ಬೆಳಗಾವಿ – ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ. ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದೇವಸ್ಥಾನಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬಹುದು ಮತ್ತು ಮನೆಗ ಮನೆಗಳಲ್ಲಿ ಮೂರ್ತಿ ಸ್ಥಾಪಿಸಬಹುದು ಎಂದು ತಿಳಿಸಿದ್ದಾರೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೊರೋನಾ ಏರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆಳಗಾವಿಯಲ್ಲಿ ಸಧ್ಯ 567 ಸಕ್ರೀಯ ಪ್ರಕರಣಗಳಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಚಿಕ್ಕೋಡಿಯಲ್ಲಿ ಕೊರೋನಾ …
Read More »ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣ ಬೆಂಗಳೂರು: ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಲ್ಲಿನ ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ(ಕೆಐಎಬಿ) ಕಾರ್ಗೋ ಟರ್ಮಿನಲ್ನಲ್ಲಿ ರಕ್ತ ಚಂದನ ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿತ್ತು. ಅನುಮಾನಗೊಂಡು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು, …
Read More »ಮನೆ ಮುಂದೆ ನಿಲ್ಲಿಸಿದ ಬೈಕ್ಗಳನ್ನು ಕ್ಷಣಮಾತ್ರದಲ್ಲಿ ದರೋಡೆ ಮಾಡುವ ಚಾಲಾಕಿ ಗ್ಯಾಂಗ್..
ಬೆಂಗಳೂರು: ನೀವು ನಿಮ್ಮ ಬೈಕ್ನ್ನ ಮನೆ ಹೊರಗಡೆ ನಿಲ್ಲಿಸ್ತಿದ್ದೀರಾ..? ಹಾಗಾದ್ರೆ ಹುಷಾರ್ ಆಗಿರಿ. ಮನೆ ಮುಂದೆ ನಿಲ್ಲಿಸಿದ ಬೈಕ್ಗಳನ್ನು ಕ್ಷಣಮಾತ್ರದಲ್ಲಿ ದರೋಡೆ ಮಾಡುವ ಚಾಲಾಕಿ ಗ್ಯಾಂಗ್ ಒಂದು ಈಗ ನಗರದಲ್ಲಿ ಸಕ್ರಿಯವಾಗಿದೆ. ವೀರಣ್ಣ ಪಾಳ್ಯದಲ್ಲಿ ವ್ಯಕ್ತಿಯೊಬ್ಬರು ತಮ್ಮ ಬೈಕ್ನ್ನು ಮನೆಯ ಹೊರಗೆ ನಿಲ್ಲಿಸಿ ತಮ್ಮ ಅಪಾರ್ಟ್ಮೆಂಟ್ಗೆ ಹೋಗಿ ಬರೋದ್ರೊಳಗಾಗಿ ನಿಲ್ಲಿಸಿದ ಬೈಕ್ ನಾಪತ್ತೆಯಾಗಿದೆ. ಒಳಗಡೆ ಹೋಗಿ ಬರೋದ್ರೊಳಗಾಗಿ ಬೈಕ್ ಕಾಣದ್ದನ್ನ ಕಂಡು ಮಾಲೀಕ ಅರೆ ಕ್ಷಣ ಗಲಿಬಿಲಿಗೊಂಡಿದ್ದಾನೆ. ತದನಂತರ ಸಿಸಿಟಿವಿ …
Read More »ಹೆಚ್ಚಾಯ್ತು ರೌಡಿಶೀಟರ್ಗಳ ಹಾವಳಿ; ಹಾಡಹಗಲೇ ನಡೆಯುವ ಕೊಲೆಗಳಿಗೆ ಬೆಚ್ಚಿಬಿದ್ದ ಬೆಂಗಳೂರು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಕೊಲೆಗಳು ನಡೆಯುತ್ತಿದ್ದು ಬೆಂಗಳೂರು ಬೆಚ್ಚಿಬಿದ್ದಿದೆ. ಒಂದೆಡೆ ಪೊಲೀಸರು ದಿಢೀರ್ ರೌಡಿಶೀಟರ್ಗಳ ಮನೆ ಮೇಲೆ ದಾಳಿ ನಡೆಸಿ, ರೌಡಿಗಳ ಪರೇಡ್ ನಡೆಸಿದ್ರೂ ಕ್ರೈಮ್ಗಳು ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ. ಅದ್ರಲ್ಲೂ ಲಾಕ್ಡೌನ್ ಸಡಿಲಿಕೆಯಾಗಿ ಅನ್ಲಾಕ್ ಜಾರಿಯಾದ ಮೇಲೆ ಹಾಡಹಗಲೇ ಕೊಲೆಗಳು ನಡೆಯುತ್ತಿವೆ. ಇತ್ತೀಚೆಗೆ ನಡೆದ ಕ್ರೈಂಗಳು.. 1. ಜು. 19- ಯೂನಿಬ್ಯಾಂಕ್ ಒಳಗೆ ರೌಡಿಶೀಟರ್ ಬಬ್ಲಿ ಬರ್ಬರ ಹತ್ಯೆ. 2..ಜು. 2- ರಂದು ಹಾಡಹಗಲೇ ಬನಶಂಕರಿ …
