Breaking News
Home / ಜಿಲ್ಲೆ (page 709)

ಜಿಲ್ಲೆ

ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ

ಮಂಡ್ಯ: ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ನಡೆದಿದೆ. ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಹತ್ಯೆಯಾದ ರೌಡಿಶೀಟರ್. ನಿನ್ನೆ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ದುಷ್ಕರ್ಮಿಗಳು, ರೌಡಿಶೀಟರ್ ಕಾರನ್ನ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.

ಮೈಸೂರು: ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಧನ್ವೀರ್​ ರಾತ್ರಿ ಸಫಾರಿ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ತಮ್ಮ ಸಫಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಧನ್ವೀರ್ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಿರುವುದು ಕಾನೂನುಬಾಹಿರ ಎಂದು ಹಲವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಿನಿಮಾ ಹೀರೋಗೆ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಲು ಅನುಮತಿ ನೀಡಲಾಗಿದೆ. …

Read More »

ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದಿದೆ.

ಚಿಕ್ಕಬಳ್ಳಾಪುರ: ಮನೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದಿದೆ. ತಂದೆ ರವಿಕುಮಾರ್, ಮಗ ರಾಹುಲ್‌ ಮೃತರು. ಘಟನೆಯಲ್ಲಿ ತಾಯಿ ಮುನಿರಾಜಮ್ಮ, ಮಗಳು ರುಚಿತಾ‌ಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಿಕ್ಕಬಳ್ಳಾಪುರದಲ್ಲಿ ಭಾರಿ ಅನಾಹುತ ನಡೆದಿದೆ. ಮಳೆ ರಭಸಕ್ಕೆ ಮನೆ ಕುಸಿದು ತಂದೆ-ಮಗ ಇಬ್ಬರೂ ಮೃತಪಟ್ಟಿದ್ದು, ತಾಯಿ-ಮಗಳು ಆಸ್ಪತ್ರೆಯಲ್ಲಿ …

Read More »

ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ

ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದು ನಿಮಗೆಲ್ಲ ತಿಳಿದಿರುವ ಸಂಗತಿ. ಆದರೆ ಈಗ ಅದೇ ಅಣ್ಣಾಮಲೈ ಶೂಟಿಂಗ್​ನಲ್ಲಿ ಬ್ಯೂಸಿಯಾಗಿದ್ದಾರೆ. ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಸಿನಿಮಾವೊಂದರ ಶೂಟಿಂಗ್​ನಲ್ಲಿ ಗೆಸ್ಟ್ ರೋಲ್​ನಲ್ಲಿ ನಟಿಸುತ್ತಿರುವ ಅಣ್ಣಾಮಲೈ. ಬೆಳ್ಳಂ ಬೆಳಗ್ಗೆ ಬುಲೆಟ್ ಗಾಡಿ ಓಡಿಸುತ್ತ ಸಿನಿಮಾ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ …

Read More »

ಶಿರಾದಲ್ಲಿ ಈಗ ತಮ್ಮವರನ್ನು ಗೆಲ್ಲಿಸಲು ಮಕ್ಕಳ ಶತಪ್ರಯತ್ನ

  ಬೆಂಗಳೂರು : ಕುಟುಂಬ ರಾಜಕಾರಣವೇ ಮೇಳೈಸುತ್ತಿರುವ ದಿನಗಳಲ್ಲಿ ತಮ್ಮ ತಂದೆ-ತಾಯಿಯ ಗೆಲುವಿಗಾಗಿ ಮಕ್ಕಳು ಬೆವರು ಹರಿಸುತ್ತಿರುವುದು ಈ ಉಪಚುನಾವಣೆಯ ವಿಶೇಷವಾಗಿದೆ. ಅಪ್ಪನ ಹೆಸರು ಹೇಳಿಕೊಂಡು ರಾಜಕಾರಣ ಮಾಡುವ ಈ ದಿನಗಳಲ್ಲಿ ತಮ್ಮ ತಂದೆಯ ಕುರ್ಚಿ ಭದ್ರಪಡಿಸಲು, ಅಪ್ಪನ ಗೆಲುವಿಗಾಗಿ ಮಗ, ತಾಯಿಯ ಗೆಲುವಿಗೆ ಮತ್ತೊಬ್ಬ ಪುತ್ರ ಮತಬೇಟೆ ಮಾಡುತ್ತಿರುವುದು ಶಿರಾದಲ್ಲಿ ಕಂಡುಬರುತ್ತಿದೆ. ಉಪಚುನಾವಣೆಯಲ್ಲಿ ಸೋತರೆ, ತಮ್ಮ ತಂದೆಯ ಕುರ್ಚಿಗೆ ಕಂಟಕ ಎಂಬುದು ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜೇಯೇಂದ್ರಗೆ …

