Breaking News

ಜಿಲ್ಲೆ

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ …

Read More »

‘ನಿನ್ನ ಮೇಲೆ ಯಾರು ಕೇಸ್ ಹಾಕ್ತಾರೋ?’ ಅಶೋಕ್, ಸವದಿಗೆ ಸಿಎಂ ಪಾಠ ಹೇಗಿತ್ತು ಗೊತ್ತಾ..?

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಮಳೆ ಕುರಿತು ಇಂದು ಸುದ್ದಿಗೋಷ್ಠಿ ಮುಗಿಸಿ ಹೊರಡುವ ವೇಳೆ ಸಿಎಂ ಬಿ.ಎಸ್. ಯಡಿಯೂರಪ್ಪ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಪಾಠ ಮಾಡಿದ ವಿಶೇಷ ಸನ್ನಿವೇಶ ನಡೆಯಿತು. ಈ ವೇಳೆ ಸಿಎಂ ಬಿಎಸ್​ವೈ ಜಾಲಿ ಮೂಡ್​​ನಲ್ಲಿದ್ದಂತೆ ಕಂಡುಬಂದರು.. ಸಿಎಂ ಬಿಎಸ್​ವೈ, ಆರ್ ಅಶೋಕ್ ಹಾಗೂ ಸವದಿ ನಡುವಿನ ಮಾತುಕತೆ ಹೀಗಿತ್ತು.. ಸಿಎಂ :- ಅಶೋಕ್ ಎಲ್ಲಿಗೆ ಹೋಗ್ತಾಯಿದ್ಯಾ?. ಅಶೋಕ್ :- ಸಾರ್ …

Read More »

ಸಿಎಂ ಯಡಿಯೂರಪ್ಪ ಓಕೆ ಅಂದ್ರೆ ಸೋಮವಾರದಿಂದಲೇ ಬಸ್ ಸಂಚಾರ ಆರಂಭ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಸೋಮವಾರದಿಂದ (ಜೂನ್ 21) ರಾಜ್ಯದಲ್ಲಿ ಬಸ್​ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆ ನಡೆಸಿದ್ದೇವೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದ ನಡೆಯಲಿರುವ ಸಭೆಯಲ್ಲಿ ಬಸ್ ಸಂಚಾರ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರೆ ಕೊವಿಡ್ ನಿಯಮಾನುಸಾರ ಸೋಮವಾರದಿಂದಲೇ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ​ ತಿಳಿಸಿದರು. ಸದ್ಯಕ್ಕೆ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡುವ ಯೋಚನೆಯಿದೆ. ಕೊರೊನಾ …

Read More »

‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಅರುಣ್​ ಸಿಂಗ್ ಬೆಂಗಳೂರು ಭೇಟಿ: HDK ಟ್ವೀಟ್

ಬೆಂಗಳೂರು: ಕರ್ನಾಟಕ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಬೆಂಗಳೂರು ಭೇಟಿ ಬಗ್ಗೆ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರದ ಭಿನ್ನಮತ ಶಮನಕ್ಕೆ ಬಂದಿದ್ದ ಹೈಕಮಾಂಡ್‌ನ ಬಡಪಾಯಿ ಪ್ರತಿನಿಧಿಯ ಕೆಲಸ ‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಎಂದಿದ್ದಾರೆ. ಇವರು ಜಗಳ ಬಿಡಿಸಲು ಬಂದಿದ್ದಾ? ಜಗಳ ಹಚ್ಚಲು ಬಂದಿದ್ದಾ?ಪ್ರಧಾನಿ ಮೋದಿ ಪೌರುಷವೇನಿದ್ದರೂ ಪಾಕ್​ …

Read More »

ವೇದಗಂಗಾ ನದಿಯಲ್ಲಿ ಕೊಚ್ಚಿಹೋಗಿ ಮರ ಹತ್ತಿ ಕುಳಿತಿದ್ದ ಯುವಕನನ್ನು ರೋಚಕ ಕಾರ್ಯಾಚರಣೆಯ ಮೂಲಕ ರಕ್ಷಿಸಿದ ಸ್ಥಳೀಯರು

