Breaking News

ಜಿಲ್ಲೆ

ಜಿಲ್ಲೆಯ ಎಲ್ಲಾ ಶಾಸಕರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಿಟ್ ನೀಡಿದರೆ ರೋಗಿಗಳಿಗೆ, ವೈದ್ಯರಿಗೆ ಅನುಕೂಲ: ಸತೀಶ ಜಾರಕಿಹೊಳಿ

ಗೋಕಾಕ: ಯಮಕನಮರಡಿ ಕ್ಷೇತ್ರದ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಕ್ಸಿಜನ್ ಕಿಟ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ 25% ರಷ್ಟು ಅನುದಾನ ಮೀಸಲಿಟ್ಟಿದೆ. ಜನರ ತುರ್ತು ಸೇವೆಗಾಗಿ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ನೀಡಲಾಗುತ್ತಿದೆ. ಎರಡ್ಮೂರು ದಿನಗಳಲ್ಲಿ ಜನತೆ ಸೇವೆಗಾಗಿ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಸಾವಿರಾರೂ ರೋಗಿಗಳಿಗೆ ಅನುಕೂಲವಾಗಲಿದೆ. ಇಲ್ಲಿನ …

Read More »

ಬಿಗಿ ಕ್ರಮದೊಂದಿಗೆ ಲಾಕ್​ಡೌನ್​ ವಿಸ್ತರಣೆ: ಸಿಎಂ ಬಿಎಸ್​ವೈ

ಬೆಂಗಳೂರು: ರಾಜ್ಯದಲ್ಲಿ ಜೂನ್​ 7ರ ನಂತರ ಬಿಗಿ ಕ್ರಮದೊಂದಿಗೆ ಲಾಕ್​ಡೌನ್ ಮುಂದುವರಿಕೆ ಖಚಿತವಾಗಿದ್ದು, ಎಷ್ಟು ದಿನ ವಿಸ್ತರಣೆ ಎಂಬುದು ಇಂದು ಸಂಜೆ ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ರಫ್ತು ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ಸಂಜೆ ಸಚಿವರ ಜೊತೆಗಿನ ಸಭೆ ಬಳಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅಲ್ಲದೇ ಇನ್ನೆರಡು ದಿನಗಳಲ್ಲಿ ಎರಡನೇ ಪ್ಯಾಕೇಜ್ ಘೋಷಣೆ ಎಂದು ತಿಳಿಸಿದ್ದಾರೆ.

Read More »

ಜನತೆಗೆ ಬದುಕುವ ಚಿಂತೆ, ಬಿಜೆಪಿಗೆ ಕುರ್ಚಿ ಕಿತ್ತಾಟದ್ದೇ ಚಿಂತೆ, ಈ ಸರ್ಕಾರ ಭ್ರಷ್ಟಾಚಾರದ ಸಂತೆ’ : ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್

ಬೆಂಗಳೂರು: ಕೊರೋನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಟೀಕಿಸುತ್ತಿರುವ ಕಾಂಗ್ರೆಸ್ ಮತ್ತೆ ಬಿಜೆಪಿ ವಿರುದ್ಧ ಹರಿಹಾಯ್ದಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿಗೆ ಸದಾ ಕುರ್ಚಿಯದ್ದೇ ಚಿಂತೆ ಎಂದು ಲೇವಡಿ ಮಾಡಿದೆ. ಜನರಿಗೆ ಬದುಕುವ ಚಿಂತೆಯಾದರೆ, ಬಿಜೆಪಿಗೆ ಕುರ್ಚಿ ಕಿತ್ತಾಟದ್ದೇ ಚಿಂತೆಯಾಗಿದೆ. ಇಡೀ ರಾಜ್ಯ ಸರ್ಕಾರ ಭ್ರಷ್ಟಾಚಾರದ ಸಂತೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಬಿಜೆಪಿಯವರು ಒಬ್ಬೊಬ್ಬರಾಗಿ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಆಯಂಫೋಟೆರಿಸಿನ್-ಬಿ ತರುವುದಕ್ಕೆ ಅಲ್ಲ, ಲಸಿಕೆ …

Read More »

ಆನ್​​ಲೈನ್​ ಗ್ಯಾಂಬ್ಲಿಂಗ್ ನಿರ್ಬಂಧ..? ಸರ್ಕಾರಕ್ಕೆ ಹೈಕೋರ್ಟ್​ ನೀಡಿದ ಸೂಚನೆ ಏನು..?