Read More »

ಕೊರೊನಾ ಕಂಟ್ರೋಲ್‍ಗೆ ದೊಣ್ಣೆ ಅಸ್ತ್ರ ಪ್ರಯೋಗ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇದೀಗ ಕೊರೊನಾ ಟೆಸ್ಟ್ ಮಾಡಿಸುವಂತೆ ‘ದೊಣ್ಣೆ ನಾಯಕರು’ ಎಂಟ್ರಿ ಕೊಟ್ಟಿದ್ದಾರೆ.ಹೌದು. ಬೆಂಗಳೂರಿನಲ್ಲಿ ಟಾರ್ಗೆಟ್ ಟಾರ್ಚರ್ ಗೆ ಫೀಲ್ಡ್ ವಾರಿಯರ್ಸ್ ನಯಾ ಐಡಿಯಾವೊಂದನ್ನು ಹುಡುಕಿಕೊಂಡಿದ್ದಾರೆ. ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಬಾರದ ಜನರ ಮೇಲೆ ಬಿಬಿಎಂಪಿ ದೊಣ್ಣೆ ಅಸ್ತ್ರ ಪ್ರಯೋಗ ಮಾಡಲು ಮುಂದಾಗಿದೆ. ಬಸ್ ಸ್ಟ್ಯಾಂಡ್ ಗಳಲ್ಲಿ ಟೆಂಟ್ ಹಾಕಿಕೊಂಡು, ದೊಣ್ಣೆ ಇಟ್ಕೊಂಡೇ ಸಿಬ್ಬಂದಿ ಜನಸಾಮಾನ್ಯರನ್ನು ಗುಡ್ಡೆ ಹಾಕಿ ಟೆಸ್ಟಿಂಗ್ …

Read More »

ಡಿಕೆ ಶಿವಕುಮಾರ್ ಆರ್‍ಸಿಬಿ ಛತ್ರಿ ಹಿಡಿದ ಮೇಲೆ ಗೆಲುವಿನ ಲಕ್ಷ್ಮೀ ಆರ್‌ಸಿಬಿಗೆ ಒಲಿಯಿತು ಎಂದು ಬರೆದುಕೊಂಡಿದ್ದಾರೆ

ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತುಂತುರು ಮಳೆಯಿಂದ ರಕ್ಷಣೆ ಪಡೆಯಲು ಹಿಡಿದಿದ್ದ ಆರ್‌ಸಿಬಿ ಛತ್ರಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಶಿರಾ ಉಪ ಚುನಾವಣೆಯ ಪ್ರಚಾರದಲ್ಲಿ ಡಿಕೆ ಶಿವಕುಮಾರ್ ಅವರು ಬ್ಯುಸಿಯಾಗಿದ್ದು, ಈ ವೇಳೆ ಶಿರಾದ ದೊಡ್ಡ ಆಲದ ಮರ ಬಳಿ ಪ್ರಚಾರ ಕಾರ್ಯದಲ್ಲಿದ್ದ ಸಂದರ್ಭದಲ್ಲಿ ದಿಢೀರ್ ಎಂದು ತುಂತುರು ಮಳೆ ಆರಂಭವಾಗಿತ್ತು. ಮಳೆ ಆರಂಭವಾಗುತ್ತಿದಂತೆ ಪ್ರಚಾರ ವಾಹನದಲ್ಲಿದ್ದ ಕಾರ್ಯಕರ್ತರು …

Read More »

