಣಿಗೆ ಸಹಿಸಲಾಗದೆ ದಾಳಿ ಮಾಡಿಸಿದ್ದಾರೆ. ನಾನು ಈ ಹಿಂದೆ ಇದ್ದ …

Read More »

ಮಾಜಿ ಮುಖ್ಯ ಮಂತ್ರಿ ಅವರ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ

ಹುಬ್ಬಳ್ಳಿ: ನಗರದ ಕೇಶ್ವಾಪುರದ ಬಾದಾಮಿ ನಗರದಲ್ಲಿ‌ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶನಿವಾರ ಸಂಜೆ ಭೇಟಿ ನೀಡಿಗುಪ್ತ ಗುಪ್ತ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರ ಸಂಪುಟದಿಂದ ದೂರ ಉಳಿಯುವ ಮೂಲಕ ಮಾಜಿ ಮುಖ್ಯಮಂತ್ರಿಗಳು ಶಾಸಕರಾದ ಜಗದೀಶ್ ಶೆಟ್ಟರ್ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು. ನಂತರದ ದಿನಗಳಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆ ನಡೆಯುತಿದ್ದು ಒಂದು …

Read More »

ಸೋತ ವ್ಯಕ್ತಿಯನ್ನ ಡಿಸಿಎಂ ಮಾಡಿದರು, ಈಗ ಯಾವುದೇ ಬೇಸರ ಇಲ್ಲ: ಲಕ್ಷ್ಮಣ ಸವದಿ

ಚಿಕ್ಕೋಡಿ: ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಲಕ್ಷ್ಮಣ ಸವದಿಯನ್ನ ಕೈ ಬಿಟ್ಟಿದ್ದಾರೆ. ಇದೇ ವಿಚಾರವಾಗಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಪುಟದಿಂದ ತನ್ನನ್ನ ಕೈ ಬಿಟ್ಟಿದ್ದಕ್ಕೆ ಯಾವುದೇ ಬೇಸರ ಇಲ್ಲ ಎಂದಿದ್ದಾರೆ. ಸೋತಂತಹ ವ್ಯಕ್ತಿಯನ್ನು ಡಿಸಿಎಮ್ ಮಾಡಿದ್ದಾರೆ, ಸಚಿವನನ್ನಾಗಿ ಮಾಡಿ ನನಗೆ ಒಳ್ಳೆಯ ಸ್ಥಾನಮಾನವನ್ನ ಪಕ್ಷ ನೀಡಿದೆ. ಈಗ ಬೇಸರ ಮಾಡಿಕೊಳ್ಳುವ ಪ್ರಶ್ನೆಯೇ ಬರಲ್ಲ ಎಂದಿದ್ದಾರೆ. ಕೆಲವೊಮ್ಮೆ ಮತ್ತೊಬ್ಬರಿಗೆ ಅವಕಾಶ ಕೊಡುವುದಕ್ಕಾಗಿ ಅವಧಿ …

Read More »

ಬಿಜೆಪಿ ಭಿನ್ನಮತ ನಿಲ್ಲುವ ಲಕ್ಷಣ ಕಾಣುತ್ತಿಲ್ಲ

ಬೆಂಗಳೂರು,ಆ.9- ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎಂಬಂತೆ ಸಂಪುಟ ವಿಸ್ತರಣೆಯಾಗಿ ಖಾತೆಗಳು ಹಂಚಿಕೆಯಾಗಿದ್ದರೂ ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ನಿರೀಕ್ಷಿತ ಖಾತೆ ಸಿಗದಿರುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರನ್ನು ಸಂಬಾಳಿಸುವುದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಲೆ ನೋವಾಗಿ ಪರಿಣಮಿಸಿದೆ. ಅಸಮಾಧಾನಗೊಂಡಿರುವ ಸಚಿವರಾದ ಆನಂದ್ ಸಿಂಗ್, ಎಂಟಿಬಿ ನಾಗರಾಜ್, ವಿ.ಸೋಮಣ್ಣ, ಶ್ರೀರಾಮುಲು ಮತ್ತಿತರರು ಎಲ್ಲವೂ ಸರಿ ಹೋಗಿದೆ ಎಂದು …

Read More »

ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟ: ಶೇಕಡಾ 99.9 ವಿದ್ಯಾರ್ಥಿಗಳು ಪಾಸ್, ಓರ್ವ ಮಾತ್ರ ಫೇಲ್

