Breaking News
Home / ಜಿಲ್ಲೆ (page 742)

ಜಿಲ್ಲೆ

ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,‌ ಲಂಚ ಪಡೆಯುತ್ತಿದ್ದ ಇಬ್ಬರನ್ನು‌ ವಶ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,‌ ಲಂಚ ಪಡೆಯುತ್ತಿದ್ದ ಇಬ್ಬರನ್ನು‌ ವಶಕ್ಕೆ ಪಡೆದಿದ್ದಾರೆ ಪಾಲಿಕೆ ಆಯುಕ್ತೆ ಸಹಾಯಕ ಮಲ್ಲಿಕಾರ್ಜುನ ಮತ್ತು ಡಿ.ದರ್ಜೆ ನೌಕರ ಭಾಷ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಫಾರಂ 2. ನೀಡಲು ಐವತ್ತು ಸಾವಿರ ರುಪಾಯಿ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಕಾರ್ಯಾಚರಣೆ ನಡೆದಿದೆ. ಲಂಚದ ಹಣದೊಂದಿಗೆ ಸಿಕ್ಕಿಬಿದ್ದವರ ವಿಚಾರಣೆಯನ್ನು ಅಧಿಕಾರಿಗಳು ನಡೆಸಿದ್ದಾರೆ.

Read More »

22 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಗ ಕೊರೊನಾದಿಂದ ಮತ್ತೆ ತಾಯಿ ಮಡಲಿಗೆ ಸೇರಿರುವ ಘಟನೆ

ಗದಗ: ಸುಮಾರು 22 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಗ ಕೊರೊನಾದಿಂದ ಮತ್ತೆ ತಾಯಿ ಮಡಲಿಗೆ ಸೇರಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ ನಡೆದಿದೆ. ಗೋಗೇರಿ ಗ್ರಾಮದ ಮಲಿಕ್‌ಸಾಬ ಬಾಗವಾನ ಎಂಬುವವರ ಮೂರನೇ ಮಗ ಆದಂ ಮಲಿಕ್‌ಸಾಬ ಬಾಗವಾನ ಮರಳಿ ಮನೆಗೆ ಬಂದಿದ್ದಾರೆ. ಮಲಿಕ್‌ಸಾಬ ಹಾಗೂ ಬಡಿಮಾ ದಂಪತಿಗೆ ಒಟ್ಟು ನಾಲ್ವರು ಪುತ್ರರು, ಆರು ಜನ ಪುತ್ರಿಯರಿದ್ದಾರೆ. ಮನೆಯಲ್ಲಿನ ಆರ್ಥಿಕ ಸಮಸ್ಯೆ ಹಿನ್ನೆಲೆ ಆದಂ ಹೈಸ್ಕೂಲ್ ಮುಗಿಸಿದ ನಂತರ …

Read More »

ವಿದ್ಯಾಗಮ ಯೋಜನೆಯಿಂದ ಸೋಂಕು ಬಂದಿದ್ದರೆ ಅದನ್ನು ನಿಲ್ಲಿಸೋಣ

ಬೆಂಗಳೂರು: ವಿದ್ಯಾಗಮ ಯೋಜನೆಯಿಂದ ಸೋಂಕು ಬಂದಿದ್ದರೆ ಅದನ್ನು ನಿಲ್ಲಿಸೋಣ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ಮಕ್ಕಳು, ಶಿಕ್ಷಕರ ಆರೋಗ್ಯ ಮುಖ್ಯವಾಗಿದೆ ಎಂದು ಆತಂಕದಲ್ಲಿದ್ದ ಶಿಕ್ಷಕರು, ಪೋಷಕರಿಗೆ ಸಮಾಧಾನದ ಸುದ್ದಿ ನೀಡಿದ್ದಾರೆ. ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯನ್ನು ನಿಲ್ಲಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ವಿದ್ಯಾಗಮ ಯೋಜನೆ ಕುರಿತಾಗಿ ಸರ್ಕಾರ ಚಿಂತನೆ ನಡೆಸಲಿದೆ. ತಜ್ಞರ ಸಮಿತಿ ವರದಿ …

Read More »

ರಾಗಿಣಿ ಬೇಲ್​ಗಾಗಿ ಹೈಕೋರ್ಟ್ ಮೊರೆ ಹೋಗಲು ಹಣವಿಲ್ಲದೇ, ಪೋಷಕರು ಪರದಾಟ

ಬೆಂಗಳೂರು : ಸ್ಯಾಂಡಲ್​ವುಡ್​ ಡ್ರಗ್​ ಲಿಂಕ್​ ಆರೋಪದಲ್ಲಿ ಜೈಲು ಸೇರಿರುವ ರಾಗಿಣಿ ದ್ವಿವೇದಿ ಬೇಲ್​ಗಾಗಿ ಹಣವಿಲ್ಲದೇ ರಾಗಿಣಿ ಪೋಷಕರು ಪರದಾಡುತ್ತಿದ್ದಾರೆ ಅನ್ನೋ ಮಾಹಿತಿ ಅವರ ಆಪ್ತವಲಯದಿಂದ ಲಭ್ಯವಾಗಿದೆ. ಈ ಹಿಂದೆಯೇ ರಾಗಿಣಿ ಪೋಷಕರು, ವಕೀಲರಿಗೆ ಫೀಸ್​ ಕೊಡುವ ಸಲುವಾಗಿ, ಹಣವಿಲ್ಲದೇ ತಾವು ವಾಸವಿದ್ದ ಫ್ಲಾಟ್​ ಮಾರಲು ಮುಂದಾಗಿದ್ದರು. ಆದ್ರೆ, ಫ್ಲಾಟ್​ ಮಾರಟಕ್ಕಿಟ್ಟು ಒಂದು ತಿಂಗಳಾದ್ರು, ಇನ್ನೂ ಸೇಲ್​ ಆಗಿಲ್ಲ ಎನ್ನಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಸೇರಿರೋ ರಾಗಿಣಿ ಬೇಲ್​ಗಾಗಿ ಹೈಕೋರ್ಟ್ …

