Breaking News
Home / ಜಿಲ್ಲೆ (page 727)

ಜಿಲ್ಲೆ

ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ.

ಬೆಂಗಳೂರು,ಅ.15- ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ. ಈ ಆಟಗಾರ ಈಗಾಗಲೇ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಆಪ್ತ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖಾ ಅಧಿಕಾರಿಗಳು ಅವರನ್ನು ವಿಚಾರಣೆ ಗೊಳಪಡಿಸಲಿದ್ದಾರೆ. ಈಗಾಗಲೇ ಕೆಪಿಎಲ್ ಕ್ರಿಕೆಟ್ ತಂಡದ ಮಾಲೀಕ ಹಾಗೂ ಉದ್ಯಮಿಯೊಬ್ಬರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿ ದ್ದಾರೆ ಎಂದು ತಿಳಿದುಬಂದಿದೆ. ಅವರಿಂದ ಎರಡು ಮೊಬೈಲ್‍ಗಳನ್ನು ವಶಪಡಿಸಿಕೊಂಡಿರುವ ತನಿಖಾಕಾರಿಗಳು …

Read More »

ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ.

ಚಿಕ್ಕೋಡಿ: ಬೆಳೆಗಳೆಲ್ಲವೂ ಭರಪೂರ ಬಂದಿದ್ದು, ಇನ್ನೇನು ಕಟಾವು ಮಾಡಬೇಕೆಂದು ಕೆಲ ರೈತರು ಯೋಚಿಸಿದರೆ, ಕೆಲ ರೈತರು ಫಸಲಿಗೆ ಬಂದ ಬೆಳೆಗಳನ್ನು ಕಟಾವು‌ ಮಾಡಿ ರಾಶಿ ಮಾಡಲು ಮುಂದಾದ ಸಂದರ್ಭದಲ್ಲೇ ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳೆಯ ಜೊತೆಗೆ ಗಾಳಿಯೂ ಸಹಿತ ಜೋರಾಗಿ ಬೀಸುತ್ತಿರುವ ಪರಿಣಾಮ ಗೋವಿನ ಜೋಳ ಹಾಗೂ ಕಬ್ಬಿನ ಬೆಳೆ ನೆಲಸಮವಾಗಿವೆ. ಈ ಬಾರಿ ಮಳೆ …

Read More »

ರಾಜ್ಯಾದ್ಯಂತ   ಭಾರೀ ಮಳೆಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್:B.S.Y.

ಬೆಂಗಳೂರು:  ರಾಜ್ಯಾದ್ಯಂತ   ಭಾರೀ ಮಳೆಯಾಗುತ್ತಿರುವ ಹಿನ್ನೆಲೆ  ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್ ಮೂಲಕ ಮಾಹಿತಿ ಪಡೆದುಕೊಳ್ಳುವುದಾಗಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು,  ಈಗಾಗಲೇ ಅಗತ್ಯ ಕ್ರಮಕೈಗೊಳ್ಳಲು  ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಣ ಕೂಡ ಬಿಡುಗಡೆ ಮಾಡಲಾಗಿದೆ. ಪ್ರವಾಹ ಪರಿಸ್ಥಿತಿ  ಸ್ಥಳಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೂ ಸೂಚನೆ ನೀಡಿದ್ದೇನೆ. ಅದರಂತೆ ಸಚಿವರು ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲಿದ್ದಾರೆ ಎಂದರು.

Read More »

ರಾಗಿಣಿಗೆ ಬೆನ್ನು ನೋವು- ಜೈಲಿನ ಆಸ್ಪತ್ರೆಯಲ್ಲಿ ರಾತ್ರಿ ಪೂರ್ತಿ ಚಿಕಿತ್ಸೆ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ರಾಗಿಣಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆಯಂತೆ. ಹೀಗಾಗಿ ರಾತ್ರಿ ಪೂರ್ತಿ ಗೋಳಾಡಿದ್ದು, ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ರಾಗಿಣಿ, ರಾತ್ರಿಯಿಂದ ಹೆಚ್ಚು ಬೆನ್ನು ನೋವು ಎಂದು ಜೈಲಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಅಲ್ಲದೆ ತುರ್ತಾಗಿ ನನ್ನನ್ನು ಆಸ್ಪತ್ರೆಗೆ ಸೇರಿಸಿ, ಆಗುತ್ತಿಲ್ಲ ಎಂದು ಗೋಳಾಡಿದ್ದಾರೆ. ನಂತರ ಜೈಲಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ರಾತ್ರಿ ಪೂರ್ತಿ ಚಿಕಿತ್ಸೆ ಪಡೆದಿದ್ದಾರೆ. ಈ …

