Breaking News
Home / ಜಿಲ್ಲೆ (page 725)

ಜಿಲ್ಲೆ

ಮಳೆಗೆ ಉತ್ತರ ಕರ್ನಾಟಕ ತತ್ತರ: ಆದ್ರೂ ತುಂಬದ ‘ಯಶೋಮಾರ್ಗ’ದ ತಲ್ಲೂರ ಕೆರೆ!

ಕೊಪ್ಪಳ: ಸ್ಯಾಂಡಲ್​ವುಡ್​ ನಟ ಯಶ್​ ಆರಂಭಿಸಿದ ಯಶೋಮಾರ್ಗ ಪ್ರತಿಷ್ಠಾಣದ ಅಡಿಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು. ಅದರೆ, ದುರದೃಷ್ಟವಶಾತ್​, ವಾಡಿಕೆಗಿಂತ ಹೆಚ್ಚು ಮಳೆಯಾದರೂ ತಲ್ಲೂರ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಸಂಗ್ರಹವಾಗಿದೆ. ಕೆರೆಯ ಸಮೀಪದಲ್ಲೇ ನಡೆಯುತ್ತಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿಯಿಂದಾಗಿ ಕೆರೆಗೆ ನೀರು ಹರಿದು ಬರುತ್ತಿಲ್ಲ ಎಂದು ತಿಳಿದುಬಂದಿದೆ. ಕೆರೆಗೆ ಬರಬೇಕಿದ್ದ ನೀರಿನ ಹಾದಿಯನ್ನು ಬೇರೆಡೆ ತಿರುಗಿಸಲಾದ ಹಿನ್ನೆಲೆಯಲ್ಲಿ ತಲ್ಲೂರ ಕೆರೆಯ ನೀರಿನ ಸಂಗ್ರಹದಲ್ಲಿ ಭಾರಿ ಇಳಿಕೆ ಕಂಡಿದೆ. …

Read More »

ಅಥಣಿ ನಗರದಲ್ಲಿ ಸತತವಾಗಿ ಮಳೆ ಆಗುತ್ತಿರುವುದರಿಂದ ಕೆಲವು ಕಡೆ ಮಳೆ ನೀರು ನುಗ್ಗಿ ಮನೆಗಳು ಜಲಾವೃತವಾಗಿದ್ದರೆ

  ಅಥಣಿ ಪಟ್ಟಣದ ಶಾಂತಿನಗರದ ಜೇರೆ ಫ್ಲಾಟ ನಲ್ಲಿ ತಗ್ಗುಪ್ರದೇಶದಲ್ಲಿ ಇರುವ ಕೆಲವು ಮನೆಗಳಲ್ಲಿ ಮಳೆ ನೀರು ಮನೆಗಳಲ್ಲಿ ನುಗ್ಗಿ ಅಲ್ಲಿ ಮನೆಗಳಲ್ಲಿ ವಾಸವಿರುವ ಕುಟುಂಬಗಳ ಜೀವನ ಅಸ್ತವ್ಯಸ್ತವಾಗಿದೆ ನಮ್ಮ ಪ್ರತಿನಿಧಿ ಸ್ಥಳಕ್ಕೆ ಭೇಟಿ ಕೊಟ್ಟಾಗ ಅಲ್ಲಿ ವಾಸವಿರುವ ಸ್ಥಳೀಯರಾದ ಅಬ್ದುಲ್ ರೆಹಮಾನ್ ವಾರಿಮನಿ ಇವರು ಮಾತನಾಡಿ ಹಲವು ವರ್ಷದಿಂದ ಮಳೆ ಬಂದಾಗ ನಮ್ಮ ಮನೆಗಳಿಗೆ ಇದೇ ರೀತಿ ನೀರು ನುಗ್ಗುತ್ತವೆ ನಾವು ಹಲವು ಬಾರಿ ಪುರಸಭೆ ಅಧಿಕಾರಿಗಳಿಗೆ ಹಾಗೂ …

Read More »

ಕಾರ್ಕಳದ ಕೊಲೆಗೆ ರಿವೆಂಜಾ? ಡ್ರಗ್ಸ್​ ವಿಚಾರವಾಗಿ ಹತ್ಯೆಯಾ? -ಮನೀಷ್​ ಕೊಲೆಗೆ ಕಾರಣವೇನು?

