ಗದಗ: ಆತ 12 ವರ್ಷಗಳಿಂದ ಸೈನಿಕನಾಗಿ ದೇಶ ಕಾಯ್ತಿದ್ದ. ಒಂದು ತಿಂಗಳ ಹಿಂದೆ ರಜೆ ಮೇಲೆ ಊರಿಗೆ ಬಂದಿದ್ದ. ಬಳಿಕ ಮೇಲಾಧಿಕಾರಿಗಳ ಕರೆ ಮೇಲೆ ಮತ್ತೆ ಸೇವೆಗೆ ಹಾಜರಾದ. ಆದ್ರೆ ಬೆಳಿಗ್ಗೆ ಅಪ್ಪ ಅಮ್ಮನ ಜೊತೆಗೆ ಖುಷಿ ಖುಷಿಯಾಗಿ ಮಾತನಾಡಿದ್ದ ಯೋಧ ಮಾತನಾಡಿದ ಒಂದೇ ಗಂಟೆಯಲ್ಲಿ ಯೋಧನ ಹುತಾತ್ಮನಾದ ಸುದ್ದಿ ಬರಸಿಡಿಲಂತೆ ಬಡಿದಿದೆ. ಇಂದು ಛತ್ತೀಸ್ಘಡದಲ್ಲಿ ಗದಗ ಮೂಲದ ಯೋಧ ಹುತಾತ್ಮನಾಗಿರೋ ಸುದ್ದಿ ತಿಳಿದು ಗೊಜನೂರು ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. …
Read More »ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ನೀಡಲು ಆದೇಶ: B.S.Y.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ಮಾಡಿಕೊಂಡ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು ತಕ್ಷಣ ಹಿಂದಿನ ಬಾಕಿಯೂ ಸೇರಿ ಶೇ.11 ತುಟ್ಟಿ ಭತ್ಯೆಯನ್ನು ಜುಲೈ 1ರಿಂದ ಅನ್ವಯವಾಗುವಂತೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ರಾಜ್ಯ ಸರ್ಕಾರದ ಈ ಆದೇಶದಿಂದ 6 ಲಕ್ಷ …
Read More »ವಿಶೇಷ ಜಿಲ್ಲಾಧಿಕಾರಿ: ಐಎಎಸ್ ಅಧಿಕಾರಿ ನೇಮಕಕ್ಕೆ ಸೂಚನೆ
ಕೆಎಎಸ್ ಅಧಿಕಾರಿಗಳಾದ ಎಂ. ಕೆ.ಜಗದೀಶ್ ಮತ್ತು ಬಸವರಾಜ್ ಅವರನ್ನು ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಹುದ್ದೆಗಳಿಗೆ ನೇಮಕ ಮಾಡಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ನಗರದ ವಕೀಲ ವಾಸುದೇವ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ‘ಐಎಎಸ್ ಅಧಿಕಾರಿಗಳನ್ನೇ ಈ ಹುದ್ದೆಗಳಿಗೆ ನೇಮಕ ಮಾಡಬೇಕು’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶನ ನೀಡಿದೆ. ‘ಕರ್ನಾಟಕ ಭೂಕಂದಾಯ …
Read More »ಕೊಡವ ಸಮುದಾಯಕ್ಕೆ ಎಸ್ಟಿ ಸ್ಥಾನಮಾನ: ಅಧ್ಯಯನದ ಮಾನದಂಡ ಪರಿಶೀಲಿಸಲು ಹೈಕೋರ್ಟ್ ಸೂಚನೆ
ಬೆಂಗಳೂರು: ಕೊಡವ ಸಮುದಾಯಕ್ಕೆ ಪರಿಶಿಷ್ಟ ಪಂಡಗದ ಸ್ಥಾನಮಾನ ಕಲ್ಪಿಸುವ ವಿಚಾರವಾಗಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಸಲ್ಲಿಸಿರುವ ಅಧ್ಯಯನ ವರದಿಯನ್ನು ಪರಿಗಣಿಸುವ ಮೊದಲು ಸೂಕ್ತ ಮಾನದಂಡಗಳನ್ನು ಅನುಸರಿಸಿ ಅಧ್ಯಯನ ನಡೆಸಲಾಗಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಅಧ್ಯಯನದ ಸಂದರ್ಭದಲ್ಲಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನೀಡಿರುವ ಪ್ರಶ್ನಾವಳಿ ಮತ್ತು ಅರ್ಜಿ ನಮೂನೆಯನ್ನು ರದ್ದಪಡಿಸುವಂತೆ ಕೋರಿ ಕೊಡವ ನ್ಯಾಷನಲ್ ಕೌನ್ಸಿಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ …
Read More »ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಐದು ಜಿಲ್ಲೆಗಳ 1261 ವಿದ್ಯಾರ್ಥಿಗಳು 600 ಅಂಕಗಳಿಗೆ 600 ಅಂಕ ಗಳಿಸುವಲ್ಲಿ ಯಶಸ್ವಿ
