Breaking News

ಜಿಲ್ಲೆ

ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಬಿಜೆಪಿ ಮಾಜಿ ಎಂ​ಎಲ್​ಸಿ ಅಶ್ವಥ್ ನಾರಾಯಣ್ 12 ಕೋಟಿ ಸಾಲ ಕಟ್ಟಿಲ್ಲ -ಠೇವಣಿದಾರರ ಅಳಲು

ಬೆಂಗಳೂರು: ನಗರದ ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಡಾ ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು ಪತ್ರಿಕಾಗೋಷ್ಟಿ ನಡೆಸಿದ್ರು. ಈ ಬ್ಯಾಂಕ್ ಹಗರಣ ಬೆಳಕಿಗೆ ಬಂದು ಎರಡು ವರ್ಷಗಳಾಗ್ತಾ ಬಂತು. ಇದನ್ನ ಸಿಐಡಿ ತನಿಖೆಗೆ ವಹಿಸಲಾಗಿದೆ. ಆದರೆ ಏನು ತನಿಖೆ ಆಗ್ತಾ ಇದೆ ಅನ್ನೊದು ಗೊತ್ತಿಲ್ಲ. ವಾಸ್ತವದಲ್ಲಿ ಸಿಐಡಿಗೆ ಇಷ್ಟು ದೊಡ್ಡ ಹಗರಣ ತನಿಖೆ ಮಾಡಲು ಸಾಮರ್ಥ್ಯ ಇಲ್ಲ. ಈಗಾಗಲೇ ಸುಮಾರು ಠೇವಣಿದಾರರು ಮೃತರಾಗಿದ್ದಾರೆ ಎಂದು …

Read More »

ಮುಳ್ಳೂರು ಘಾಟ್‌ ಮಾರ್ಗದಲ್ಲೆ ಪ್ರಯಾಣ: ಆತಂಕ

ರಾಮದುರ್ಗ (ಬೆಳಗಾವಿ ಜಿಲ್ಲೆ): ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ವಾಹನಗಳು ಅಪಾಯಕಾರಿಯಾದ ರಸ್ತೆಯಲ್ಲೇ ಸಂಚರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ‘ಮೃತ್ಯುಕೂಪ’ ಎಂದೇ ಅಪಖ್ಯಾತಿ ಹೊಂದಿದ್ದ ಇಲ್ಲಿನ ಮುಳ್ಳೂರು ಘಾಟ್‌ನಲ್ಲಿ ವಾಹನಗಳಲ್ಲಿ ಹೋಗುವವರು ಕೈಯಲ್ಲಿ ಜೀವ ಹಿಡಿದುಕೊಂಡೆ ಪ್ರಯಾಣಿಸಬೇಕಿತ್ತು. ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಪಘಾತಗಳಾಗಿ ಸಾವು-ನೋವು ಸಂಭವಿಸಿರುವ ಘಾಟ್ ಸುಧಾರಣೆಗೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಹೊಸ ಮಾರ್ಗ ನಿರ್ಮಿಸುವಂತೆ ಬೇಡಿಕೆ ಇತ್ತು. ಹಿಂದಿನ ಶಾಸಕ ಅಶೋಕ ಪಟ್ಟಣ ಅವರ ಪ್ರಯತ್ನದಿಂದ ರಾಜ್ಯ ಸರ್ಕಾರದಿಂದ ವಿಶೇಷ …

Read More »

ವಯಸ್ಸಲ್ಲದ ವಯಸ್ಸಿನ ಮಗಳ ಮದುವೆ ಮಾಡಿದ ಪೋಷಕರಿಗೆ ಬಿಗ್ ಶಾಕ್: ತಾಳಿ ಕಿತ್ತೆಸೆದು ಬಾಲಕಿ ಆಕ್ರೋಶ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮದುವೆ ಮಾಡಲಾಗಿದ್ದು, ಆಕೆ ಆಕ್ರೋಶದಿಂದ ದಾಳಿಯನ್ನು ಕಿತ್ತೆಸೆದ ಘಟನೆ ನಡೆದಿದೆ. ಜುಲೈ 7 ರಂದು ಹೊಸದುರ್ಗ ತಾಲೂಕಿನ ಗ್ರಾಮದಲ್ಲಿ ವಿರೋಧದ ನಡುವೆಯೂ ಪೋಷಕರು ಬಾಲಕಿಯನ್ನು ಮದುವೆ ಮಾಡಿದ್ದರು. ಬಲವಂತವಾಗಿ ತಾಳಿಕಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಶಿವಮೊಗ್ಗದಲ್ಲಿ ಪಿಯುಸಿ ಓದುತ್ತಿದ್ದ 16 ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದ ಪೋಷಕರು ಬಲವಂತವಾಗಿ ಸೋದರ ಮಾವನೊಂದಿಗೆ ಮದುವೆ ಮಾಡಿದ್ದರು. ಬಾಲ್ಯವಿವಾಹ …

Read More »

ರಾಜ್ಯದ ಹಲವೆಡೆ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ..?

