Breaking News

ಜಿಲ್ಲೆ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಲಾಕ್ ಡೌನ್ ಕಠಿಣ ನಿಯಮ: ಖಾಕಿಪಡೆ ಹೈ ಅಲರ್ಟ್, ಹಲವರು ವಶಕ್ಕೆ

ಬೆಂಗಳೂರು: ಕೋವಿಡ್ ಎರಡನೇ ಅಲೆಯ ತೀವ್ರ ಅಬ್ಬರವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ನ್ನು ನಿನ್ನೆ ವಿಸ್ತರಿಸಿ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿತು. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮನೆಯ ಹತ್ತಿರದ ಅಂಗಡಿಗಳಿಗೆ, ಸ್ಥಳಗಳಿಗೆ ನಾಗರಿಕರಿಗೆ ಅಗತ್ಯ ಕೆಲಸಗಳಿಗೆ ಹೋಗಲು ಮಾತ್ರ ಸರ್ಕಾರ ಅವಕಾಶ ನೀಡಿದ್ದು ಅನಗತ್ಯವಾಗಿ ರಸ್ತೆಯಲ್ಲಿ ನಡೆದುಕೊಂಡು, ವಾಹನಗಳಲ್ಲಿ ಓಡಾಡುವವರನ್ನು ವಶಕ್ಕೆ ಪಡೆದು …

Read More »

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಹಿರಿಯ ಅಧಿಕಾರಿಗಳೇ ಕಾರ್ಯಾಚರಣೆಗಿಳಿದಿದ್ದಾರೆ.

ಬೆಳಗಾವಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು, ಇಂದಿನಿಂದಲೇ ಕಠಿಣ ರೂಲ್ಸ್ ಗಳು ಜಾರಿಗೆ ಬಂದಿವೆ. ಕಟ್ಟುನಿಟ್ಟಿನ ಲಾಕ್ ಡೌನ್ ಗೆ ಸಿಎಂ ಯಡಿಯೂರಪ್ಪ ಸೂಚಿಸಿದ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಳಗಾವಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಸಂಪೂರ್ಣ  ಲಾಕ್ ಡೌನ್ ಜಾರಿಯಾಗಿದ್ದು, ಹಾಲು, ಔಷಧ ಹೊರತುಪಡಿಸಿ ಬೇರೆ ಯಾವುದಕ್ಕೂ ಅವಕಾಸ ನೀಡಲಾಗಿಲ್ಲ. ಆಸ್ಪತ್ರೆಗೆ ತೆರಳುವವರು ಮಾತ್ರ ರಸ್ತೆಗೆ ಇಳಿಯಲು …

Read More »

ಸಂವಾದ ; ಕಣ್ಣೀರು ಹೇಡಿಯ ಅಸ್ತ್ರ ಎಂದ ಕಾಂಗ್ರೆಸ್‌

ಬೆಂಗಳೂರು, : ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದದ ವೇಳೆ ಪ್ರಧಾನಿ ಮೋದಿ ಗದ್ಗಿತರಾದ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೆಪಿಸಿಸಿ, “ಕಣ್ಣೀರು ಹೇಡಿಯ ಪ್ರಮುಖ ಅಸ್ತ್ರ. ಎದುರಿಗಿದ್ದ ಕ್ಯಾಮೆರಾ ಹಾಗೂ ಟೆಲಿಪ್ರಾಂಪ್ಟರ್‌ ನೋಡಿಕೊಂಡು ಕಣ್ಣೀರು ಸುರಿಸುವುದು ಅದ್ಬುತ ನಟನಾ ಕೌಶಲ್ಯ! @narendramodi ಅವರೇ, ಜನತೆಗೆ ಬೇಕಿರುವುದು ನಿಮ್ಮ ಕಣ್ಣೀರಲ್ಲ””ಆಕ್ಸಿಜನ್, ಲಸಿಕೆ, ವೈದ್ಯಕೀಯ ವ್ಯವಸ್ಥೆ, ಚಿಕಿತ್ಸೆ, ಆರ್ಥಿಕ ನೆರವು. ಇದ್ಯಾವುದನ್ನೂ ನೀಡದೆ ಎರಡು …

Read More »

ಎಸ್‌ಆರ್‌ಎಸ್ ಟ್ರಾವೆಲ್ಸ್ ಮಾಲೀಕ ರಾಜಶೇಖರ್ ವಿಧಿವಶ: ಕೋವಿಡ್-19 ಸೋಂಕಿಗೆ ಬಲಿ

ಬೆಂಗಳೂರು: ದೇಶದ ಸಾರಿಗೆ ಉದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ.ಟಿ. ರಾಜಶೇಖರ್ (78) ಶುಕ್ರವಾರ ನಿಧನರಾದರು. ಮಾಗಡಿ ಮೂಲದ ರಾಜಶೇಖರ್ ಅವರು ದೇಶದ ಪ್ರಮುಖ ಸಾರಿಗೆ ಸಂಸ್ಥೆಗಳಲ್ಲಿ ಒಂದು ಎಂದೇ ಗುರುತಿಸಿಕೊಂಡಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆ ಸ್ಥಾಪಿಸಿದ್ದರು. ಇದಕ್ಕೂ ಮುನ್ನ ಹಲವು ರೀತಿಯ ಸವಾಲುಗಳನ್ನು ಎದುರಿಸಿದ್ದರು. ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದ ರಾಜಶೇಖರ್, ಆರಂಭದಲ್ಲಿ ಟೂರಿಸ್ಟ್ …

Read More »

