ಗೋಕಾಕ: ನಗರದ ಬ್ಯಾಳಿಕಾಟಾ ಬಳಿ ಸೋಮವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿ, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ನಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಗರದ ಕಡೆ ಆಗಮಿಸುತ್ತಿದ್ದ ಇಂಡಿಕಾ ಕಾರ್, ಇಲ್ಲಿನ ನಾಕಾ 1 ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಆಟೊ ರಿಕ್ಷಾಗೆ ಡಿಕ್ಕಿ …
Read More »ಮೂಡಲಗಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಕಲ ವ್ಯವಸ್ಥೆ: ತಹಶೀಲ್ದಾರ್ ಮೋಹನಕುಮಾರ್
ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ತಾಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರ ಕೋವಿಡ್-19 ಜಾಗೃತಿ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, “ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು” ಎಂದು ಹೇಳಿದರು. ಸಕಲ ವ್ಯವಸ್ಥೆ: “ಸೋಂಕಿತರಿಗೆ ಈಗಾಗಲೇ ಅಗತ್ಯ ಇರುವ ಚಿಕಿತ್ಸೆ …
Read More »ಹಸಿದ ಹೊಟ್ಟೆಗೆ ಆಸರೆಯಾದ ಶಿವಣ್ಣ ದಂಪತಿ
ಬೆಂಗಳೂರು: ಲಾಕ್ಡೌನ್ನಿಂದಾಗಿ ದಿನಗೂಲಿ ಕಾರ್ಮಿಕರಿಗೆ, ಬಡವರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಇದನ್ನು ಮನಗಂಡು ನಟ ಶಿವರಾಜ್ಕುಮಾರ್, ಅಂತಹವರಿಗೆ ಊಟ ನೀಡುವ ಕೆಲಸಕ್ಕೆ ಮುಂದಾಗಿದ್ದಾರೆ. ಶಿವರಾಜ್ಕುಮಾರ್ ಅವರು ಆಸರೆ ಎಂಬ ಹೆಸರಿನಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಿದ್ದಾರೆ. ಶಿವರಾಜ್ಕುಮಾರ್ ಅವರಿಗೆ ಪತ್ನಿ ಗೀತಾ ಶಿವರಾಜ್ಕುಮಾರ್ ಸಾಥ್ ನೀಡಿದ್ದಾರೆ. ನಾಗವಾರದಲ್ಲಿರುವ ತಮ್ಮ ನಿವಾಸದ ಸುತ್ತಮುತ್ತಲಿನ ಏರಿಯಾದಲ್ಲಿರುವ ನೂರಾರು ಜನರಿಗೆ ನಿತ್ಯವು ಆಹಾರ ಒದಗಿಸುವ ಕೆಲಸವನ್ನು ಶಿವರಾಜ್ಕುಮಾರ್-ಗೀತಾ ದಂಪತಿ ಮಾಡುತ್ತಿದ್ದಾರೆ. ಶಿವಣ್ಣ ಬಾಯ್ಸ್ ಹೆಸರಿನ ತಂಡವೊಂದು …
Read More »ಬಳ್ಳಾರಿ, ಉತ್ತರ ಕನ್ನಡ, ಹಾಸನ, ಬೆಳಗಾವಿ, ಮೈಸೂರುಜಿಲ್ಲಾಧಿಕಾರಿಗಳ ವಿರುದ್ಧ ಸಿಎಂ ಗರಂ
ಬೆಂಗಳೂರು; ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ, ಸೋಂಕು ನಿಯತ್ರಣಕ್ಕೆ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ. ಜನರು ಸಾಯುತ್ತಿದ್ದರೂ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ನಿರ್ಲಕ್ಷ್ಯ ಮಾಡುತ್ತಿರುವುದೇಕೆ ಎಂದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗರಂ ಆದ ಘಟನೆ ನಡೆದಿದೆ. ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಹಾಗೂ ಕೊರೊನಾ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ, ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಮಾಡಿರುವ ಬಿಗಿ …
Read More »ಪ್ರಧಾನಿ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ: ದಿನೇಶ್ ಗುಂಡೂರಾವ್
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ. ವಿದೇಶಗಳಲ್ಲೂ ಕೊರೊನಾ ಲಸಿಕೆ ಸಿದ್ಧವಾಯಿತು. ಆದರೆ, ಆ ದೇಶಗಳು ಲಸಿಕೆಯನ್ನು ತಮ್ಮಲ್ಲೇ ಉಳಿಸಿಕೊಂಡವು. ಆದರೆ, ಈ ದೇಶದ ಪ್ರಧಾನಿಯವರು ಮಾಡಿದ್ದೇನು?. ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಪ್ರಚಾರಕ್ಕಾಗಿ ಲಸಿಕೆಯನ್ನು ವಿದೇಶಕ್ಕೆ ಕೊಟ್ಟರು. ಈಗ ದೇಶದ ಜನ ಲಸಿಕೆಗಾಗಿ …
Read More »‘ಜನರ ಜೀವ ಉಳಿಸುವುದು ಮುಖ್ಯ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ’: ಡಿ.ಕೆ ಶಿವಕುಮಾರ್
