Breaking News

ಜಿಲ್ಲೆ

ರೆಮ್‌ಡಿಸಿವಿರ್ ಅಕ್ರಮ ಮಾರಾಟ: ಮೂವರು ದಂಧೆಕೋರರ ಬಂಧನ

ಬೆಂಗಳೂರು, ಮೇ. 26: ನೆರೆ ರಾಜ್ಯ ಕೇರಳದಿಂದ ರೆಮ್‌ಡಿಸಿವಿರ್ ಚುಚ್ಚು ಮದ್ದು ತಂದು ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಿಗೆ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರು ದಂಧೆಕೋರರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ದೊಡ್ಡ ತೋಗೂರು ನಿವಾಸಿಗಳಾದ ಸಂಜೀವ್ ಕುಮಾರ್, ಪ್ರತೀಕ್ ಹಾಗೂ ಅಭಿಜಿತ್ ಬಂಧಿತರು. ಕೊರೊನಾ ಸೋಂಕಿತರಿಗೆ ಬಳಸುವ ರೆಮ್‌ಡಿಸಿವಿರ್‌ಗೆ ರಾಜ್ಯದಲ್ಲಿ ಇರುವ ಬಹು ಬೇಡಿಕೆಯನ್ನು ಅರಿತಿದ್ದ ಮೂವರು ಕೇರಳದಲ್ಲಿ ನೂರಾರು ರೆಮ್‌ಡಿಸಿವಿರ್ ಚುಚ್ಚು ಮದ್ದು ವಯಲ್‌ಗಳನ್ನು ತಂದಿದ್ದರು. …

Read More »

ಕೋರೋಣ ವಾರಿಯರ್ಸ್ ಗೆ ಬಿಜೆಪಿ ಗೃಹ ಕಚೇರಿಯಲ್ಲಿ ಕೋವಿಡ್ ಕಿಟ್ ರಮೇಶ್ ಜಾರಕಿಹೊಳಿವಿತರಣೆ ಮಾಡಿದರು

ಗೋಕಾಕ:  ಮತಕ್ಷೇತ್ರದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಛೇರಿಯಲ್ಲಿ ವೈಯಕ್ತಿಕವಾಗಿ ತಾಲೂಕಿನ ಕೊರೋನಾ ವಾರಿಯರ್ಸಗಳಾದ.     ಗ್ರಾಮ ಪಂಚಾಯಿತಿ,ಪಟ್ಟಣ ಪಂಚಾಯಿತಿ,ಪತ್ರಕರ್ತರು,ಪುರಸಭೆ,ನಗರಸಭೆ,ಕಂದಾಯ ಇಲಾಖೆ,ಆಶಾ ಕಾರ್ಯಕರ್ತೆಯರು,ಆರೋಗ್ಯ ಇಲಾಖೆ ಸಿಬ್ಬಂದಿಗಳು ಸೈನಿಟೈಜರ, ಹ್ಯಾಂಡ್ ಗ್ಲೋಸ್,ಮಾಸ್ಕ್, ಫೇಸ್ ಶಿಲ್ಡ್ ಸೇರಿದಂತೆ ಕೋವಿಡ್ ರಕ್ಷಾ ಕಿಟ್ ವಿತರಣೆ ಮಾಡಿದರು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯ ಟಿ.ಆರ್ ಕಾಗಲ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು

Read More »

ಕೃಷಿ ಇಲಾಖೆ ವತಿಯಿಂದ ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ

    ಗೋಕಾಕ :ಮತಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಚೇರಿಯಲ್ಲಿ ಗೋಕಾಕ್ ಕೃಷಿ ಇಲಾಖೆ ವತಿಯಿಂದ. ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ್ ಹಾಗೂ ಪೌರಾಯುಕ್ತರಾದ ಶಿವಾನಂದ ಹಿರೇಮಠ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿ ಗಳಾದ ಎಮ್ಎಮ್ ನದಾಫ ಅಶೋಕ ಮೇಸ್ತ್ರಿ ಉಪಸ್ಥಿತರಿದ್ದರು …

Read More »