Read More »

ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾ ಪಾತ್ರ ಬಹಳ ಮುಖ್ಯ: ಡಿ.ಕೆ ಶಿವಕುಮಾರ್

ಬೆಂಗಳೂರು: ಆರ್.ಆರ್.ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಸೋಶಿಯಲ್ ಮೀಡಿಯಾ ಘಟಕದ ಜತೆ ಸಭೆ ನಡೆಸಿದರು. ‘ಬೈಎಲೆಕ್ಷನ್‌ನಲ್ಲಿ ಸೋಶಿಯಲ್ ಮೀಡಿಯಾ ಸ್ಟ್ರಾಂಗ್ ಮಾಡಿ’ ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾದ ಪಾತ್ರ ಮುಖ್ಯ. ಸೋಶಿಯಲ್ ಮೀಡಿಯಾ ಇನ್ನಷ್ಟು ಌಕ್ಟಿವ್ ಆಗಬೇಕು. ಸೋಶಿಯಲ್ ಮೀಡಿಯಾದಲ್ಲಿ ಮಾರ್ಕೆಟಿಂಗ್ ಮಾಡ್ತಾರೆ. ಏನೂ ಮಾಡದಿದ್ರೂ ಬಿಜೆಪಿಯವ್ರು ಮಾರ್ಕೆಟಿಂಗ್ ಮಾಡ್ತಾರೆ. ನಾವು ಹಲವು ಬಾರಿ ಈ ವಿಚಾರದಲ್ಲಿ ಎಡವಿದ್ದೇವೆ. ಈಗ ಎಚ್ಚೆತ್ತುಕೊಳ್ಳದಿದ್ದರೆ ಕಷ್ಟವಾಗುತ್ತದೆ …

Read More »

ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ, ಇನ್ನೂ ಪರಪ್ಪನ ಜೈಲಿನಲ್ಲೇ ಇರಬೇಕು..

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. NDPS ವಿಶೇಷ ಕೋರ್ಟ್‌ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಕೋರ್ಟ್ ನಟಿಮಣಿಯರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್​ 23ರವರೆಗೆ ವಿಸ್ತರಿಸಿದೆ. ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ನಟಿ ಪರ ವಕೀಲ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ …

Read More »

ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ. ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.

Read More »

ನಿಧನರಾದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು.

ನವದೆಹಲಿ: ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು. ದೆಹಲಿಯಲ್ಲಿರುವ ರಾಮ್‌ ವಿಲಾಸ್‌ ಪಾಸ್ವಾನ್‌ ನಿವಾಸಕ್ಕೆ ತೆರಳಿದ ಮೋದಿ ಪಾಸ್ವಾನ್‌ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿದ್ದರು. ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ಗಣ್ಯರು …

Read More »

ಶಿವಸೇನೆ ಬಿಜೆಪಿಗೆ ಕೈಕೊಟ್ಟು ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಜೊತೆ ಕೈಜೋಡಿಸಿತ್ತು.

ಮುಂಬೈ : ಶಿವಸೇನೆ ನೇತೃತ್ವದ ಕಾಂಗ್ರೆಸ್‌, ಎನ್‌ಸಿಪಿ ಸರ್ಕಾರ ಅಧಿಕಾರದಲ್ಲಿರುವ ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಬಿಜೆಪಿ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ. ಈಗ ಆಡಳಿತದಲ್ಲಿರುವ ಮೂರೂ ಪಕ್ಷಗಳು ವಿಪಕ್ಷ ಸ್ಥಾನದಲ್ಲಿ ಕೂರಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗುರುವಾರ ಹೇಳಿರುವುದು ಸಂಚಲನಕ್ಕೆ ಕಾರಣವಾಗಿದೆ. ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಜನಾದೇಶ ಬಂದಿತ್ತು. ಆದರೆ ನಮಗೆ ಮೋಸ ಮಾಡಲಾಯಿತು. ಈ ಸರ್ಕಾರವನ್ನು ಕೆಳಗಿಳಿಸುತ್ತೇವೆ. ಮಾಜಿ …

Read More »

ರಾಜ್ಯ ಸರ್ಕಾರವು ತಂಬಾಕು ನಿಷೇಧದ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರದೊಳಗೆ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ.

ಬೆಂಗಳೂರು : ರಾಜ್ಯ ಸರ್ಕಾರವು ತಂಬಾಕು ನಿಷೇಧದ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರದೊಳಗೆ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ. ರಾಜ್ಯದಲ್ಲಿ ತಂಬಾಕು, ಗುಟ್ಕಾ ಹಾಗೂ ಇನ್ನಿತರ ಉತ್ಪನ್ನಗಳ ನಿಷೇಧದ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕರೆಸಿ ರಾಜ್ಯಪಾಲರು ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿದ …

Read More »