Breaking News

ಜಿಲ್ಲೆ

ಕಿತ್ತೂರು ತಾಲೂಕಿನ ವೈದ್ಯರಿಗೆ Thermos ವಿತರಿಸಿ ವೈದ್ಯರ ಸೇವೆಯನ್ನು ಗುಣಗಾನ ಮಾಡಿದ ಪೆಂಡಾಲ್ ಗುತ್ತಿಗೆದಾರ ಪಕ್ಕಿರಪ್ಪ ಮುರಗೋಡ..!!

ಕಿತ್ತೂರು ತಾಲೂಕಿನ ವೈದ್ಯರಿಗೆ Thermos ವಿತರಿಸಿ ವೈದ್ಯರ ಸೇವೆಯನ್ನು ಗುಣಗಾನ ಮಾಡಿದ ಪೆಂಡಾಲ್ ಗುತ್ತಿಗೆದಾರ ಪಕ್ಕಿರಪ್ಪ ಮುರಗೋಡ..!! ಕಿತ್ತೂರು :ಗುರುವಾರ ದಂದು ಕಿತ್ತೂರು ಪಟ್ಟಣದಲ್ಲಿರುವ ಕಲ್ಮಠ ಸಭಾಭವನದಲ್ಲಿ ವೈದ್ಯರ ದಿನಾಚರಣೆ ನಿಮಿತ್ಯ ಸತ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ರಾಜಗುರು ಸಂಸ್ಥಾನ ಕಲ್ಮಠದ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಿತ್ತೂರು ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ತಾಲೂಕಿನ ಗಣ್ಯ ವ್ಯಕ್ತಿಗಳು ಮತ್ತು ಪೆಂಡಾಲ್ ಗುತ್ತಿಗೆದಾರರು ಆದ ಪಕ್ಕಿರಪ್ಪ …

Read More »

ರಾಜ್ಯದಲ್ಲೂ ಪ್ರವಾಸಿ ಥೀಮ್‌ಪಾರ್ಕ್‌

ಬೆಂಗಳೂರು: ಒಡಿಶಾದ ಕೊನಾರ್ಕ್‌ ಸೂರ್ಯ ದೇಗುಲದಲ್ಲಿ ಇರುವ ಥೀಮ್‌ ಪಾರ್ಕ್‌ ಮಾದರಿಯಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ಮತ್ತು ಐತಿಹಾಸಿಕ ತಾಣಗಳಲ್ಲಿ ಥೀಮ್‌ ಪಾರ್ಕ್‌ ಸ್ಥಾಪಿಸುವ ಇರಾದೆ ರಾಜ್ಯ ಸರಕಾರಕ್ಕೆ ಇದೆ. ಮೊದಲ ಹಂತದಲ್ಲಿ ಹಂಪಿಯ 200 ಎಕರೆ ಪ್ರದೇಶ ದಲ್ಲಿ ಥೀಮ್‌ ಪಾರ್ಕ್‌ ಸ್ಥಾಪನೆಯಾಗಲಿದೆ. ಅದರಲ್ಲಿ ವಿಜಯನಗರ ಸಾಮ್ರಾಜ್ಯದ ಗತವೈಭವ ಕುರಿತು ಡಿಜಿಟಲ್‌ ಸ್ಪರ್ಶದೊಂದಿಗೆ ಕಿರುಚಿತ್ರ ಪ್ರದರ್ಶಿಸಲು ಉದ್ದೇಶಿಸಲಾಗಿದೆ. ಸಮೀಪದಲ್ಲೇ ಆಂಜನೇಯನ ಜನ್ಮಸ್ಥಳ ಎಂದು ಪ್ರತೀತಿ ಇರುವ ಅಂಜನಾದ್ರಿ ಬೆಟ್ಟವೂ ಇರುವುದರಿಂದ …

Read More »

