Breaking News

ಜಿಲ್ಲೆ

ಸಂಪೂರ್ಣ ಲಾಕ್ ಡೌನ್ ಅನಗತ್ಯ ಹೊರಗಡೆ ಬಂದ್ರೆ ಲಾಠಿ ಬಿಸಿ

ಗೋಕಾಕ: ಕೊರೋನಾ ಚೈನ್ ಬ್ರೇಕ್ ಮಾಡಲು ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ವಾರದ ಕೊನೆಯ ಮೂರು,ದಿನ,ಶುಕ್ರವಾರದಿಂದ,ಸೋಮವಾರಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಸಹಕರಿಸುವಂತೆ ಗೋಕಾಕ ನಗರ ಠಾಣೆ ಪಿಎಸ್‌ಐ ಕೆ ವಾಲಿಕಾರ ಇವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.   ಇನ್ನು ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು,ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು …

Read More »

ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ …

Read More »

ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ: ಎಚ್ ಡಿಕೆ

ಬೆಂಗಳೂರು: ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ’ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್ ಗೆ ಅಸಾಧ್ಯವೇ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. …

Read More »

ಕೇರಳ ರಾಜ್ಯದ ಪಾಲಾದ KSRTC ಟ್ರೇಡ್‌ ಮಾರ್ಕ್‌! ಬರೀ ಹೆಸರಲ್ಲ, ಎಮೋಷನ್ ಎಂದ ನೆಟ್ಟಿಗರು

ಬೆಂಗಳೂರು, ಜೂನ್ 03: ಏಳು ವರ್ಷಗಳ ಕಾನೂನು ಹೋರಾಟದ ಬಳಿಕ ಕೆಎಸ್‌ಆರ್‌ಟಿಸಿ ಬ್ರ್ಯಾಂಡ್ ಕೇರಳಕ್ಕೆ ಸೇರಿಕೊಂಡಿದೆ. ಕೆಎಸ್‌ಆರ್‌ಟಿಸಿ ಹೆಸರನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಬುಧವಾರ ಆದೇಶ ಹೊರಡಿಸಲಾಗಿದೆ. ಟ್ರೇಡ್ ಮಾರ್ಕ್‌ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್‌) ಆಧಾರದ ಮೇಲೆ ತೀರ್ಪು ನೀಡಿದ್ದು, Karnataka State Road Transport Corporation (KSRTC) ವಿಸ್ತೃತ ರೂಪವನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. ಈ ಬೆಳವಣಿಗೆ ಕುರಿತು ಸಾಮಾಜಿಕ ಜಾಲತಾಣದಲ್ಲಿ …

Read More »

ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 14ರವರೆಗೆ ಲಾಕ್​ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ. ಎರಡನೇ ಹಂತದಲ್ಲಿ ಸುಮಾರು ₹500 ಕೋಟಿ ಪ್ಯಾಕೇಜ್​ ಘೋಷಿಸಿರುವ ಸಿಎಂ ಯಡಿಯೂರಪ್ಪ, ತಲಾ 3000ದಂತೆ …

Read More »

ಪ್ಯಾಕೇಜ್ ನೀಡಿದ ನಂತರವೇ ಲಾಕ್ ಡೌನ್ ಘೋಷಿಸಿ: ಕಾಂಗ್ರೆಸ್

ಬೆಂಗಳೂರು: ಸರಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆ ನಡೆಸಿದೆ ಎಂದರೆ ಕಳೆದ ಒಂದು ತಿಂಗಳಿಂದ ಲಾಕ್‌ಡೌನ್ ವಿಫಲವಾಗಿದೆ ಎಂದರ್ಥ. ಆಗಿರುವ ಲೋಪದ ಬಗ್ಗೆ ಸರಕಾರ ತಜ್ಞರೊಂದಿಗೆ ವಿಮರ್ಶೆ ನಡೆಸದೆ ತನ್ನ ಮನಸಿಗೆ ತೋಚಿದ್ದನ್ನ ಮಾಡುತ್ತಿದೆ. ವೈದ್ಯಕೀಯ ತಜ್ಞರಷ್ಟೇ ಅಲ್ಲ ಆರ್ಥಿಕ ತಜ್ಞರಲ್ಲಿಯೂ ಲಾಕ್‌ಡೌನ್ ಬಗ್ಗೆ ಚರ್ಚಿಸುವ ಅಗತ್ಯವಿದೆ ಯಡಿಯೂರಪ್ಪ ಅವರೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿಳಿಸಿದೆ. ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜನತೆ ಲಾಕ್‌ಡೌನ್ ವಿಸ್ತರಣೆಯನ್ನು ಭರಿಸುವ ಶಕ್ತಿ ಹೊಂದಿದ್ದರೆಯೇ …

Read More »

ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ, ರಾಜ್ಯದಲ್ಲಿ ಜಿಜ್ಞಾಸೆ

ಬೆಂಗಳೂರು: ಕೇಂದ್ರ ಸರ್ಕಾರ ಸಿಬಿಎಸ್​ಇ ಹಾಗೂ ಐಸಿಎಸ್​ಇ ಪಠ್ಯಕ್ರಮದ 12ನೇ ತರಗತಿ ಪರೀೆ ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀೆ ನಡೆಯಬೇಕೇ? ಬೇಡವೇ? ಎಂಬ ಬಗ್ಗೆ ಜಿಜ್ಞಾಸೆ ಮೂಡಿದೆ. ಶಿಕ್ಷಣ ತಜ್ಞರು, ಪಾಲಕರ ಸಂಟನೆಗಳು ಪರೀೆ ನಡೆಸಬಾರದೆಂದು ಒತ್ತಾಯಿಸಿದರೆ, ಖಾಸಗಿ ಸಂಟನೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಪರೀೆ ರದ್ದಾಗಬಾರದೆಂದು ಪಟ್ಟು ಹಿಡಿದಿವೆ. ಇನ್ನು, ಯಾವುದೇ ಅಭಿಪ್ರಾಯ ಮುಂದಿಡದ ಶಿಕ್ಷಕ ವರ್ಗ ಸರ್ಕಾರ ಕೈಗೊಳ್ಳುವ …

Read More »

ಮಾಜಿ ಶಾಸಕ ಎನ್.ಎಸ್.ಖೇಡ ನಿಧನ

ವಿಜಯಪುರ: ಮಾಜಿ ಶಾಸಕ ಎನ್.ಎಸ್.ಖೇಡ ಅವರು ನಿಧನರಾದರು. ಇಂಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದ ಅವರು ಸಮಾಜಮುಖಿ ಚಟುವಟಿಕೆಯಿಂದ ಹೆಸರುವಾಸಿಯಾಗಿದ್ದರು. ನೀರಿನ ಗಾಂಧಿ ರಾಜೇಂದ್ರಸಿಂಗ್ ತಂಡದೊಂದಿಗೆ ಖೇಡ ಅವರು ಜಲಬಿರಾದಾರ್ ಆಗಿದ್ದರು. ಜ್ಞಾನಯೋಗಾಶ್ರಮದ ಬುದ್ಧಿಜಿ ಸಾಮಿಪ್ಯದಲ್ಲಿ ಸದಾಕಾಲ ಜನಹಿತ ಚಿಂತನೆಯಲ್ಲಿ ತೊಡಗಿದ್ದರು. ಖೇಡರ ಅಗಲಿಕೆಯಿಂದ ಮೌಲ್ಯಾಧಾರಿತ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ. ಎನ್.ಎಸ್. ಖೇಡ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ಹಲವರು ಸಂತಾಪ …

Read More »

ತಂದೆಗೆ ಮಗುವನ್ನು ನೋಡಲು ಬಿಡದ IPS ಅಧಿಕಾರಿ..? ಪತಿಯಿಂದ ಆರೋಪ.. ಡಿಜಿಪಿಗೆ ದೂರು

ಬೆಂಗಳೂರು: ಐಪಿಎಸ್​ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಡಿಜಿ&ಐಜಿಪಿ ಪ್ರವೀಣ್ ಸೂದ್​​ಗೆ ದೂರು ನೀಡಲಾಗಿದೆ. ವರ್ತಿಕಾ ಅವರು ತನ್ನ ಪತಿಗೆ ಮಗುವನ್ನ ನೋಡಲು ಬಿಡ್ತಿಲ್ಲ ಎಂದು ಆರೋಪಿಸಲಾಗಿದೆ. ತನ್ನ ಅಧಿಕಾರ ಬಳಸಿಕೊಂಡು ವರ್ತಿಕಾ ಕಟಿಯಾರ್ ತಮ್ಮ ಪತಿಗೆ ಮಗು ನೋಡದಂತೆ ತಡೆದಿದ್ದಾರೆ.. ಹೀಗಾಗಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಐಎಫ್​ಎಸ್​ ಅಧಿಕಾರಿಯಾಗಿರುವ ವರ್ತಿಕಾ ಅವರ ಪತಿ ನಿತಿನ್ ಶುಭಾಶ್, ತನಗೆ …

Read More »

ಬೇರೆ ಮದುವೆಯಾದರೂ ಲವ್ ಮುಂದುವರಿಸಿದ್ದ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

ಬೆಳಗಾವಿ: ಮದುವೆ ಬಳಿಕವೂ ಪ್ರೀತಿ​ ಮುಂದುವರಿಸಿದ್ದ ಜೋಡಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಒಂದೇ ಮರಕ್ಕೆ ಅಕ್ಕಪಕ್ಕ ದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸವದತ್ತಿ ತಾಲೂಕಿನ ಸಿಂದೋಗಿ ಗ್ರಾಮದ ಪಂಚಪ್ಪ ಕಣವಿ (25 ವ) ಹಾಗೂ ಸಕ್ಕೂಬಾಯಿ ಕರಿಗಾರ (23 ವ) ಮೃತ ಪ್ರೇಮಿಗಳು. ಪಂಚಪ್ಪ ಹಾಗೂ ಸಕ್ಕೂಬಾಯಿ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೇಮ ವಿವಾಹಕ್ಕೆ ಉಭಯ ಕುಟುಂಬಸ್ಥರು ಅವಕಾಶ ನೀಡದ್ದಕ್ಕೆ ನಾಲ್ಕು ವರ್ಷಗಳ ಹಿಂದೆ ಪಂಚಪ್ಪ …

Read More »