ಬೆಂಗಳೂರು: ಆನ್ ಲೈನ್ ಜೂಜು ರದ್ದು ಕೋರಿದ್ದ ಪಿಐಎಲ್ ವಿಚಾರಣೆ ಇಂದು ಹೈಕೋರ್ಟ್ ಮುಖ್ಯ ವಿಭಾಗಯ ಪೀಠದಲ್ಲಿ ನಡೆಯಿತು. ಆನ್ ಲೈನ್ ಗ್ಯಾಂಬ್ಲಿಂಗ್ ನಿಯಂತ್ರಿಸಲು ಸಮ್ಮತಿಯಿದೆ.. ಆದರೆ ಸರ್ಕಾರ ಸ್ಕಿಲ್ ಗೇಮ್ ನಿರ್ಬಂಧಿಸಬಾರದು ಎಂದು ಹೈಕೋರ್ಟ್​ಗೆ ಅನ್ ಲೈನ್ ಗೇಮ್ಸ್ ಒಕ್ಕೂಟ ಮನವಿ ಸಲ್ಲಿಸಿತು. ಇದಕ್ಕೆ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ಸೂಚನೆ ನೀಡಿತು. ಆನ್ ಲೈನ್ ಗ್ಯಾಂಬ್ಲಿಂಗ್ ಬಗ್ಗೆ ಸರ್ಕಾರ ಪ್ರತಿಕ್ರಿಯಿಸಬೇಕು. ಈ ಕುರಿತು ರಾಜ್ಯ ಸರ್ಕಾರ ನಿರ್ಧಾರ …

Read More »

ಇಂದು ಸಂಜೆ ಸಿಎಂ ಮಹತ್ವದ ಸಭೆ, ಲಾಕ್ ಡೌನ್ ವಿಸ್ತರಣೆ ಫಿಕ್ಸ್..!?

ಬೆಂಗಳೂರು : ಕೊರೊನಾ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದರೂ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡುವ ಸಂಬಂಧ ಇಂದು ಸಂಜೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದು ಸಂಜೆ ಎರಡು ಪ್ರಮುಖ ಸಭೆಗಳು ನಡೆಯಲಿದ್ದು,ರಾಜ್ಯದಲ್ಲಿ ಪುನಃ ಲಾಕ್ ಡೌನ್ ಮುಂದುವರೆಸುವ ಕುರಿತಾಗಿ ತೀರ್ಮಾನ ಹೊರಬೀಳುವ ಸಂಭವವಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ 4.30ಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ಕೋವಿಡ್ ತಜ್ಞರು, ವೈದ್ಯರು …

Read More »

ಟೊಮ್ಯಾಟೋ ಟ್ರೇನಲ್ಲಿ ತಮಿಳುನಾಡಿಗೆ ಅಕ್ರಮ ಮದ್ಯ ಸಾಗಾಟ- ಕೇರಳದ ಆರೋಪಿ ಅರೆಸ್ಟ್

ಚಾಮರಾಜನಗರ: ಟೊಮ್ಯಾಟೋ ಟ್ರೇಯಲ್ಲಿ ಅಕ್ರಮ ಮದ್ಯ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ನಗರದಲ್ಲಿ ಆರೋಪಿ ಸಿಕ್ಕಿಬಿದ್ದಿದ್ದು, ಕೇರಳ ಮೂಲದ ಗಫೂರ್(37) ಬಂಧಿತ ಆರೋಪಿ. ತಮಿಳುನಾಡಿನಲ್ಲಿ ಕಠಿಣ ಲಾಕ್‍ಡೌನ್ ಜಾರಿಯಲ್ಲಿದ್ದು, ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅಕ್ರಮವಾಗಿ ತಮಿಳುನಾಡಿಗೆ ಮದ್ಯ ಸಾಗಣೆ ಮಾಡುತ್ತಿದ್ದ. ಅಲ್ಲದೆ ಯಾರಿಗೂ ತಿಳಿಯದಂತೆ ಟೊಮ್ಯಾಟೋ ಟ್ರೇಗಳ ಜೊತೆ ಮದ್ಯದ ಬಾಟಲಿ ಇಟ್ಟು ಸಾಗಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ …

Read More »

ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ: ಕೋಡಿಶ್ರೀ ಭವಿಷ್ಯ

ಹಾಸನ: ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ ಎಂಬ ಭವಿಷ್ಯವೊಂದನ್ನು ಹಾಸನ ಜಿಲ್ಲೆಯ ಕೋಡಿಮಠದ ಶ್ರೀಗಳು ನುಡಿದಿದ್ದಾರೆ. ಹಾಸನದ ಅರಸೀಕೆರೆಯ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು, ಕೊರೊನಾದಂತಹ ಮಾರಣಾಂತಿಕ ಕಾಯಿಲೆ ದೂರವಾಗಲು ಸುಮಾರು 10 ವರ್ಷಗಳೇ ಬೇಕು. ಭೂಮಿಯಲ್ಲಿ ಈಗಾಗಲೇ ಕೋಟ್ಯಂತರ ಜನರ ಶವವನ್ನು ಹೂತಿದ್ದಾರೆ. ಅದೇ ವಿಷವಾಗಿ ಭೂಮಿಯಿಂದ ಹೊರಬರಲಿದೆ. ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಮುಂದೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ …

Read More »

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ವೃದ್ಧಾಶ್ರಮ 23 ಹಿರಿಯ ನಾಗರಿಕರಲ್ಲಿ ಕೊರೊನಾ ಸೋಂಕು ದೃಢ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಇದೀಗ ಎರಡು ವೃದ್ಧಾಶ್ರಮ 23 ಹಿರಿಯ ನಾಗರಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ದೇವರಾಜ್ ಅರಸ್ ಕಾಲನಿಯ 14 ಜನರು ಹಾಗೂ ಬಾಮನವಾಡಿ ವೃದ್ಧಾಶ್ರಮದ 9 ಜನರಿಗೆ ಕೊರೊನಾ ಸೋಂಕು ಹರಡಿದೆ. ಮೂವರು ಸೋಮ್ಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರನ್ನು ವೃದ್ಧಾಶ್ರಮದಲ್ಲೇ ಪ್ರತ್ಯೇಕ ಐಸೋಲೇಷನ್ ಮಾಡಲಾಗಿದೆ. ಸೋಂಕಿತರ ಪೈಕಿ ಬಹುತೇಕರಿಗೆ ಕೋವಿಡ್ ಲಕ್ಷಣಗಳೇ ಇಲ್ಲ ಆದರೂ ಕೋವಿಡ್ …

Read More »

ಮಾವಾ ತಯಾರಿಕೆ ಅಡ್ಡೆ ಮೇಲೆ ದಾಳಿ : ಮೂವರ ಬಂಧನ, 2.50 ಲಕ್ಷ ರೂ. ಮೌಲ್ಯದ ಸೊತ್ತು ವಶ

ವಿಜಯಪುರ : ರಾಜ್ಯದಲ್ಲಿ ನಿಷೇಧಿತವಾಗಿರುವ ತಂಬಾಕು ಉತ್ಪನ್ನವಾದ ಮಾವಾ ತಯಾರಿಕೆಯ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು, ಮೂವರನ್ನು ಬಂಧಿಸಿ, 2.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮೀಣ ಸಿಪಿಐ ಎಸ್.ಬಿ.ಪಾಲಭಾವಿ ಅವರು ತಿಕೋಟ ಪಟ್ಟಣದಲ್ಲಿ ಅಲ್ಲಿನ ಎಸೈ ಎಸ್.ಕೆ.ಲಂಗೋಟೆ ಅವರೊಂದಿಗೆ ಪೆಟ್ರೋಲಿಂಗ್‍ನಲ್ಲಿ ತೊಡಗಿದ್ದಾಗ ಅಕ್ರಮವಾಗಿ ಗುಟ್ಕಾ ತಯಾರಿಸುವ ಮಾಹಿತಿ ಲಭ್ಯವಾಗಿದೆ. ಖಚಿತ ಮಾಹಿತಿ ಆಧರಿಸಿ ಬಡಕಲ್ ಓಣಿ ಹಾಗೂ ಗೌಡರ ಓಣಿಗಳಲ್ಲಿ ಸ್ಥಳೀಯ ಠಾಣೆ …

Read More »

ಬೆಂಗಳೂರಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ. ಆರೋಪಿ ಶೂಬೂಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೂಬೂಜ್ ಬಂಧನಕ್ಕೆ ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಶರಣಾಗಲು ಸೂಚನೆ ನೀಡಿದರೂ ಆರೋಪಿ ಪರಾರಿಯಾಗಲು ಯತ್ನಿಸಿದಾಗ ಫೈರಿಂಗ್ ಮಾಡಲಾಗಿದೆ. ಪಿಎಸ್‌ಐ ಶಿವರಾಜ್ ಮತ್ತು ದೇವೇಂದ್ರ ನಾಯಕ್ ಗಾಯಗೊಂಡಿದ್ದಾರೆ. …

Read More »