ಬೆಂಗಳೂರು: ‘ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ ₹ 100 ಕೋಟಿ ಯೋಜನೆಗೆ ಸರ್ಕಾರ ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ …
Read More »ಕೊರೊನಾ ವಿಚಾರದಲ್ಲೂ ಎಂಇಎಸ್ ಪುಂಡಾಟಿಕೆ ಮೆರೆದಿದ್ದು, ಬ್ರಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್ಗಳ ಬಳಿ ನೀಂತಿ ವೀಡಿಯೋ ಮಾಡಿಕೊಂಡು, ಪೋಸ್
ಬೆಳಗಾವಿ: ಕೊರೊನಾ ವಿಚಾರದಲ್ಲೂ ಎಂಇಎಸ್ ಪುಂಡಾಟಿಕೆ ಮೆರೆದಿದ್ದು, ಬ್ರಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್ಗಳ ಬಳಿ ನೀಂತಿ ವೀಡಿಯೋ ಮಾಡಿಕೊಂಡು, ಪೋಸ್ ನೀಡಿದ್ದಾರೆ. ನಗರದ ಬಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್ಗಳ ಪರಿಶೀಲನೆ ನಡೆಸಿದ್ದು, ಬೆಳಗಾವಿ ಲೋಕಸಭಾ ಉಪಚುನಾವಣೆ ಪರಾಜಿತ ಎಂಇಎಸ್ ಅಭ್ಯರ್ಥಿ ಶುಭಂ ಶೆಲ್ಕೆ ನೇತೃತ್ವದಲ್ಲಿ ಪುಂಡರು ಬಿಮ್ಸ್ ಆಸ್ಪತ್ರೆಗೆ ನುಗ್ಗಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ನಿರುಪಯುಕ್ತ ಬೆಡ್ಗಳ ಬಳಿ ನಿಂತು ವೀಡಿಯೋ ಮಾಡಿಕೊಂಡು ಪೋಸ್ ನಿಡಿದ್ದಾರೆ. ಎಂಇಎಸ್ ಪುಂಡ ಶುಭಂ ಶೆಲ್ಕೆ …
Read More »ವಿಜಯಪುರ ಜಿಲ್ಲೆಯ ಜನರಿಗಾಗಿ ಶೀಘ್ರವೇ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಬೆಂಗಳೂರು: ವಿಜಯಪುರ ಜಿಲ್ಲೆಯ ಜನರಿಗಾಗಿ ಶೀಘ್ರವೇ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಬೆಡ್ ಗಳ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿ, ಶೀಘ್ರವಾಗಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು ಎಂದು ಆರೋಗ್ಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮನವಿ ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಶಶಿಕಲಾ …
Read More »ಕೋವಿಡ್: ಗಡಿ ಜಿಲ್ಲೆ ಶಿಕ್ಷಕರು ಗಢಗಢ…. ದೊಡ್ಡ ಬೆಲೆ ತೆರುತ್ತಿದೆ ಶಿಕ್ಷಕ ಸಮುದಾಯ…
ಕೋವಿಡ್ ಸೋಂಕಿಗೆ ಗಡಿ ಜಿಲ್ಲೆಯಲ್ಲಿ ಶಿಕ್ಷಕ ಸಮುದಾಯ ದೊಡ್ಡ ಬೆಲೆ ತೆತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 90 ಶಿಕ್ಷಕರು ಕೋವಿಡ್ ಸೋಂಕಿಗೆ ಶಿಕಾರಿಯಾಗಿದ್ದಾರೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 23, ಎರಡನೇ ಅಲೆಯಲ್ಲಿ 20 ಶಿಕ್ಷಕರು ಬಲಿಯಾಗಿದ್ದಾರೆ. ಹತ್ತು ಶಿಕ್ಷಕರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದವರಾಗಿದ್ದವರು ಎಂದು ಸರಕಾರಕ್ಕೆ ಮಾಹಿತಿ ಸಲ್ಲಿಸಲಾಗಿದೆ ಎಂದು ಬೆಳಗಾವಿ ಡಿಡಿಪಿಐ ಆನಂದ ಪುಂಡಲೀಕ ಅವರು “ಜನ ಜೀವಾಳ”ಕ್ಕೆ ಮಾಹಿತಿ ನೀಡಿದ್ದಾರೆ. …
Read More »‘ನನ್ನನ್ನೂ ಬಂಧಿಸಿ’: ದೆಹಲಿ ಮುಖಂಡರ ಜೊತೆಗೆ ಧ್ವನಿಗೂಡಿಸಿದ ರಾಜ್ಯ ಕಾಂಗ್ರೆಸ್ ನಾಯಕರು
ಬೆಂಗಳೂರು: ಕೋವಿಡ್ ಲಸಿಕೆ ರಫ್ತು ಕ್ರಮವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ದೆಹಲಿಯ ಕಾಂಗ್ರೆಸ್ ಮುಖಂಡರ ಜೊತೆಗೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರೂ ಕೂಡ ಧ್ವನಿಗೂಡಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಭಿತ್ತಿಪತ್ರ ಹಾಕಿದ್ದಕ್ಕಾಗಿ ಕನಿಷ್ಠ 25 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಲಾಗಿದೆ. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತಿದ್ದಾರೆ. ಇದರಂತೆ ಕಾಂಗ್ರೆಸ್ …
Read More »
Laxmi News 24×7