Read More »

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‍ಡಿಕೆ, ಆರ್ ಆರ್ ನಗರ ಚುನಾವಣೆ ಮೂಲಕ ಜೆಡಿಎಸ್ ಪಕ್ಷದ ಸಮಾಧಿ ಅಂತ ನಮ್ಮ ಪಕ್ಷದ ಮುಖಂಡರ ಮನೆಯಲ್ಲಿ ಡಿಕೆಶಿ ಹೇಳಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ ಜೆಡಿಎಸ್ ಪಕ್ಷವನ್ನು ಸಮಾಧಿ ಮಾಡಿದ್ದಾಗಿದೆ. ಈಗ ಡಿಕೆಶಿ ಯವರು ಅವರಿಗೆ ಕೈ ಜೋಡಿಸ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಆರ್ ಆರ್ ನಗರದಲ್ಲಿ ನನ್ನ …

Read More »

ಕಳೆದ ನಾಲ್ಕು ದಿನಗಳಿಂದ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು ದಾಟುವ ಆತುರ ಮಾಡಬೇಡಿ: ರಮೇಶ್ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯಾದ್ಯಂತ, ಕಳೆದ ನಾಲ್ಕು ದಿನಗಳಿಂದ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು ದಾಟುವ ಆತುರ ಮಾಡಬೇಡಿ ಎಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ. ಗೋಕಾಕ್ ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ನದಿ ಹಳ್ಳ ತುಂಬಿ ಹರಿಯುತ್ತಿವೆ. ನದಿ ಸಮೀಪದ ಗ್ರಾಮಸ್ಥರು ಜಾನುವಾರುಗಳನ್ನು ನದಿ, ಹಳ್ಳದ ತೀರದ ಕಡೆ ಬಿಡಬೇಡಿ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು …

Read More »

ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆನಾಸೀರ್ ಬಾಗವಾನ್ ಪೆನಲ್ ಭರ್ಜರಿ ಜಯಗಳಿಸಿದೆ.

ಬೆಳಗಾವಿ: ಎಂ.ಕೆ.ಹುಬ್ಬಳ್ಳಿ ಗ್ರಾಮದ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಾಸೀರ್ ಬಾಗವಾನ್ ಪೆನಲ್ ಭರ್ಜರಿ ಜಯಗಳಿಸಿದೆ. ನಿನ್ನೆ ಸಂಜೆ 7 ಗಂಟೆಗೆ ಮತ ಎಣಿಕೆ ಆರಂಭವಾಗಿ, ಮದ್ಯರಾತ್ರಿ 2 ಗಂಟೆಗೆ ಮುಕ್ತಾಯವಾಯಿತು. ನಾಸೀರ ಬಾಗವಾನ್ ಗುಂಪಿನ ಎಲ್ಲಾ ಅಭ್ಯರ್ಥಿಗಳು ಗೆಲವು ಸಾಧಿಸಿದ್ದು, ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ಅವರ ಪುತ್ರ ಪ್ರಕಾಶಗೌಡ ಪಾಟೀಲ ಅವರ ತಂಡ ಸೋಲು ಅನುಭವಿಸಿದೆ. ಆರಂಭದಲ್ಲಿ ನಾಸೀರ್ ಬಾಗವಾನ್ ಬೆಂಬಲಿತ …

Read More »

ಅಮರನಾಥ್ ಜಾರಕಿಹೊಳಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ: ರಮೇಶ್ ಜಾರಕಿಹೊಳಿ