ನಿಮ್ಮ ಪಕ್ಷದಲ್ಲಿ ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ ಸಿಟಿ ರವಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಟಾಂಗ್

ಬೆಂಗಳೂರು: ನಿಮ್ಮ ಪಕ್ಷದಲ್ಲಿ ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಟ್ವಿಟ್ಟರ್ ವಾರ್ ನಡೆಯುತ್ತಿದೆ. ಇಂದು ನಳಿನ್ ಅವರನ್ನು ಸಿದ್ದರಾಮಯ್ಯ ಕಾಡುಮನುಷ್ಯನಿಗೆ ಹೊಲಿಕೆ ಮಾಡಿದಕ್ಕೆ ಬಿಜೆಪಿ ನಾಯಕರು ಸಿದ್ದರಾಮಯ್ಯನ ಮೇಲೆ ಮುಗಿಬಿದ್ದಿದ್ದಾರೆ. ಈಗ ಸಿಟಿ ರವಿಯವರೂ …

Read More »

ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಜನ ಕಂಗಾಲಾ

  ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಜನ ಕಂಗಾಲಾಗಿದ್ದು, ಕೋರಮಂಗಲ ಸೇರಿದಂತೆ ಹಲವೆಡೆಗಳಲ್ಲಿ ರಸ್ತೆ ಜಲಾವೃತವಾಗಿದ್ದು, ಅಂಡರ್ ಪಾಸ್‍ಗಳು ತುಂಬಿ ತುಳುಕುತ್ತಿದ್ದವು. ರಾತ್ರಿ ಬಿಟ್ಟು ಬಿಡದೆ ಮಳೆ ಸುರಿದಿದ್ದು, ಮೆಜೆಸ್ಟಿಕ್, ಕೋರಮಂಗಲ, ಯಶವಂತಪುರ, ನಂದಿನಿ ಲೇಔಟ್, ಬಸವನಗುಡಿ, ಕೆ.ಆರ್. ಮಾರ್ಕೆಟ್ ಸೇರಿದಂತೆ ವಿವಿಧ ಭಾಗಗಳಲ್ಲಿ ವರುಣ ಅಬ್ಬರಿಸಿದ್ದಾನೆ. ರಾತ್ರಿ ಒಂದೇ ಸಮ ಸುರಿದ ಮಳೆಗೆ ಕೊರಮಂಗಲ ರಸ್ತೆ ಜಲಾವೃತವಾಗಿತ್ತು. ಗುರುವಾರ ಸಂಜೆಯಿಂದಲೇ ಆರಂಭವಾದ ತುಂತುರು ಮಳೆ …

Read More »

ಅಜ್ಜನಿಗೆ ಮೊಮ್ಮಕ್ಕಳಿಂದ ಹುಟ್ಟು ಹಬ್ಬದ ಶುಭಾಶಯಗಳು..

ಅಜ್ಜನಿಗೆ ಮೊಮ್ಮಕ್ಕಳೊಂದಿಗೆ ಹುಟ್ಟು ಹಬ್ಬದ ಶುಭಾಶಯಗಳು.. ಗೋಕಾಕ: ಬೆಳಗಾವಿ ರಾಜ ಕಾರಣ ದಲ್ಲಿನ ಶ್ರೇಷ್ಟ್ ಕುಟುಂಬ ಅಂದ್ರೆ ಜಾರಕಿಹೊಳಿ ಕುಟುಂಬ, ಇಂದು ಅಂತ ಕುಟುಂಬದ ಹಿರಿ ತಲೆಯ ಜನುಮದಿನ ಜಾರಕಿಹೊಳಿ ಕುಟುಂಬದಲ್ಲಿ ಇಂದು ಸಡಗರದ ಹಬ್ಬ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತಹ ಶ್ರೀ ಸಂತೋಷ್ ಜಾರಕಿಹೊಳಿ ಅವರು ಅಜ್ಜನ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ.   ತಮ್ಮ ಕುಟುಂಬದ ಎಲ್ಲ ಹಿರಿಯರು ಮತ್ತು ಶ್ರೀ ಸಂತೋಷ್ ಜಾರಕಿಹೊಳಿ …

Read More »