Breaking News

ಜಿಲ್ಲೆ

ಮೋದಿ ಸರ್ಕಾರದಿಂದ ಗುಡ್ ನ್ಯೂಸ್

ಅನೇಕ ಬಾರಿ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಿಸಿಕೊಳ್ಳಬೇಕು ಅಂದರೆ ಸಾರ್ವಜನಿಕರಿಗೆ ಅಲ್ಲಿನ ಸಿಬ್ಬಂದಿಯಿಂದ ಕಿರಿಕಿರಿ ಉಂಟಾಗುವುದು ಇದೆ. ಇಂತಹ ಸಂದರ್ಭಗಳಲ್ಲಿ ಅನೇಕರು ಮೇಲಾಧಿಕಾರಿಗಳಿಗೆ ದೂರನ್ನ ಸಹ ನೀಡುತ್ತಾರೆ.   ಆದರೆ ಈ ದೂರುಗಳನ್ನ ಕೆಲವರು ಗಂಭೀರವಾಗಿ ಪರಿಗಣಿಸೋದೇ ಇಲ್ಲ. ಆದರೆ ಇನ್ಮೇಲೆ ನೀವು ಈ ರೀತಿಯ ಸಮಸ್ಯೆಗಳನ್ನ ಎದುರಿಸಬೇಕಾಗಿ ಬರೋದಿಲ್ಲ. ಏಕೆಂದರೆ ಸಾರ್ವಜನಿಕರು ನೇರವಾಗಿ ದೂರುಗಳನ್ನ ಪ್ರಧಾನಮಂತ್ರಿ ಕಾರ್ಯಾಲಯಕ್ಕೇ ತಲುಪಿಸಬಹುದಾಗಿದೆ.   ನೀವು ನೇರವಾಗಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೇ ದೂರನ್ನ ಸಲ್ಲಿಸಬೇಕು …

Read More »

ಕನ್ನಡ ಧ್ವಜ ಮಳೆ-ಬಿಸಿಲಿನಿಂದ ಬಣ್ಣ ಕಳೆದುಕೊಂಡಿದೆ.

ಬೆಳಗಾವಿ: ಮಹಾನಗರ ಪಾಲಿಕೆ ಎದುರು ಅಳವಡಿಸಿರುವ ಕನ್ನಡ ಬಾವುಟ ಮಳೆ-ಬಿಸಿಲಿಗೆ ಮಾಸಿದ್ದರಿಂದ ಅದನ್ನು ಬದಲಾಯಿಸಿ ಹೊಸ ಬಾವುಟ ಅಳವಡಿಸಲು ಸೋಮವಾರ ಬಂದಿದ್ದ ಕನ್ನಡ ಸಂಘಟನೆ ಕಾರ್ಯಕರ್ತರನ್ನು ತಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು.   ಕನ್ನಡ ಹೋರಾಟಗಾರರಾದ ಶ್ರೀನಿವಾಸ ತಾಳೂಕರ ಹಾಗೂ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಕನ್ನಡ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ದ್ವಜ ಸ್ತಂಬದ ಕಡೆಗೆ ಹೋಗುವುದನ್ನು …

Read More »

ಇಂದಿನಿಂದ ರಾಜ್ಯಾದ್ಯಂತ ಅನಲಾಕ್ 3.O ಹಿನ್ನೆಲೆ ಬಹುತೇಕ ದೇವಸ್ಥಾನಗಳು ಓಪನ್ ಆಗಿದ್ದು,

ಬೆಳಗಾವಿ: ಕಳೆದ ಎರಡೂ ವರೆ ತಿಂಗಳು ಬಳಿಕ ಇಂದಿನಿಂದ ರಾಜ್ಯಾದ್ಯಂತ ಅನಲಾಕ್ 3.O ಹಿನ್ನೆಲೆ ಗಡಿಜಿಲ್ಲೆ ಬೆಳಗಾವಿಯಲ್ಲಿ ಬಹುತೇಕ ದೇವಸ್ಥಾನಗಳು ಓಪನ್ ಆಗಿದ್ದು, ದೇವಸ್ಥಾನಗಳಲ್ಲಿ ಭಕ್ತರು ದರ್ಶನಕ್ಕೆ ಆಗಮಿಸುತ್ತಿದೆ. ಸವದತ್ತಿ ಯಲ್ಲಮ್ಮನ ದೇವಸ್ಥಾನ ಹಾಗೂ ಜೋಗುಳಭಾವಿ ಸತ್ತೆಮ್ಮ ದೇವಿಯ ದೇವಸ್ಥಾನ ಹೊರತುಪಡಿಸಿ ಜಿಲ್ಲೆಯ ಉಳಿದ ದೇವಸ್ಥಾನಗಳು ಇಂದಿನಿಂದ ಮೊದಲಿನಂತೆ ಓಪನ್ ಆಗುತ್ತಿದ್ದು, ದಕ್ಷಿಣಕಾಶಿ ಎಂದೇ ಪ್ರಸಿದ್ಧ ಪಡೆದಿರುವ ಬೆಳಗಾವಿ ಕಪಿಲೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಜನರ ದಂಡು ಆಗಮಿಸುತ್ತಿದೆ. ಕೋವಿಡ್ …