ಬೆಂಗಳೂರು: ರಾಜ್ಯದ ಹಲವೆಡೆ ವರುಣರಾಯ ಅಬ್ಬರಿಸಿದ್ದಾನೆ. ಕೊಡಗು ಜಿಲ್ಲೆಯಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯ ಮುನ್ಸೂಚನೆ ಇದೆ. ಮುಂದಿನ 24 ಗಂಟೆಗಳಲ್ಲಿ 204 ಮಿಲಿ ಮೀಟರ್‍ಗೂ ಹೆಚ್ಚು ಮಳೆ ಬೀಳುವ ಸಂಭವ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬೆಟ್ಟ-ಗುಡ್ಡ, ನದಿ ತೀರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಆದೇಶಿಸಿದೆ. ಅನಾಹುತ ತಪ್ಪಿಸಲು ಎನ್‍ಡಿಆರ್‍ಎಫ್ ತಂಡ ನಿಯೋಜಿಸಲಾಗಿದೆ. …

Read More »

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಮುನ್ಸೂಚನೆ ಬೆಳಗಾವಿ ಜಿಲ್ಲೆಯ ಜನರಿಗೆ ಆತಂಕ ಶುರು

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಆತಂಕ ಶುರುವಾಗಿದೆ. ಜುಲೈ 9ರಿಂದ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ನದಿ ಪಾತ್ರದ ಜುಗುಳ, ಮಂಗಾವತಿ, ಶಹಾಪೂರ ಕುಸನಾಳ, ಮೊಳವಾಡ, ಉಗಾರ್ ಕೆಎಚ್, ಬಣಜವಾಡ ಹಾಗೂ ಕಿತ್ತೂರ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ …

Read More »

ನಾಗಾಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧನ ವೀರಮರಣ..

ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋಕಾಕ್ ತಾಲೂಕಿನ ಶಿವಾಪುರದ ಯೋಧ ಮಂಜುನಾಥ ಗೌಡನ್ನವರ (38) ಮೃತಪಟ್ಟಿರುವ ಯೋಧ. ಕರ್ತವ್ಯದಲ್ಲಿದ್ದ ಇವರು ಗಸ್ತು ತಿರುಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 18 ವರ್ಷದಿಂದ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್​​ನಲ್ಲಿ ನೇಮಕಗೊಂಡು, ನಾಗಲ್ಯಾಂಡ್ ಗಡಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಸ್ತು ತಿರುಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. …

Read More »

ಸಿಲಿಕಾನ್ ಸಿಟಿಯಲ್ಲಿ ಸೂಟುಬೂಟಿನ ಕಳ್ಳ – ಸಭ್ಯಸ್ಥನ ವೇಷದಲ್ಲಿ ಬಂದು ಕಳ್ಳತನ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಹಗಲು ಹೊತ್ತಲ್ಲೇ ರಾಜಾರೋಷವಾಗಿ ಬಂದು ಕಳ್ಳತನ ಮಾಡುತ್ತಾರೆ. ಅಪಾರ್ಟ್ ಮೆಂಟ್ ಒಳಗೆ ನುಗ್ಗಿ ಕದ್ದೊಯ್ದರೂ ಹೇಳೋರಿಲ್ಲ ಕೇಳೋರಿಲ್ಲ ಅನ್ನೋವಂತಾಗಿದೆ. ಹೌದು. ಹಗಲು ಹೊತ್ತಲ್ಲಿಯೇ ಮನಗೆ ನುಗ್ಗಿ ಕಳ್ಳನೊಬ್ಬ ತನ್ನ ಕೈಚಳಕ ತೋರಿರುವುದು ಸಿಸಿಟಿವಿಯಲ್ಲಿ ಬಯಲಾಗಿದೆ. ಈ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯ ವೀರನಪಾಳ್ಯದಲ್ಲಿ ನಡೆದಿದೆ. ವೀರನಪಾಳ್ಯದಲ್ಲಿರುವ ಸೋನಾ ಟವರ್ ಅಪಾರ್ಟ್ ಮೆಂಟ್ ನ ಮೊದಲನೇ ಮಹಡಿಯಲ್ಲಿ ಈ ಕಳ್ಳತನ ನಡೆದಿದೆ. ಖದೀಮ …