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದರು. ಜುಲೈ 19 ಮತ್ತು 22ರಂದು ನಡೆದಿದ್ದ ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಂದು ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ. ಆತ ತನ್ನ ಬದಲು ಬೇರೆಯವರಿಂದ ಪರೀಕ್ಷೆ ಬರೆಸಿದ್ದ. ಹೀಗಾಗಿ ಆತನನ್ನು ಅನುತ್ತೀರ್ಣ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಕೋವಿಡ್ ಕಾರಣದಿಂದ …

Read More »

ಅಂಚೆ ಅಣ್ಣನ ಆನ್‌ ಲೈನ್‌ನಲ್ಲಿ ಬಣ್ಣ ಬಣ್ಣದ ರಾಖೀಗಳು: ರಾಖೀಪೋಸ್ಟ್‌ ಆನ್‌ಲೈನ್‌ ಸೇವೆ ಆರಂಭ

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ರಾಖೀ ಪ್ರಿಯರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದಾಗಿ ಭಾರತೀಯ ಅಂಚೆ ಇಲಾಖೆ ರಾಖೀ ಪೋಸ್ಟ್‌ ಆನ್‌ಲೈನ್‌ ಸೇವೆ ಆರಂಭಿಸಿದ್ದು ಜನರಿಂದ ಮೆಚ್ಚುಗೆ ಪಾತ್ರವಾಗಿದೆ. ಕಳೆದ ವರ್ಷ ಆರಂಭಿಸಲಾಗಿರುವ ಈ ಸೇವೆಗೆ ಈ ವರ್ಷ ಮತ್ತಷ್ಟು ಬಣ್ಣ ಬಣ್ಣದ ಆಕರ್ಷಕ ವಿನ್ಯಾಸದ ರಾಖೀ ಸೇರ್ಪಡೆಗೊಂಡಿವೆ. ಜತೆಗೆ ಭಿನ್ನ ಭಿನ್ನ ವಾಕ್ಯಗಳ ಸಂದೇಶಗಳು ಕೂಡ ಸಹೋದರ-ಸಹೋದರಿಯರಿಗೆ ಶುಭ ಹಾರೈಸಲಿವೆ. ಈ ಮೂಲಕ ಸಹೋದರತ್ವ ಸಂಬಂಧವನ್ನು ಮತ್ತಷ್ಟು ಹಸಿರಾಗಿಡಲಿವೆ. ಆ.22 ರಂದು …

Read More »

ಗೋಕಾಕ: ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡುತ್ತಿರುವುದು.

ಗೋಕಾಕ: ಕೊವಿಡ್-19ರ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಹೊಸ ನಿರ್ದೇಶನಗಳ ಮೇರೆಗೆ ಬರುವ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವದೆಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಶನಿವಾರದಂದು ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕೋರೋನಾ ಹಿನ್ನೆಲೆಯಲ್ಲಿ ವಿವಿಧ ಸಾಸಂಸ್ಕøತಿಕ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದ್ದು, 10 ವರ್ಷದೊಳಗಿನ ಮಕ್ಕಳಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ವಾಲ್ಮೀಕಿ ಕ್ರೀಡಾಂಗಣದಲ್ಲಿ ಆಚರಿಸುವ ಸ್ವಾತ್ರಂತ್ರೋತ್ಸವ ಕಾರ್ಯಕ್ರಮದಲ್ಲಿ …

Read More »

ಗೃಹ ಇಲಾಖೆಯಲ್ಲಿ ಅಮೂಲಾಗ್ರ ಸುಧಾರಣೆ ತರುತ್ತೇನೆ: ಅರಗ ಜ್ಞಾನೇಂದ್ರ

ತುಮಕೂರು: ಗೃಹ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ತರಲು ಪ್ರಯತ್ನ ಪಡುತ್ತೇನೆ ಎಂದು ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ಜವಾಬ್ದಾರಿ ನನಗೆ ಹೊಸದು. ನಾಳೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸುತ್ತೆನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ತೆಗೆದುಕೊಳ್ಳುತ್ತೇನೆ ಎಂದರು. ಪೊಲೀಸ್ ಇಲಾಖೆ ಸಶಕ್ತವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕೆಂದು ಯೋಚನೆ ಮಾಡಿದ್ದು, …

Read More »