ಬೆಂಗಳೂರು, ಜು. 20: ಕರ್ನಾಟಕದಲ್ಲಿ ಮಂಗಳವಾರ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಐದು ಜಿಲ್ಲೆಗಳ 1261 ವಿದ್ಯಾರ್ಥಿಗಳು 600 ಅಂಕಗಳಿಗೆ 600 ಅಂಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 445 ವಿದ್ಯಾರ್ಥಿಗಳು 600 ಅಂಕಗಳಿಗೆ ಸರಾಸರಿ 600 ಅಂಕ ಗಳಿಸಿದ್ದಾರೆ. ಮಂಗಳವಾರ ಸಂಜೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದರು. ಪರೀಕ್ಷೆ ಇಲ್ಲದಿದ್ದರೂ ಪ್ರಥಮ ಪಿಯುಸಿ ಹಾಗೂ ಎಸ್ಎಸ್ಎಲ್ ಸಿ ಯಲ್ಲಿ …
Read More »ಕ್ರಿಮಿನಲ್ ಗಳು ಒಳ್ಳೆಯ ಕೆಲಸ ಮಾಡಲು ಸಾಧ್ಯವೇ?: ಕೇಂದ್ರದ ವಿರುದ್ಧ ಕಿಡಿಕಾರಿದ ದಿನೇಶ್
ಬೆಂಗಳೂರು: ಪೆಗಸಸ್ ಸ್ಪೈವೇರ್ ಮೂಲಕ ಪ್ರತಿಷ್ಟಿತ ವ್ಯಕ್ತಿಗಳ ಮೇಲೆ ಕಣ್ಗಾವಲು ಇಡುವ ಕೇಂದ್ರದ ದುಷ್ಟ ಬುದ್ದಿ ಜಗತ್ತಿನ ಮುಂದೆ ಬೆತ್ತಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಮೇಲೂ ಕಣ್ಗಾವಲು ನಡೆಸಿರುವುದು ಕ್ರಿಮಿನಲ್ಗಳು ಮಾಡುವಂತ ಕೆಲಸ. ಕೇಂದ್ರದ ಆಯಕಟ್ಟಿನ ಜಾಗದಲ್ಲಿ ಕ್ರಿಮಿನಲ್ಗಳೇ ಇರುವಾಗ ಕ್ರಿಮಿನಲ್ ಕೆಲಸವಲ್ಲದೆ ಒಳ್ಳೆ ಕೆಲಸ ಮಾಡಲು ಸಾಧ್ಯವೇ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಅಸಮರ್ಥ ನಾಯಕನಿಗೆ ಸದಾ ಅಸ್ತಿತ್ವದ ಭಯ ಕಾಡುತ್ತದೆ. ಮೋದಿಯವರಿಗೂ …
Read More »ಸಚಿವ ಮುರಿಗೇಶ್ ನಿರಾಣಿ ಓರ್ವ ‘ಸಿಡಿ ಬಾಬಾ’; ಅವರ ಬಳಿ 500 ಸಿಡಿಗಳಿವೆ; ಹೊಸ ಬಾಂಬ್ ಸಿಡಿಸಿದ ಆಲಂ ಪಾಷಾ
ಬೆಂಗಳೂರು: ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿಡಿಗಳಿವೆ. ಯಾರದ್ದೂ ಬೇಕಾದರೂ ಸಿಡಿ ಇರಬಹುದು. ಒಂದು ವೇಳೆ ಇವರಿಗೆ ಆರೂವರೆ ಕೋಟಿ ಜನರ ಬೆಂಬಲ ಸಿಕ್ಕರೆ ಈ ಸಿಡಿಗಳ ಸಂಖ್ಯೆ 50 ಲಕ್ಷ ಆಗಬಹುದು ಎಂದು ಉದ್ಯಮಿ ಎ.ಆಲಂ ಪಾಷ ಆರೋಪಿಸಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುರುಗೇಶ್ ನಿರಾಣಿ ರಾಜ್ಯದ ಮಂತ್ರಿಗೂ ಸಿಡಿ ಇದೆ ಎಂದು ಹೆದರಿಸಿದ್ದಾರೆ. ಅವರು ಕೋರ್ಟ್ ನಿಂದ ಸ್ಟೇ …
Read More »ಬೆಳಗಾವಿ ಜಿಲ್ಲಾ ಪೋಲೀಸರು ಬಕ್ರೀದ್ ಹಬ್ಬದ ಮುನ್ನಾದಿನ 209 ಆಕಳು ಕರುಗಳನ್ನು ರಕ್ಷಿಸಿದ್ದಾರೆ
ಬೆಳಗಾವಿ- ಬಕ್ರೀದ್ ಹಬ್ಬಕ್ಕಾಗಿ ಮಾರಾಟ ಮಾಡಲು ತರಲಾಗಿದ್ದ 209 ಆಕಳು ಕರುಗಳನ್ನು ರಾಯಬಾಗ ಪೋಲೀಸರು ವಶಪಡಿಸಿಕೊಂಡಿದ್ದಾರೆ. ರಾಯಬಾಗ ಪಟ್ಟಣದ ಸಾಯಿನಗರದಲ್ಲಿರುವ ಇಮ್ತಿಯಾಜ್ ಬೇಪಾರಿ ಜಾತಿ ಬೆಪಾರಿ ಎಂಬಾತ ನಡೆಸುತ್ತಿದ್ದ ಖಾಸಾಯಿ ಖಾನೆಗೆ ಸುಮಾರು 209 ದನಗಳು (ಆಕಳುಕರುಗಳು ಹಾಗೂ ಎಮ್ಮೆಕರುಗಳು) ಗಳನ್ನು ಬಕ್ರೀದ್ ಹಬ್ಬದ ನಿಮಿತ್ಯ ಕಸಾಯಿ ಖಾನೆಗೆ ತೆಗೆದುಕೊಂಡು ಬಂದಿದ್ದನ್ನು ರಾಯಭಾಗ ಪೊಲೀಸರು ತಮ್ಮ ವಶಕ್ಕೆ ತಗೆದುಕೊಂಡಿದ್ದಾರೆ. ವಶಪಡಿಸಿಕೊಂಡ ಆಕಳುಕರು,ಹಾಗು ಎಮ್ಮೆಗಳನ್ನು ನಸುಕಿನ ಜಾವ ಬೆಳಗಾವಿ, ಸದಲಗಾ ಹಾಗೂ …
Read More »ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …
Read More »ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು …
Read More »
Laxmi News 24×7