Read More »

ಸತೀಶ್ ಜಾರಕಿಹೊಳಿಯವರು ಬಿ ಜೆ ಪಿಗೆ ಕೆಂಡ ಕಾರಿದರು….

ಗೋಕಾಕ : ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸ್ಪಂಧಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸರ್ಕಾರದ ವಿರುದ್ಧ ಗುಡುಗಿದರು.   ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಧಿವೇಶನ ನಡೆಸುವ ಇಚ್ಛಾಶಕ್ತಿ ಇಲ್ಲ. ಆದ ಕಾರಣ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದ ಜನರ ಸಮಸ್ಯೆಗಳನ್ನು ಬಗೆ ಹರಿಸುವ ಮೂಲಕ, …

Read More »

ಯುವಕ ಮಂಡಳಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ

    ಗೋಕಾಕ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳ ಯುವಕ ಮಂಡಳಗಳಿಗೆ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ನೀಡಿದ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಇಂದು ವಿತರಿಸಿದರು.   ಹುಕ್ಕೇರಿ ತಾಲ್ಲೂಕಿನ ಬಗರನಾಳ ಗ್ರಾಮದ ಗಜಾನನ ಯುವ ಮಂಡಳ, ಶಹಾಬಂದರದ ಮೆಹಬೂಬ ಸುಬಾನಿ ಯುವಕ ಮಂಡಳ, ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಅಮರಜ್ಯೋತಿ ಯುವಕ ಮಂಡಳಕ್ಕೆ ಕ್ರೀಡಾ ಸಾಮಗ್ರಿಗಳನ್ನು …

Read More »

50ಕ್ರೀಡಾ ಪಟುಗಳಿಗೆ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಅಮರನಾಥ ಜಾರಕಿಹೊಳಿ ವಿತರಿಸಿದರು.

ಗೋಕಾಕ: ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಇಂದು ( ಸೋಮವಾರ) ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಿಂದ SCP /TSP ಯೋಜನೆ ಅಡಿಯಲ್ಲಿ ರಾಜ್ಯ ವಲಯ ಕ್ರೀಡಾ ತರಬೇತಿಯಲ್ಲಿ ಭಾಗವಹಿಸಿದ 50ಕ್ರೀಡಾ ಪಟುಗಳಿಗೆ ಹಾಗೂ ಗೋಕಾಕ ಮತಕ್ಷೇತ್ರದ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ವಿತರಿಸಿದರು.     ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಟಿ , ಆರ್ ಕಾಗಲ …

Read More »

ಬೆಳಗಾವಿ ಉಪಚುನಾವಣೆಗೆ 13.54 ಕೋಟಿ ರು. ಖರ್ಚು

ಬೆಳಗಾವಿ (ಜು.05): ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸರ್ಕಾರದಿಂದ 13.54 ಕೋಟಿ ರು. ಖರ್ಚು ಆಗಿರುವುದು ಮಾಹಿತಿ ಹಕ್ಕಿನಿಂದ ಬಹಿರಂಗಗೊಂಡಿದೆ ಎಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಅವರು ತಿಳಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ಅಧಿಕಾರಿಗಳು ನೀರಿನಂತೆ ಪೋಲು ಮಾಡಿದ್ದಾರೆ ಎಂದು ಆರೋಪಿಸಿದರು. ಯಾವುದೇ ಜನಪ್ರತಿನಿಧಿ ಅವಧಿಗೆ ಮುನ್ನ ಪಕ್ಷಾಂತರ ಮಾಡುವ, ರಾಜೀನಾಮೆ ನೀಡಿದ ಮೇಲೆ …

Read More »

ಸಹಜ ಸ್ಥಿತಿಯತ್ತ ಕರ್ನಾಟಕ: ಏನೆಲ್ಲಾ ಇರಲಿದೆ? ಏನೆಲ್ಲಾ ಇರುವುದಿಲ್ಲ?

