Breaking News

ಜಿಲ್ಲೆ

ಕೃಷಿ ಪಂಪ್ಸೆಟ್ಗೂ ಬರಲಿದೆ ಪ್ರಿಪೇಯ್ಡ್ ಮೀಟರ್

ಬೆಂಗಳೂರು (ಜು.03): ರೈತರ ಕೃಷಿ ಪಂಪ್ಸೆಟ್ಗಳಿಗೂ ವಿದ್ಯುತ್ ಮೀಟರ್ ಅಳವಡಿಕೆ ಮಾಡಿ ಶುಲ್ಕ ವಸೂಲಿ ಮಾಡುವುದು, ಬಳಿಕ ನಿಧಾನವಾಗಿ ಸರ್ಕಾರದಿಂದ ರೈತರಿಗೆ ಮರುಪಾವತಿ ಮಾಡುವುದು ಸೇರಿ ಹಲವು ವಿವಾದಿತ ನಿಯಮವನ್ನು ಒಳಗೊಂಡ ‘ವಿದ್ಯುತ್ ತಿದ್ದುಪಡಿ ಮಸೂದೆ-2021’ ವಿರುದ್ಧ ಬೀದಿಗಿಳಿಯಲು ರೈತ ಸಂಘಟನೆಗಳು ಸಜ್ಜಾಗಿವೆ. ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿದ್ಯುತ್ ಮಸೂದೆ-2021 ಪ್ರಕಾರ, ಕೃಷಿ ಪಂಪ್ಸೆಟ್ಗಳಿಗೂ ವಿದ್ಯುತ್ ಮೀಟರ್ ಅಳವಡಿಕೆಯಾಗಲಿದೆ. ಅಷ್ಟೇ ಅಲ್ಲ, ಈವರೆಗೆ 10 ಎಚ್ಪಿ ಪಂಪ್ಸೆಟ್ವರೆಗೆ …

Read More »

ಗೋಕಾಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲದಾರ ಕಾರ್ಯಾಲಯದಲ್ಲಿ ರೈತ ಮುಖಂಡರು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಘೇರಾವು ಹಾಕಿ ನಂತರ ಸಭೆ ನಡೆಸುತ್ತಿರುವುದು.

ಗೋಕಾಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲದಾರ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಭೀಮಶಿ ಗದಾಡಿ ಅವರ ನೇತ್ರತ್ವದಲ್ಲಿ ರೈತ ಮುಖಂಡರು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಘೇರಾವು ಹಾಕಿ ನಂತರ ಸಭೆ ನಡೆಸಿದರು. ಕಳೆದ 2019ನೇ ಸಾಲಿನಲ್ಲಿ ಪ್ರವಾಹ ಹಾಗೂ ಮಳೆಯಿಂದ ಹಾನಿಯಾದ ಮನೆಗಳಿಗೆ ಇನ್ನೂವರೆಗೂ ಪರಿಹಾರ ದೊರಕಿಲ್ಲವಲ್ಲದೇ ಸರ್ವೆ ಮಾಡುವಲ್ಲಿ ಅಧಿಕಾರಿಗಳು ತಾರ್ಯತ್ಯಮ ಮಾಡಿದ್ದಾರೆಂದು ಆರೋಪಿಸಿದರು. ಕಲಾರಕೊಪ್ಪ, ಮೆಳವಂಕಿ ಗ್ರಾಮದಲ್ಲಿ ಮೂರು ಸಲ ಸರ್ವೆ ಕಾರ್ಯವನ್ನು …

Read More »

ಯುವತಿಗೆ ಕಿರುಕುಳ ನೀಡುತ್ತಿದ್ದ ಎಂದು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಸ್ನೇಹಿತರು

ಬೆಂಗಳೂರು: ಯುವತಿಗೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಯುವತಿಯ ಸ್ನೇಹಿತರು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಸಂಜಯನಗರದಲ್ಲಿ ನಡೆದಿದೆ. ಮುನಿರಾಜು ಒದೆ ತಿಂದ ವ್ಯಕ್ತಿ. ಹೆಬ್ಬಾಳ ಮೂಲದ ಯುವತಿಯನ್ನು ಹಿಂಬಾಲಿಸಿದ್ದ ಮುನಿರಾಜು. ಮಾನಸಿಕ, ದೈಹಿಕವಾಗಿ ಯುವತಿಗೆ ಕಿರುಕುಳ ನೀಡಿದ್ದ. ಇದೇ ವೇಳೆ ಈ ಬಗ್ಗೆ ಯುವತಿ ತನ್ನ ಸ್ನೇಹಿತರಿಗೆ ಮಾಹಿತಿ ನೀಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಯುವತಿ ಸ್ನೇಹಿತರು ಮುನಿರಾಜುನನ್ನು ಹಿಂಬಾಲಿಸಿದ್ದಾರೆ. ಬಳಿಕ ಸಂಜಯನಗರಕ್ಕೆ ಬರುತ್ತಿದ್ದಂತೆ ಯುವತಿ ಸ್ನೇಹಿತರು ಮುನಿರಾಜುಗೆ ಮುಖ …

Read More »