ಬೆಂಗಳೂರು: ಬಾರ್​ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಪರಾರಿಯಾದ ಸಿಸಿಟಿವಿ ದೃಶ್ಯಾವಳಿ ದೊರೆತಿದೆ. ಇದಲ್ಲದೆ, ಕೃತ್ಯಕ್ಕೆ ಬಳಸಲಾಗಿದ್ದ ಬೈಕ್‌ಗೆ ನಕಲಿ ನಂಬರ್ ಪ್ಲೇಟ್ ಸಹ ಅಳವಡಿಸಿರುವ ಅಂಶ ಬೆಳಕಿಗೆ ಬಂದಿದೆ. ಹಂತಕರು ಬೈಕ್‌ಗೆ KA 04 EA 1543 ನಂಬರ್ ಪ್ಲೇಟ್​ನ ಬಳಸಿದ್ದರು ಎಂದು ತಿಳಿದುಬಂದಿದೆ. ಪೊಲೀಸರಿಗೆ ಸಿಕ್ಕಿಬೀಳದಂತೆ ಫೇಕ್ ನಂಬರ್ ಪ್ಲೇಟ್​ ಬಳಸಲಾಗಿದೆಯಂತೆ.  ಇದು ಡ್ರಗ್ ವಿಚಾರವಾಗಿ ನಡೆದ ಕೊಲೆಯಾ? ಮನೀಷ್ ಶೆಟ್ಟಿ ಕೊಲೆಗೆ ಕಾರಣವೇನು …

Read More »

ರೈಲ್ವೆ ಬ್ರೀಜ್ ಗೆ ವ್ಯಕ್ತಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ

ಬೆಳಗಾವಿ:‌ ರೈಲ್ವೆ ಬ್ರೀಜ್ ಗೆ ವ್ಯಕ್ತಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ನಗರದ ನೂತನವಾಗಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ನೇಣು ಬಿಗಿದುಕೊಂಡು, ಸಾವಿಗೆ ಶರಣಾಗಿದ್ದಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ …

Read More »

ಒಂಟಿ ಸಲಗನ ದಾಳಿಗೆ ಕಾರು ನಜ್ಜುಗುಜ್ಜು.. ಇಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿಯ ಬಳಿ ಕಾರಿನ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ನಡೆದಿದೆ. ವಾಹನದಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂಟಿ ಸಲಗದ ದಾಳಿಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದೆ. ಭರತ್, ಶರತ್ ಮತ್ತು ಮಧು ಎಂಬುವವರು ಕಾರಿನಲ್ಲಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.

Read More »

ಯುವಕನ ಹುಚ್ಚಾಟ: ಟೆಲಿಫೋನ್ ಟವರ್ ಮೇಲಿಂದ ನದಿಗೆ ಹಾರಿ ಈಜಾಟ!

ಚಿಕ್ಕೋಡಿ: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಕೃಷ್ಣಾ ನದಿಯಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ರೆ ತುಂಬಿತುಳುಕುತ್ತಿರುವ ಕೃಷ್ಣಾ ನದಿಯಲ್ಲಿ ಯುವಕನೊಬ್ಬ ಹುಚ್ವಾಟ ಮೆರೆದಿದ್ದಾನೆ. ಟವರ್ ಮೇಲೇರಿ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ ಯುವಕ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವಕ ಸಾಗರ್ ಕೋಳಿ ಎಂಬಾತನೇ ಈ ಹುಚ್ಚಾಟ ಮೆರೆದವ. ಸಾಗರ್ ಕೋಳಿ, ಟೆಲಿಫೋನ್ ಟವರ್ ಮೇಲೇರಿ ಅಲ್ಲಿಂದ ನದಿಗೆ ಹಾರಿ ಮನಸಾರೆ …

Read More »

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು,

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದ್ದು, ಮೀಸಲಾತಿ ಪರಿಶೀಲನೆಗೆ ಎಎಜಿ ಧ್ಯಾನ್ ಚಿನ್ನಪ್ಪ, ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ರಾಜ್ಯ ಚುನಾವಣಾ ಆಯೋಗದ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಅವರನ್ನೊಳಗೊಂಡ ಸಮೀತಿಯನ್ನು ರಚಿಸಲಾಗಿದ್ದು, ಅಕ್ಟೋಬರ್ 22 …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಚುನಾವಣೆಗೆ ಸಂಬಂಧ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ.

ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಉಪ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಹತಾಶರಾಗಿ ನಮ್ಮ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಅವರ ಹೇಳಿಕೆಗೆ ನಾವು ಪ್ರತಿಕ್ರಿಯಿಸುವ ಅಗತ್ಯವಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅವರ ಹತಾಶೆಯ ಮಾತುಗಳಿಗೆ ಕಾರಣವೇನು ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ’ ಎಂದರು. ‘ಆರ್‌.ಆರ್. ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಜಯ …

Read More »

ಜಲಾವೃತವಾಗಿವೆ. ಇನ್ನೊಂದೆಡೆ, 50ಕ್ಕೂ ಹೆಚ್ಚು ಮನೆಗಳ ಗೋಡೆಗಳು ಕುಸಿದಿವೆ.

ತೆಲಸಂಗ: ಸತತ ಮಳೆಯಿಂದಾಗಿ ಗ್ರಾಮದ ಸುತ್ತಮುತ್ತಲಿನ ಜಮೀನುಗಳು ಜಲಾವೃತವಾಗಿವೆ. ಇನ್ನೊಂದೆಡೆ, 50ಕ್ಕೂ ಹೆಚ್ಚು ಮನೆಗಳ ಗೋಡೆಗಳು ಕುಸಿದಿವೆ. ಗುಡುಸಾಬ ಕರಜಗಿ ಅವರ ಮನೆಯ ಗೋಡೆ ಕುಸಿದು ಒಂದು ಆಡು ಸಾವಿಗೀಡಾಗಿದೆ. ಯಮನಪ್ಪ ಕಲಾಲ ಅವರ ಪುಟ್ಟ ಮಣ್ಣಿನ ಮನೆಗೆ ಹಾನಿಯಾಗಿದ್ದು, ಅವರು ಆಶ್ರಯಕ್ಕಾಗಿ ಅಂಗಲಾಚುತ್ತಿದ್ದಾರೆ. ‘ಮಣ್ಣಿನ ಇಟ್ಟಂಗಿಲೇ ಗೋಡೆ ಕಟ್ಟಿ ಮ್ಯಾಗ ಪತ್ರಾಸ್ ಹಾಕೊಂಡ ಜೀವನಾ ನಡೆಸಿದ್ದಿವ್ರಿ. ಮಳೆಯಿಂದ ಒಂದು ಮಗ್ಗಲು ಗೋಡೆ ಕುಸದೈತ್ರಿ. ದಿನಾ ಕೂಲಿ ಮಾಡಿ ಬದಕವ್ರ ನಾವು. …

Read More »

ಗೆಳೆಯ ಎಂದು ಮನೆಗೆ ಕರೆದುಕೊಂಡು ಬಂದರೆ ಆತ ಅಕ್ಕನ ಜೊತೆಯೇ ಪ್ರೇಮದಾಟ ನಡೆಸಿದ್ದ.

ದೊಡ್ಡಬಳ್ಳಾಪುರ : ಗೆಳೆಯ ಎಂದು ಮನೆಗೆ ಕರೆದುಕೊಂಡು ಬಂದರೆ ಆತ ಅಕ್ಕನ ಜೊತೆಯೇ ಪ್ರೇಮದಾಟ ನಡೆಸಿದ್ದ. ತನ್ನ ತಮ್ಮನ ಗೆಳೆಯನೊಂದಿಗೆ ಅಕ್ಕನ ಪ್ರೀತಿ ಶುರುವಾಗಿತ್ತು. ಇವರಿಬ್ಬರ ಪ್ರೀತಿಗೆ ತಮ್ಮನ ವಿರೋಧವಿತ್ತು. ಇದರಿಂದ ಪ್ರೇಮಿಗಳು ಮನೆಬಿಟ್ಟು ಪರಾರಿಯಾಗಿದ್ದರು. ಹುಟ್ಟುಹಬ್ಬಕ್ಕೆ ಕ್ಯಾಮೆರಾ ಕೊಡಿಸುವಂತೆ ಅಕ್ಕನ ಪ್ರಿಯಕರನನ್ನು ಕರೆಸಿಕೊಂಡ ತಮ್ಮ ಆತನನ್ನು ಅಪಹರಿಸಿ, ದೊಡ್ಡಬಳ್ಳಾಪುರದ ಹೊನ್ನಾಘಟ್ಟದ ಕೆರೆಯಲ್ಲಿ ಕೊಲೆಗೈದಿದ್ದಾನೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಕ್ಟೋಬರ್ 5ರಂದು …

Read More »