ಮೊಬೈಲಿದ್ದರೂ ನೆಟ್‌ ಇಲ್ಲ

ಬೆಂಗಳೂರು: ಶಾಲೆಗಳನ್ನು ಪುನರಾರಂಭಿಸಬೇಕು ಎಂದು ರಾಜ್ಯ ಸರಕಾರದ ಮೇಲೆ ಒತ್ತಡ ಇದೆ. ಇದರ ನಡುವೆ ರಾಜ್ಯದ ಶೇ. 75ರಷ್ಟು ವಿದ್ಯಾರ್ಥಿಗಳ ಹೆತ್ತವರ ಬಳಿ ಮೊಬೈಲ್‌ ಇದ್ದರೂ ಶೇ. 49 ಮಂದಿ ಬಳಿ ಮಾತ್ರ ಇಂಟರ್‌ನೆಟ್‌ ಸೌಲಭ್ಯ ಹೊಂದಿದ್ದಾರೆ. ಶಿಕ್ಷಣ ಇಲಾಖೆ ನಡೆಸಿದ ಅಧ್ಯಯನದಲ್ಲಿ ಈ ಅಂಶ ದೃಢಪಟ್ಟಿದೆ. ಮಕ್ಕಳ ಶಾಲಾ ದಾಖಲಾತಿ ಸಂದರ್ಭ ದಲ್ಲಿ ಮೊಬೈಲ್‌ ಫೋನ್‌ ಹೊಂದಿರುವ ಮತ್ತು ಹೊಂದಿರದ ಹೆತ್ತವರು, ಸ್ಮಾರ್ಟ್‌ ಫೋನ್‌ ಮತ್ತು ಸಾಮಾನ್ಯ ಫೋನ್‌ …

Read More »

ಅಪ್ಪ-ಅಮ್ಮ ಇಲ್ಲದ ಕಾಂಗ್ರೆಸ್ ಪಕ್ಷದಲ್ಲಿ ಜಾತಿಗೊಬ್ಬ ಮುಖ್ಯಮಂತ್ರಿ: ಈಶ್ವರಪ್ಪ ಲೇವಡಿ

ಬೆಂಗಳೂರು: ಕಾಂಗ್ರೆಸ್‍ನಲ್ಲಿ ಜಾತಿಗೊಬ್ಬರಂತೆ ಐವರು ಮುಖ್ಯಮಂತ್ರಿಗಳನ್ನು ಘೋಷಣೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಈ ಮಟ್ಟಕ್ಕೆ ಇಳಿಯಬಾರದಿತ್ತು’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಮುಂದಿನ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಬೆಂಬಲಿಗ ಶಾಸಕರ ಬಾಯಿ ಮುಚ್ಚಿಸಲು ಸಿದ್ದರಾಮಯ್ಯ ಮುಂದಾಗಿಲ್ಲ. ಡಿ.ಕೆ. ಶಿವಕುಮಾರ್‌ ಕೂಡಾ ಯಾರ ಬಾಯಿಯನ್ನೂ ಮುಚ್ಚಿಸಿಲ್ಲ. ಎಂ.ಬಿ. ಪಾಟೀಲ ನಾನು ಸನ್ಯಾಸಿ ಅಲ್ಲ ಅಂತಿದ್ದಾರೆ. ದಲಿತ ಮುಖ್ಯಮಂತ್ರಿ ಎಂದು ಜಿ. ಪರಮೇಶ್ವರ, ನಾನೂ ಮುಖ್ಯಮಂತ್ರಿ ಅಭ್ಯರ್ಥಿ …

Read More »

ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೆಸರೇಳಿಕೊಂಡು ಹಣ ವಸೂಲಿ ಆರೋಪದಲ್ಲಿ ಸಚಿವ ಶ್ರೀರಾಮುಲು ಪಿಎ ಅರೆಸ್ಟ್ ಆಗಿದ್ದಾರೆ. ಸ್ವತಃ ವಿಜಯೇಂದ್ರ ದೂರು ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶ್ರೀರಾಮುಲು ಮನೆಯಲ್ಲೇ ಆರೋಪಿ ರಾಜಣ್ಣನನ್ನ ವಶಕ್ಕೆ ಪಡೆದಿದ್ದಾರೆ. ಕೆಲಸ ಕೊಡಿಸ್ತೀನಿ, ವರ್ಗಾವಣೆ ಮಾಡಿಸ್ತೀನಿ ಅಂತ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರೋ ಆರೋಪ ಕೇಳಿ ಬಂದಿದೆ. ರಾಜಣ್ಣ 8 ವರ್ಷದಿಂದ ರಾಮುಲು ಬಳಿ ಕೆಲಸ ಮಾಡ್ತಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ …

Read More »

ಬೆಳಗಾವಿಯಲ್ಲಿ ವಿಧಾನಮಂಡಳದ ಅಧಿವೇಶನ ನಡೆಯಲಿದೆಯೇ?

ಬೆಳಗಾವಿ – ಇದೇ ತಿಂಗಳಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಳದ ಅಧಿವೇಶನ ನಡೆಯಲಿದೆಯೇ? ವಿಧಾನ ಪರಿಷತ್ ಸಭಾಪತಿ, ವಿಧಾನಸಭಾಧ್ಯಕ್ಷ, ವಿಧಾನಪರಿಷತ್ ಮುಖ್ಯಸಚೇತಕ – ಈ ಮೂವರೂ ಬೆಳಗಾವಿಯ ಸುವ್ರಣ ವಿಧಾನಸೌಧದಲ್ಲಿ ಜುಲೈ ತಿಂಗಳಲ್ಲಿ ವಿಧಾನಮಂಡಳದ ಅಧಿವೇಶನ ನಡೆಸಲು ಸಹಮತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಇದೇ ತಿಂಗಳಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಳದ ಅಧಿವೇಶನ ನಡೆಸುವಂತೆ ಪತ್ರ ಬರೆದಿದ್ದಾರೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ …

Read More »

ಕೈ ಹಿಡಿದ ಪತ್ನಿಯನ್ನೇ ವೇಶ್ಯೆಯನ್ನಾಗಿ ಬಿಂಬಿಸಲು ಟೆಕ್ಕಿ ಪತಿ ಕುತಂತ್ರ

ಬೆಂಗಳೂರು: ಟೆಕ್ಕಿಯೊಬ್ಬ ಕೈ ಹಿಡಿದ ಪತ್ನಿಗೆ ಹಿಂಸೆ ನೀಡಲು ಆತ ಕಂಡುಕೊಂಡ ದಾರಿ ಕೇಳಿದ್ರೆ ಹಿಡಿಶಾಪ ಹಾಕ್ತೀರಿ. ಪತ್ನಿಯನ್ನ ವೇಶ್ಯೆ ಎಂದು ಬಿಂಬಿಸಲು ಅವಳ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಅವಳ ಮೊಬೈಲ್ ನಂಬರ್ ಅನ್ನೂ ಹಾಕಿದ್ದ. ಹಲವು ಮೊಬೈಲ್​ ನಂಬರ್​ಗಳಿಂದ ಪತ್ನಿಗೆ ಅಶ್ಲೀಲ ಸಂದೇಶ ಕಳಿಸಿದ್ದ. ಸಾವಿರಕ್ಕೂ ಹೆಚ್ಚಿನ ಇ-ಮೇಲ್ ಸಂದೇಶಗಳನ್ನು ಕಳುಹಿಸಿ ಅಸಭ್ಯವಾಗಿ ಕಮೆಂಟ್ ಮಾಡಿ ಮಾನಸಿಕವಾಗಿ ಚಿತ್ರಹಿಂಸೆ ಕೊಟ್ಟಿದ್ದ 29 ವರ್ಷದ ಯುವಕ ಸ್ಟೋರಿ …

Read More »