Read More »ಮಹಾರಾಷ್ಟ್ರದಲ್ಲಿ ಮತ್ತೆ ಮುಂದುವರೆದ ಮಳೆಯ ಅಬ್ಬರ; ಬೆಳಗಾವಿ ಜಿಲ್ಲೆಯಲ್ಲಿ ನೆರೆ ಸಂತ್ರಸ್ತರ ಸ್ಥಿತಿ ಅತಂತ್ರ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಮುಂದುವರೆದಿದ್ದು, ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 60 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕೃಷ್ಣಾ ನದಿಯಲ್ಲಿ 3.70 ಲಕ್ಷ ಕ್ಯುಸೆಕ್ ಹೊರ ಹರಿವು ಉಂಟಾಗಿದೆ. ಈಗಾಗಲೇ 105 ಟಿಎಂಸಿ ಸಾಮರ್ಥ್ಯದ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಯ್ನಾ ಜಲಾಶಯ 90 ಟಿಎಂಸಿ ಭರ್ತಿಯಾಗಿದ್ದು, ಮಳೆ ಮುಂದುವರೆದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಕೃಷ್ಣಾ ನದಿಗೆ ಬಿಡುವ ಸಾಧ್ಯತೆ ಇದೆ. ಇದರಿಂದ ಬೆಳಗಾವಿ ಜಿಲ್ಲೆಯ …
Read More »ಜೆಡಿಎಸ್ ಗೆ ಹೋಗಿದ್ದಾಗ ಎಲ್ಲಿತ್ತು ಹಿಂದುತ್ವ: ಯತ್ನಾಳ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ಬೆಂಗಳೂರು: “ನೀವು ಜೆಡಿಎಸ್ ಗೆ ಹೋಗಿದ್ದಾಗ ಹಿಂದುತ್ವ ಎಲ್ಲಿ ಹೋಗಿತ್ತು ಸ್ವಾರ್ಥಕ್ಕಾಗಿ ನಿಮಗೆ ಹಿಂದುತ್ವ ಬೇಕಾ? ಜೆಡಿಎಸ್ ನಲ್ಲಿದ್ದಾಗ ಅಲ್ಪಸಂಖ್ಯಾತ ಓಲೈಕೆ ಮಾಡಿಲ್ಲವೇ: ಇದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ ರೀತಿ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ್ ನಡೆಸಿದ ಆರೋಪಗಳಿಗೆ ತಿರುಗೇಟು ನೀಡಿದ ರೇಣುಕಾಚಾರ್ಯ, ಯಡಿಯೂರಪ್ಪನವರ ಸಾಮರ್ಥ್ಯ, ನಾಯಕತ್ವ, ಹೋರಾಟ ದೊಡ್ಡದು. ನೂರಾರು ಪಾದಯಾತ್ರೆ, ಸಾವಿರಾರು ಹೋರಾಟ ಮಾಡಿದ್ದಾರೆ. ಅನೇಕ …
Read More »ಬೆಂಗಳೂರು ಏರ್ಪೋರ್ಟ್ಲ್ಲಿ ಆತಂಕ ಸೃಷ್ಟಿಸಿದ ನಕಲಿ ಗನ್ಗಳು
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಡಮ್ಮಿ ಗನ್ಗಳು ಕೆಲಹೊತ್ತು ಆತಂಕ ಸೃಷ್ಟಿ ಮಾಡಿದ ಘಟನೆ ನಿಲ್ದಾಣದ ಕಾರ್ಗೋ ಟರ್ಮಿನಲ್ನಲ್ಲಿ ನಡೆದಿದೆ. ವಿದೇಶದಿಂದ ಬಂದ ಪಾರ್ಸಲ್ ಕಂಡು ಕೆಲ ಕಾಲ ನಿಲ್ದಾಣದ ಸಿಬ್ಬಂದಿಗಳು ಗಾಬರಿಗೊಳಗಾಗಿದ್ದಾರೆ. ನಿನ್ನೆ ಇಸ್ತಾಂಬುಲ್ನಿಂದ ಕಾರ್ಗೋ ಟರ್ಮಿನಲ್ಗೆ ಪಾರ್ಸ್ಲ್ ಬಂದಿದ್ದು, ಅದನ್ನು ವರ್ಗಾವಣೆ ಮಾಡುವ ವೇಳೆಯಲ್ಲಿ ಅನುಮಾನ ವ್ಯಕ್ತಪಡಿಸಿದ ಸಿಬ್ಬಂದಿಗಳು, ತಪಾಸಣೆ ನಡೆಸಿದಾಗ ಗನ್ಗಳಿರುವುದು ಪತ್ತೆಯಾಗಿದೆ. ತಕ್ಷಣ ಗಾಬರಿಗೊಂಡ ಸಿಬ್ಬಂದಿಗಳು ಗನ್ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ …
Read More »ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?
ಬೆಂಗಳೂರು: ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲ ಬಾರಿ ದೆಹಲಿ ವಿಮಾನ ಏರಿದ್ದಾರೆ. ಸಿಎಂ ದೆಹಲಿ ಭೇಟಿ ರಾಜ್ಯದ ಸಚಿವ ಸ್ಥಾನಾಕಾಂಕ್ಷಿಗಳ ನೀರಿಕ್ಷೆ ಹೆಚ್ಚಿಸುವಂತೆ ಮಾಡಿದೆ. ಸಿಎಂ ಬೊಮ್ಮಾಯಿ ಇಂದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ತನ್ನನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಲು ತಾನು ದೆಹಲಿಗೆ ಹೋಗುತ್ತಿರುವುದಾಗಿ ಬೊಮ್ಮಾಯಿ ಹೇಳಿಕೆ …
Read More »ವಲಸಿಗ ರಿಂದಲೇ ಬಿಜೆಪಿ ಸರಕಾರ ಬಂದಿದ್ದು, ಅವರಿಗೆ ಸಚಿವ ಸ್ಥಾನ ಕೊಡಿಸಲು ಸಿಎಂ ಜತೆ ಚರ್ಚೆ: ಬಿಎಸ್ವೈ
ಬೆಂಗಳೂರು: ವಲಸಿಗ ರಿಂದಲೇ ಬಿಜೆಪಿ ಸರಕಾರ ಬಂದಿದ್ದು, ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಜತೆ ಮಾತನಾಡುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಗುರುವಾರ ಬೆಂಗಳೂರಿನ ಆರೆಸ್ಸೆಸ್ ಕಚೇರಿಗೆ ಭೇಟಿ ನೀಡಿ, ಮುಖಂಡ ಮುಕುಂದ್ ಅವರನ್ನು ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಸಚಿವ ಸಂಪುಟ ರಚನೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವರಿಷ್ಠರಿಗೆ ಬಿಟ್ಟಿದ್ದು, ವಲಸಿಗರ ವಿಷಯ …
Read More »ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ.
ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ. ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ 54 ಜನ ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದರು. ಎನ್ಡಿಆರ್ಎಫ್ ತಂಡ ಹಾಗೂ ಸ್ಥಳೀಯ ಪೊಲೀಸರು ಜನರನ್ನು ರಕ್ಷಿಸಿ, ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ಕೃಷ್ಣಾ ನದಿಯಿಂದ ಸವದಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಏಕಾಏಕಿ ನೀರು ಬಂದಿದ್ದರಿಂದ ಗ್ರಾಮಸ್ಥರು ಸಿಲುಕಿಕೊಂಡಿದ್ದರು. ಉತ್ತರ ಕನ್ನಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿರುವ …
Read More »
Laxmi News 24×7