ಬೆಳಗಾವಿ: ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸಿದ್ನಾಳ ಗ್ರಾಮದ ಬಳಿ ವೇದಗಂಗಾ ನದಿ ದಾಟುತ್ತಿದ್ದಾಗ ಕೊಚ್ಚಿಹೋಗಿದ್ದ ಯುವಕನನ್ನು ಸತತ 5 ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ. ಎನ್​ಡಿಆರ್​ಎಫ್​ ತಂಡ ರಕ್ಷಣಾ ಕಾರ್ಯಾಚರನೆ ನಡೆಸುತ್ತಿದ್ದರೂ ಸ್ಥಳೀಯರೇ ನದಿಯಲ್ಲಿ ಕೊಚ್ಚಿಹೋಗಿದ್ದ ದಿಗ್ವಿಜಯ್ ಕುಲಕರ್ಣಿ ಎಂಬ ಯುವಕನ್ನು ರಕ್ಷಿಸಿದ್ದಾರೆ. ಸೇತುವೆ ಮೇಲೆ ಹರಿಯುತ್ತಿದ್ದ ವೇದಗಂಗಾ ನದಿ ದಾಟಲು ಯತ್ನಿಸಿದ್ದ ಯುವಕ ದಿಗ್ವಿಜಯ ಕುಲಕರ್ಣಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ. ನದಿಯ ಮಧ್ಯೆ …

Read More »

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ L& T ಕಂಪನಿಯ ಆಕ್ಸೀಜನ್ ಘಟಕ ಇಂದಿನಿಂದ ಸೇವೆಗೆ ಸಮರ್ಪಣೆ

ಬೆಳಗಾವಿ- ಇನ್ನು ಮುಂದೆ ಬೆಳಗಾವಿಯಲ್ಲಿ ಎಂದಿಗೂ ಆಕ್ಸೀಜನ್ ಸಮಸ್ಯೆ ಎದುರಾಗುವದಿಲ್ಲ,ಯಾಕಂದ್ರೆ ಶಾಸಕ ಅಭಯ ಪಾಟೀಲ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದೆ.ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ L& T ಕಂಪನಿಯ ಆಕ್ಸೀಜನ್ ಘಟಕ ಇಂದಿನಿಂದ ಸೇವೆಗೆ ಸಮರ್ಪಣೆಯಾಗಿದೆ. ಬೆಳಗಾವಿಯಲ್ಲಿ ಆಮ್ಲಜನಕ ಕೊರತೆನ್ನು ಗಮನಿಸಿದ ಶಾಸಕ, ಅಭಯ ಪಾಟೀಲ ರವರು ಆಮ್ಲಜನಕ ತಯಾರಿಕಾ ಘಟವನ್ನು ಸ್ಥಾಪಿಸುವಂತೆ ಎಲ್&ಟಿ ಕಂಪನಿಯ ಅವರಿಗೆ ವೈಯಕ್ತಿಕವಾಗಿ ವಿನಂತಿಸಿದ್ದರು. ಅದಕ್ಕೆ ಸ್ಪಂದಿಸಿರುವ L&T ಕಂಪನಿ ನಿಗದಿತ ಅವಧಿಯಲ್ಲಿ ಆಮ್ಲಜನಕ. …

Read More »

ನೀರಾವರಿ ಟೆಂಡರ್‌ ₹2000 ಕೋಟಿ ಕಿಕ್‌ ಬ್ಯಾಕ್‌ ಆರೋಪ ತನಿಖೆಯಾಗಲಿ: ಎಚ್‌ಡಿಕೆ

ಬೆಂಗಳೂರು: 2006ರಲ್ಲಿ ಸಿಎಂ ಆಗಿದ್ದಾಗ ನನ್ನ ಮೇಲೆ ಬಿಜೆಪಿ ನಾಯಕರು ಮಾಡಿರುವ ಗಣಿ ಲಂಚ ಆರೋಪ ತನಿಖೆಯನ್ನು ಸ್ವತಃ ನಾನೇ ಲೋಕಾಯುಕ್ತಕ್ಕೆ ನೀಡಿ ಪಾರದರ್ಶಕತೆ ಮೆರೆದಿದ್ದೆ. ಈಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರಕಾರದ ವಿರುದ್ಧ ಸ್ವಪಕ್ಷೀಯರಿದಂಲೇ ₹2000 ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಲಾಗಿದೆ. ಈ ಕುರಿತು ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, …

Read More »