ಬೆಳಗಾವಿ: ಪಕ್ಷದ ನಾಯಕರು, ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದರಿದ್ದೇವೆ. ಸಂತೋಷ ಜಾರಕಿಹೊಳಿ ಅವರಿಗೆ ರಾಜಕಾರಣ ಸಂಬಂಧವಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ. ಗೋಕಾಕ್ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತೋಷ ಜಾರಕಿಹೊಳಿಗೂ  ರಾಜಕಾರಣಕ್ಕೂ ಸಂಬಂಧವಿಲ್ಲ. ಅಮರನಾಥ್ ಅವರು ಮಾತ್ರ ರಾಜಕೀಯದಲ್ಲಿ ಇರಲಿದ್ದಾರ. ಈಗಾಗಲೇ ಅಮರನಾಥ್  ಜಾರಕಿಹೊಳಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ. ಪಕ್ಷಕ್ಕಾಗಿ ಸಾಮಾನ್ಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತೆನೆ ಎಂದು ಸ್ಪಷ್ಟ ಪಡಿಸಿದ್ದಾರೆ. ಲೋಕಸಭಾ ಟಿಕೆಟ್ ಅಭ್ಯರ್ಥಿಯ ಬಗ್ಗೆ …

Read More »

ಬೇಲ್ ಪಡೆಯಲ್ಲ, ಸ್ಟೇಷನ್‍ಗೆ ಹೋಗಲ್ಲ – ಕುಸುಮಾ ವಿರುದ್ಧದ ಎಫ್ಐಆರ್‌ಗೆ ಡಿಕೆಶಿ ಕಿಡಿ

ಬೆಂಗಳೂರು: ನಮ್ಮ ಅಭ್ಯರ್ಥಿ ಹೆಣ್ಣು ಮಗಳ ಮೇಲೆ ಹಾಗೂ ಸಿದ್ದರಾಮಯ್ಯ ಎಸ್ಕಾರ್ಟ್ ಡ್ರೈವರ್ ಮೇಲೆ ಎಫ್‍ಐಆರ್ ಆಗಿದೆ. ಈ ಎಫ್ಐಆರ್‌ಗೆ ನಾವು ಬೇಲ್ ಪಡೆಯಲ್ಲ, ಸ್ಟೇಷನ್‍ಗೂ ಹೋಗಲ್ಲ. ಇದಕ್ಕೆ ನಾವು ಹೆದರೋ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಕೆಶಿ, ಪ್ರಜಾಪ್ರಭುತ್ವದಲ್ಲಿ ಇಷ್ಟು ನೀಚವಾದ ರಾಜಕಾರಣ ನಾನು ಯಾವತ್ತೂ ನೋಡಿಲ್ಲ. ಕಾಂಗ್ರೆಸ್ ಪಕ್ಷದ ವಿದ್ಯಾವಂತ ಹೆಣ್ಣುಮಗಳು ಕಾನೂನು ಅರಿವಿರುವ …

Read More »

ಮಹಾಮಳೆಗೆ ಉತ್ತರ ಕರ್ನಾಟಕ ನಲುಗಿದ್ದು, ಜನರು ಜೀವ ಉಳಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ.

ಬೆಂಗಳೂರು: ಮಹಾಮಳೆಗೆ ಉತ್ತರ ಕರ್ನಾಟಕ ನಲುಗಿದ್ದು, ಜನರು ಜೀವ ಉಳಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ. ಜಲಾಸುರನ ದಾಳಿಗೆ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್, ರಾಯಚೂರು ಜಿಲ್ಲೆಗಳು ತತ್ತರಿಸಿದ್ದು, ಗಾಯದ ಮೇಲೆ ಬರೆ ಎಳೆದಂತೆ ಕೊಯ್ನಾ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ಕೊಯ್ನಾದಿಂದ ಅತಿ ಹೆಚ್ಚು ನೀರು ಹೊರ ಬಂದಲ್ಲಿ ಬೆಳಗಾವಿ, ಚಿಕ್ಕೋಡಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಕಲಬುರಗಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. …

Read More »