ಶಾಲಾ, ಕಾಲೇಜು ಶುಲ್ಕ ಕಡಿತಗೊಳಿಸಿ- ಸಿಎಂ ಬಿಎಸ್‍ವೈಗೆ ನಟ ಕಿರಣ್ ರಾಜ್ ಮನವಿ

ಬೆಂಗಳೂರು: ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿ ಇರುವುದರಿಂದ ಶಾಲಾ-ಕಾಲೇಜುಗಳ ಶುಲ್ಕವನ್ನು ಕಡಿಮೆಗೊಳಿಸುವಂತೆ ನಟ ಕಿರಣ್ ರಾಜ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕೊರೊನಾದಿಂದ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದ್ದು, ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೆ ಇದೀಗ ಲಾಕ್‍ಡೌನ್ ಜಾರಿಗೊಳಿಸಲಾಗಿದ್ದು, ಪೋಷಕರು ಜೀವನ ನಡೆಸಲು ಕೂಡ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಮಕ್ಕಳ ಶಾಲಾ ಕಾಲೇಜಿನ ಪೂರ್ತಿ ಶುಲ್ಕವನ್ನು ಪಾವತಿಸಲು ಪೋಷಕರು ಕಷ್ಟಪಡುತ್ತಿದ್ದಾರೆ. ಅಲ್ಲದೆ ಶಾಲಾ ಆಡಳಿತ …

Read More »

ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ

ಬೆಳಗಾವಿ: ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ     ನಿನ್ನೆಯಷ್ಠೇ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ಚಿನ್ನ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿಯೇ ಸರಕಾರ ಮೂವರು ಪೊಲೀಸ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕಾರಿನಲ್ಲಿದ್ದ ಚಿನ್ನದ ಕದ್ದ ಕಿರಣ ಎಂಬಾತನು ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ಅವರ ಆಪ್ತ ಎಂಬ ಮಾತುಗಳು …

Read More »

ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.: B.S.Y.

ಬೆಂಗಳೂರು – ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ನಂತರ ಈ ವಿಷಯ ತಿಳಿಸಿದ್ದಾರೆ. ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಇನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 14ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಈಗಿನ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದೇ ಮುಂದುವರಿಯಲಿದೆ.

Read More »

ಹಳ್ಳಿಗಳಲ್ಲಿ ಕೊರೋನಾ 2ನೇ ಅಲೆ ಹರಡಲು ಸರ್ಕಾರದ ವೈಫಲ್ಯವೇ ಕಾರಣ : ಸಿದ್ದು

ಬೆಂಗಳೂರು, ಮೇ 21- ಕೊರೋನಾ 2ನೇ ಅಲೆ ಬಹಳ ವೇಗವಾಗಿ ಹರಡುತ್ತಿದೆ. ಮೊದಲನೆ ಅಲೆ ನಗರ ಪ್ರದೇಶದಲ್ಲಿ ಇತ್ತು. ಎರಡನೇ ಅಲೆ ಗ್ರಾಮೀಣ ಪ್ರದೇಶಕ್ಕೂ ಹಬ್ಬಿದೆ. ಸರ್ಕಾರದ ವೈಪಲ್ಯವೇ ಇದಕ್ಕೆ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ರಾಜೀವ್ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಲೂ ಸರ್ಕಾರ ಎಚ್ಚೆತ್ತುಕೊಂಡು ಪರೀಕ್ಷೆಗಳನ್ನು ಸರಿಯಾಗಿ ಮಾಡುತ್ತಿಲ್ಲ, ವೈದ್ಯಕೀಯ ವ್ಯವಸ್ಥೆ ಸರಿ ಮಾಡಿಲ್ಲ. ಸುಳ್ಳು ಹೇಳುವುದೇ …

Read More »

ಬೀದಿ ಬೀದಿಯಲ್ಲಿ ನಿಮಗೆ ಕಲ್ಲು ಹೊಡೀತಾರೆ ಹುಷಾರ್ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ಯಾರಿಗೆ ಗೊತ್ತಾ..?

ಬೆಳಗಾವಿ : ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಕೊರೊನಾ ಮೃತರ ಲೆಕ್ಕವನ್ನು ರಾಜ್ಯದ ಜನರಿಗೆ ತಪ್ಪಾಗಿ ನೀಡುತ್ತಿದ್ದಾರೆ. ಇದೇ ಲೆಕ್ಕವನ್ನು ಚಿಕ್ಕಬಳ್ಳಾಪುರ ಜನರ ಎದುರಿಗೆ ಹೇಳಿದರೆ ಅಲ್ಲಿನ ಜನ ಸಚಿವರನ್ನು ಪೊರಕೆಯಿಂದ ಹೊಡೆಯುತ್ತಾರೆ ಎಂದು ಕೆಪಿಸಿಸಿ ವಕ್ತಾರೆ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತಾನಾಡಿದ ಅವರು, ಚಿಕ್ಕಬಳ್ಳಾಪುರಕ್ಕೆ‌ ಹೋಗಿ ಡಾ. ಕೆ.ಸುಧಾಕರ್ ಕೋವಿಡ್ ಸಾವಿನ ಲೆಕ್ಕ‌ ಹೇಳಲಿ. ಚಿಕ್ಕಬಳ್ಳಾಪುರ ಜನ ಅವರನ್ನು …

Read More »

ಬಿಜೆಪಿಯವರಿಗೆ ಲಸಿಕೆ ಮೇಲೆ ನಂಬಿಕೆ ಇರಲಿಲ್ಲ, ಅದಕ್ಕೆ ಮೊದಲು ಮೋದಿ ಪಡೆದಿಲ್ಲ: ಡಿ.ಕೆ.ಶಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿದಂತೆ ಕೋವಿಡ್ ವಾರಿಯರ್ಸ್ ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಲಸಿಕೆ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇರಲಿಲ್ಲ. ಹೀಗಾಗಿ ಮೊದಲು ಪ್ರಧಾನ …

Read More »