ದೆಹಲಿಗೆ ಬರುವಂತೆ BSYಗೆ ವರಿಷ್ಠರ ಬುಲಾವ್

ಬೆಂಗಳೂರು,ಜೂ.19-ಮೇಲ್ನೋಟಕ್ಕೆ ಪರಿಸ್ಥಿತಿ ಕೊಂಚ ಸುಧಾರಿಸಿದೆ ಎಂದು ಹೇಳಲಾಗುತ್ತಿದ್ದರೂ ನಾಯಕತ್ವ ಕುರಿತಂತೆ ಎದ್ದಿರುವ ವಿವಾದಕ್ಕೆ ಅಂತಿಮ ಹಾಡಲು ಕೇಂದ್ರ ವರಿಷ್ಠರು ಮುಂದಿನ ವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಲಿದ್ದಾರೆ. ಈ ವಾರದ ನಂತರ ಪರಿಸ್ಥಿತಿ ನೋಡಿಕೊಂಡು ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಹಾಗೂ ಗೃಹ ಸಚಿವ ಅಮಿತ್ ಷಾ ಅವರು ದೆಹಲಿಗೆ ಆಗಮಿಸುವಂತೆ ಸಿಎಂಗೆ ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆಯಷ್ಟೇ ಮೂರು ದಿನಗಳ ಪ್ರವಾಸಕ್ಕೆ …

Read More »

ಕಲಾವಿದರ ಸಂಘದಲ್ಲಿ .ವಿಷ್ಣು ಹೆಸರು ಹಾಕದೆ ಅಗೌರವ ; ನಟ ಅನಿರುಧ್ ಬೇಸರ

ಬೆಂಗಳೂರು: ಕಲಾವಿದರ ಸಂಘದಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್​ ಅವರ ಹೆಸರನ್ನು ಹಾಕದೆ ಅಗೌರವ ನೀಡಲಾಗಿದೆ ಎಂದು ವಿಡಿಯೋ ಮೂಲಕ ನಟ ಅನಿರುಧ್ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಡಾ.ರಾಜ್​ಕುಮಾರ್ ಭವನ, ಅಂಬರೀಷ್ ಆಡಿಟೋರಿಯಂ ಇದೆ. ಈ ಎರಡೂ ಹೆಸರನ್ನು ನೋಡಿದಾಗ ನನಗೆ ತುಂಬಾ ಸಂತೋಷ ಆಯ್ತು. ಈ ಬಗ್ಗೆ ನನಗೆ ಗೌರವ ಇದೆ. ಆದರೆ ವಿಷ್ಣು ಅಪ್ಪಾಜಿಗೂ ಅಲ್ಲಿ ಸ್ಥಾನ ನೀಡಿದ್ದರೆ ಚೆನ್ನಾಗಿರುತ್ತಿತ್ತು. ನಾನು …

Read More »

ಬೆಳಗಾವಿಯಲ್ಲಿ ಸದ್ಯಕ್ಕಿಲ್ಲ ಪ್ರವಾಹ ಭೀತಿ ಎಂದ ಜಿಲ್ಲಾಧಿಕಾರಿ,ವಿವಿಧ ಜಿಲ್ಲೆಗಳ ಜೊತೆ ಸಂವಾದ ನಡೆಸಿದ B.S.Y.

ಬೆಳಗಾವಿ : ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವ ಕುರಿತು ಮುಂಚಿತವಾಗಿಯೇ ಮಾಹಿತಿ ನೀಡಲಾಗುವುದು ಎಂದು ನೆರೆಯ ಮಹಾರಾಷ್ಟ್ರದ ನೀರಾವರಿ ಇಲಾಖೆಯ ಸಚಿವರು ತಿಳಿಸಿದ್ದಾರೆ. ಇದರಿಂದ ಪ್ರವಾಹ ಸ್ಥಿತಿಯ ಸಮರ್ಪಕ ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಪ್ರವಾಹ ಸಿದ್ಧತೆ ಕುರಿತು ಬೆಳಗಾವಿ ಸೇರಿದಂತೆ ರಾಜ್ಯದ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಶನಿವಾರ (ಜೂ.19) ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಜಲಾಶಯಗಳಿಂದ ನೀರು ಬಿಡುಗಡೆ ಕುರಿತ …

Read More »