ನಗ್ನ ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್ ಬೆಳಗಾವಿಯಲ್ಲಿ ಹೆಚ್ಚಿದ ಸೈಬರ್ ವಂಚನೆ;

: ಸೈಬರ್‌ ವಂಚಕರು ಫೇಸ್ ಬುಕ್ ನಲ್ಲಿ ಯುವತಿಯರ ಹೆಸರಲ್ಲಿ ಫ್ರೆಂಡ್ ರಿಕ್ವೆಷ್ಟಗಳನ್ನು ಸಾರ್ವಜನಿಕರಿಗೆ ಕಳುಹಿಸಿ ಬಳಿಕ ನಗ್ನ ವಿಡಿಯೋ ಕರೆಗಳನ್ನು ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಪ್ರಕರಣ ಕುಂದಾನಗರಿ ಬೆಳಗಾವಿಯಲ್ಲೂ ಬೆಳಕಿಗೆ ಬಂದಿದೆ. ಫೇಸ್ ಬುಕ್ ನಲ್ಲಿ ಯುವತಿಯರ ರೂಪದಲ್ಲಿ ವಂಚಕರು ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿ ಸಾರ್ವಜನಿಕರ ಸಂಪರ್ಕ ಸಾಧಿಸುತ್ತಾರೆ. ರಿಕ್ವೆಸ್ಟ್ ಸ್ವೀಕರಿಸಿದ ನಂತರ ಅವರೊಂದಿಗೆ ಫೇಸ್‌ಬುಕ್ ಮೆಸೆಂಜರ್‌ನಲ್ಲಿ ಚಾಟ್ ಮಾಡಿ ಅವರ ವ್ಯಾಟ್ಸ್‌ಅಪ್ ನಂಬರ್ ಪಡೆದುಕೊಳ್ಳುತ್ತಾರೆ. ನಂತರ …

Read More »

ಕಾಗವಾಡ, ಕುಗನೊಳ್ಳಿ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ, ಎಸ್‌ಪಿ ಭೇಟಿ

ಚಿಕ್ಕೋಡಿ : ಮಹಾರಾಷ್ಟ್ರದಿಂದ ಬೆಳಗಾವಿ‌ ಮೂಲಕ ರಾಜ್ಯದ ಗಡಿ ಪ್ರವೇಶಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ರಾಜ್ಯದೊಳಗೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲೆಯ ಕುಗನೊಳ್ಳಿ ಹಾಗೂ ಕಾಗವಾಡ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಲ್ಲಿ ನಿಯೋಜಿತ ಅಧಿಕಾರಿಗಳು ಹಾಗೂ …

Read More »

ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.

ಗೋಕಾಕ : ಯುಕ್ರೇನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಿನಿಪುಟ್ ಬಾಲ್ ಸ್ಪರ್ಧೆಯಲ್ಲಿ ಇಂಡಿಯನ್ ಟೀಂ ಗೆ ಆಯ್ಕೆಯಾದ ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.   ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಸೂಚನೆಯಂತೆ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ ನೀಡಿ, …

Read More »

ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ

  ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್‍ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‍ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ …

Read More »

ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಬಾಲಕಿಯ ಕಣ್ಣೀರಿಗೆ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಹಿರಣ್ಯಕೇಶಿ ನದಿ ಪ್ರವಾಹದಿಂದ ಮನೆ ಕುಸಿದು ಬಿದ್ದು, ಮನೆಯಲ್ಲಿದ್ದ ಎಲ್ಲಾ ಸಾಮಗ್ರಿ ಕೊಚ್ಚಿಕೊಂಡು ಹೋಗಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಬಾಲಕಿಯ ಕಣ್ಣೀರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ನಿಸರ್ಗ ದೇಸಾಯಿ ಎಂಬ ಎಂಟು ವರ್ಷದ ಬಾಲಕಿ ಪುಸ್ತಕ, ಆಟಿಕೆ ಸಾಮಾಗ್ರಿ, ಟಿವಿ ಕಳೆದುಕೊಂಡು ಕಣ್ಣೀರಿಟ್ಟಿದ್ದಳು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬಾಲಕಿಗೆ ಪುಸ್ತಕ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಡುವಂತೆ ಸಿಎಂ …

Read More »

ನಾಳೆಯಿಂದಲೇ ಶಾಲೆ ಆರಂಭದ ನಿರ್ಧಾರ ಕೈಬಿಟ್ಟ ರುಪ್ಸಾ

ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ನಾಳೆಯಿಂದ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಲಾಗಿದೆ. ಹಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ಮಾತ್ರ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಕರೆಮಾಡಿ ಸಭೆ ನಡೆಸಿ ಚರ್ಚಿಸಲು ಮನವಿ ಮಾಡಿದ್ದಾರೆ. ನಾಳೆಯಿಂದ ಶಾಲೆಗಳನ್ನು ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು. ಶಾಲೆ ಆರಂಭದ …

Read More »

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ಕಾಲಿಗೆ ನಮಸ್ಕರಿಸಿ ಆಶಿರ್ವಾದ ಪಡೆದರು. ಈ ವೇಳೆ ದೇವೇಗೌಡರು ನೂತನ ಸಿಎಂಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದರು. ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಹೆಚ್.ಡಿ.ರೇವಣ್ಣ ಸಾಥ್ …

Read More »