ಚಿಕ್ಕೋಡಿಯಲ್ಲಿ ದೇವಿಯ ಮೂರ್ತಿಗೆ ಕಣ್ಣು ಅಂಟಿಸಿದ್ದ ಅರ್ಚಕ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ದೇವಿ ವಿಗ್ರಹ ಕಣ್ಣುಬಿಟ್ಟಿರುವುದೇ ಭಾರಿ ಸುದ್ದಿಯಾಗಿದೆ. ಸಂತೂಬಾಯಿ ದೇವಸ್ಥಾನದ ದೇವಿ ರಾತ್ರೋರಾತ್ರಿ ಕಣ್ಣುಬಿಟ್ಟಿದ್ದು ಅದೆಷ್ಟು ಶರವೇಗದಲ್ಲಿ ಹರಡಿತ್ತು ಎಂದರೆ ಗ್ರಾಮಸ್ಥರು ಮಾತ್ರವಲ್ಲದೇ ಅಕ್ಕಪಕ್ಕದ ಊರಿನವರೂ ಈ ಪವಾಡವನ್ನು ನೋಡಲು ತಂಡೋಪತಂಡವಾಗಿ ಬರತೊಡಗಿದರು. ಕರೊನಾ ತೊಲಗಿಸಲು ಈ ದೇವಿ ಕಣ್ಣು ಬಿಟ್ಟಿರುವುದಾಗಿ ಹೇಳಿದ್ದ ಅರ್ಚಕ, ಈ ದೇವಿಯನ್ನು ಪೂಜೆ ಮಾಡಿದರೆ ಕರೊನಾ ತೊಲಗುವುದಾಗಿ ಹೇಳಿದ್ದರು. ಆದ ಕಾರಣ …

Read More »

ಕಳ್ಳತನ ಮಾಡುವಾಗ ಮೊಬೈಲ್ ಬಳಸದ ಚಾಣಾಕ್ಷ

ಬೆಂಗಳೂರು: ಈತನ ಲವ್ವು ತನ್ನ ಲೈಫನ್ನೆ ಬದಲಿಸಿತ್ತು. ಪ್ರೀತಿಸೋದಳನ್ನ ರಾಯಲಾಗಿ ನೋಡಿಕೊಳ್ಳಬೇಕೆಂಬ ಆಸೆ ಮತ್ತು ನೆಪವೇ ಈತ ಅಫೆನ್ಸ್​ಗಳ ಮೇಲೆ ಅಫೆನ್ಸ್ ಮಾಡೋದಕ್ಕೆ ಕಾರಣವಾಯ್ತು. ಒಂದು ಬಾರಿ ಕಳ್ಳ ಎನಿಸಿಕೊಂಡವನು ಅದೇ ಚಟವಾಗಿದ್ದರಿಂದ ತನ್ನೀಡಿ ಜೀವನವನ್ನೇ ಕಳ್ಳತನಕ್ಕೆ ಮುಡಿಪಿಟ್ಟಿದ್ದ ಅಂತಹ ಕಳ್ಳನನ್ನ ಸಿಸಿಬಿ ಹೆಡೆಮುರಿ ಕಟ್ಟಿದೆ. ಬರೋಬ್ಬರಿ 80 ಲಕ್ಷ ಮೌಲ್ಯದ ಒಂದೂವರೆ ಕೆ.ಜಿ ಚಿನ್ನವನ್ನ ಈ ಕುಖ್ಯಾತ ಅಂತರ್ ರಾಜ್ಯ ಕಳ್ಳನಿಂದ ಸಿಸಿಬಿ ಅಧಿಕಾರಿಗಳು ರಿಕವರಿ ಮಾಡಿಕೊಂಡಿದ್ದಾರೆ. 2014 …

Read More »

ಬೆಸ್ಕಾಂನಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

  ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (ಬೆಸ್ಕಾ) ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ: ಕಂಪನಿ ಸೆಕ್ರೆಟರಿ ಸ್ಥಳ: ಬೆಂಗಳೂರು ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ವಯೋಮಿತಿ: ಗರಿಷ್ಠ 40 ವರ್ಷ. ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಜನರಲ್‌ ಮ್ಯಾನೇಜರ್‌, ಬೆಸ್ಕಾಂ ಕಾರ್ಪೊರೇಟ್ ಆಫೀಸ್‌, ಕೆಆರ್‌ ಸರ್ಕಲ್‌, ಬೆಂಗಳೂರು …

Read More »