ಪೊಲೀಸರಿಂದಲೇ ಚಿನ್ನ ಕಳ್ಳತನ ಪ್ರಕರಣ ತನಿಖೆ ಬೆಳಗಾವಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೆಲ ಹಿರಿಯ ಪೊಲೀಸ ಅಧಿಕಾರಿಗಳಲ್ಲಿ ನಡುಕ

ಬೆಳಗಾವಿ : ಪೊಲೀಸರಿಂದಲೇ ಚಿನ್ನ ಕಳ್ಳತನ ಪ್ರಕರಣ ತನಿಖೆ ಬೆಳಗಾವಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೆಲ ಹಿರಿಯ ಪೊಲೀಸ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಯಮಕನಮರಡಿ ಠಾಣೆ ವ್ಯಾಪ್ತಿಯಲ್ಲಿ ನಡೆದ 2.5 ಕೋಟಿ ಬೆಲೆ ಬಾಳುವ ಐದು ಕೆ.ಜಿ. ಚಿನ್ನ ಪ್ರಕರಣದಲ್ಲಿ ಅದರ ಸಿಐಡಿ ಅಧಿಕಾರಿಗಳು ಕಿರಣ್ ವೀರನಗೌಡರ್ ಎಂಬ ಡಿಲ್ ನ ಮಧ್ಯವರ್ತಿ ವ್ಯಕ್ತಿಯ ಜನ್ಮ ಜಾಲಾಡಿದ್ದಾರೆ. ಕಿರಣ ವೀರನಗೌಡರ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ್ದು, ಅಕ್ರಮಗಳ ಬಗ್ಗೆ ಪೊಲೀಸರಿಗೆ …

Read More »

ಒಂದೇ ಕುಟುಂಬದ ಮೂವರು ಮಹಾಮಾರಿಗೆ ಬಲಿ

ಬೆಳಗಾವಿ: ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಒಂದೇ ಕುಟುಂಬದ ಮೂವರು ಮಹಾಮಾರಿಗೆ ಬಲಿಯಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಯೆಲಿಮುನೊಳಿ ಗ್ರಾಮದಲ್ಲಿ ನಡೆದಿದೆ. ತಾಯಿ ಇಂದುಮತಿ ಹಾಗೂ ಇಬ್ಬರು ಗಂಡು ಮಕ್ಕಳು ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತರನ್ನು ಇಂದುಮತಿ (69) ಮಕ್ಕಳಾದ ಸತೀಶ್ (45) ಹಾಗೂ ಮಹೇಶ್ (47) ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಇದೀಗ ಇಂದುಮತಿ ಪತಿ ಶಂಕರ್ ಅವರಿಗೂ ಸೋಂಕು ತಗುಲಿದ್ದು, …

Read More »

ಬ್ಲ್ಯಾಕ್ ಫಂಗಸ್ ಬೆನ್ನಲ್ಲೇ `ವೈಟ್ ಫಂಗಸ್’ ಆತಂಕ : ಬೆಳಗಾವಿಯ ಇಬ್ಬರಲ್ಲಿ ವೈಟ್ ಫಂಗಸ್ ಸೋಂಕು ಪತ್ತೆ!

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಜೊತೆಗೆ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಎದುರಾಗಿದ್ದು, ಇದೀಗ ಬೆಳಗಾವಿಯಲ್ಲಿ ವೈಟ್ ಫಂಗಸ್ ಸೋಂಕು ಕಾಣಿಸಿಕೊಂಡಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಬೆಳಗಾವಿಯಲ್ಲಿ 2 ವೈಟ್ ಫಂಗಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಬಯಾಪ್ಸಿ, ಪೊಟ್ಯಾಸಿಯಮ್ ಹೈಡ್ರಾಕ್ಸೈಡ್ ತಪಾಸಣೆಗೆ ಕಳಿಸಿದ್ದೇವೆ ಎಂದು ಡಿಹೆಚ್ ಒ ಡಾ.ಎಸ್.ವಿ ಮುನ್ಯಾಳ್ ಮಾಹಿತಿ ನೀಡಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿನ ಅಬ್ಬರ ಮುಂದುವರೆದಿದ್ದು, ಈವರೆಗೆ 9 ಮಂದಿಯಲ್ಲಿ …

Read More »

ಬೆಳಗಾವಿಯಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಸಮಾವೇಶ: ಆಯೋಜಕರ ವಿರುದ್ಧ ಎಫ್‌ಐಆರ್ ಯಾಕಿಲ್ಲ; ಹೈಕೋರ್ಟ್ ಪ್ರಶ್ನೆ

ಬೆಂಗಳೂರು, : ಬೆಳಗಾವಿಯಲ್ಲಿ ಜ.17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಮಾವೇಶದಲ್ಲಿ ಕೋವಿಡ್-19 ಮಾರ್ಗಸೂಚಿಗಳ ಉಲ್ಲಂಘನೆ ಕುರಿತು ಸಲ್ಲಿಸಿರುವ ಅರ್ಜಿ ಸಂಬಂಧ ಅಲ್ಲಿನ ನಗರ ಪೊಲೀಸ್ ಆಯುಕ್ತರು ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಅನುಸಾರ ಕ್ರಮ ಕೈಗೊಂಡಿಲ್ಲ. ತಪ್ಪಿತಸ್ಥರಿಗೆ ಕೇವಲ ದಂಡ ವಿಧಿಸಲಾಗಿದೆ. ಪೊಲೀಸ್ ಆಯುಕ್ತರಿಗೆ ಕಾಯ್ದೆಯ ಬಗ್ಗೆ ಅರಿವಿದ್ದಂತೆ ಕಾಣುತ್ತಿಲ್ಲ …

Read More »

ಜೂನ್ 7 ರ ನಂತರವೂ ಮುಗಿಯಲ್ಲ ಲಾಕ್ ಡೌನ್: ಇನ್ನೂ ಹಲವು ದಿನ ರಾಜ್ಯದ ಜನ ಮನೆಯೊಳಗೆ ಬಂಧಿ.?

ಬೆಂಗಳೂರು: ಜೂನ್ 7 ರ ವರೆಗೂ ಇರುವ ಲಾಕ್ಡೌನ್ ಮುಗಿಯಲ್ಲ. ಸದ್ಯಕ್ಕೆ ಲಾಕ್ಡೌನ್ ನಿಂದ ಮುಕ್ತಿ ಇಲ್ಲ. ಎರಡು ವಾರಗಳ ನಂತರ ರಾಜ್ಯದ ಜನರ ಮನೆ ವಾಸ ಮುಂದುವರೆಯಲಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಕೊರೋನಾ ತಡೆಗೆ ಲಾಕ್ಡೌನ್ ಜಾರಿ ಮಾಡಿದ ನಂತರ ಕೊರೋನಾ ಸಂಕು ಇಳಿಕೆಯಾಗುತ್ತಿದೆ. ರಾಜ್ಯ ಸರ್ಕಾರ ಮೇ 24 ರಿಂದ ಜೂನ್ 7 ರವರೆಗೆ ಎರಡನೇ ಹಂತದ ಲಾಕ್ಡೌನ್ ಜಾರಿ ಮಾಡಲಾಗಿದೆ. ರಾಜ್ಯಾದ್ಯಂತ ಕಠಿಣ ನಿರ್ಬಂಧ ಜಾರಿಗೊಳಿಸಿದೆ. …

Read More »

ಬೆಳಗಾವಿ: ಜಿಲ್ಲೆ ಮೇ 29 ಹಾಗೂ ಮೇ 30 ರಂದು ಸಂಪೂರ್ಣ ಲಾಕ್ ಡೌನ್: ಎಂ.ಜಿ.ಹಿರೇಮಠ

ಬೆಳಗಾವಿ: ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಮೇ 29 ಹಾಗೂ ಮೇ 30 ರಂದು ಎರಡು ದಿನಗಳ ಕಾಲ ವಾರಾಂತ್ಯದ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಕೋವಿಡ್-19 ಹರಡುವುದನ್ನು ತಡೆಗಟ್ಟಲು ಮೇ 29ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಅನಾವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿ ನಿಷೇಧಿಸಿ ಆದೇಶಿಸಲಾಗಿತ್ತು. ಆದರೆ, ಬೆಳಗಾವಿ ಜಿಲ್ಲೆಯಲ್ಲಿ …

Read More »

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡುಗಡೆ- ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.27 ರಿಂದ 7 ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ 1.50 ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ …

Read More »