ಬೆಂಗಳೂರು: ಕೊಡಗು ಮತ್ತು ಹಾಸನ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದಾದ್ಯಂತ ಸೋಮವಾರ ಬೆಳಿಗ್ಗೆಯಿಂದ ಲಾಕ್‌ಡೌನ್‌ ಸಡಿಲಿಕೆಯ ಮೂರನೇ ಹಂತ ಜಾರಿಗೆ ಬರಲಿದೆ. ದೇವಸ್ಥಾನ, ಮಾಲ್‌ ತೆರೆಯಲು ಅವಕಾಶ ದೊರೆಯಲಿದ್ದು, ಬಹುತೇಕ ನಿರ್ಬಂಧಗಳು ರದ್ದಾಗಲಿವೆ. ಕೋವಿಡ್ ಎರಡನೇ ಅಲೆಯು ರಾಜ್ಯವ್ಯಾಪಿ ಹರಡಿದ ಕಾರಣದಿಂದ ಮೇ 10ರಂದು ಲಾಕ್‌ಡೌನ್‌ ಜಾರಿಗೊಳಿಸಲಾಗಿತ್ತು. ಅಂದಿನಿಂದಲೂ ಬಂದ್‌ ಆಗಿದ್ದ ದೇವಸ್ಥಾನಗಳು ಸೋಮವಾರ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿವೆ. ಭಕ್ತರು ದೇವರ ದರ್ಶನವನ್ನಷ್ಟೇ ಪಡೆಯಲು ಅವಕಾಶವಿದ್ದು, ಯಾವುದೇ ಸೇವೆಗಳಿಗೆ ಅನುಮತಿ ಇರುವುದಿಲ್ಲ. …

Read More »

ಕೆಪಿಎಸ್‌ಸಿ: ಮುಗಿಯದ ಗೋಳು, ಅಧಿಕಾರಿಗಳ ಅಳಲು

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ 2006ರಲ್ಲಿ ನೇಮಕಗೊಂಡಿದ್ದ 1998ನೇ ಸಾಲಿನ 383 ಅಧಿಕಾರಿಗಳ ಆಯ್ಕೆ ಪಟ್ಟಿಯನ್ನು 15 ವರ್ಷಗಳ ಬಳಿಕ ಕೆಪಿಎಸ್‌ಸಿ ಜ. 30ರಂದು ಮೂರನೇ ಬಾರಿಗೆ ಪರಿಷ್ಕರಿಸಿದೆ. ಹೊಸ ಪಟ್ಟಿಯ ಪ್ರಕಾರ 168 ಅಧಿಕಾರಿಗಳ ಇಲಾಖೆ, ಹುದ್ದೆ, ವೃಂದ ಬದಲಾಗಿದ್ದು, ಅಧಿಕಾರಿಗಳ ಮರು ನೇಮಕಕ್ಕೆ ಸರ್ಕಾರ ಮುಂದಾಗಿದೆ. ಆದರೆ, ಹುದ್ದೆ ಬದಲಾದವರ ಪೈಕಿ ಅರ್ಧಕ್ಕೂ ಹೆಚ್ಚು ಅಧಿಕಾರಿಗಳು ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ (ಕೆಎಟಿ) ತಡೆಯಾಜ್ಞೆ ತಂದಿದ್ದಾರೆ. ತಡೆಯಾಜ್ಞೆ ಇಲ್ಲದವರ …

Read More »

ಕಾಳಸಂತೆಗೆ ಪಡಿತರ ಅಕ್ಕಿ: 17 ಮಂದಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ, ಪಾಲಿಶ್‌ ಮಾಡಿ ವಿವಿಧ ಬ್ರ್ಯಾಂಡುಗಳಲ್ಲಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಗಾರಪೇಟೆ-ಕೆ.ಜಿ.ಎಫ್‌ ರಸ್ತೆಯ ದಾಸರಹೊಸಹಳ್ಳಿ ಬಳಿ ಇರುವ ಪಿಆರ್‌ಎಸ್‌ ಆಗ್ರೋಟೆಕ್‌ ಅಕ್ಕಿ ಗಿರಣಿ ಮಾಲೀಕ ಸೇರಿ 17 ಮಂದಿಯ ವಿರುದ್ಧ ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಆಹಾರ ಇಲಾಖೆಯ ರಾಜ್ಯ ಮಟ್ಟದ ತನಿಖಾ ದಳದ ಮುಖ್ಯಸ್ಥರೂ ಆಗಿರುವ ಜಂಟಿ ನಿರ್ದೇಶಕ (ಐಟಿ ವಿಭಾಗ) ಕೆ. ರಾಮೇಶ್ವರಪ್ಪ ಅವರು ಭಾನುವಾರ ದೂರು ನೀಡಿದ್ದಾರೆ. ಅಕ್ಕಿ ಅಕ್ರಮ …

Read More »