Read More »

ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಸಿಬ್ಬಂದಿ ಎಸಿಬಿ ಬಲೆಗೆ

ಚಿಕ್ಕೋಡಿ: ಅನಧಿಕೃತ ಪಾನ್‌ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ, ಮಾಲೀಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸದಲಗಾ ಪೊಲೀಸ್‌ ಠಾಣೆಯ ಪಿಎಸ್‌ಐ ಹಾಗೂ ಇಬ್ಬರು ಪೊಲೀಸ್‌ ಪೇದೆಗಳು ಭ್ರಷ್ಟಾಚಾರ ನಿಗೃಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ಗುರುವಾರ ರಾತ್ರಿ ಠಾಣೆ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಕುಮಾರ ಹಿತ್ತಲಮನಿ ಹಾಗೂ ಕಾನ್ಸಟೇಬಲ್‌ ಮಾಯಪ್ಪಾ ಗಡ್ಡೆ ಮತ್ತು ಶ್ರೀಶೈಲ ಮಂಗಿ ಅವರನ್ನು ವಶಕ್ಕೆ …

Read More »

ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ವರ್ಚುವಲ್ ಸಭೆ

ಬೆಳಗಾವಿ:  ಕಾರ್ಯಕರ್ತರ ಸಹನೆ, ಸಹಕಾರ ಹಾಗೂ ಅವರ ನಿಸ್ವಾರ್ಥ ಸೇವೆಯಿಂದ ಬಿಜೆಪಿ ಪಕ್ಷ ಇಂದು ಪ್ರಪಂಚದಲ್ಲಿಯೆ ಅತಿಹೆಚ್ಚು ಕಾರ್ಯಕರ್ತರನ್ನು ಹೊಂದಿದ ಸಮರ್ಥ ಪಕ್ಷ ಎನ್ನುವದು ಜಗಜ್ಜನಿತವಾಗಿದೆ ಎಂದು ಉಪಸಭಾಪತಿ ಆನಂದ ಮಾಮನಿ ಹೇಳಿದರು. ನಗರದ ಗೋಮಟೇಶ್ವರ ಸಭಾ ಭವನದಲ್ಲಿ ಶನಿವಾರ ನಡೆದ ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ವರ್ಚುವಲ್ ಸಭೆಯನ್ನು ಉದ್ಘಾಟಸಿ ಮಾತನಾಡಿ, ಚುನಾವಣೆಗೆ ಮಾತ್ರ ಸೀಮಿತವಾಗದೆ ಜನರ ಸಂಕಷ್ಟಕ್ಕೆ ಸದಾ ಸ್ಪಂದಿಸುವದೆ ಪಕ್ಷದ ಸಿದ್ದಾಂತವಾಗಿದೆ. ಬಿಡುವಿಲ್ಲದೆ ದೇಶದ ಜನರ …

Read More »

ಕೆಆರ್​​ಎಸ್​ ವಾರ್​ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

ರಾಜ್ಯದಲ್ಲಿ ಕನ್ನಂಬಾಡಿ ಕಾಳಗ ದಿನಕ್ಕೊಂದು ಆಯಾಮವನ್ನ ಪಡೆಯುತ್ತಿದೆ. ಡ್ಯಾಂ ಸುರಕ್ಷತೆ ವಿಚಾರವಾಗಿ ಶುರುವಾದ ವಿವಾದ ಇದೀಗ ವೈಯಕ್ತಿಕ ಹೇಳಿಕೆ ನೀಡುವವರೆಗೂ ಬಂದು ನಿಂತಿದೆ. ಇಂದು ಬೆಂಗಳೂರಿನಲ್ಲಿ ಕೆಆರ್​ಎಸ್​ ಡ್ಯಾಂ ವಿಚಾರವಾಗಿ ಸಂಸದೆ ಸುಮಲತಾ ಹಾಗೂ ಹೆಚ್​ಡಿಕೆ ನಡುವಿನ ಸಂಘರ್ಷದ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ ನಮ್ಮ ಡ್ಯಾಂ ಸುರಕ್ಷಿತವಾಗಿದೆಯಾ ಅನ್ನೋದಷ್ಟೇ ಮುಖ್ಯ ಎಂದು ಹೇಳಿದ್ರು. ಸಂಸದೆ ಸುಮಲತಾ ಅಂಬರೀಶ್​ ಹಾಗೂ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ನಡುವೆ ನಡೆಯುತ್ತಿರುವ …

Read More »